Latest Updates
-
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ?
ಮಾರುಕಟ್ಟೆಯಿಂದ 14 ಉತ್ಪನ್ನ ಹಿಂಪಡೆದ ಪತಂಜಲಿ..! ಯಾವುದೆಲ್ಲಾ ಗೊತ್ತಾ?
ಯೋಗಗುರು ಬಾಬಾ ರಾಮ್ದೇವ್ ಅವರ ಮಾಲೀಕತ್ವದ ಪತಂಜಲಿ ಉತ್ಪನ್ನಗಳ ಕುರಿತು ನಿಮಗೆಲ್ಲ ತಿಳಿದೇ ಇದೆ. ಸಾವಿರಾರು ಕೋಟಿ ಮೌಲ್ಯದ ಕಂಪನಿ ಇದು. ಕೆಲವೇ ವರ್ಷದಲ್ಲಿ ಅತ್ಯಂತ ದೊಡ್ಡ ಕಂಪನಿಯಾಗಿ ಬೆಳೆದ ಸಂಸ್ಥೆ. ಆದರೆ ಕೆಲವು ವಿಚಾರದಲ್ಲಿ ಈ ಸಂಸ್ಥೆಗೆ ವಿಚಾದ, ಚರ್ಚೆ ಹುಟ್ಟುಹಾಕುತ್ತಲೇ ಬಂದಿದೆ.
ಇತ್ತೀಚಿಗೆ ಪತಂಜಲಿ ಎಲೈಚಿ "ಸೋನ್ ಪಾಪಡಿ" ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇತ್ತೀಚಿಗೆ ಕಂಪನಿ ಸುದ್ದಿಯಾಗಿತ್ತು. ಅಲ್ಲದೆ ಕಂಪನಿಯ ಹಲವು ಅಧಿಕಾರಿಗಳು ಜೈಲು ಕಂಬಿ ಎಣಿಸಬೇಕಾಗಿತ್ತು. ಸೆಪ್ಟೆಂಬರ್ 17, 2019 ರಂದು ಪಾಠಕ್ ಅವರ ಅಂಗಡಿಯಿಂದ ಪತಂಜಲಿ "ಎಲೈಚಿ ನವರತ್ನ ಸೋನ್ ಪಾಪಡಿ" ಸಿಹಿಯನ್ನು ತೆಗೆದುಕೊಂಡು ಅದರ ಮಾದರಿಯನ್ನು ಪರೀಕ್ಷೆ ಒಳಪಡಿಸಿದ್ದರು.

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿರುವ ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ವರದಿ ಬಂದ ಬಳಿಕ 2021ರಲ್ಲಿ ಪತಂಜಲಿ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿತ್ತು.
ಆದರೆ ಈಗ ಈ ಪತಂಜಲಿ ಸಂಸ್ಥೆಯ ಇತ್ತೀಚಿಗೆ ತನ್ನ 14 ಉತ್ಪನ್ನಗಳ ಮಾರಾಟ ಹಿಂಪಡೆದುಕೊಂಡಿದೆ. ಈ ವಸ್ತುಗಳನ್ನು ಮಾರಾಟದಿಂದ ತೆಗೆದುಹಾಕಲು 5,606 ಫ್ರ್ಯಾಂಚೈಸ್ ಔಟ್ಲೆಟ್ಗಳಿಗೆ ನಿರ್ದೇಶನ ನೀಡಿದೆ. ಇದೇ ವರ್ಷ ಮೇ 14 ರಂದು, ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ದೇವ್, ಅವರ ಸಹವರ್ತಿ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ಗೆ ನೀಡಿದ ನ್ಯಾಯಾಂಗ ನಿಂದನೆ ನೋಟಿಸ್ನ ನಿರ್ಧಾರವನ್ನು ನ್ಯಾಯಾಲಯ ಕಾಯ್ದಿರಿಸಿತ್ತು.
ಇದರ ಜೊತೆಗೆ ಈ ಉತ್ಪನ್ನಗಳಿಗೆ ಸಂಬಂಧಿಸಿದಂತೆ. ಎಲ್ಲಾ ಜಾಹೀರಾತುಗಳನ್ನು ಎಲ್ಲಾ ಮಾಧ್ಯಮಗಳಿಂದ ವಾಪಾಸು ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ತಿಳಿಸಿತ್ತು, ಈ ಆದೇಶದ ನಡುವೆಯೇ ಮಾರುಕಟ್ಟೆಯಿಂದ 14 ಉತ್ಪನ್ನಗಳ ಹಿಂಪಡೆದುಕೊಂಡಿದೆ.
ಇನ್ನು ಇದೇ ಪ್ರಕರಣ ಸಂಬಂಧ ಜುಲೈ 30ರಂದು ವಿಚಾರಣೆ ಸಹ ನಡೆಯಲಿದೆ. ಉತ್ತರಾಖಂಡ್ ರಾಜ್ಯ ಪರವಾನಗಿ ಪ್ರಾಧಿಕಾರವು ಏಪ್ರಿಲ್ 30 ರಂದು ಬಾಬಾ ರಾಮ್ದೇವ್ ಅವರ ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯಿಂದ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ಹಿಂತೆಗೆದುಕೊಳ್ಳುವುದಾಗಿ ಅಫಿಡವಿಟ್ನಲ್ಲಿ ತಿಳಿಸಿದೆ.
ಮಾರುಕಟ್ಟೆಯಿಂದ ಪತಂಜಲಿ ಹಿಂಪಡೆದ ಉತ್ಪನ್ನಗಳು ಯಾವುದು?
1. ಸ್ವಸಾರಿ ಗೋಲ್ಡ್
2. ಸ್ವಸರಿ ವತಿ
3. ಬ್ರಾಂಕೋಮ್
4. ಸ್ವಸರಿ ಪ್ರವಾಹಿ
5. ಸ್ವಸಾರಿ ಅವಲೆಹ್
6. ಮುಕ್ತವತಿ ಎಕ್ಸ್ಟ್ರಾ ಪವರ್
7. ಲಿಪಿಡಮ್
8. ಬಿಪಿ ಗ್ರಿಟ್
9. ಮಧುಗ್ರಿತ್
10. ಮಧುನಾಶಿನಿವತಿ ಎಕ್ಸ್ಟ್ರಾ ಪವರ್
11. ಲಿವಾಮೃತ್ ಅಡ್ವಾನ್ಸ್
12. ಲಿವೋಗ್ರಿಟ್
13. ಐಗ್ರಿಟ್ ಚಿನ್ನ
14. ಪತಂಜಲಿ ದೃಷ್ಟಿ ಐ ಡ್ರಾಪ್
ಇದಿಷ್ಟೇ ಅಲ್ಲದೆ ಕೊರೊನಾ ಲಸಿಕೆ ಕುರಿತಂತೆ ಬಾಬಾ ರಾಮ್ದೇವ್ ನೀಡಿದ್ದ ಹೇಳಿಕೆ ಸಂಬಂಧ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಕೋರ್ಟ್ ಈಗ ವಿಚಾರಣೆ ನಡೆಸುತ್ತಿದೆ. ಅಲ್ಲದೆ ಹಲವು ಉತ್ಪನ್ನಗಳ ಸಂಬಂಧ ಕೆಲ ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.
ಪತಂಜಲಿ ಎಲೈಚಿ "ಸೋನ್ ಪಾಪಡಿ" ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಲ್ಲಿನ ಉತ್ತರಾಖಂಡ್ನ ನ್ಯಾಯಾಲಯ ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಪಿಥೋರಗಢ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು ಶನಿವಾರ ಜೈಲು ಶಿಕ್ಷೆಯ ಜೊತೆಗೆ ₹ 5,000 ರಿಂದ ₹ 25,000 ವರೆಗೆ ದಂಡ ವಿಧಿಸಿ ಆದೇಶಿಸಿರುವುದು ಇಡೀ ದೇಶದೆಲ್ಲೆಡೆ ಚರ್ಚೆಯ ವಿಷಯವಾಗಿತ್ತು.



Click it and Unblock the Notifications
