Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
30-11-2017 ಗುರುವಾರದ ದಿನ ಭವಿಷ್ಯ

ಪ್ರತಿಯೊಬ್ಬರು ಜೀವನದಲ್ಲಿ ಸುಖವನ್ನು ಬಯಸುತ್ತಾರೆ. ಸುಖ ಎನ್ನುವುದನ್ನು ಯಾವುದೇ ಕೈಗಾರಿಕೆಯಲ್ಲಿ ಉತ್ಪಾದಿಸುವುದಿಲ್ಲ. ಯಾವುದೇ ಅಂಗಡಿಯಲ್ಲೂ ಮಾರುವುದಿಲ್ಲ. ಇನ್ನೊಬ್ಬರ ಏಳಿಗೆಗೆ ಸಹಾಯ ಮಾಡಿದಾಗ ನಮಗೇ ಅರಿವಿಲ್ಲದಂತೆ ನಮ್ಮ ಪುಣ್ಯ ಹೆಚ್ಚುವುದು. ಸುಖ ಸಂತೋಷವು ನಮಗೆ ಲಭಿಸುವುದು. ಪರರಿಗೆ ಅನ್ಯಾಯ ಮಾಡದೆ, ಪ್ರೀತಿ ವಿಶ್ವಾಸದಿಂದ ಕಂಡಾಗ ಜೀವನವು ಸಾರ್ಥಕವಾಗುವುದು.
ಅಲ್ಲದೆ ಆ ಭಗವಂತನು ನಮ್ಮ ಇಷ್ಟಾರ್ಥಗಳನ್ನು ಪೂರೈಸುವನು. ಗುರುವಾರಾದ ಇಂದು ನಿಮ್ಮ ಕುಂಡಲಿಯಲ್ಲಿ ಗ್ರಹ ಗತಿಗಳು ಯಾವ ಬಗೆಯಲ್ಲಿ ಪರಿಣಾಮ ಬೀರುತ್ತವೆ. ಅದಕ್ಕೆ ದೇವರ ಆಶೀರ್ವಾದ ಲಭಿಸುವುದೇ? ಎನ್ನುವುದನ್ನು ನೀವು ತಿಳಿದುಕೊಳ್ಳಬೇಕಿದ್ದರೆ ಮುಂದಿರುವ ದಿನ ಭವಿಷ್ಯದ ವಿವರಣೆಯನ್ನು ಪರಿಶೀಲಿಸಿ...

ಮೇಷ
ಸಹೋದರರಿಂದ ಧನಾತ್ಮಕ ಸಹಾಯವನ್ನು ಪಡೆಯುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುವುದು. ವಿದ್ಯಾರ್ಥಿಗಳಿಗೆ ಉತ್ತಮವಾದ ದಿನ. ಬಂಧು ಬಾಂಧವರು ನಿಮ್ಮ ಸಹಾಯಕ್ಕೆ ನಿಲ್ಲುವರು. ಉದಾರ ಗುಣದವರಾದ ನಿಮಗೆ ದೇವರ ಆಶೀರ್ವಾದ ಲಭಿಸುವುದು. ಇನ್ನಷ್ಟು ಒಳಿತಿಗಾಗಿ ಗುರುವಿನ ಪ್ರಾರ್ಥನೆ ಹಾಗೂ ವಿಷ್ಣುವಿನ ಆರಾಧನೆ ಮಾಡಿ.

ವೃಷಭ
ಸಮಾಧಾನದ ಬದುಕನ್ನು ಕಾಣಲಿದ್ದೀರಿ. ನಿಮ್ಮ ನಿರೀಕ್ಷೆಗಳು ನೆರವೇರುವುದು. ಮಕ್ಕಳ ವಿವಾಹ ಕಾರ್ಯ ನಡೆಸಲು ಅನುಕೂಲವಾಗುವುದು. ಸ್ಥಿರಾಸ್ತಿಯಿಂದ ಅಲ್ಪ ಪ್ರಮಾಣದ ಲಾಭ ಉಂಟಾಗುವುದು. ಯಶಸ್ವಿ ಬದುಕು ಹಾಗೂ ಕಷ್ಟಗಳ ನಿವಾರಣೆಗೆ ಗಣೇಶನ ಆರಾಧನೆ ಮಾಡಿ.

ಮಿಥುನ
ಇಂದು ನಿಮಗೆ ಸಮಾಧಾನದ ದಿನ. ನಿರೀಕ್ಷಿತ ಮಟ್ಟಕ್ಕಿಂತ ಮಿಗಿಲಾಗಿ ಸ್ತ್ರೀಯರ ಸಹಕಾರ ಸಿಗುವುದು. ಮನೆಯಲ್ಲಿ ನೆಮ್ಮದಿಯ ವಾತಾವರಣ ಹಾಗೂ ಆರ್ಥಿಕವಾಗಿ ಸುಧಾರಣೆಯನ್ನು ಕಾಣುವಿರಿ. ಬಂಧು ಮಿತ್ರರ ಸಹಕಾರವು ದೊರೆಯುವುದು. ಇನ್ನಷ್ಟು ಉತ್ತಮ ಬದುಕಿಗಾಗಿ ಗುರುವಿನ ಆರಾಧನೆ ಮಾಡಿ.

ಕರ್ಕ
ಇಂದು ನಿಮಗೆ ಅದೃಷ್ಟದ ದಿನ. ನೀವು ಅಂದುಕೊಂಡ ಕೆಲಸ ಕಾರ್ಯಗಳೆಲ್ಲವೂ ಸುಗಮವಾಗಿ ನೆರವೇರುವುದು. ಎರಡು ವರ್ಷಗಳಿಂದ ಸಂಕಷ್ಟಗಳನ್ನು ಅನುಭವಿಸಿದ್ದ ನಿಮಗೆ ಇದೀಗ ಸಮಾಧಾನ ಹಾಗೂ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಕಲಾವಿದರಿಗೆ ಅನುಕೂಲ. ಮಾಡುತ್ತಿರುವ ಕೆಲಸದಲ್ಲಿ ಲಾಭಗಳ ಸುರಿಮಳೆ ಹಾಗೂ ವಿದೇಶ ಪ್ರಯಾಣದ ಕನಸು ನನಸಾಗುವದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವುದು. ಇನ್ನಷ್ಟು ಉತ್ತಮ ಫಲಕ್ಕಾಗಿ ಗಣೇಶ ಮತ್ತು ಗುರುವಿನ ಆರಾಧನೆ ಮಾಡಿ.

ಸಿಂಹ
ಪಂಚಮ ಶನಿ ಇರುವುದರಿಂದ ವಿಪರೀತವಾದ ಮಾನಸಿಕ ವೈಪರೀತ್ಯವನ್ನು ಅನುಭವಿಸುವಿರಿ. ಆರೋಗ್ಯದಲ್ಲೂ ಅಡೆತಡೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅವಮಾನ ಉಂಟಾಗುವುದು. ದೂರದ ಸಂಬಂಧಿಕರು ಅಗಲಿದ ಸುದ್ದಿ ಕೇಳುವಿರಿ. ರಾಹು ಕಾಲದ ಪ್ರಯಾಣ ಮಾಡದಿರಿ. ಮಕ್ಕಳಿಂದಲೇ ಅವಮಾನ ಉಂಟಾಗುವ ಸಾಧ್ಯತೆಗಳಿವೆ. ಸಮಸ್ಯೆಗಳ ನಿವಾರಣೆಗೆ ಗುರುವಿನ ಆರಾಧನೆ ಮಾಡಿ.

ಕನ್ಯಾ
ನಿಮಗೆ ಇಂದು ಉತ್ತಮವಾದ ದಿನ. ಮನೆಯಲ್ಲಿ ನೆಮ್ಮದಿ ಸಿಗುವುದು. ಸ್ತ್ರೀಯರಿಂದ ಸಕಾರಾತ್ಮಕ ವರ್ತನೆ ಕಾಣುವಿರಿ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಅತ್ಯಗತ್ಯ. ಕೈಗಾರಿಕಾ ಕ್ಷೇತ್ರದಲ್ಲಿ ಲಾಭ ಉಂಟಾಗುವುದು. ವಿದ್ಯಾರ್ಥಿಗಳಿಗೆ ಶುಭ ದಿನ. ಇನ್ನಷ್ಟು ಸಮಾಧಾನ ಹಾಗೂ ಯಶಸ್ವಿ ಬದುಕಿಗಾಗಿ ಗುರುವಿನ ಉಪಾಸನೆ ಮಾಡಿ.

ತುಲಾ
ಅಧಿಕ ಪ್ರಮಾಣದ ಲಾಭವನ್ನು ಪಡೆಯುವಿರಿ. ಎಲ್ಲಾ ವ್ಯಾಪಾರ ವಹಿವಾಟುಗಳಲ್ಲೂ ಲಾಭ ದೊರೆಯುವುದು. ಚಾಲಕರಿಗೆ ಸಮಾಧಾನ ದೊರೆಯುವುದು. ಪ್ರಗತಿಪರ ಜೀವನವನ್ನು ನೀವು ಅನುಭವಿಸಲಿದ್ದೀರಿ. ಇತರರ ಮಾತಿನ ನಡುವೆ ನೀವು ಮಧ್ಯಸ್ಥಿಕೆ ತೋರಬೇಡಿ. ಇನ್ನಷ್ಟು ಉತ್ತಮ ಬದುಕಿಗಾಗಿ ಗಣೇಶನ ಆರಾಧನೆ ಮಾಡಿ.

ವೃಶ್ಚಿಕ
ನಿಮ್ಮ ಆಂತರಿಕ ವಿಚಾರವನ್ನು ಯಾರೊಂದಿಗೂ ಚರ್ಚಿಸದಿರಿ. ಮನೆಯಲ್ಲಿ ಪೂರ್ಣ ಪ್ರಮಾಣದ ನೆಮ್ಮದಿ ದೊರೆಯದು. ಅದಕ್ಕಾಗಿ ಚಿಂತಿಸುವ ಅಗತ್ಯವಿಲ್ಲ. ಶಿವ ಸ್ಮರಣೆ ಮಾಡಿದರೆ ಕಷ್ಟಗಳು ದೂರಾಗುವುದು. ಹಿರಿಯರು ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆಗಳಿವೆ. ಮಾಡಿದ ನಿರ್ಧಾರವನ್ನು ಕೈಬಿಡದಿರಿ. ಶಿವನ ಆರಾಧನೆ ಹಾಗೂ ವಿಷ್ಣುವಿನ ಸ್ಮರಣೆ ಮಾಡಿ ಉತ್ತಮ ಭವಿಷ್ಯ ನಿಮ್ಮದಾಗುವುದು.

ಧನು
ಹೆಚ್ಚು ಕಾಳಜಿಯಿಂದ ಇರಿ. ನೀವು ಮಾಡದ ತಪ್ಪಿಗೆ ಹೊಣೆಯಾಗಬೇಕಾಗುವುದು. ನಿಮಗೆ ಇದೊಂದು ಪರೀಕ್ಷೆಯ ಸಮಯ ಎನ್ನಬಹುದು. ಹಿತ ಶತ್ರುಗಳಿಂದಲೇ ತೊಂದರೆ ಉಂಟಾಗುವುದು. ಆದಷ್ಟು ಸತ್ಯ ನಿಷ್ಠೆಯಿಂದ ವರ್ತಿಸಿ. ಕಪ್ಪು ಬಟ್ಟೆಯನ್ನು ತೊಡದಿರಿ. ಹಿರಿಯರ ಮಾತನ್ನು ಮೀರದಿರಿ. ಕಷ್ಟಗಳ ನಿವಾರಣೆಗೆ ಶನಿಯ ಅಷ್ಟೋತ್ತರವನ್ನು ಓದಿ.

ಮಕರ
ಇಂದು ನಿಮಗೆ ಸಾಮಾನ್ಯವಾದಂತಹ ದಿನ. ಮನೆಯಲ್ಲಿ ಕಿರಿಕಿರಿ ಹಾಗೂ ಬಂಧು ಮಿತ್ರರರ ನಡುವೆ ಕಲಹದ ವಾತಾವರಣ ಸೇರಿದಂತೆ ಅಶುಭ ಫಲವನ್ನು ಹೆಚ್ಚು ಕಾಣಬೇಕಾದಂತಹ ದಿನ. ಸಮಸ್ಯೆಗಳ ನಿವಾರಣೆ ಹಾಗೂ ಉತ್ತಮ ಬದುಕಿಗಾಗಿ ಶಿವನ ಆರಾಧನೆ ಮಾಡಿ.

ಕುಂಬ
ಇಂದು ಸಮಾಧಾನಕರವಾದ ದಿನ. ಸ್ತ್ರೀಯರಿಗೆ ಇಂದು ಅದೃಷ್ಟದ ದಿನ. ನೀವು ಮಾಡುತ್ತಿರುವ ಕೆಲಸವನ್ನು ಮುಂದುವರಿಸಿ. ದೂರದ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುವಿರಿ. ರೂಪದರ್ಶಿಗಳಿಗೆ ಅನುಕೂಲಕರವಾದ ದಿನ. ಕಬ್ಬಿಣ ಹಾಗೂ ಕೈಗಾರಿಕೆ ಕೆಲಸದಲ್ಲಿರುವವರಿಗೆ ಲಾಭ ಉಂಟಾಗುವುದು. ಉತ್ತಮ ಪ್ರಗತಿ ಹಾಗೂ ಯಶಸ್ವಿ ಬದುಕಿಗಾಗಿ ಆಂಜನೇಯನ ಆರಾಧನೆ ಮಾಡಿ.

ಮೀನ
ಶುಭವಾದಂತಹ ದಿನ. ನೆಮ್ಮದಿಯನ್ನು ಕಾಣುವಿರಿ. ಆರೋಗ್ಯದ ಸುಧಾರಣೆ ಆಗುವುದು. ಮನೆಯಲ್ಲಿ ಹರ್ಷದ ವಾತಾವರಣ ಉಂಟಾಗುವುದು. ವಿದೇಶ ಪ್ರಯಾಣ ಕೈಗೊಳ್ಳುವಿರಿ. ಮಾಡುತ್ತಿರುವ ಕೆಲಸದಲ್ಲಿ ಪ್ರಗತಿಯನ್ನು ಕಾಣುವಿರಿ. ಜೊತೆಗೆ ಅಧಿಕವಾದ ಖುಷಿಯು ನಿಮಗೆ ಲಭಿಸುವುದು. ಇನ್ನಷ್ಟು ಸಮಾಧಾನದ ಬದುಕಿಗಾಗಿ ಗಣೇಶನ ಮತ್ತು ಗುರುವಿನ ಆರಾಧನೆ ಮಾಡಿ.



Click it and Unblock the Notifications











