Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ರೈಲು ಹಳಿಗಳ ಕೆಳಗೆ ಒಡೆದ ಜಲ್ಲಿಕಲ್ಲುಗಳನ್ನೇ ಹಾಕುತ್ತಾರೆ ಏಕೆ?
ರೈಲು ಪ್ರಯಾಣ ಇಂದು ಅತ್ಯಂತ ಸಾಮಾನ್ಯವಾಗಿದೆ. ರೈಲುಹಳಿಯ ಮೇಲೆ ಯಾವುದೇ ರೈಲು ಓಡಾಡಿದರೂ, ರೈಲು ಹಳಿಗಳ ಕೆಳಗೆ ಮಾತ್ರ ಕಡ್ಡಾಯವಾಗಿ ಮಧ್ಯಮ ಗಾತ್ರದಲ್ಲಿ ಒಡೆದ ಜಲ್ಲಿಕಲ್ಲುಳಗಳನ್ನೇ ಹಾಸಿರುತ್ತಾರೆ. ಅಷ್ಟೇ ಅಲ್ಲ, ಕಾಲಕಾಲಕ್ಕೆ ಜರಿದುಹೋಗಿದ್ದ ಕಲ್ಲುಗಳನ್ನು ಮತ್ತೆ ಸೇರಿಸುತ್ತಲೂ, ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಲ್ಲುಗಳನ್ನು ಸೇರಿಸುತ್ತಲೂ ಇರುತ್ತಾರೆ.
ಇದನ್ನು ಗಟ್ಟಿ ಕಾಂಕ್ರೀಟಿನಿಂದ ಶಾಶ್ವತವಾಗಿಸಬಹುದಲ್ಲ, ಇಲ್ಲ, ಜಲ್ಲಿಕಲ್ಲುಗಳನ್ನೇ ಬಳಸುವುದು ಏಕೆಂದು ಗೊತ್ತೇ? ಇದಕ್ಕೆ ವೈಜ್ಞಾನಿಕವಾದ ಕಾರಣವಿದೆ. ಇಂದಿನ ಲೇಖನದಲ್ಲಿ ಜಲ್ಲಿಕಲ್ಲುಗಳನ್ನು ಬಳಸುವ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದೆ.
ಇದಕ್ಕೂ ಮೊದಲು ಜಲ್ಲಿಕಲ್ಲುಗಳಿಂದಾಗಿ ಪ್ರಾಣ ಕಳೆದುಕೊಳ್ಳುವವರ ಬಗ್ಗೆ ಅರಿತುಕೊಳ್ಳುವುದು ಅಗತ್ಯ. ಜಲ್ಲಿಕಲ್ಲುಗಳು ರೈಲುಹಳಿಗಳಿಗೆ ಸೂಕ್ತವೇ ಹೊರತು ಇದರ ಮೇಲೆ ಮನುಷ್ಯರಾಗಲೀ ಜಾನುವಾರುಗಳಾಗಲೀ ಗಟ್ಟಿನೆಲದ ಮೇಲೆ ನಡೆದಷ್ಟು ಸುಲಭವಾಗಿ ನಡೆಯಲು ಸಾಧ್ಯವಿಲ್ಲ. ಹಳಿಗಳ ಮೇಲೆ ಧಾವಿಸುತ್ತಿರುವ ರೈಲು ಥಟ್ಟನೇ ನಿಲ್ಲಲೂ ಸಾಧ್ಯವಿಲ್ಲ. ಆದ್ದರಿಂದ ರೈಲು ಹಳಿಯನ್ನು ದಾಟುವಾಗ ಅತಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸುವುದು ಅಗತ್ಯ.

ಕಾರಣ #1
ಹಳಿಗಳ ಕೆಳಗೆ ಹಾಸುವ ಈ ಜಲ್ಲಿಕಲ್ಲುಗಳಿಗೆ ತಾಂತ್ರಿಕವಾಗಿ ಬಾಲಾಸ್ಟ್ (ballast) ಎಂದು ಕರೆಯಲಾಗುತ್ತದೆ. ರೈಲುಗಳ ಓಡಾಟಕ್ಕೆ ಈ ಕಲ್ಲುಗಳು ಅತಿ ಅಗತ್ಯವಾಗಿದೆ.

ಕಾರಣ #2
ಎರಡೂ ಕಂಬಿಗಳ ನಡುವೆ ಅಡ್ಡಲಾಗಿ ಮರದ ಅಥವಾ ಕಾಂಕ್ರೀಟಿನ ಅಡ್ಡಪಟ್ಟಿಗಳನ್ನು ರೈಲುಹಳಿಯ ಉದ್ದಕ್ಕೂ ಹಾಸಲಾಗಿರುತ್ತದೆ. ಈ ಅಡ್ಡಪಟ್ಟಿಗಳು ಸರಿಸುಮಾರು ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಭಾಗ ಜಲ್ಲಿಕಲ್ಲುಗಳ ನಡುವೆ ಹುದುಗಿರುತ್ತದೆ. ರೈಲು ಹಳಿಗಳ ಮೇಲೆ ಓಡುವಾಗ ರೈಲಿನ ಭಾರವನ್ನು ಈ ಪಟ್ಟಿಗಳು ಒಂದೇ ಸ್ಥಳದ ಮೇಲೆ ಹಾಕದೇ ಚಿಕ್ಕ ಚಿಕ್ಕ ಜಲ್ಲಿಕಲ್ಲುಗಳ ಮೂಲಕ ವಿಶಾಲ ಪ್ರದೇಶದ ಮೇಲೆ ಹರಡುತ್ತದೆ. ಅಲ್ಲದೇ ಹಳಿಗಳು ಗಟ್ಟಿಯಾಗಿ ನೆಲಕ್ಕೆ ಕಚ್ಚಿರುವಂತೆ ನೋಡಿಕೊಳ್ಳುತ್ತದೆ.

ಕಾರಣ #3
ಜಲ್ಲಿಕಲ್ಲುಗಳ ಅಂಚುಗಳು ತೀಕ್ಷ್ಣವಾಗಿದ್ದು ಮರದ ಅಥವಾ ಕಾಂಕ್ರೀಟಿನ ಪಟ್ಟಿಗಳನ್ನು ಒತ್ತಡದಲ್ಲಿ ಭದ್ರವಾಗಿ ಕಚ್ಚಿಕೊಂಡಿರಲು ನೆರವಾಗುತ್ತವೆ. ಹೀಗೆ ಹಿಡಿದುಕೊಂಡಿರಬೇಕೆಂದಲೇ ಒಡೆದ ಜಲ್ಲಿಕಲ್ಲುಗಳನ್ನೇ ಆಯ್ದುಕೊಳ್ಳಲಾಗುತ್ತದೆ.

ಕಾರಣ #4
ಹಳಿಗಳು ನೆಲಮಟ್ಟಕ್ಕಿಂತಲೂ ಕೊಂಚ ಎತ್ತರದಲ್ಲಿದ್ದರೆ ಮಾತ್ರ ಮಳೆಗಾಲದಲ್ಲಿ ಹಳಿಗಳು ನೀರಿನಿಂದ ಆವೃತವಾಗದಿರಲು ಸಾಧ್ಯ. ಆದ್ದರಿಂದ ಜಲ್ಲಿಕಲ್ಲುಗಳ ಕೆಳಗೆ ಹೆಚ್ಚಿನ ಮಣ್ಣನ್ನು ಹಾಕಿ ನೆಲಮಟ್ಟಕ್ಕಿಂತಲೂ ಕೊಂಚ ಎತ್ತರವಿರುವಂತೆ ಮಾಡಲಾಗುತ್ತದೆ.

ಕಾರಣ #5
ಹಳಿಗಳ ನಡುವೆ ಮಣ್ಣಿದ್ದರೆ ಕಳೆ ಗಿಡಗಳು ಸುಲಭವಾಗಿ ಬೆಳೆದುಬಿಡುತ್ತವೆ. ಇವನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿವುದು ಹೆಚ್ಚಿನ ಖರ್ಚು ಮತ್ತು ಅನಾವಶ್ಯಕ ವಿಳಂಬಕ್ಕೆ ಕಾರಣವಾಗಬಹುದು. ಜಲ್ಲಿಕಲ್ಲುಗಳ ಮೇಲೆ ಕಳೆ ಬೆಳೆಯುವ ಸಾಧ್ಯತೆ ಕಡಿಮೆ ಇರುವುದರಿಂದ ಈ ತೊಂದರೆಯನ್ನು ತಡೆದ ಹಾಗಾಗುತ್ತದೆ.



Click it and Unblock the Notifications