Just In
- 5 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 6 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 7 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 7 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಷ್ಟು ದುಡಿದರೂ ಕೈಯಲ್ಲಿ ಹಣ ನಿಲ್ಲುವುದಿಲ್ಲವೇ? ಇಲ್ಲಿವೆ ರಹಸ್ಯ ಸೂತ್ರಗಳು
ಹಣ ಯಾರಿಗೆ ಬೇಡ? ಅದರಲ್ಲೂ ಹೆಚ್ಚಿನ ಹಣ ಎಲ್ಲರಿಗೂ ಬೇಕು. ಜೀವನಕ್ಕೆ ಸೌಲಭ್ಯಗಳು ಅಗತ್ಯ. ಈ ಸೌಲಭ್ಯಗಳನ್ನು ಪಡೆಯಲು ಹಣವನ್ನು ಖರ್ಚು ಮಾಡಲೇಬೇಕು. ಹಣ ಹೆಚ್ಚಿದ್ದಷ್ಟೂ ಸೌಲಭ್ಯಗಳು ಹೆಚ್ಚುತ್ತವೆ ಹಾಗೂ ಉತ್ತಮ ಆಹಾರ ಮತ್ತು ಸವಲತ್ತುಗಳು ಐಷಾರಾಮಗಳೂ ಲಭ್ಯವಾಗುತ್ತವೆ.
ಮನೆಯಲ್ಲಿ ಪಾಸಿಟಿವ್ ಶಕ್ತಿ ಹೆಚ್ಚಿಸಲು ವಾಸ್ತು ಶಾಸ್ತ್ರ
ಇಂದಿನ ದಿನಗಳಲ್ಲಿ ಹಣವಿದ್ದವರಿಗೇ ಹೆಚ್ಚಿನ ಮಾನ್ಯತೆ ದೊರಕುತ್ತಿರುವುದು ನಗ್ನಸತ್ಯ. ಆದರೆ ಹಣವನ್ನು ಕೇವಲ ಕತ್ತೆಯಂತೆ ದುಡಿಯುವುದರಿಂದ ಸಂಪಾದಿಸಲು ಸಾಧ್ಯವಿಲ್ಲ. ಕೆಲವೊಮ್ಮ ಕೈ ತುಂಬಾ ಸಂಬಳ ಸಿಗುವ ಉದ್ಯೋಗ ಅಥವಾ ವಾಣಿಜ್ಯ ವಹಿವಾಟು ಇದ್ದರೂ, ತಿಂಗಳ ಕೊನೆಯಲ್ಲಿ, ಕಿಸೆ ಖಾಲಿ!, ಏಕೆಂದರೆ ಹಣ ಎಷ್ಟು ಕೈಗೆ ಸಿಗುತ್ತದೆಯೋ ಹೆಚ್ಚೂ ಕಡಿಮೆ ಅಷ್ಟೇ ಖರ್ಚೂ ಆಗಿ ಹೋಗುತ್ತದೆ. ಪರಿಣಾಮವಾಗಿ ಹಿಂದಿನ ದಿನಕ್ಕೂ ಇಂದಿಗೂ ಯಾವುದೇ ವ್ಯತ್ಯಾಸ ತೋರದಂತಾಗುತ್ತದೆ. ಇದಕ್ಕೆ ಮನೆಯ ವಾಸ್ತುಗಳು ಪ್ರಮುಖ ಕಾರಣವಾಗಿರಬಹುದು.... ಈ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದ್ದು ನಿಮ್ಮ ಮನೆಯಲ್ಲಿಯೂ ಹಣ ಮತ್ತು ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ.....
ಲಕ್ಷ್ಮಿ ಕುಬೇರರ ಪಟ
ಲಕ್ಷ್ಮಿ ಕುಬೇರರ ಪಟ ಮನೆಯ ಹೊಸ್ತಿಲು ದಾಟಿ ಒಳಗೆ ಕಾಲಿಡುತ್ತಿದ್ದಂತೆ ಮೊದಲು ಕಾಣುವಂತೆ ಗೋಡೆಯಲ್ಲಿ ಲಕ್ಷ್ಮಿ ಕುಬೇರರು ಒಂದೇ ಪಟದಲ್ಲಿರುವ ಅಥವಾ ಪ್ರತ್ಯೇಕವಾದ ಎರಡು ಪಟಗಳನ್ನು ಇರಿಸಿ...ಇದರೊಂದಿಗೆ ಸ್ವಸ್ತಿಕ್ ಚಿಹ್ನೆಯ ಇನ್ನೊಂದು ಪಟವನ್ನಿರಿಸಿದರೆ ಇನ್ನೂ ಉತ್ತಮ. ಇದರಿಂದ ಮನೆಗೆ ಧನಾಗಮನ ಹೆಚ್ಚುತ್ತದೆ ಹಾಗೂ ಉಳಿಯಲು ಸಾಧ್ಯವಾಗುತ್ತದೆ.
ಲಕ್ಷ್ಮಿದೇವಿಗೆ ದಿನಾ ಪೂಜೆ ಮಾಡಿ
ಲಕ್ಷ್ಮಿದೇವಿಯ ವಿಗ್ರಹ ಮನೆಗೆ ಬಂದ ಧನ ಉಳಿಸಿಕೊಳ್ಳುವುದು ಮತ್ತು ಇನ್ನೂ ಹೆಚ್ಚು ಹೆಚ್ಚಾಗಿ ಧನ ಆಗಮಿಸುವಂತೆ ನೋಡಿಕೊಳ್ಳಲು ಮನೆಯಲ್ಲಿ ಲಕ್ಷ್ಮಿದೇವಿಯ ವಿಗ್ರಹ ಅಥವಾ ಪಟ ನಿಮ್ಮ ಪೂಜಾಗೃಹದಲ್ಲಿದ್ದು ನಿತ್ಯವೂ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುತ್ತಿರಬೇಕು. ಇದರಿಂದ ಮನೆಗೆ ಧನ ಹೆಚ್ಚು ಆಗಮಿಸುತ್ತದೆ ಹಾಗೂ ಮನೆಯಲ್ಲಿ ನೆಮ್ಮದಿ ಸದಾ ಇರುವಂತಾಗುತ್ತದೆ.
ಪಂಚರೂಪಿ ಹನುಮಂತನ ವಿಗ್ರಹವನ್ನು ನಿತ್ಯವೂ ಪೂಜಿಸಿ
ಹನುಮಂತನ ವಿಗ್ರಹ ಮನೆಯ ನೈಋತ್ಯ ದಿಕ್ಕಿನಲ್ಲಿ ಪಂಚರೂಪಿ ಹನುಮಂತನ ವಿಗ್ರಹವನ್ನು ಇರಿಸಿ ನಿತ್ಯವೂ ಪೂಜಿಸಿ. ಈ ವಿಗ್ರಹ ನಿಮ್ಮ ಮನೆಗೆ ಆಗಮಿಸುವ ಧನಾತ್ಮಕ ಶಕ್ತಿಗಳನ್ನು ಹೆಚ್ಚಿಸುತ್ತದೆ. ಅಲ್ಲದೇ ನಿಮ್ಮ ಮನೆಗೆ ಹಣ ಬರಲು ಇರುವ ಅಡ್ಡಿಗಳನ್ನು ನಿವಾರಿಸಿ ದಾರಿಯನ್ನು ಸುಗಮವಾಗಿಸುತ್ತದೆ.
ವಾಸ್ತುದೇವರ ಪಟ
ವಾಸ್ತುದೇವರ ಪಟ ಅಥವಾ ವಿಗ್ರಹವೊಂದನ್ನು ನಿಮ್ಮ ಮನೆಯ ಯಾವುದಾದರೊಂದು ಭಾಗದಲ್ಲಿ ಇರಿಸುವ ಮೂಲಕ ವಾಸ್ತುದೋಷಗಳನ್ನು ನಿವಾರಿಸಬಹುದು. ಅಲ್ಲದೇ ಮನೆಯೊಳಗಣ ಪರಿಸರದಲ್ಲಿ ಪಾವಿತ್ರ್ಯತೆ ಹಾಗೂ ಸುಖದ ವಾತಾವರಣವನ್ನು ಉಂಟುಮಾಡುತ್ತದೆ.
ಬಾಡಿದ ಹೂಗಳನ್ನು ದೇವರಿಗೆ ಹಾಕಬೇಡಿ
ಬೆಳಿಗ್ಗೆ ನೀವು ದೇವರಿಗೆ ಹೂವಿನಿಂದ ಅಲಂಕಾರ ಮಾಡಿದ ಬಳಿಕ ಸಂಜೆ ವೇಳೆ ಆ ಹೂಗಳು ಬಾಡಿ ಹೋಗುತ್ತದೆ. ಇದರಿಂದ ಸಂಜೆಯಾದ ಬಳಿಕ ಹೂವುಗಳನ್ನು ತೆಗೆಯಿರಿ. ಬಾಡಿದ ಹೂವುಗಳು ಮನೆಯಲ್ಲಿ ನಕಾರಾತ್ಮಕ ಪರಿಣಾಮ ಉಂಟು ಮಾಡುತ್ತದೆ.
ಮನೆಯ 'ಪ್ರಧಾನ ಬಾಗಿಲ' ವಾಸ್ತು ಟಿಪ್ಸ್- ಅದೃಷ್ಟವೇ ಬದಲಾಗಬಹುದು!
ದಕ್ಷಿಣ ಭಾಗದಲ್ಲಿ ತುಳಸಿ ಗಿಡ
ತುಳಸಿ ಗಿಡ ತುಳಸಿ ಗಿಡವು ಹಿಂದೂಗಳಿಗೆ ತುಂಬಾ ಪವಿತ್ರವೆಂದು ಹೇಳಲಾಗುತ್ತದೆ. ತುಳಸಿ ಗಿಡವನ್ನು ಮನೆಯ ಅಂಗಳದಲ್ಲಿ ಇಡಬೇಕು. ಮನೆಯ ಒಳಗಡೆ ಅದರಲ್ಲೂ ಮನೆಯ ದಕ್ಷಿಣ ಭಾಗದಲ್ಲಿ ಇದ್ದರೆ ಅದರಿಂದ ನಿಮಗೆ ಮತ್ತು ಕುಟುಂಬಕ್ಕೆ ದೊಡ್ಡ ಸಮಸ್ಯೆಯಾಗಬಹುದು. ದಕ್ಷಿಣ ಭಾಗದಲ್ಲಿ ತುಳಸಿ ಗಿಡವಿದ್ದರೆ ಅದನ್ನು ಈಗಲೇ ಅಲ್ಲಿಂದ ತೆಗೆಯಿರಿ.