Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ರಾಮಾಯಣದ ಹೆಗ್ಗುರುತು ಲೇಪಾಕ್ಷಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ..! ವಿಶೇಷ ಏನು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿಯವರು ಇಂದು ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಾಲಯಕ್ಕೆ ಭೇಟಿ ನೀಡಿದರು. ಅಯೋಧ್ಯೆಯಲ್ಲಿ ಇಂದಿನಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಈ ನಡುವೆ ಪ್ರಧಾನಿ ಮೋದಿ ಈ ದೇವಾಲಯಕ್ಕೆ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ದೇವಾಲಯಕ್ಕೂ ರಾಮಾಯಣಕ್ಕೂ ಇನ್ನಿಲ್ಲದ ನಂಟಿದೆ.
ಆ೦ಧ್ರಪ್ರದೇಶದ ಅನ೦ತಪುರ ಜಿಲ್ಲೆಯಲ್ಲಿರುವ ಹಿ೦ದೂಪುರ್ ನಿ೦ದ 15 ಕಿ.ಮೀ ದೂರದಲ್ಲಿರುವ ಈ ದೇವಾಲಯವು ರಾಮಾಯಣದ ಕಥೆಯನ್ನು ತನ್ನೊಳಗೆ ಇಟ್ಟಿಕೊಂಡಿದೆ. ರಾವಣನಿಂದ ಬಾಣದ ಏಟು ತಿಂದ ಜಟಾಯು ಪಕ್ಷಿ ಇದೇ ಸ್ಥಳದಲ್ಲಿ ಕೊನೆಯುಸಿರೆಳೆದಿದೆ ಎಂದು ನಂಬಲಾಗಿದೆ.
ರಾವಣನಿಂದ ಸೀತಾದೇವಿಯನ್ನು ಅಪಹರಿಸಿದ ನಂತರ ಜಟಾಯು, ದೈತ್ಯ ಹದ್ದು, ಸೀತಾದೇವಿಯನ್ನು ಹಿಂಬಾಲಿಸಿದ ಸ್ಥಳ ಲೇಪಾಕ್ಷಿ ಎಂದು ನಂಬಲಾಗಿದೆ. ಸಾಯುತ್ತಿರುವ ಜಟಾಯು, ಸೀತಾ ದೇವಿಯ ಸೆರೆಯಲ್ಲಿರುವ ಬಗ್ಗೆ ಕೊನೆಯ ಮಾಹಿತಿಯನ್ನು ರಾಮನಿಗೆ ತಿಳಿಸಿದ ನಂತರ, ಲೇಪಾಕ್ಷಿಯಲ್ಲಿ ಭಗವಾನ್ ರಾಮನಿಂದ ದಿವ್ಯ ಮೋಕ್ಷ ಪಡೆಯಿತು ಎಂಬ ಕಥೆ ಇದೆ.

ಸಾಯುವ ಹಂತದಲ್ಲಿ ಇಲ್ಲಿ ಬಿದ್ದ ಜಟಾಯುವನ್ನು ನೋಡಿದ ರಾಮ, ಸ್ಥಳೀಯ ಭಾಷೆಯಲ್ಲಿ ಎದ್ದೇಳು ಪಕ್ಷಿಯೇ ಎನ್ನಲು 'ಲೇ ಪಕ್ಷಿ' ಎಂದಿದ್ದನಂತೆ. ನಂತರದ ದಿನಗಳಲ್ಲಿ ಇದೇ 'ಲೇಪಾಕ್ಷಿ' ಎಂಬ ಹೆಸರು ಬರಲು ಕಾರಣವಾಯಿತು ಎಂದು ನಂಬಲಾಗಿದೆ. ಅಲ್ಲಿಗೆ ಭೇಟಿ ನೀಡಿದ ರಾಮನಿಗೆ ಸೀತೆಯನ್ನು ರಾವಣನು ದಕ್ಷಿಣಕ್ಕೆ ಕರೆದೊಯ್ದನೆಂದು ಹೇಳಿ ಜಟಾಯುವು ಇದೇ ಜಾಗದಲ್ಲಿ ಮೋಕ್ಷವನ್ನು ಪಡೆಯಿತಂತೆ.
ಇನ್ನು ಇಲ್ಲಿ 8 ಅಡಿ ಉದ್ದದ ಪಾದದ ಗುರುತೊಂದನ್ನು ಕಾಣಬಹುದಾಗಿದ್ದು, ಇದು ಸೀತಾ ಮಾತೆಯ ಪಾದದ ಗುರುತು ಎಂದು ನಂಬಲಾಗಿದೆ. ಈ ಪಾದದ ಬಳಿ ಎಲ್ಲಾ ಋತುಗಳಲ್ಲೂ ನೀರು ಹರಿಯುತ್ತದೆ. ಈ ನೀರು ಇಂಗುವುದೇ ಇಲ್ಲವಂತೆ. ಇದೇ ಲೇಪಾಕ್ಷಿ ವೀರಭದ್ರಸ್ವಾಮಿ ದೇವಾಲಯದಲ್ಲಿ ಶಿವ ಪಾರ್ವತಿ ವಿವಾಹಕ್ಕಾಗಿ ನಿರ್ಮಿಸಿದ ಕಲ್ಯಾಣ ಮಂಟಪವನ್ನೂ ಕಾಣಬಹುದು. ಇಲ್ಲಿರುವ ಏಳು ಹೆಡೆಯ ನಾಗವು ಶಿವಲಿಂಗಕ್ಕೆ ಸುತ್ತಿರುವಂಥ ನಾಗಲಿಂಗ ಶಿಲ್ಪವು ಜನಪ್ರಿಯವಾಗಿದೆ. ಇಷ್ಟೇ ಅಲ್ಲ ದೇಶದಲ್ಲೇ ಅತಿ ದೊಡ್ಡ ನಂದಿ ವಿಗ್ರಹವನ್ನು ಕೂಡಾ ಇಲ್ಲಿದೆ.
ದೇವಾಲಯದ ಒಳಭಾಗದಲ್ಲಿ ಶಿವನ ಉಗ್ರ ಅವತಾರವಾದ ವೀರಭದ್ರನು ನೆಲೆಸಿದ್ದಾನೆ. ಪ್ರಮುಖವಾದ ಆಕರ್ಷಣೆ ಎಂದರೆ ಯಾವುದೇ ಆಧಾರವಿಲ್ಲದೇ, ದೈತ್ಯ ಸ್ತಂಭವೊಂದು ನೇತಾಡುತ್ತಿದೆ.
ರಾವಣನ ಹಿಂಬಾಲಿಸಿದ್ದ ಜಟಾಯು
ರಾವಣ ಸೀತೆಯನ್ನು ಅಪಹರಿಸಿಕೊಂಡು ಹೋಗುತ್ತಿರುವಾಗ ಸೀತೆ ಕಾಪಾಡುವಂತೆ ಕೂಗಿಕೊಂಡಿದ್ದಳು. ಆದರೆ ಆಕೆಯ ಕೂಗು ಮೊದಲು ಕೇಳಿದ್ದು ಇದೇ ಜಟಾಯುವಿಗೆ. ಪರ್ವತದ ಬಳಿ ಕುಳಿತಿದ್ದ ಜಟಾಯು ಪಕ್ಷಿಗೆ ಸೀತೆಯ ಆಕ್ರಂದನ ಕೇಳಿಸುತ್ತದೆ. ತಡಮಾಡದೆ ರಾವಣನ ಎದುರಾಗುತ್ತದೆ. ಜಟಾಯು ಸೀತೆಯನ್ನು ರಾವಣನಿಂದ ಬಿಡಿಸಲು ಹೋರಾಡುತ್ತದೆ. ಆದರೆ ರಾವಣ ಸೀತೆಯನ್ನು ಪುಷ್ಪಕ ವಿಮಾನಕ್ಕೆ ಕಟ್ಟಿ ಜಟಾಯು ಮೇಲೆ ಬಾಣ ಪ್ರಯೋಗಕ್ಕೆ ಮುಂದಾಗುತ್ತಾನೆ. ಈ ವೇಳೆ ಬಾಣವೊಂದು ಜಟಾಯುವಿನ ರೆಕ್ಕೆ ಕತ್ತರಿಸಿ ಎದೆಗೆ ಬಡಿಯುತ್ತದೆ. ಈ ವೇಳೆ ಜಟಾಯು ಹಾರಲಾಗದೆ ನೆಲಕ್ಕೆ ಬೀಳುತ್ತದೆ.
ಆಕಾಶದಲ್ಲಿ ಇದೆಲ್ಲಾ ಘಟನೆ ನಡೆದಿರುವುದನ್ನು ಕಂಡ ರಾಮ ಲಕ್ಷ್ಮಣರು ಜಟಾಯುವನ್ನು ಹಿಂಬಾಲಿಸುತ್ತಾರೆ. ಜಟಾಯು ಈಗಿರುವ ಲೇಪಾಕ್ಷಿಯಲ್ಲಿ ಬಂದು ಬೀಳುತ್ತದೆ ಎನ್ನಲಾಗಿದೆ. ಈ ವೇಳೆ ರಾಮನಿಗೆ ರಾವಣ ಯಾವ ಕಡೆ ಪ್ರಯಾಣಿಸಿದ ಎಂಬ ಕುರಿತು ಮಾಹಿತಿ ನೀಡಿ ಮೋಕ್ಷ ಹೊಂದುತ್ತದೆ ಎಂಬ ಪುರಾತನ ಕಥೆ ಇದೆ.



Click it and Unblock the Notifications












