Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಇಲ್ಲಿ ಗಂಡನ ತಮ್ಮನೊಂದಿಗೂ ಹಾಸಿಗೆ ಹಂಚಿಕೊಳ್ಳಬೇಕಂತೆ! ಎಲ್ಲಿದೆ ನ್ಯಾಯ?
ರಾಜಸ್ಥಾನದ ಮಂಚೇರಾ ಎನ್ನುವ ಒಂದು ಪುಟ್ಟ ಹಳ್ಳಿ. ಇಲ್ಲಿ ವಿಲಕ್ಷಣ ಪದ್ಧತಿಯಾದ "ದೈಹಿಕವಾಗಿ ಮಹಿಳೆಯನ್ನು ಹಂಚಿಕೊಳ್ಳುವ' ವ್ಯವಸ್ಥೆ ಇದೆ. ಈ ಪದ್ಧತಿಯ ವಿರುದ್ಧ ಇನ್ನೂ ಯಾರು ಚಕಾರ ಎತ್ತದೆ ಸುಮ್ಮನಿರುವುದು ಒಂದು ಆಶ್ಚರ್ಯದ ವಿಚಾರ....
ಮಹಿಳೆಯರಿಗೆ ಸ್ವಾತಂತ್ರ್ಯವಿದೆ, ಶಿಕ್ಷಣ ಕೊಟ್ಟಿದ್ದೇವೆ, ಸಮಾನತೆ ನೀಡುತ್ತಿದ್ದೇವೆ, ಮೀಸಲಾತಿಯಿದೆ... ಎಂದು ಎಷ್ಟೇ ಸಮರ್ಥನೆ ಮಾಡಿಕೊಂಡರೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಮಾತ್ರ ನಿಲ್ಲುತ್ತಿಲ್ಲ. 21ನೇ ಶತಮಾನಕ್ಕೆ ಕಾಲಿಟ್ಟಿದ್ದೇವೆ ಎನ್ನುವ ಹಿರಿಮೆ ನಮ್ಮದ್ದಾಗಿರಬಹುದು... ಆದರೆ ಅದೆಷ್ಟೂ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನು ಇಂದಿಗೂ ಪ್ರಾಣಿಗಳಿಗಿಂತಲೂ ಅಗ್ಗವಾಗಿ ಕಾಣುತ್ತಿದ್ದಾರೆ. ಅವರ ಮೇಲೆ ಕಾನೂನು ಬಾಹಿರ ಕೃತ್ಯಗಳು ಅಮಾನವೀಯವಾಗಿ ನಡೆಯುತ್ತಲೇ ಇವೆ... ಮುಗ್ಧನಂತೆ ವರ್ತಿಸಿ ಕೊನೆಗೆ ಅತ್ಯಾಚಾರ ಮಾಡಿದ ಪಾಪಿ ಬಾಲಕ!
ಇಂತಹ ಕೃತ್ಯಗಳಿಗೆ ಸಾಕ್ಷಿಯಾಗಿ ಕನ್ನಡಿ ಹಿಡಿಯುವ ಹಳ್ಳಿ ಎಂದರೆ ರಾಜಸ್ಥಾನದ ಮಂಚೇರಾ ಎನ್ನುವ ಒಂದು ಪುಟ್ಟ ಹಳ್ಳಿ. ಇಲ್ಲಿ ವಿಲಕ್ಷಣ ಪದ್ಧತಿಯಾದ "ದೈಹಿಕವಾಗಿ ಮಹಿಳೆಯನ್ನು ಹಂಚಿಕೊಳ್ಳುವ' ವ್ಯವಸ್ಥೆ ಇದೆ. ಈ ಪದ್ಧತಿಯ ವಿರುದ್ಧ ಇನ್ನೂ ಯಾರು ಚಕಾರ ಎತ್ತದೆ ಸುಮ್ಮನಿರುವುದು ಒಂದು ಆಶ್ಚರ್ಯದ ವಿಚಾರ. ಆ ಮಹಿಳೆಯ ಮುಗ್ಧ ಮನಸ್ಸಿನ ಮೇಲೆ ಹೇರುವ ದೌರ್ಜನ್ಯ ನಿಜಕ್ಕೂ ಅನಾಚಾರದ ಕೃತ್ಯ...

ವಿಲಕ್ಷಣ ಪದ್ಧತಿಗೆ ಕಾರಣ
ಮಹಿಳೆಯನ್ನು ಹಂಚಿಕೊಳ್ಳುವ ಈ ವಿಲಕ್ಷಣ ಪದ್ಧತಿಗೆ ಹಳ್ಳಿಯವರು ತಮ್ಮದೇ ಆದ ಕಾರಣ ನೀಡುತ್ತಾರೆ. ಅವರ ಜನಾಂಗದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಿರುವುದು. ಗಂಡಸರಿಗೆ ಹೋಲಿಸಿದರೆ ಮಹಿಳೆಯರ ಅನುಪಾತದಲ್ಲಿ ಬಹಳ ದೊಡ್ಡ ಅಂತರ ಇರುವುದೇ ಕಾರಣವಂತೆ.

ಆಸ್ತಿಯ ಸಮಸ್ಯೆ
ಕುಟುಂಬಕ್ಕೆ ಸೇರಿದ ಆಸ್ತಿಯ ಪ್ರಮಾಣ ಕಡಿಮೆ ಇದ್ದು, ಕಿರಿದಾದ ಜಮೀನು ಇರುವವರು ಈ ಪದ್ಧತಿಯನ್ನು ಅನುಸರಿಸುದ್ದಿದ್ದಾರೆ. ಅಂತಹ ಕುಟುಂಬದಲ್ಲಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಸಹೋದರರಿದ್ದರೆ ವಿವಾಹದ ನಂತರ ಜಮೀನಿನ ಪಾಲು ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ಇರುವ ಜಮೀನು ಇನ್ನಷ್ಟು ಕಿರಿದಾಗುತ್ತದೆ ಎನ್ನುವ ಚಿಂತೆ.

ತ್ಯಾಗದ ಹೆಸರಿನಲ್ಲಿ ಮಹಿಳೆಯ ಹಂಚಿಕೆ!
ಇಂತಹ ಕಿರಿದಾದ ಆಸ್ತಿಯನ್ನು ಹೊಂದಿರುವ ಸಂಸಾರದಲ್ಲಿ ಅಣ್ಣ ಮದುವೆಯಾದರೆ ತಮ್ಮ ತನ್ನ ವೈವಾಹಿಕ ಜೀವನವನ್ನು ತ್ಯಾಗ ಮಾಡುತ್ತಾನೆ. ಜೊತೆಗೆ ಅಣ್ಣನನ್ನು ವಿವಾಹವಾದ ಮಹಿಳೆಯನ್ನೇ ತಮ್ಮನು ಹಂಚಿಕೊಳ್ಳುತ್ತಾನೆ.

ವರದಕ್ಷಿಣೆಯ ಸ್ವಾರ್ಥ
ಈ ಚಿಕ್ಕ ಕುಟುಂಬದವರು ಅನುಕೂಲಸ್ಥ ಕುಟುಂಬದ ಮಹಿಳೆಯನ್ನೇ ವಿವಾಹವಾಗುತ್ತಾರೆ. ಅವರು ತರುವ ವರದಕ್ಷಿಣೆ ಹಾಗೂ ಆಸ್ತಿಯನ್ನು ಪಡೆದು ತಮ್ಮ ಸಂಸಾರದ ಆಸ್ತಿಯ ಮಟ್ಟವನ್ನು ಹೆಚ್ಚಿಸಿಕೊಳ್ಳುವ ದುರುದ್ದೇಶವೇ ಇದಕ್ಕೆ ಕಾರಣ.

ಮಹಿಳೆಗೆ ಮಾನಸಿಕ ಹಿಂಸೆ
ಇಂತಹ ಕುಟುಂಬಕ್ಕೆ ವಿವಾಹವಾಗುವ ಮಹಿಳೆ ತನ್ನ ಭಾವನೆಯನ್ನು ಕೇವಲ ಪತಿಗಷ್ಟೇ ಸೀಮಿತ ಮಾಡಿಕೊಳ್ಳುವಂತಿಲ್ಲ. ಬದಲಿಗೆ ಬಲವಂತವಾಗಿಯಾದರೂ ಪತಿಯ ಸಹೋದರನೊಂದಿಗೆ ಹಂಚಿಕೊಳ್ಳಬೇಕು. ವಿವಾಹವಾಗಿದ್ದು ಏಕ ಪುರುಷನನ್ನಾದರೂ ಬಹು ಪತಿತ್ವದ ರೀತಿಯಲ್ಲಿ ಬದುಕಬೇಕು.

ಮಹಿಳೆಯ ಭಾವನೆಗೆ ಬೆಲೆಯಿಲ್ಲ
ಇಲ್ಲಿ ಮಹಿಳೆರಯರ ಪರವಾಗಿ ನಿಲ್ಲುವ ವ್ಯಕ್ತಿಗಳು ಯಾರಿಲ್ಲ. ಈ ಕ್ರೂರ ಪದ್ಧತಿಯ ವಿರುದ್ಧ ಹೋರಾಡಲು ಆಗದೆ ಮೂಕವಾಗಿ ಸ್ವೀಕರಿಸಬೇಕು. ಮಹಿಳೆಯ ಅನುಪಾತ ಹೆಚ್ಚಾದರೂ, ಕಡಿಮೆಯಾದರೂ ಅನುಭವಿಸುವ ಕಷ್ಟ ಆಕೆಗೇ ಮೀಸಲಾಗುವುದು ನಿಜಕ್ಕೂ ದುಃಖಕರ ಸಂಗತಿ.



Click it and Unblock the Notifications











