Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ವಕೀಲೆಗೆ ನೆರೆಮನೆಯವರಿಂದ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಅತಿಕ್ರಮಣದ ವಿರುದ್ಧ ಮಾತನಾಡಲು ಹೋದ ದೆಹಲಿಯ ಮಹಿಳೆ ವಕೀಲೆಯೊಬ್ಬರನ್ನು ನೆರೆಮನೆಯವರು ಸರಿಯಾಗಿ ಥಳಿಸಿದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ...
ಭ್ರಷ್ಟಾಚಾರ, ಕಪ್ಪು ಹಣದ ಬಗ್ಗೆ ಕೇಂದ್ರ ಸರಕಾರ ಭಾರೀ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಇದೆ. ಆದರೆ ಸರಕಾರಿ ಜಾಗವನ್ನು ಅಕ್ರಮಿಸಿಕೊಂಡು ತಮ್ಮ ಹೆಸರಿಗೆ ಮಾಡಿಕೊಂಡಿರುವವರ ಬಗ್ಗೆ ಸರಕಾರ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಯಾವುದೇ ಮೂಲೆಗೆ ಹೋದರೂ ಅತಿಕ್ರಮಣವೆನ್ನುವುದು ಸಾಮಾನ್ಯವಾಗಿದೆ. ಹಳ್ಳಿಯಿಂದ ಹಿಡಿದು ನಗರ ಪ್ರದೇಶಗಳ ತನಕ ಅತಿಕ್ರಮಣ ನಡೆಯುತ್ತಲೇ ಇದೆ. ಬೆಂಗಳೂರಿನಲ್ಲಂತೂ ಕೆರೆಗಳನ್ನೇ ನುಂಗಿ ನೀರು ಕುಡಿದಿದ್ದಾರೆ.
ಇಂತಹ ಅಕ್ರಮಣದ ಬಗ್ಗೆ ಮಾತನಾಡಲು ಹೋದರೆ ಅವರಿಗೆ ಉಳಿಗಾಲವಿಲ್ಲ. ಯಾಕೆಂದರೆ ಅಕ್ರಮಣವೆನ್ನುವುದು ಭಾರೀ ದೊಡ್ಡ ದಂಧೆ. ಇಂತಹ ಅತಿಕ್ರಮಣದ ವಿರುದ್ಧ ಮಾತನಾಡಲು ಹೋದ ದೆಹಲಿಯ ಮಹಿಳೆ ವಕೀಲೆಯೊಬ್ಬರನ್ನು ನೆರೆಮನೆಯವರು ಸರಿಯಾಗಿ ಥಳಿಸಿದ ಘಟನೆ ನಡೆದಿದೆ. ದೆಹಲಿಯ ಅಂಜು ದೇವಿ ಎಂಬವರು ತನ್ನ ಪ್ರದೇಶದಲ್ಲಿದ್ದ ಸರಕಾರಿ ಜಾಗವನ್ನು ಕಬಳಿಸಿಕೊಂಡಿರುವ ವಿರುದ್ಧ ಕೇಸು ದಾಖಲಿಸಿದ್ದರು. ವಕೀಲೆಯಾಗಿರುವ ಅಂಜು ದೇವಿಗೆ ಅತಿಕ್ರಮಣ ಮಾಡಿಕೊಂಡಿರುವವರ ಏನು ಮಾಡಿದರು ಎಂದು ತಿಳಿಯಲು ಮುಂದೆ ಓದಿ.....

ಕೇಸು ದಾಖಲಿಸಿದ ಅಂಜು ದೇವಿ....
ತನ್ನ ನೆರೆಯಲ್ಲಿರುವ ಸರಕಾರಿ ಜಾಗದ ಅತಿಕ್ರಮಣ ಮಾಡಿರುವ ವಿರುದ್ಧ ಅಂಜು ದೇವಿ ಇತ್ತೀಚೆಗೆ ಕೇಸು ದಾಖಲಿಸಿದ್ದರು. ಅತಿಕ್ರಮಣ ಮಾಡಿರುವ ಸ್ಥಳವನ್ನು ತೆರವುಗೊಳಿಸಬೇಕೆಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು.

ನೆರೆಮನೆಯವರ ಮೆಟ್ಟಿಲು ಧ್ವಂಸ ಮಾಡಲಾಯಿತು
ಅತಿಕ್ರಮಣ ಮಾಡಿರುವಂತಹ ಜಾಗದಲ್ಲಿ ಕಟ್ಟಿರುವುದನ್ನು ಧ್ವಂಸ ಮಾಡಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು. ಇದು ನೆರೆಮನೆಯವರನ್ನು ತುಂಬಾ ಕೆರಳಿಸಿತ್ತು ಮತ್ತು ವಕೀಲೆ ವಿರುದ್ಧ ಜಗಳಕ್ಕೆ ಬಿದ್ದರು. ನೆರೆಮನೆಯ ಮಹಿಳೆಗೆ ಆಕೆಯ ಮಗಳು ಕೂಡ ಬೆಂಬಲ ನೀಡಿದಳು.

ತಾಯಿ-ಮಗಳು ವಕೀಲೆಗೆ ಹಲ್ಲೆ ನಡೆಸಿದರು
ಈ ವಿಡಿಯೋದಲ್ಲಿ ನೆರೆಮನೆಯ ಮಹಿಳೆಯು ವಕೀಲೆಗೆ ಯಾವ ರೀತಿಯಿಂದ ಹಲ್ಲೆ ಮಾಡುತ್ತಿದ್ದಾರೆಂದು ತಿಳಿಯುತ್ತದೆ. ವಕೀಲೆಯ ಉಸಿರುಗಟ್ಟಿಸಿ ಆಕೆ ಪ್ರಜ್ಞೆ ಕಳೆದುಕೊಳ್ಳುವ ತನಕ ಹೊಡೆಯುತ್ತಾರೆ.
ವಿಡಿಯೋ ನೋಡಿ...
ವಿಡಿಯೋದಲ್ಲಿ ಇದು ಹೇಗೆ ಆರಂಭವಾಯಿತೆಂದು ತಿಳಿಯುತ್ತದೆ. ವಕೀಲೆಯು ಇದರ ಬಗ್ಗೆ ವಿವರ ನೀಡುತ್ತಿರಬೇಕಾದರೆ ನೆರೆಮನೆಯ ಮಹಿಳೆಯು ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾಳೆ. ವಕೀಲೆಯ ಮೇಲೆ ಹಿಂದಿನಿಂದ ದಾಳಿ ಮಾಡಿದ ಮಹಿಳೆ ಆಕೆಗೆ ಚೆನ್ನಾಗಿ ಥಳಿಸುತ್ತಾಳೆ.
ಇನ್ನೊಂದು ವಿಡಿಯೋ ಹೀಗಿದೆ ನೋಡಿ..
ತಾಯಿ ಮಗಳು ವಕೀಲೆಗೆ ಹಿಗ್ಗಾಮುಗ್ಗಾ ಹೊಡೆಯುವುದನ್ನು ವಿಡಿಯೋದಲ್ಲಿ ನೋಡಬಹುದು. ವಕೀಲೆಯ ಸೀರೆ ಜಾರಿದರೂ ಇದರ ಬಗ್ಗೆ ಚಿಂತೆ ಮಾಡಲು ತಾಯಿ ಮಗಳು ಚೆನ್ನಾಗಿ ಹೊಡೆಯುತ್ತಾರೆ. ಹೊಡೆತ ತಿಂದು ಬಲಹೀನಳಾದ ವಕೀಲೆ ಅಲ್ಲೇ ಕುಸಿಯುತ್ತಾಳೆ. ಅಕ್ರಮ ದಂಧೆಕೋರರು ಕಾನೂನನ್ನು ಕೈಗೆತ್ತಿಕೊಂಡು ಯಾವ ರೀತಿ ವರ್ತಿಸಬಲ್ಲರು ಎನ್ನುವುದು ಈ ವೀಡಿಯೋ ಸಾಕ್ಷಿಯಾಗಿದೆ.
ನ್ಯಾಯ ಸಿಗಲು ಸಾಧ್ಯವೇ?
ವಕೀಲೆಯ ಮಗನು ಈ ಘಟನೆಯ ಸಂಪೂರ್ಣ ವಿಡಿಯೋವನ್ನು ಚಿತ್ರೀಕರಿಸಿದ್ದಾನೆ. ಆತ ತನ್ನ ತಾಯಿಯನ್ನು ರಕ್ಷಿಸಲು ಹೋಗಿದ್ದರೆ ಮಹಿಳೆಯರು ಆತನ ಮೇಲೆಯೂ ದಾಳಿ ಮಾಡುವ ಸಾಧ್ಯತೆಯಿತ್ತು. ಅನ್ಯಾಯದ ವಿರುದ್ಧ ಮಾತನಾಡಲು ಹೋದವರಿಗೆ ಈ ಸ್ಥಿತಿ ಬರುವುದನ್ನು ನಾವು ಯಾವಾಗಲೂ ನೋಡುತ್ತೇವೆ. ಫೇಸ್ ಬುಕ್ ನಲ್ಲಿ ಈ ಘಟನೆಯ ವಿಚಾರವು ಕಾಡ್ಗಿಚ್ಚಿನಂತೆ ಹಬ್ಬುತ್ತಾ ಇದೆ. ಇದನ್ನು ನೀವು ನೋಡಬಹುದು.



Click it and Unblock the Notifications











