Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications