Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ನವರಾತ್ರಿ ಹಬ್ಬದ ರುಂಗು ಹೆಚ್ಚಿಸಿದ ಪ್ರಧಾನಿ ಮೋದಿ ಬರೆದ ಹಾಡು..! ಇಲ್ಲಿದೆ ವಿಡಿಯೋ
ನಾಡಿನ ಎಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ಹಲವು ಕಡೆಗಳಲ್ಲಿ ನವರಾತ್ರಿ ರಂಗು ಪಡೆದಿದೆ. ಶಕ್ತಿ ದೇವತೆಯ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಕಾರ್ಯಕ್ರಮಗಳು ನಡೆಯುತ್ತಿವೆ. ನವರಾತ್ರಿಯ 5ನೇ ದಿನವಾದ ಇಂದು ಸ್ಕಂದಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದಮಾತೆ ದೇವ ಕಾರ್ತಿಕೇಯನ ತಾಯಿಯಾಗಿದ್ದಾಳೆ. ಈಕೆ ಯುದ್ಧ ಮತ್ತು ವಿಜಯದ ದೇವತೆಯಾಗಿ ಪೂಜಿಸಲ್ಪಡುತ್ತಾಳೆ ಎಂಬುದು ನಮಗೆಲ್ಲಾ ತಿಳಿದಿದೆ. 9 ದಿನಗಳ ಈ ದುರ್ಗೆಯ ಆರಾಧನೆಯಲ್ಲಿ ಸ್ಕಂದಮಾತೆಯ ಪೂಜೆಯೂ ಒಂದಾಗಿದೆ.
ಸ್ಕಂದಮಾತೆಯನ್ನು ಪೂಜಿಸುವುದರಿಂದ ಭಕ್ತರು ಸುಖ, ಸಮೃದ್ಧಿ ಮತ್ತು ಶಾಂತಿಯನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ. ಹಾಗೆ ಈ ದಿನ ಬಿಳಿ ಬಣ್ಣ ಶ್ರೇಷ್ಟ ಎಂದು ನಂಬಲಾಗಿದೆ. ಹೀಗಾಗಿ ಪೂಜಿಸುವ ಬಿಳಿ ಬಟ್ಟೆ, ಬಿಳಿ ಪುಷ್ಟ ಅರ್ಪಿಸುತ್ತಾರೆ. ಹಾಗೆ ಈ ಭಕ್ತಿ ಪೂರ್ವಕ ಹಬ್ಬದ ಸಡಗರದಲ್ಲಿದ್ದ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಹ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ರೀತಿಯಲ್ಲಿ ಶುಭ ಕೋರಿಲ್ಲ ಬದಲಿಗೆ ತಾಯಿ ದುರ್ಗೆಯ ಕುರಿತು ಅವರೇ ಹಾಡೊಂದನ್ನು ಬರೆದು ಅದರ ಮೂಲಕ ನಾಡಿನ ಜನತೆಗೆ ಶುಭ ಕೋರಿದ್ದಾರೆ. ದೇವಿಯ ಬಳಿ ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದು ನವರಾತ್ರಿಯ ಮಂಗಳಕರ ಸಮಯ ಮತ್ತು ಜನರು ದುರ್ಗೆಯ ಮೇಲಿನ ಭಕ್ತಿಯಿಂದ ಒಂದಾಗಿ ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಈ ಪೂಜ್ಯ ಮತ್ತು ಸಂತೋಷದ ಉತ್ಸಾಹದಲ್ಲಿ, ಆವತಿ ಕಲೆ, ಅವಳ ಶಕ್ತಿ ಮತ್ತು ಅನುಗ್ರಹಕ್ಕೆ ಗೌರವವಾಗಿ ನಾನು ಬರೆದ ಗರ್ಬಾ ಹಾಡು ಇಲ್ಲಿದೆ. ದೇವಿಯ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಅವರು ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.
ಹಾಗೆ ಈ ಗರ್ಬಾ ಹಾಡನ್ನು ಮಧುರವಾಗಿ ಹಾಡಿರುವ ಪೂರ್ವ ಮಂತ್ರಿ ಅವರಿಗೂ ಧನ್ಯವಾದ ಹೇಳಿದ್ದಾರೆ. ಗರ್ಬಾ ಗುಜರಾತ್ನ ಒಂದು ಸಾಂಪ್ರದಾಯಿಕ ನೃತ್ಯವಾಗಿದ್ದು ನವರಾತ್ರಿ ಸೇರಿ ಹಲವು ಹಬ್ಬಗಳಲ್ಲಿ ಈ ನೃತ್ಯ ಮಾಡಲಾಗುತ್ತದೆ. ಸದ್ಯ ಪ್ರಧಾನಿ ಮೋದಿ ಅವರೇ ಬರೆದಿರುವ ಈ ಹಾಡು ಅತ್ಯಂತ ಮಧುರವಾಗಿ ಮೂಡಿ ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
ನವರಾತ್ರಿ ಉತ್ಸವದಲ್ಲಿ ಗುಜರಾತಿನ ಸಾಂಪ್ರದಾಯಿಕ ನೃತ್ಯವಾದ ಗಾರ್ಬಾವು ವಿಶೇಷ ಸ್ಥಾನವನ್ನು ಹೊಂದಿದೆ, ಇದನ್ನು ದುರ್ಗಾ ದೇವಿಯ ಪೂಜ ಕಾರ್ಯವಾಗಿ ಈ ನೃತ್ಯವನ್ನು ಮಾಡಲಾಗುತ್ತದೆ. ಸದ್ಯ ಈಗ ಈ ಹೊಸ ಹಾಡಿನ ವಿಡಿಯೋ ಎಲ್ಲರ ಮೆಚ್ಚುಗೆ ಗಳಿಸಿದೆ. ಖುದ್ದು ಪ್ರಧಾನಿ ಮೋದಿ ಅವರ ಸಾಹಿತ್ಯಕ್ಕೆ ಜನ ಫಿದಾ ಆಗಿದ್ದಾರೆ.
ಇತ್ತ ನವರಾತ್ರಿಯ ಈ 5ನೇ ದಿನದಂದು ಸ್ಕಂದಮಾತೆಯನ್ನು ಆರಾಧಿಸುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ಸ್ಕಂದಮಾತೆಯ ಆರಾಧನೆಯಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಕೆಲಸದಲ್ಲಿ ಅಡೆತಡೆಗಳು ಮತ್ತು ಹೊಸ ಯೋಜನೆಗಳು ಯಶಸ್ವಿಯಾಗುತ್ತವೆ. ಕುಟುಂಬದಲ್ಲಿ ಪ್ರೀತಿ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ಆರೋಗ್ಯದಲ್ಲಿ ನಿಮಗೆ ಸುಧಾರಣೆ ಸಿಗಲಿದೆ. ಆಯಸ್ಸು ವೃದ್ಧಿ ಸೇರಿ ಸಂಪತ್ತಿನ ಹರಿವು ಹೆಚ್ಚಲಿದೆ ಎಂದು ನಂಬಲಾಗಿದೆ.



Click it and Unblock the Notifications