Just In
- 51 min ago ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- 1 hr ago 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- 4 hrs ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 13 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
Don't Miss
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾವ್ಯಾವ ರಾಶಿಯವರ ಅದೃಷ್ಟ ಹೇಗಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಜೀವನದಲ್ಲಿ ಸೋಲು ಗೆಲುವು ಸಹಜ. ಯಾರು ತಾವು ಮಾಡುತ್ತಿರುವ ಕಾರ್ಯದಲ್ಲಿ ಮೊದಲ ಬಾರಿಯೇ ಗೆಲುವನ್ನು ಸಾಧಿಸುತ್ತಾರೋ ಅವರು ತಮ್ಮ ಬದುಕಿನಲ್ಲಿ ಗೆಲ್ಲುತ್ತಾರೆ. ಯಾರು ತಾವು ಮಾಡುವ ಕೆಲಸದಲ್ಲಿ ಮೊದಲು ಸೋಲುತ್ತಾರೋ ಅವರು ಜಗತ್ತನ್ನೇ ಗೆಲ್ಲಬಲ್ಲರು. ಏಕೆಂದರೆ ಸೋಲಿನ ನೋವು, ಗೆಲ್ಲಲೇ ಬೇಕೆಂಬ ಛಲದಿಂದ ಮತ್ತೆ ಮತ್ತೆ ಪ್ರಯತ್ನಗಳನ್ನು ಮಾಡುತ್ತಾರೆ. ಪ್ರತಿಯೊಂದು ಪ್ರಯತ್ನದಲ್ಲೂ ಸಾಕಷ್ಟು ಅನುಭವವನ್ನು ಪಡೆಯುತ್ತಾರೆ.
ಒಳ್ಳೆಯ ಅನುಭವ ಹಾಗೂ ಪರಿಶ್ರಮದಿಂದ ಜಗತ್ತನ್ನೇ ಗೆದ್ದು ತೋರಿಸುತ್ತಾರೆ. ಹಾಗಾಗಿ ಜೀವನದಲ್ಲಿ ಸೋಲು ಉಂಟಾಯಿತೆಂದು ಬೇಸರ ಪಡಬೇಡಿ. ಗೆಲುವಿನ ಮೆಟ್ಟಿಲನ್ನು ಏರಲು ಇನ್ನಷ್ಟು ಪ್ರಯತ್ನವನ್ನು ಮಾಡಿ. ಆಗ ಜೀವನದಲ್ಲಿ ಯಶಸ್ಸಿನ ತಿರುವನ್ನು ಪಡೆದುಕೊಳ್ಳುವಿರಿ.... ಈ ಜಗತ್ತಿನಲ್ಲಿ ಒಬ್ಬರು ಇರುವಂತೆ ಇನ್ನೊಬ್ಬರು ಇರುವುದಿಲ್ಲ. ಪ್ರತಿಯೊಬ್ಬರಲ್ಲೂ ಒಂದು ವಿಶೇಷತೆ ಇದ್ದೇ ಇರುತ್ತದೆ. ಈ ವಿಶೇಷತೆಯೇ ಅವರ ಸಾಮರ್ಥ್ಯವಾಗಿರುತ್ತದೆ. ಆದರೆ ಯಾವಾಗ ಈ ಸಾಮರ್ಥ್ಯ ತನ್ನದು ಎಂದು ಅರ್ಥವಾಯಿತೋ ಆಗ ಜೀವನ ಸುಂದರವಾಗುತ್ತದೆ ಹಾಗೂ ಜೀವನದಲ್ಲಿ ಬಹಳಷ್ಟನ್ನು ಸಾಧಿಸಲು ನೆರವಾಗುತ್ತದೆ.... ಮುಂದೆ ಓದಿ...
ಮೇಷ
ಈ ರಾಶಿಯವರು ಸವಾಲುಗಳನ್ನು ಎದುರಿಸುವಲ್ಲಿ ಸದಾ ಮುಂಚಿಣಿಯಲ್ಲಿರುತ್ತಾರೆ, ಅಲ್ಲದೆ ಧೈರ್ಯವಾಗಿ ಅದನ್ನು ಎದುರಿಸುತ್ತಾರೆ. ಇವರು ಜೀವನದಲ್ಲಿ ಜುಗುಪ್ಸೆ ಯನ್ನು ತಾಳುವ ಅಗತ್ಯವಿರುವುದಿಲ್ಲ. ಇತರರ ದೌರ್ಬಲ್ಯವನ್ನು ಇವರು ತಿಳಿದುಕೊಳ್ಳದೆ ಇರುವುದು ಒಳ್ಳೆಯದು. ಏಕೆಂದರೆ ಇದೇ ಮೇಷ ರಾಶಿಯವರನ್ನು ಅಪಾಯಕ್ಕೆ ತಳ್ಳುತ್ತದೆ. ಇನ್ನು ಈ ರಾಶಿಯವರು ಉತ್ತಮ ಮಾತುಗಾರಿಕೆಯನ್ನು ಹೊಂದಿರುತ್ತಾರೆ. ಇವರಲ್ಲಿ ಮಾತಿನ ಕಲೆ, ಆತ್ಮವಿಶ್ವಾಸ ಮತ್ತು ಹಠಾತ್ ಆಗಿ ನಿರ್ಧಾರಕ್ಕೆ ಬರುವ ಇವರಿಗೆ ಸರಿಯಾಗಿ ಹೊಂದಿಕೊಳ್ಳುವ ಕೆಲಸವೆಂದರೆ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ, ಕಾಮಗಾರಿ ವೃತ್ತಿ, ಹೊಟೇಲ್ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಉದ್ಯೋಗವು ಸೂಕ್ತವಾಗಿರುವುದು. ಮೇಷ ರಾಶಿಯವರು ಅತ್ಯಂತ ಶ್ರಮಜೀವಿಗಳಾಗಿರುತ್ತಾರೆ. ಅವರು ಬಯಸಿದ್ದನ್ನು ಪಡೆಯಲು ಹೆಚ್ಚು ಶ್ರಮ ಪಡುತ್ತಾರೆ. ಜೊತೆಗ ಮಧ್ಯದಲ್ಲಿ ಬರುವ ಅಡೆತಡೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗುತ್ತಾರೆ. ಇವರ ಅದೃಷ್ಟದ ಸಂಕೇತ ಕೀಲಿ. ಕೀಲಿಯನ್ನು ಸ್ವರ್ಗಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಇದನ್ನು ಸ್ವರ್ಗಕ್ಕೆ ದಾರಿ ಎಂದು ನಂಬಲಾಗುವುದು. ಕೀಯು ಆರೋಗ್ಯ ಮತ್ತು ಸಮೃದ್ಧಿಯ ಮೂಲ.
ವೃಷಭ
ಈ ರಾಶಿಯ ಜನರಿಗೆ ವಿಶಾಲವಾದ ಹೃದಯವಿದ್ದು ಎಲ್ಲಾ ಪ್ರಸಂಗಗಳಲ್ಲಿ ತಾಳ್ಮೆಯಿಂದ ವ್ಯವಹರಿಸುವ ಶಕ್ತಿಯಿದೆ. ಹತ್ತಿರದಿಂದ ಬಲ್ಲವರು ನಿಮ್ಮ ನಿಷ್ಠೆ ಮತ್ತು ನಂಬುಗೆಯನ್ನು ಇಷ್ಟಪಡುತ್ತಾರೆ. ನಿಮಗೆ ಅದೃಷ್ಟ ತರುವ ಗುಣವೆಂದರೆ ನಿಮ್ಮ ಪುಸ್ತಕ. ಪ್ರತಿಬಾರಿ ನೀವು ಒಂದು ಪುಸ್ತಕವನ್ನು ಓದಿದಾಗ ಅದರಿಂದ ನಿಮಗೆ ಶಾಂತಿ ಮತ್ತು ನೆಮ್ಮದಿ ದೊರಕುತ್ತದೆ. ಅಲ್ಲದೆ ಇವರಿಗೆ ಹೊಂದಿಕೆಯಾಗುವಂತಹ ವೃತ್ತಿಗಳೆಂದರೆ ಹಣಕಾಸು, ಲೆಕ್ಕಪತ್ರ ನಿರ್ವಹಣಿ, ಇಂಟೀರಿಯರ್ ಡಿಸೈನ್, ನರ್ಸಿಂಗ್, ಇಂಜಿನಿಯರಿಂಗ್, ಕಾನೂನು, ಮಾರ್ಕೆಟಿಂಗ್ ಮತ್ತು ಪಿಆರ್ ವೃತ್ತಿ ಮಾಡಬಹುದಾಗಿದೆ. ಇನ್ನು ವೃಷಭ ರಾಸಿಯವರ ಅದೃಷ್ಟ ಸಂಖ್ಯೆ 7. ಇದು ಆಧ್ಯಾತ್ಮಿಕವಾಗಿ ವಿಕಸನಗೊಂಡ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ. ಗಣಿತದ ಪ್ರಕಾರ 7 ಅತ್ಯಂತ ಉತ್ತಮ ಹೆಜ್ಜೆಯೆಂದು ಕಂಡು ಬರುತ್ತದೆ. ಮತ್ತು ಅದನ್ನು ಅತ್ಯಂತ ಶಕ್ತಿಯುತ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ. ಪುರಾತನ ಗ್ರೀಕರು ಇದನ್ನು ಪರಿಪೂರ್ಣ ಸಂಖ್ಯೆ ಎಂದು ಪರಿಗಣಿಸುತ್ತಾರೆ. ವೃಷಭ ರಾಶಿಯವರು ಹೆಚ್ಚಿನದಾಗಿ ಗಣಿತದಲ್ಲಿ ಆಸಕ್ತಿ ಹಾಗೂ ಪ್ರೀತಿಯನ್ನು ಹೊಂದಿರುತ್ತಾರೆ ಎನ್ನಲಾಗುವುದು.
ಮಿಥುನ
ಮಿಥುನ ಇವರು ಹೊಸ ಹೊಸ ವಿಚಾರವನ್ನು ಕಲಿಯುತ್ತಾ ಇರುತ್ತಾರೆ. ಹೊಸ ಹೊಸ ಜಾಗಗಳಿಗೆ ಭೇಟಿ ನೀಡುತ್ತಿರುತ್ತಾರೆ ಮತ್ತು ಹೊಸಬರನ್ನು ಭೇಟಿ ಮಾಡುತ್ತಿರುತ್ತಾರೆ ಆ ಮೂಲಕ ಯಶಸ್ಸನ್ನು ಗಳಿಸುತ್ತಾರೆ. ಅಲ್ಲದೆ ಈ ರಾಶಿಯವರು ತುಂಬಾ ನುರಿತ ಸಂವಹನಕಾರರಾಗಿರುತ್ತಾರೆ. ಚರ್ಚೆ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳುವುದಲ್ಲಿ ನೈಪುಣ್ಯತೆ ಪಡೆದಿರುತ್ತಾರೆ. ಹುರಿದುಂಬಿಸುವ ಹಾಗೂ ಆಸಕ್ತಿ ಹುಟ್ಟಿಸುವಂತಹ ವೃತ್ತಿ ಅವರಿಗೆ ಬೇಕಾಗಿದೆ. ಈ ರಾಶಿಯ ಜನರು ಸದಾ ಚಟುವಟಿಕೆ ಯುಳ್ಳವರಾಗಿದ್ದು ಸ್ನೇಹಪರ ಮತ್ತು ತಮಾಷೆಯ ವ್ಯಕ್ತಿತ್ವದವರಾಗಿದ್ದಾರೆ. ಇವರ ಕಲ್ಪನೆ ವಿಪರೀತ ತೂಪ ಪಡೆದು ಇದಕ್ಕೆ ವಿಚಿತ್ರವಾದ ಉತ್ತರವನ್ನೂ ಪಡೆಯುವಲ್ಲಿ ಸಫಲಾರಾಗುತ್ತಾರೆ. ಈ ರಾಶಿಯ ಜನರಿಗೆ ಅದೃಷ್ಟ ತರುವ ಗುಣವೆಂದರೆ ಅವರ ಕುಟುಂಬ. ಪ್ರತಿ ಬಾರಿ ವಿಚಿತ್ರ ಕಲ್ಪನೆಯ ಕಾರಣ ಅಸಂಭವವನ್ನು ಸಾಧಿಸಲು ಹೋಗಿ ತೊಂದರೆಗೆ ಒಳಗಾದಾಗ ನಿಮ್ಮ ಕುಟುಂಬವೇ ನಿಮ್ಮನ್ನು ರಕ್ಷಿಸುತ್ತದೆ. ಈ ರಾಶಿಯವರಿಗೆ ಹೊಂದಿಕೊಳ್ಳುವ ವೃತ್ತಿಗಳೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಮಾರಾಟ, ಕಾನೂನು ಜಾರಿ ಮತ್ತು ಅಗ್ನಿಶಾಮಕದಲ್ಲಿ ಕೆಲಸಗಳು.
ಕಟಕ
ಕಟಕ ರಾಶಿ ಇವರು ಹೊಸ ಹೊಸ ಯೋಜನೆ ಕೈಗೊಳ್ಳುವ ಮೊದಲು ಲುಕ್ನಲ್ಲಿ ಕಾಣಿಸಿಕೊಳ್ಳುವುದು ಒಳ್ಳೆಯದು. ನಿಮ್ಮ ಲುಕ್ ಬದಲಾದರೆ ಲಕ್ ಸಹ ಬದಲಾಗುತ್ತದೆ. ಯಶಸ್ಸು ಸಹ ಸಿಕ್ಕುತ್ತದೆ ಎಂದು ಹೇಳುತ್ತದೆ ರಾಶಿ ಭವಿಷ್ಯ. ಇನ್ನು ಈ ರಾಶಿಯವರು ಕರಣಾಮಯಿಗಳು, ಕಲಾತ್ಮಕತೆ ಹಾಗೂ ರಕ್ಷಣಾತ್ಮಕವಾಗಿರುವ ವ್ಯಕ್ತಿಗಳಾಗಿರುತ್ತಾರೆ. ಇವರು ಚರ್ಚೆ ಹಾಗೂ ಆಲೋಚನೆಗಳನ್ನು ಹಂಚಿಕೊಳ್ಳುವಲ್ಲಿ ನೈಪುಣ್ಯರು. ಈ ರಾಶಿಯವರು ಸದಾ ಸಂತೋಷದಿಂದ ಇರಲು ಬಯಸುತ್ತಾರೆ. ಇವರ ಲಕ್ಕಿ ಅದೃಷ್ಟವು ನಗು ಎಂದೇ ಹೇಳಬಹುದು. ಪ್ರಾಣಿಗಳನ್ನು ಪ್ರೀತಿಸುವ ಇವರು ವಿಶಾಲ ಮನಸ್ಸನ್ನು ಹೊಂದಿರುತ್ತಾರೆ. ಇವರ ಒಂದು ಕಿರು ನಗೆಯೇ ಅನೇಕರನ್ನು ಆಕರ್ಷಿಸುತ್ತದೆ. ಲೇಡಿ ಬಗ್ ಇವರ ಅದೃಷ್ಟದ ಸಂಕೇತ. ಲೇಡಿ ಬಗ್ ಈ ರಾಶಿಯವರ ದಿನವನ್ನು ಗಂಭೀರವವಾಗಿ ಪ್ರಕಾಶಿಸುತ್ತದೆ. ಅಲ್ಲದೆ ಸಂತೋಷ ಮತ್ತು ಸಮೃದ್ಧಿಯನ್ನು ಸೂಚಿಸುತ್ತದೆ. ಈ ರಾಶಿಯ ಜನರು ನಿಷ್ಠಾವಂತರು ಹಾಗೂ ನಂಬಿಕೆಗೆ ಅರ್ಹರಾದ ಜನರಾಗಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ನಿಮ್ಮನ್ನು ನಂಬಿದವರನ್ನು ಕೈಬಿಡದ ಗುಣ ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ತಳೆಯಲು ಸಾಧ್ಯವಾಗುತ್ತದೆ. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಸರ್ಕಾರಿ ಕೆಲಸ, ಕಾನೂನು ಸೇವೆ, ಜಾಹೀರಾತು, ಉನ್ನತ ಶಿಕ್ಷಣ, ಯಂತ್ರಗಳ ನಿರ್ವಹಣೆ, ಸಾರಿಗೆ ಮತ್ತು ಸೇನೆ.
ಸಿಂಹ
ಈ ರಾಶಿಯವರಿಗೆ ಚಿತ್ತಾಕರ್ಷಕ ಮತ್ತು ಹೊಳೆಯುವ ಹರಳುಗಳು ಹೆಚ್ಚು ಅದೃಷ್ಟವನ್ನು ತಂದುಕೊಡುತ್ತವೆ. ಜೆಮ್ಸ್ಟೋನ್ ಅಥವಾ ನೀಲಿ ಮಣಿ ಇವರಿಗೆ ಅತ್ಯಂತ ಅದೃಷ್ಟದ ವಸ್ತು ಎಂದು ಪರಿಗಣಿಸಲಾಗುತ್ತದೆ.ಈ ರಾಶಿಯ ಜನರು ಸಿಂಹದಂತೆಯೇ ದೃಢನಿಶ್ಚಯವುಳವರು ಮತ್ತು ದಿಟ್ಟ ಸ್ವಭಾವದವರಾಗಿರುತ್ತಾರೆ. ನಿಮಗೆ ಬಹಳಷ್ಟು ಕನಸುಗಳಿದ್ದು ಮಹತ್ವಾಕಾಂಕ್ಷಿಗಳೂ ಆಗಿರುತ್ತೀರಿ. ನಿಮಗೆ ಅದೃಷ್ಟ ತರುವ ಗುಣವೆಂದರೆ ನಿಮ್ಮ ಸ್ನೇಹ. ಜೀವನಸಂಗಾತಿ ಅಥವಾ ಪ್ರಾಣಸ್ನೇಹಿತ/ಸ್ನೇಹಿತೆಯ ಸ್ನೇಹಕ್ಕೆ ನೀವು ಅತಿಹೆಚ್ಚಿನ ಪ್ರಾಮುಖ್ಯತೆ ನೀಡುತ್ತೀರಿ. ಇವರಿಗೆ ಸರ್ಕಾರಿ ಕೆಲಸ, ಕಾನೂನು ಸೇವೆ, ಕಲೆ, ವಿನ್ಯಾಸ, ವಾಸ್ತುಶಿಲ್ಲ, ಇಂಜಿನಿಯರಿಂಗ್, ಮನೋರಂಜನೆ, ರಿಯಲ್ ಎಸ್ಟೇಟ್ ಅಥವಾ ಶಿಕ್ಷಣ ಕ್ಷೇತ್ರವು ಹೊಂದಿಕೆಯಾಗುತ್ತದೆ.
ಕನ್ಯಾ
ದುಷ್ಟ ಕಣ್ಣುಗಳೇ ಈ ರಾಶಿಯವರಿಗೆ ಅತ್ಯಂತ ಅದೃಷ್ಟದ ಸಂಕೇತ ಎಂದು ಪರಿಗಣಿಸಲಾಗುತ್ತದೆ. ದುಷ್ಟ ಕಣ್ಣುಗಳು ಸುತ್ತಲಿರುವ ಕೆಟ್ಟ ಶಕ್ತಿಯಿಂದ ರಕ್ಷಿಸುತ್ತದೆ. ಸುತ್ತಲಿನ ಶಕ್ತಿಯು ಹೆಚ್ಚು ಸಂವೇದನಾ ಶೀಲವಾಗಿರುತ್ತದೆ.ಈ ರಾಶಿಯ ಜನರು ಇತರರಿಗಿಂತ ಎರಡು ಹೆಜ್ಜೆ ಮುಂದಿರುತ್ತಾರೆ. ಇದಕ್ಕೆ ನೀವು ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವ ಗುಣವೇ ಕಾರಣ. ನೀವು ಸಾಮಾನ್ಯವಾಗಿ ಎಲ್ಲರಿಗೂ ಸಹಾಯ ಮಾಡುವ ಮನಸ್ಸುಳ್ಳವರಾಗಿದ್ದು ವ್ಯವಹಾರಿಕ ಅಥವಾ ಕಾರ್ಯರೂಪದ ಕೆಲಸಗಳನ್ನೇ ಹಮ್ಮಿಕೊಳ್ಳುತ್ತೀರಿ. ನಿಮಗೆ ಅದೃಷ್ಟ ತರುವ ಗುಣವೆಂದರೆ ನಿಮ್ಮ ಒಂಟಿತನ. ಇನ್ನು ಇವರು ಜ್ಞಾನ ಮತ್ತು ಅರ್ಥದ ಕಡೆ ಆಕರ್ಷಿತರಾಗುವಂತಹ ವ್ಯಕ್ತಿಗಳಾಗಿರುತ್ತಾರೆ. ನಿಖರತೆ, ವಿವರ ಮತ್ತು ಸಂಶೋಧನೆ ಎನ್ನುವುದು ಇವರ ವ್ಯಕ್ತಿತ್ವದಲ್ಲೇ ಇರುತ್ತದೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸಗಳೆಂದರೆ ಸಮಾಜ ಸೇವೆ, ಮಾರಾಟ, ಸಂಕಲನ, ಬರಹ ಮತ್ತು ಅಡುಗೆಯಲ್ಲಿ ತೊಡಗಿಕೊಳ್ಳಬಹುದು.
ತುಲಾ
ಅನೇಕ ಸಂಸ್ಕ್ರತಿಯಲ್ಲಿ ತ್ರಿಕೋನವನ್ನು ಅದೃಷ್ಟ ಎಂದು ಪರಿಗಣಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಈ ಚಿಹ್ನೆಯನ್ನು ಮಾನವ ಮತ್ತು ದೇವರ ನಡುವಿನ ಸಂಬಂಧವನ್ನು ಪ್ರತಿನಿಧಿಸುತ್ತದೆ ಎಂದು ನಂಬಲಾಗುತ್ತಿದೆ. ಇದು ಜಗತ್ತಿನ ಸಮತೋಲನವನ್ನು ಪ್ರತಿನಿಧಿಸುತ್ತದೆ. ಈ ರಾಶಿಯವರಿಗೆ ತ್ರಿಕೋನವೇ ಅದೃಷ್ಟದ ಸಂಕೇತ ಎಂದು ಪರಿಗಣಿಸಲಾಗುವುದು. ಈ ರಾಶಿಯ ಜನರು ಶಾಂತಿ ಪ್ರಿಯರಾಗಿದ್ದು ಆದರ್ಶವಾದಿಗಳಾಗಿರುತ್ತಾರೆ. ನಿಮ್ಮ ಸುತ್ತಮುತ್ತ ಶಾಂತಿ ಮತ್ತು ಸೌಹಾರ್ದತೆ ಪಡೆಯಲು ಸದಾ ಯತ್ನಿಸುತ್ತಿರುತ್ತೀರಿ. ನಿಮಗೆ ಅದೃಷ್ಟ ತರುವ ಗುಣವೆಂದರೆ ಹೂವುಗಳು. ನಿಮ್ಮ ಸುತಮುತ್ತ ಹೂವುಗಳಿರುವಂತೆ ಮತ್ತ ಸದಾ ನಗುನಗುತಾ ಇರುವಂತೆ ನೋಡಿಕೊಳ್ಳುತ್ತೀರಿ. ಅಂತೆಯೇ ಸದಾ ಹಸನ್ಮುಖಿಯಾಗಿರಲು ಹೂವುಗಳ ನಡುವೆಯೇ ಇರಲು ಇಚ್ಛಿಸುತ್ತೀರಿ. ಇನ್ನು ವೃತ್ತಿಯಲ್ಲಿ ಇವರಿಗೆ ಸಂತೋಷ ಸಿಗಬೇಕಾದರೆ ಮನುಷ್ಯರೊಂದಿಗೆ ಸಂವಾದ ಮಾಡುತ್ತಾ ಇರಬೇಕು. ಇವರು ತುಂಬಾ ಸಹಕಾರಿಗಳು ಮತ್ತು ಹೊಂದಾಣಿಕೆಯ ಸ್ವಭಾವದವರು. ಇವರಲ್ಲಿ ನ್ಯಾಯ ಹಾಗೂ ನಿಷ್ಠೆಯಿರುತ್ತದೆ. ಇವರಿಗೆ ಸರ್ಕಾರಿ, ಸಾಮಾಜಿಕ ಕೆಲಸ ಮತ್ತು ಕಾನೂನು ಜಾರಿ ವೃತ್ತಿ ಸೂಕ್ತವಾಗಿರುತ್ತದೆ.
ವೃಶ್ಚಿಕ
ಈ ರಾಶಿಯವರ ಅದೃಷ್ಟದ ಸಂಕೇತವು ಕುದುರೆ ಲಾಳ ಎನ್ನಲಾಗುತ್ತದೆ. ಹೆಚ್ಚಿನ ಶಕ್ತಿ ಹಾಗೂ ನಕಾರಾತ್ಮಕ ಶಕ್ತಿಯನ್ನು ದೂರವಿರಿಸಲು ಕುದುರೆ ಲಾಳವು ಹೆಚ್ಚು ಸಹಕಾರಿಯಾಗಿರುತ್ತದೆ. ಯು ಚಿಹ್ನೆಯಲ್ಲಿರುವ ವಸ್ತುವು ಅದೃಷ್ಟ ಹಾಗೂ ಸಮೃದ್ಧಿಯನ್ನು ತರುವುದು.ಈ ರಾಶಿಯ ಜನರು ಕ್ರಿಯಾತ್ಮಕರಾಗಿದ್ದು ತಾವಂದುಕೊಂಡಿದ್ದನ್ನೇ ಸಾಧಿಸುವ ಛಲವುಳ್ಳವರಾಗಿರುತ್ತಾರೆ. ನಿಮಗೆ ಅದೃಷ್ಟ ತರುವ ಗುಣವೆಂದರೆ ನಿಮ್ಮ ಸ್ವಂತಿಕೆ. ನಿಮ್ಮ ಸ್ವಂತಿಕೆಯ ಮೇರೆಯಂತೆಯೇ ನಡೆಯುವ ನಿಮಗೆ ಬೇರೆಯವರಿಂದ ಎರವಲು ಪಡೆದ ಯಾವುದೇ ಕ್ರಮ ಇಷ್ಟವಾಗುವುದಿಲ್ಲ. ಇನ್ನು ಇವರು ಒಳ್ಳೆಯ ಪತ್ತೆದಾರರು ಮತ್ತು ಸತ್ಯವನ್ನು ಹೊರತೆಗೆಯುವ ಸಾಮರ್ಥ್ಯವನ್ನು ಹೊಂದಿರುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸವೆಂದರೆ ಕಾನೂನು ಸೇವೆ, ಇಂಜಿನಿಯರಿಂಗ್, ವಿಜ್ಞಾನ, ಶಿಕ್ಷಣ ಮತ್ತು ಕಾಮಗಾರಿ.
ಧನಸ್ಸು
ಧಾರ್ಮಿಕ ಸಂಪ್ರದಾಯಗಳಲ್ಲಿ ಅನೇಕ ಅದೃಷ್ಟದ ಮೋಡಿಗಳನ್ನು ನೋಡಬಹುದು. ಈ ರಾಶಿಯವರು ಧಾಮಿಕ ಮತ್ತು ತೆರೆದ ಮನಸ್ಸಿನವರಾಗಿರುತ್ತಾರೆ. ಮೊಲದ ಪಾದದ ಚಿಹ್ನೆಗಳು ಈ ರಾಶಿಯವರಿಗೆ ಹೆಚ್ಚಿನ ಅದೃಷ್ಟವನ್ನು ತಂದುಕೊಡುತ್ತದೆ. ಈ ರಾಶಿಯ ಜನರು ಸದಾ ಧನಾತ್ಮಕ ಚಿಂತನೆ ನಡೆಸುವವರಾಗಿದ್ದು ಜೀವನದ ಚಿಕ್ಕ ಪುಟ್ಟ ತೊಂದರೆಗಳಿಗೆ ಇವರು ಕಿಂಚಿತ್ತೂ ಚಿಂತಿಸುವುದಿಲ್ಲ. ಯಾವುದೇ ಪರಿಸ್ಥಿತಿಗೆ ಒಳಗಾದರೂ ಇದರಿಂದ ಹೊರಬರಲು ಸತತ ಪ್ರಯತ್ನ ನಡೆಸುತ್ತಲೇ ಇರುತ್ತಾರೆ. ನಿಮಗೆ ಅದೃಷ್ಟ ತರುವ ಗುಣವೆಂದರೆ ನಿಮ್ಮ ಬಾಲ್ಯದ ಗೆಳೆಯರು. ನಿಮ್ಮ ಬಾಲ್ಯದ ಗೆಳೆತನವನ್ನು ಇಡಿಯ ಜೀವಮಾನ ಕಾಪಾಡುವ ನಿಮಗೆ ಬಾಲ್ಯದ ನೆನಪುಗಳು ಅತಿಹೆಚ್ಚಿನ ಸಂತೋಷ ನೀಡುತ್ತದೆ.ಇವರಿಗೆ ಹೊಂದಾಣಿಕೆಯಾಗುವ ಕೆಲಸವೆಂದರೆ ಸಂಕಲನ, ಬರಹ, ಮಾರ್ಕೆಟಿಂಗ್, ಮನೋರಂಜನೆ, ಸೇನೆ ಮತ್ತು ಸಾರ್ವಜನಿಕ ಸಂಪರ್ಕ.
ಮಕರ
ಇವರು ಜನ್ಮತಃ ನಾಯಕರಾಗಿರುತ್ತಾರೆ ಆದರೆ ಇವರು ಯಾವಾಗಲೂ ಇತರರಿಗೆ ಉದಾಹರಣೆಯನ್ನು ನೀಡಲು ಹೋಗಿ ಸಮಯ ವ್ಯರ್ಥ ಮಾಡಿಕೊಳ್ಳುತ್ತಾರೆ. ಇದಕ್ಕಾಗಿ ಸ್ವಲ್ಪ ಹಿಂದೆ ನಿಂತು ನೋಡುವುದು ಒಳ್ಳೆಯದು. ಯಾವಾಗಲೂ ಮುನ್ನುಗ್ಗಬೇಡಿ. ತಾಳ್ಮೆ ಇರಲಿ. ಇನ್ನು ಈ ರಾಶಿಯವರು ಹಠ, ಜವಾಬ್ದಾರಿ ಹಾಗೂ ರಾಜತಾಂತ್ರಿಕತೆ ಸ್ವಭಾವ ಹೊಂದಿರುತ್ತಾರೆ. ಇವರು ತಂದೆಯ ಸ್ಥಾನದಲ್ಲಿ ನಿಂತು ಆರೈಕೆಯನ್ನು ಮಾಡುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಕೃಷಿ ಮತ್ತು ಅಡುಗೆ. ಇವರಿಗೆ ಅದೃಷ್ಟ ತರುವ ಗುಣವೆಂದರೆ ಸಿನೇಮಾ ವೀಕ್ಷಣೆ. ಸಿನಿಮಾ ಅಥವಾ ನೆಚ್ಚಿನ ಧಾರಾವಾಹಿಯಲ್ಲಿ ಸಂಪೂರ್ಣವಾಗಿ ಮುಳುಗುವ ನೀವು ಆ ಲೋಕದಲ್ಲಿಯೇ ಮುಳುಗಿಬಿಡುತ್ತೀರಿ. ಜೀವನದಲ್ಲಿ ಯಾವಾಗ ತೊಂದರೆ ಕಾಡಿತೋ ಆಗೆಲ್ಲಾ ಈ ಸಿನೆಮಾದಲ್ಲಿ ಎದುರಾದ ಸನ್ನಿವೇಶದಲ್ಲಿ ನಾಯಕ ಅನುಸರಿಸಿದ ನೀತಿಯನ್ನೇ ಅನುಸರಿಸಿ ಈ ತೊಂದರೆಯಿಂದ ಬಿಡುಗಡೆ ಪಡೆಯಲು ಯತ್ನಿಸುತ್ತೀರಿ.
ಕುಂಬ
ಕುಂಬರಾಶಿಯವರಿಗೆ ಕ್ರಿಕೆಟ್ಸ್ ಬಹಳ ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಪುರಾತನ ಕಾಲದಿಂದಲೂ ಇದನ್ನು ಅದೃಷ್ಟದ ಸಂಕೇತ ಎಂದು ನಂಬಲಾಗಿದೆ. ಇವರು ಮನೆಯಲ್ಲಿ, ಕೈಚೀಲದ ಮೇಲೆ ಅಥವಾ ಬೀರುಗಳ ಮೇಲೆ ಈ ಚಿಹ್ನೆಯನ್ನು ಹೊಂದಿದ್ದರೆ ಉತ್ತಮ ಅದೃಷ್ಟ ಒಲಿದು ಬರುವುದು.ಈ ರಾಶಿಯ ವ್ಯಕ್ತಿಗಳು ಮಾನವತಾವಾದಿಗಳಾಗಿದ್ದು ಸುತ್ತಮುತ್ತಲ ಜನರಲ್ಲಿ ನೋವು ಕಾಣಲು ಇಷ್ಟಪಡುವುದಿಲ್ಲ. ಇವರ ಕಷ್ಟಗಳಿಗೆ ಸ್ಪಂದಿಸುವ ನೀವು ಸದಾ ನಿಮ್ಮ ಕೈಲಾದ ಸಹಾಯವನ್ನು ಮಾಡಲು ಯತ್ನಿಸುತ್ತಿರುತ್ತೀರಿ. ನಿಮಗೆ ಅದೃಷ್ಟ ತರುವ ಗುಣವೆಂದರೆ ನೀರು. ನಿಮ್ಮ ಸುತ್ತ ಮುತ್ತ ನೀರು ಇದ್ದಾಗ ನೀವು ಸದಾ ಶಾಂತರಾಗಿ ಉದ್ವೇಗರಹಿತರಾಗಿರುತ್ತೀರಿ. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಖಗೋಲಶಾಸ್ತ್ರ, ಫೋಟೋಗ್ರಾಫಿ, ವಾಯುಯಾನ ಮತ್ತು ಕಂಪ್ಯೂಟರ್ ತಂತ್ರಜ್ಞಾನ.
ಮೀನ
ಕನಸು ಕಾಣುವುದೇ ಇವರ ಅದೃಷ್ಟದ ಸಂಕೇತ. ಕೆಟ್ಟ ಕನಸುಗಳನ್ನು ವಿಶ್ಲೇಸಿಸುವ ಸಾಮಥ್ರ್ಯವನ್ನು ಹೊಂದಿರುತ್ತಾರೆ. ಇವು ಕನಸು ಕಾಣುವುದರಿಂದಲೇ ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ ಎನ್ನಲಾಗುವುದು. ಈ ರಾಶಿಯ ಜನರು ಸಹಾನುಭೂತಿ ತೋರುವ ವ್ಯಕ್ತಿಗಳಾಗಿದ್ದು ಜನರ ಸಮಸ್ಯೆಗಳ ಪರಿಹಾರಕ್ಕೆ ತಮ್ಮ ಸಮಯ ವಿನಿಯೋಗಿಸುವುದರಲ್ಲಿಯೇ ಪರಿಪೂರ್ಣತೆಯನ್ನು ಅನುಭವಿಸುತ್ತಾರೆ. ಜನರನ್ನು ಅವರಿದ್ದ ಹಾಗೇ ಸ್ವೀಕರಿಸುವ ನಿಮ್ಮ ಪರಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ನಿಮಗೆ ಅದೃಷ್ಟ ತರುವ ಗುಣವೆಂದರೆ ಸಂಗೀತ. ನಿಮ್ಮ ಮನೋಭಾವವನ್ನು ಉತ್ತಮಗೊಳಿಸಲು ಸಂಗೀತ ನಡೆಯುತ್ತಿದ್ದರೆ ಸಾಕಾಗುತ್ತದೆ. ಸಂಗೀತದ ಅಲೆ ಸುತ್ತ ತೇಲುತ್ತಿರುವಾಗ ನಿಮಗೆ ಹೊಸ ವಿಷಯಗಳು ಹೊಳೆಯುತ್ತವೆ ಹಾಗೂ ಹೆಚ್ಚು ಕ್ರಿಯಾತ್ಮಕರಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ.ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಆರೋಗ್ಯ, ಆರೈಕೆ, ಸಾಮಾಜಿಕ ಕೆಲಸ ಮತ್ತು ಲೋಕೋಪಕಾರ.