Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆತ ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಚಾಕು ಇರಿದು ಕೊಂದ!
ದಂತವೈದ್ಯನಾಗಿರುವ ಉಮೇಶ್ ಬೊಬಾಲೆ ಎನ್ನುವಾತ ತನ್ನ 36ರ ಹರೆಯದ ಪತ್ನಿಯನ್ನು ಸಿಟ್ಟಿನ ಭರದಲ್ಲಿ ಕೊಲೆ ಮಾಡಿದ್ದಾನೆ. ಇದಕ್ಕೂ ಮಿಗಿಲಾಗಿ ಆತ ಕೊಲೆಯ ಬಳಿಕ ಮಾಡಿದಂತಹ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸುತ್ತದೆ...
ಸಿಟ್ಟಿನ ಕೈಗೆ ಬುದ್ಧಿಯನ್ನು ಕೊಡಬಾರದು ಎಂದು ಹಿರಿಯರು ಹೇಳುತ್ತಾ ಇರುತ್ತಾರೆ. ಸಿಟ್ಟಿನ ಭರದಲ್ಲಿ ನಾವು ಏನು ಮಾಡುತ್ತೇವೆಂದು ತಿಳಿಯಲ್ಲ. ಸಿಟ್ಟು ಇಳಿದ ಬಳಿಕ ಆದ ಘಟನೆಯ ಬಗ್ಗೆ ಪಶ್ಚಾತ್ತಾಪವಾದರೂ ಸಮಯ ಕೈಮೀರಿ ಹೋಗಿರುತ್ತದೆ. ಸಿಟ್ಟಿನಿಂದ ಎಂತಹ ದುರ್ಘಟನೆ ನಡೆದು ಹೋಗುತ್ತದೆ ಎಂದು ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ. ಕೆಂಡದಂತಹ ಕೋಪ, ನಿಮ್ಮನ್ನೇ ಸುಟ್ಟು ಬಿಡಬಹುದು!
ದಂತವೈದ್ಯನಾಗಿರುವ ಉಮೇಶ್ ಬೊಬಾಲೆ ಎನ್ನುವಾತ ತನ್ನ 36ರ ಹರೆಯದ ಪತ್ನಿಯನ್ನು ಸಿಟ್ಟಿನ ಭರದಲ್ಲಿ ಕೊಲೆ ಮಾಡಿದ್ದಾನೆ. ಇದಕ್ಕೂ ಮಿಗಿಲಾಗಿ ಆತ ಕೊಲೆಯ ಬಳಿಕ ಮಾಡಿದಂತಹ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸುತ್ತದೆ. ಪತ್ನಿಯನ್ನು ಯಾವ ಕಾರಣಕ್ಕಾಗಿ ಕೊಲೆ ಮಾಡಿದ ಮತ್ತು ಕೊಲೆಯ ಬಳಿಕ ಏನು ಮಾಡಿದ ಎಂದು ತಿಳಿದುಕೊಳ್ಳುವ.....

ಅಪರಾಧಿ
40ರ ಹರೆಯದ ದಂತವೈದ್ಯ ಉಮೇಶ್ ಬೊಬಾಲೆ ಎನ್ನುವಾತ ತನ್ನ 4ರ ಹರೆಯದ ಮಗುವಿನ ಎದುರೇ ಪತ್ನಿಯನ್ನು ಕೊಲೆ ಮಾಡಿದ.

ಅವರಿಗೆ ಏನಾಗಿತ್ತು?
ಪತಿಪತ್ನಿ ನಡುವೆ ಕಳೆದ ಕೆಲವು ತಿಂಗಳಿಂದ ಮನಸ್ತಾಪವಿತ್ತು ಮತ್ತು ಅವರಿಬ್ಬರು ಬೇರೆ ಬೇರೆಯಾಗಿಯೇ ವಾಸಿಸುತ್ತಿದ್ದರು.

ಪತಿಯ ವಿರುದ್ಧ ದೂರು ನೀಡಿದ್ದಳು
ಪತ್ನಿಯು ತನ್ನ ಪತಿ ದೈಹಿಕ ಹಿಂಸೆ ನೀಡುತ್ತಾನೆಂದು ಪೊಲೀಸರಿಗೆ ದೂರು ನೀಡಿದ್ದಳು. ಇದರ ಬಳಿಕ ಅವರಿಬ್ಬರು ಬೇರ್ಪಟ್ಟಿದ್ದರು.

ಮತ್ತೆ ಒಂದಾಗಿಸಲು ಕುಟುಂಬ ಹಾಗೂ ಸ್ನೇಹಿತರ ಪ್ರಯತ್ನ
ನಿಮ್ಮಿಬ್ಬರ ಮನಸ್ತಾಪವನ್ನು ಮರೆತು ಮತ್ತೆ ಜತೆಯಾಗಿ ವಾಸಿಸಬೇಕೆಂದು ಕುಟುಂಬದವರು ಮತ್ತು ಸ್ನೇಹಿತರು ಅವರನ್ನು ಒತ್ತಾಯಿಸಿದ್ದರು. ಆದರೆ ಅವರು ಮಾತನ್ನೇ ಕೇಳಲಿಲ್ಲ.

ಕೆಟ್ಟ ಘಟನೆ ನಡೆಯಿತು
ವಿಚ್ಛೇದನಕ್ಕೆ ಸಂಬಂಧಪಟ್ಟಂತೆ ಮಹಿಳೆಯು ತನ್ನ ಪತಿಯ ಜತೆ ವಾದಕ್ಕೆ ಇಳಿದಳು. ಈ ವೇಳೆ ತಾಳ್ಮೆ ಕಳೆದುಕೊಂಡ ಆತ ಕೊಲೆ ಮಾಡಿಬಿಟ್ಟ.

ಮಗುವಿನ ಎದುರೇ ಆಕೆಯನ್ನು ಇರಿದು ಕೊಂದ
ಉಮೇಶ್ ಪತ್ನಿಯ ಕಾಲುಗಳು, ಎದೆ ಮತ್ತು ಹೊಟ್ಟೆಗೆ ಹಲವಾರು ಬಾರಿ ಇರಿದ. ಇದನ್ನು ಮಗು ಕಣ್ಣಾರೇ ನೋಡುತ್ತಲೇ ಇತ್ತು. ಕೊಲೆಯ ಬಳಿಕ ಶವದ ಬಳಿಯಲ್ಲೇ ಆತ ಸುಮಾರು 3 ಗಂಟೆಗಳ ಕಾಲ ಕುಳಿತುಕೊಂಡ.

ಪೊಲೀಸರನ್ನು ತಾನೇ ಕರೆದ
ಪತ್ನಿಯ ಶವದ ಬಳಿ ಸುಮಾರು ಮೂರು ಗಂಟೆಗಳ ಕಾಲ ಕುಳಿತುಕೊಂಡ ಆತ ಪೊಲೀಸರಿಗೆ ಕರೆ ಮಾಡಿ ಶರಣಾದ. ಓಡಿ ಹೋಗದೆ ಶರಣಾಗಿರುವುದು ತುಂಬಾ ಒಳ್ಳೆಯ ವಿಚಾರವೆನ್ನಬಹುದು.



Click it and Unblock the Notifications











