Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications