Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಪರಮ ಏಕಾದಶಿ ದಿನ ಅಪ್ಪಿ ತಪ್ಪಿಯೂ ಈ ತಪ್ಪು ಆಗದಿರಲಿ!
ಮಾಸಿಕ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಏಕಾದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಮತ್ತೊಂದೆಡೆ ಶ್ರಾವಣ ಮಾಸದಲ್ಲಿ ಬರುವ ಏಕಾದಶಿಯ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅನ್ನೋ ನಂಬಿಕೆಯಿದೆ. ಇದರ ಜೊತೆಗೆ ಪುಣ್ಯ ಫಲ ಕೂಡ ಪ್ರಾಪ್ತಿಯಾಗುತ್ತಂತೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಅಧಿಕಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಪರಮ ಏಕಾದಶಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸವನ್ನು ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತದೆ. ಈ ವರ್ಷ ಪರಮ ಏಕಾದಶಿ ಉಪವಾಸವನ್ನು ಆಗಸ್ಟ್ 12, ರಂದು ಶನಿವಾರ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೆಲವು ವಿಶೇಷ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಉಪವಾಸದ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ
ಮನುಷ್ಯರು ಅಂದು ಮೇಲೆ ನಮ್ಮಿಂದ ಕೆಲವು ತಪ್ಪುಗಳು ಖಂಡಿತ ಆಗುತ್ತದೆ. ಆದರೆ ಈ ಪರಮ ಏಕಾದಶಿಯ ಪೂಜೆ ಮತ್ತು ಉಪವಾಸ ಸಂದರ್ಭದಲ್ಲಿ ತಪ್ಪುಗಳಾದ್ರೆ ಅದು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಅಷ್ಟಕ್ಕು ಪರಮ ಏಕಾದಶಿಯ ಉಪವಾಸದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಅನ್ನೋದನ್ನು ತಿಳಿಯೋಣ.
ಪರಮ ಏಕಾದಶಿಯ ದಿನದಂದು ಈ ತಪ್ಪುಗಳನ್ನು ಮಾಡಬೇಡಿ!
* ಪರಮ ಏಕಾದಶಿಯ ದಿನ ಸಾಧಕರು ಪೂಜೆ ಮಾಡಿ ದಾನ ಮಾಡದೇ ಇರಬಾರದು.
* ಈ ದಿನ ಬೆಳಗ್ಗೆ ಬೇಗ ಎದ್ದು ಪೂಜೆ ಮಾಡಿ ಮಧ್ಯಾಹ್ನ ಮಲಗಬೇಡಿ
* ಏಕಾದಶಿಯಂದು ಮಧ್ಯಾಹ್ನ ಮಲಗುವುದನ್ನು ನಿಷೇಧಿಸಲಾಗಿದೆ
* ಏಕಾದಶಿ ತಿಥಿಯಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
* ಈ ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ.
* ಇದರಿಂದ ದೇವಾನುದೇವತೆಗಳು ಕೋಪಗೊಂಡು ವ್ರತದ ಫಲ ಪ್ರಾಪ್ತಿಯಾಗುವುದಿಲ್ಲ
* ಏಕಾದಶಿ ವ್ರತ ಆಚರಿಸುವವರು ಬೇರೆಯವರ ಮನೆಯಿಂದ ನೀರು, ಹಣ್ಣು ಅಥವಾ ಆಹಾರವನ್ನು ಸೇವಿಸಬಾರದು.
* ಇದರಿಂದ ನೀವು ಮಾಡಿದ ಉಪವಾಸ ನಾಶವಾಗುತ್ತದೆ
* ಒಂದು ವೇಳೆ ನೀವು ಬೇರೆಯವರ ಮನೆಯಿಂದ ಏನನ್ನಾದರೂ ತೆಗೆದುಕೊಂಡರೆ ಅದಕ್ಕೆ ಪ್ರತಿಯಾಗಿ ಅವರಿಗೆ ಏನಾದರೂ ನೀಡಬೇಕು
* ಉಪವಾಸವನ್ನು ಆಚರಿಸಲು ಸಾಧ್ಯವಾಗದವರು ಈ ದಿನದಂದು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
* ಈ ದಿನ ಮಾಂಸಾಹಾರ ಮತ್ತು ಮದ್ಯ ಸೇವಿಸಬೇಡಿ
* ಈ ದಿನ ಕಾಮ, ಕ್ರೋಧ ಮತ್ತು ಅಸೂಯೆಗಳನ್ನು ತ್ಯಜಿಸಬೇಕು
ಪರಮ ಏಕಾದಶಿಯಂದುಈ ಕೆಲಸವನ್ನು ಮಾಡಿ!
ಪರಮ ಏಕಾದಶಿಯ ದಿನದಂದು ನಿರ್ಗತಿಕರಿಗೆ ಆಹಾರ, ಹಣ ಅಥವಾ ಬಟ್ಟೆಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಪುಣ್ಯದ ಫಲ ಪ್ರಾಫ್ತಿಯಾಗುತ್ತದೆ. ಅಲ್ಲದೆ ಈ ದಿನ ವಿಶೇಷವಾದ ಗೀತೆಯನ್ನು ಪಠಿಸಿ ಮತ್ತು ಸಂಜೆಯ ಸಮಯದಲ್ಲಿ ಅಶ್ವಥ ಮರ ಕೆಳಗೆ ದೀಪವನ್ನು ಬೆಳಗಿಸಿ. ಈ ರೀತಿ ಮಾಡೋದ್ರಿಂದ ನಿಮಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತೆ.
ನೀವೇನಾದರೂ ಪರಮ ಏಕಾದಶಿಯ ದಿನ ಪೂಜೆ ಮತ್ತು ಉಪವಾಸ ವ್ರತವನ್ನು ಪಾಲಿಸೋದಾದ್ರೆ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಯಾವುದೇ ರೀತಿ ತಪ್ಪಾಗದಿರುವಂತೆ ನೋಡಿಕೊಳ್ಳಿ.



Click it and Unblock the Notifications
