Latest Updates
-
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ!
ನವರಾತ್ರಿ ಹಬ್ಬದ ರುಂಗು ಹೆಚ್ಚಿಸಿದ ಪ್ರಧಾನಿ ಮೋದಿ ಬರೆದ ಹಾಡು..! ಇಲ್ಲಿದೆ ವಿಡಿಯೋ
ನಾಡಿನ ಎಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ಹಲವು ಕಡೆಗಳಲ್ಲಿ ನವರಾತ್ರಿ ರಂಗು ಪಡೆದಿದೆ. ಶಕ್ತಿ ದೇವತೆಯ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಕಾರ್ಯಕ್ರಮಗಳು ನಡೆಯುತ್ತಿವೆ. ನವರಾತ್ರಿಯ 5ನೇ ದಿನವಾದ ಇಂದು ಸ್ಕಂದಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದಮಾತೆ ದೇವ ಕಾರ್ತಿಕೇಯನ ತಾಯಿಯಾಗಿದ್ದಾಳೆ. ಈಕೆ ಯುದ್ಧ ಮತ್ತು ವಿಜಯದ ದೇವತೆಯಾಗಿ ಪೂಜಿಸಲ್ಪಡುತ್ತಾಳೆ ಎಂಬುದು ನಮಗೆಲ್ಲಾ ತಿಳಿದಿದೆ. 9 ದಿನಗಳ ಈ ದುರ್ಗೆಯ ಆರಾಧನೆಯಲ್ಲಿ ಸ್ಕಂದಮಾತೆಯ ಪೂಜೆಯೂ ಒಂದಾಗಿದೆ.
ಸ್ಕಂದಮಾತೆಯನ್ನು ಪೂಜಿಸುವುದರಿಂದ ಭಕ್ತರು ಸುಖ, ಸಮೃದ್ಧಿ ಮತ್ತು ಶಾಂತಿಯನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ. ಹಾಗೆ ಈ ದಿನ ಬಿಳಿ ಬಣ್ಣ ಶ್ರೇಷ್ಟ ಎಂದು ನಂಬಲಾಗಿದೆ. ಹೀಗಾಗಿ ಪೂಜಿಸುವ ಬಿಳಿ ಬಟ್ಟೆ, ಬಿಳಿ ಪುಷ್ಟ ಅರ್ಪಿಸುತ್ತಾರೆ. ಹಾಗೆ ಈ ಭಕ್ತಿ ಪೂರ್ವಕ ಹಬ್ಬದ ಸಡಗರದಲ್ಲಿದ್ದ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಹ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ರೀತಿಯಲ್ಲಿ ಶುಭ ಕೋರಿಲ್ಲ ಬದಲಿಗೆ ತಾಯಿ ದುರ್ಗೆಯ ಕುರಿತು ಅವರೇ ಹಾಡೊಂದನ್ನು ಬರೆದು ಅದರ ಮೂಲಕ ನಾಡಿನ ಜನತೆಗೆ ಶುಭ ಕೋರಿದ್ದಾರೆ. ದೇವಿಯ ಬಳಿ ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದು ನವರಾತ್ರಿಯ ಮಂಗಳಕರ ಸಮಯ ಮತ್ತು ಜನರು ದುರ್ಗೆಯ ಮೇಲಿನ ಭಕ್ತಿಯಿಂದ ಒಂದಾಗಿ ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಈ ಪೂಜ್ಯ ಮತ್ತು ಸಂತೋಷದ ಉತ್ಸಾಹದಲ್ಲಿ, ಆವತಿ ಕಲೆ, ಅವಳ ಶಕ್ತಿ ಮತ್ತು ಅನುಗ್ರಹಕ್ಕೆ ಗೌರವವಾಗಿ ನಾನು ಬರೆದ ಗರ್ಬಾ ಹಾಡು ಇಲ್ಲಿದೆ. ದೇವಿಯ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಅವರು ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.
ಹಾಗೆ ಈ ಗರ್ಬಾ ಹಾಡನ್ನು ಮಧುರವಾಗಿ ಹಾಡಿರುವ ಪೂರ್ವ ಮಂತ್ರಿ ಅವರಿಗೂ ಧನ್ಯವಾದ ಹೇಳಿದ್ದಾರೆ. ಗರ್ಬಾ ಗುಜರಾತ್ನ ಒಂದು ಸಾಂಪ್ರದಾಯಿಕ ನೃತ್ಯವಾಗಿದ್ದು ನವರಾತ್ರಿ ಸೇರಿ ಹಲವು ಹಬ್ಬಗಳಲ್ಲಿ ಈ ನೃತ್ಯ ಮಾಡಲಾಗುತ್ತದೆ. ಸದ್ಯ ಪ್ರಧಾನಿ ಮೋದಿ ಅವರೇ ಬರೆದಿರುವ ಈ ಹಾಡು ಅತ್ಯಂತ ಮಧುರವಾಗಿ ಮೂಡಿ ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
ನವರಾತ್ರಿ ಉತ್ಸವದಲ್ಲಿ ಗುಜರಾತಿನ ಸಾಂಪ್ರದಾಯಿಕ ನೃತ್ಯವಾದ ಗಾರ್ಬಾವು ವಿಶೇಷ ಸ್ಥಾನವನ್ನು ಹೊಂದಿದೆ, ಇದನ್ನು ದುರ್ಗಾ ದೇವಿಯ ಪೂಜ ಕಾರ್ಯವಾಗಿ ಈ ನೃತ್ಯವನ್ನು ಮಾಡಲಾಗುತ್ತದೆ. ಸದ್ಯ ಈಗ ಈ ಹೊಸ ಹಾಡಿನ ವಿಡಿಯೋ ಎಲ್ಲರ ಮೆಚ್ಚುಗೆ ಗಳಿಸಿದೆ. ಖುದ್ದು ಪ್ರಧಾನಿ ಮೋದಿ ಅವರ ಸಾಹಿತ್ಯಕ್ಕೆ ಜನ ಫಿದಾ ಆಗಿದ್ದಾರೆ.
ಇತ್ತ ನವರಾತ್ರಿಯ ಈ 5ನೇ ದಿನದಂದು ಸ್ಕಂದಮಾತೆಯನ್ನು ಆರಾಧಿಸುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ಸ್ಕಂದಮಾತೆಯ ಆರಾಧನೆಯಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಕೆಲಸದಲ್ಲಿ ಅಡೆತಡೆಗಳು ಮತ್ತು ಹೊಸ ಯೋಜನೆಗಳು ಯಶಸ್ವಿಯಾಗುತ್ತವೆ. ಕುಟುಂಬದಲ್ಲಿ ಪ್ರೀತಿ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ಆರೋಗ್ಯದಲ್ಲಿ ನಿಮಗೆ ಸುಧಾರಣೆ ಸಿಗಲಿದೆ. ಆಯಸ್ಸು ವೃದ್ಧಿ ಸೇರಿ ಸಂಪತ್ತಿನ ಹರಿವು ಹೆಚ್ಚಲಿದೆ ಎಂದು ನಂಬಲಾಗಿದೆ.



Click it and Unblock the Notifications











