Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ! ಈ ಸ್ಥಳದ ಬಗ್ಗೆ ಗೊತ್ತಾ?
ಲೋಕಸಭೆ ಚುನಾವಣೆ ಬಿರುಸಿನಿಂದ ಸಾಗುತ್ತಿದ್ದು, ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಗಳು ಹಂತ ಹಂತವಾಗಿ ನಡೆಯುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ದೇಶದ ಹಲವು ಭಾಗದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಕಳೆದ 2 ತಿಂಗಳಿನಿಂದ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ.
ಈ ನಡುವೆ ಅವರು ಎರಡು ದಿನಗಳ ಕಾಲ ಕನ್ಯಾಕುಮಾರಿಗೆ ಭೇಟಿ ನೀಡುತ್ತಿದ್ದಾರೆ. ಮೇ 30 ಹಾಗೂ 31ರಂದು ಎರಡು ದಿನಗಳ ಕಾಲ ಅವರು ಕನ್ಯಾಕುಮಾರಿಯಲ್ಲಿ ನೆಲೆಸಲಿದ್ದಾರೆ. ಜೊತೆಗೆ ಇಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣಾ ಪ್ರಚಾರ ಕಾರ್ಯ ಮುಗಿಯುವಾಗ ಪ್ರಧಾನಿ ಮೋದಿ ಅವರ ಈ ಕಾರ್ಯ ಭಾರೀ ಕುತೂಹಲ ಮೂಡಿಸಿದೆ. ಏಕೆಂದರೆ 2019ರ ಚುನಾವಣೆಯ ಪ್ರಚಾರ ಮುಗಿದ ಬಳಿಕ ಅವರು ಕೇದಾರನಾಥದ ಗುಹೆ ಒಂದರಲ್ಲಿ ಧ್ಯಾನ ಮಾಡಿ ಸುದ್ದಿಯಾಗಿದ್ದರು. ಈಗ ಈ ವಿವೇಕಾನಂದ ರಾಕ್ ಸ್ಮಾರಕ ಆಯ್ಕೆ ಮಾಡಿಕೊಂಡಿದ್ದಾರೆ.
ಏನಿದು ವಿವೇಕಾನಂದ ರಾಕ್ ಸ್ಮಾರಕ?
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ 48 ಗಂಟೆಗಳ ಧ್ಯಾನವನ್ನು ಕೈಗೊಳ್ಳಲಿದ್ದಾರೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಇದೇ ಸ್ಥಳದಲ್ಲಿ ಧ್ಯಾನ ಮಾಡಿದ್ದರು ಎಂಬ ಉಲ್ಲೇಖ ಇತಿಹಾಸದಲ್ಲಿದೆ. ಈಗ ಅದೇ ಸ್ಥಳವಾದ ಧ್ಯಾನ ಮಂಟಪದಲ್ಲಿ ಪ್ರಧಾನಿ ಧ್ಯಾನವನ್ನು ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರಿಗೆ ಗೌರವ ಅರ್ಪಿಸುವ ಸಲುವಾಗಿ ಈ ಸ್ಮಾರಕ ನಿರ್ಮಿಸಲಾಗಿದೆ.
2019ರ ಲೋಕಸಭಾ ಚುನಾವಣಾ ಫಲಿತಾಂಶದ ಮೊದಲು, ಪ್ರಧಾನಿ ಮೋದಿ ಇದೇ ರೀತಿಯ ಧ್ಯಾನ ಕೈಗೊಂಡಿದ್ದರು. ಕೇದಾರನಾಥದ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು.
ಪ್ರಧಾನಿ ಮೋದಿ ಈ ಜಾಗ ಆಯ್ಕೆ ಮಾಡಿದ್ದು ಏಕೆ?
ಚೆನ್ನೈನ ಮೈಲಾಪುರದಲ್ಲಿರುವ ಶ್ರೀ ರಾಮಕೃಷ್ಣ ಮಠದ 125 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಉಲ್ಲೇಖಿಸಿ ಮಾತನಾಡಿದ್ದರು. ಈ ವೇಳೆ ನಮ್ಮ ಆಡಳಿತವು ವಿವೇಕಾನಂದರ ತತ್ವಗಳಿಗೆ ಅನುಸಾರವಾಗಿದೆ. ಅವರಿಂದ ಪ್ರೇರಿತವಾದ ಆಡಳಿತ ನಾವು ನೀಡುತ್ತಿದ್ದೇವೆ. ಸಮಾನತೆಯ ಕನಸು ಕಂಡಿದ್ದ ವಿವೇಕಾನಂದರ ದೃಷ್ಟಿಯೇ ನಮ
ಪ್ರಧಾನಿ ನರೇಂದ್ರ ಮೋದಿ ಅವರ ವಾಸ್ತವ್ಯದ ಸಂದರ್ಭದಲ್ಲಿ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಭದ್ರತೆಯ ಮುಂಚೂಣಿಯಲ್ಲಿರಲಿದೆ. ಜೊತೆಗೆ ಪ್ರವಾಸಿಗರು, ಜನರು ಸೇರಿದಂತೆ ಬೋಟ್ಗಳನ್ನು ನಿಷೇಧ ಮಾಡಲಾಗಿದೆ.
ಆಧ್ಯಾತ್ಮಿಕ ವಾಸ್ತವ್ಯಕ್ಕಾಗಿ ಮೋದಿ ಮೇ 30ರಂದು ಮಧ್ಯಾಹ್ನ ಕನ್ಯಾಕುಮಾರಿ ತಲುಪಲಿದ್ದಾರೆ. ಇದಾದ ಬಳಿಕ ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳಲಿದ್ದಾರೆ. ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಮೋದಿ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ.
ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿ ಈ ಸ್ಮಾರಕ ನೆಲೆಗೊಂಡಿದೆ, ಈ ಬಂಡೆಯನ್ನು ಪ್ರಾಚೀನ ಕಾಲದಿಂದಲೂ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಧ್ಯಾನ ಮತ್ತು ಜ್ಞಾನೋದಯಕ್ಕಾಗಿ 1892 ರಲ್ಲಿ ಈ ಸ್ಮಾರಕವನ್ನು ನಿರ್ಮಿಸಿದೆ.



Click it and Unblock the Notifications