Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಆತ ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಚಾಕು ಇರಿದು ಕೊಂದ!
ದಂತವೈದ್ಯನಾಗಿರುವ ಉಮೇಶ್ ಬೊಬಾಲೆ ಎನ್ನುವಾತ ತನ್ನ 36ರ ಹರೆಯದ ಪತ್ನಿಯನ್ನು ಸಿಟ್ಟಿನ ಭರದಲ್ಲಿ ಕೊಲೆ ಮಾಡಿದ್ದಾನೆ. ಇದಕ್ಕೂ ಮಿಗಿಲಾಗಿ ಆತ ಕೊಲೆಯ ಬಳಿಕ ಮಾಡಿದಂತಹ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸುತ್ತದೆ...
ಸಿಟ್ಟಿನ ಕೈಗೆ ಬುದ್ಧಿಯನ್ನು ಕೊಡಬಾರದು ಎಂದು ಹಿರಿಯರು ಹೇಳುತ್ತಾ ಇರುತ್ತಾರೆ. ಸಿಟ್ಟಿನ ಭರದಲ್ಲಿ ನಾವು ಏನು ಮಾಡುತ್ತೇವೆಂದು ತಿಳಿಯಲ್ಲ. ಸಿಟ್ಟು ಇಳಿದ ಬಳಿಕ ಆದ ಘಟನೆಯ ಬಗ್ಗೆ ಪಶ್ಚಾತ್ತಾಪವಾದರೂ ಸಮಯ ಕೈಮೀರಿ ಹೋಗಿರುತ್ತದೆ. ಸಿಟ್ಟಿನಿಂದ ಎಂತಹ ದುರ್ಘಟನೆ ನಡೆದು ಹೋಗುತ್ತದೆ ಎಂದು ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ. ಕೆಂಡದಂತಹ ಕೋಪ, ನಿಮ್ಮನ್ನೇ ಸುಟ್ಟು ಬಿಡಬಹುದು!
ದಂತವೈದ್ಯನಾಗಿರುವ ಉಮೇಶ್ ಬೊಬಾಲೆ ಎನ್ನುವಾತ ತನ್ನ 36ರ ಹರೆಯದ ಪತ್ನಿಯನ್ನು ಸಿಟ್ಟಿನ ಭರದಲ್ಲಿ ಕೊಲೆ ಮಾಡಿದ್ದಾನೆ. ಇದಕ್ಕೂ ಮಿಗಿಲಾಗಿ ಆತ ಕೊಲೆಯ ಬಳಿಕ ಮಾಡಿದಂತಹ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸುತ್ತದೆ. ಪತ್ನಿಯನ್ನು ಯಾವ ಕಾರಣಕ್ಕಾಗಿ ಕೊಲೆ ಮಾಡಿದ ಮತ್ತು ಕೊಲೆಯ ಬಳಿಕ ಏನು ಮಾಡಿದ ಎಂದು ತಿಳಿದುಕೊಳ್ಳುವ.....

ಅಪರಾಧಿ
40ರ ಹರೆಯದ ದಂತವೈದ್ಯ ಉಮೇಶ್ ಬೊಬಾಲೆ ಎನ್ನುವಾತ ತನ್ನ 4ರ ಹರೆಯದ ಮಗುವಿನ ಎದುರೇ ಪತ್ನಿಯನ್ನು ಕೊಲೆ ಮಾಡಿದ.

ಅವರಿಗೆ ಏನಾಗಿತ್ತು?
ಪತಿಪತ್ನಿ ನಡುವೆ ಕಳೆದ ಕೆಲವು ತಿಂಗಳಿಂದ ಮನಸ್ತಾಪವಿತ್ತು ಮತ್ತು ಅವರಿಬ್ಬರು ಬೇರೆ ಬೇರೆಯಾಗಿಯೇ ವಾಸಿಸುತ್ತಿದ್ದರು.

ಪತಿಯ ವಿರುದ್ಧ ದೂರು ನೀಡಿದ್ದಳು
ಪತ್ನಿಯು ತನ್ನ ಪತಿ ದೈಹಿಕ ಹಿಂಸೆ ನೀಡುತ್ತಾನೆಂದು ಪೊಲೀಸರಿಗೆ ದೂರು ನೀಡಿದ್ದಳು. ಇದರ ಬಳಿಕ ಅವರಿಬ್ಬರು ಬೇರ್ಪಟ್ಟಿದ್ದರು.

ಮತ್ತೆ ಒಂದಾಗಿಸಲು ಕುಟುಂಬ ಹಾಗೂ ಸ್ನೇಹಿತರ ಪ್ರಯತ್ನ
ನಿಮ್ಮಿಬ್ಬರ ಮನಸ್ತಾಪವನ್ನು ಮರೆತು ಮತ್ತೆ ಜತೆಯಾಗಿ ವಾಸಿಸಬೇಕೆಂದು ಕುಟುಂಬದವರು ಮತ್ತು ಸ್ನೇಹಿತರು ಅವರನ್ನು ಒತ್ತಾಯಿಸಿದ್ದರು. ಆದರೆ ಅವರು ಮಾತನ್ನೇ ಕೇಳಲಿಲ್ಲ.

ಕೆಟ್ಟ ಘಟನೆ ನಡೆಯಿತು
ವಿಚ್ಛೇದನಕ್ಕೆ ಸಂಬಂಧಪಟ್ಟಂತೆ ಮಹಿಳೆಯು ತನ್ನ ಪತಿಯ ಜತೆ ವಾದಕ್ಕೆ ಇಳಿದಳು. ಈ ವೇಳೆ ತಾಳ್ಮೆ ಕಳೆದುಕೊಂಡ ಆತ ಕೊಲೆ ಮಾಡಿಬಿಟ್ಟ.

ಮಗುವಿನ ಎದುರೇ ಆಕೆಯನ್ನು ಇರಿದು ಕೊಂದ
ಉಮೇಶ್ ಪತ್ನಿಯ ಕಾಲುಗಳು, ಎದೆ ಮತ್ತು ಹೊಟ್ಟೆಗೆ ಹಲವಾರು ಬಾರಿ ಇರಿದ. ಇದನ್ನು ಮಗು ಕಣ್ಣಾರೇ ನೋಡುತ್ತಲೇ ಇತ್ತು. ಕೊಲೆಯ ಬಳಿಕ ಶವದ ಬಳಿಯಲ್ಲೇ ಆತ ಸುಮಾರು 3 ಗಂಟೆಗಳ ಕಾಲ ಕುಳಿತುಕೊಂಡ.

ಪೊಲೀಸರನ್ನು ತಾನೇ ಕರೆದ
ಪತ್ನಿಯ ಶವದ ಬಳಿ ಸುಮಾರು ಮೂರು ಗಂಟೆಗಳ ಕಾಲ ಕುಳಿತುಕೊಂಡ ಆತ ಪೊಲೀಸರಿಗೆ ಕರೆ ಮಾಡಿ ಶರಣಾದ. ಓಡಿ ಹೋಗದೆ ಶರಣಾಗಿರುವುದು ತುಂಬಾ ಒಳ್ಳೆಯ ವಿಚಾರವೆನ್ನಬಹುದು.



Click it and Unblock the Notifications