Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications









