Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications