Latest Updates
-
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ
ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ! ಈ ಸ್ಥಳದ ಬಗ್ಗೆ ಗೊತ್ತಾ?
ಲೋಕಸಭೆ ಚುನಾವಣೆ ಬಿರುಸಿನಿಂದ ಸಾಗುತ್ತಿದ್ದು, ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಗಳು ಹಂತ ಹಂತವಾಗಿ ನಡೆಯುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ದೇಶದ ಹಲವು ಭಾಗದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಕಳೆದ 2 ತಿಂಗಳಿನಿಂದ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ.
ಈ ನಡುವೆ ಅವರು ಎರಡು ದಿನಗಳ ಕಾಲ ಕನ್ಯಾಕುಮಾರಿಗೆ ಭೇಟಿ ನೀಡುತ್ತಿದ್ದಾರೆ. ಮೇ 30 ಹಾಗೂ 31ರಂದು ಎರಡು ದಿನಗಳ ಕಾಲ ಅವರು ಕನ್ಯಾಕುಮಾರಿಯಲ್ಲಿ ನೆಲೆಸಲಿದ್ದಾರೆ. ಜೊತೆಗೆ ಇಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣಾ ಪ್ರಚಾರ ಕಾರ್ಯ ಮುಗಿಯುವಾಗ ಪ್ರಧಾನಿ ಮೋದಿ ಅವರ ಈ ಕಾರ್ಯ ಭಾರೀ ಕುತೂಹಲ ಮೂಡಿಸಿದೆ. ಏಕೆಂದರೆ 2019ರ ಚುನಾವಣೆಯ ಪ್ರಚಾರ ಮುಗಿದ ಬಳಿಕ ಅವರು ಕೇದಾರನಾಥದ ಗುಹೆ ಒಂದರಲ್ಲಿ ಧ್ಯಾನ ಮಾಡಿ ಸುದ್ದಿಯಾಗಿದ್ದರು. ಈಗ ಈ ವಿವೇಕಾನಂದ ರಾಕ್ ಸ್ಮಾರಕ ಆಯ್ಕೆ ಮಾಡಿಕೊಂಡಿದ್ದಾರೆ.
ಏನಿದು ವಿವೇಕಾನಂದ ರಾಕ್ ಸ್ಮಾರಕ?
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ 48 ಗಂಟೆಗಳ ಧ್ಯಾನವನ್ನು ಕೈಗೊಳ್ಳಲಿದ್ದಾರೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಇದೇ ಸ್ಥಳದಲ್ಲಿ ಧ್ಯಾನ ಮಾಡಿದ್ದರು ಎಂಬ ಉಲ್ಲೇಖ ಇತಿಹಾಸದಲ್ಲಿದೆ. ಈಗ ಅದೇ ಸ್ಥಳವಾದ ಧ್ಯಾನ ಮಂಟಪದಲ್ಲಿ ಪ್ರಧಾನಿ ಧ್ಯಾನವನ್ನು ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರಿಗೆ ಗೌರವ ಅರ್ಪಿಸುವ ಸಲುವಾಗಿ ಈ ಸ್ಮಾರಕ ನಿರ್ಮಿಸಲಾಗಿದೆ.
2019ರ ಲೋಕಸಭಾ ಚುನಾವಣಾ ಫಲಿತಾಂಶದ ಮೊದಲು, ಪ್ರಧಾನಿ ಮೋದಿ ಇದೇ ರೀತಿಯ ಧ್ಯಾನ ಕೈಗೊಂಡಿದ್ದರು. ಕೇದಾರನಾಥದ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು.
ಪ್ರಧಾನಿ ಮೋದಿ ಈ ಜಾಗ ಆಯ್ಕೆ ಮಾಡಿದ್ದು ಏಕೆ?
ಚೆನ್ನೈನ ಮೈಲಾಪುರದಲ್ಲಿರುವ ಶ್ರೀ ರಾಮಕೃಷ್ಣ ಮಠದ 125 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಉಲ್ಲೇಖಿಸಿ ಮಾತನಾಡಿದ್ದರು. ಈ ವೇಳೆ ನಮ್ಮ ಆಡಳಿತವು ವಿವೇಕಾನಂದರ ತತ್ವಗಳಿಗೆ ಅನುಸಾರವಾಗಿದೆ. ಅವರಿಂದ ಪ್ರೇರಿತವಾದ ಆಡಳಿತ ನಾವು ನೀಡುತ್ತಿದ್ದೇವೆ. ಸಮಾನತೆಯ ಕನಸು ಕಂಡಿದ್ದ ವಿವೇಕಾನಂದರ ದೃಷ್ಟಿಯೇ ನಮ
ಪ್ರಧಾನಿ ನರೇಂದ್ರ ಮೋದಿ ಅವರ ವಾಸ್ತವ್ಯದ ಸಂದರ್ಭದಲ್ಲಿ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಭದ್ರತೆಯ ಮುಂಚೂಣಿಯಲ್ಲಿರಲಿದೆ. ಜೊತೆಗೆ ಪ್ರವಾಸಿಗರು, ಜನರು ಸೇರಿದಂತೆ ಬೋಟ್ಗಳನ್ನು ನಿಷೇಧ ಮಾಡಲಾಗಿದೆ.
ಆಧ್ಯಾತ್ಮಿಕ ವಾಸ್ತವ್ಯಕ್ಕಾಗಿ ಮೋದಿ ಮೇ 30ರಂದು ಮಧ್ಯಾಹ್ನ ಕನ್ಯಾಕುಮಾರಿ ತಲುಪಲಿದ್ದಾರೆ. ಇದಾದ ಬಳಿಕ ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳಲಿದ್ದಾರೆ. ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಮೋದಿ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ.
ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿ ಈ ಸ್ಮಾರಕ ನೆಲೆಗೊಂಡಿದೆ, ಈ ಬಂಡೆಯನ್ನು ಪ್ರಾಚೀನ ಕಾಲದಿಂದಲೂ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಧ್ಯಾನ ಮತ್ತು ಜ್ಞಾನೋದಯಕ್ಕಾಗಿ 1892 ರಲ್ಲಿ ಈ ಸ್ಮಾರಕವನ್ನು ನಿರ್ಮಿಸಿದೆ.



Click it and Unblock the Notifications