Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications