Latest Updates
-
ಮಳೆಗಾಲದ ತೇವಾಂಶಕ್ಕೆ ಗುಡ್ ಬೈ: ₹1,499 ರೊಳಗೆ ಸಿಗುವ ಬೆಸ್ಟ್ ಡಿಹ್ಯೂಮಿಡಿಫೈಯರ್ ಮತ್ತು ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆ 120 ರೂಪಾಯಿಯಲ್ಲಿ ಆರೋಗ್ಯಕರ ಲಂಚ್ಬಾಕ್ಸ್ ಸಿದ್ಧಪಡಿಸುವುದು ಹೇಗೆ? -
ವಿಶ್ವ ಸಿಂಹ ದಿನ: ಸಿಂಹದಂತೆ ಗರ್ಜಿಸುವ ಶಕ್ತಿ ಪಡೆಯಲು 10 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಸೂರ್ಯಗ್ರಹಣದ ಗೊಂದಲ: ಹಿರಿಯರ ನಂಬಿಕೆಗಳ ನಡುವೆ ಯುವ ದಂಪತಿಗಳು ಶಾಂತಿ ಕಾಪಾಡುವುದು ಹೇಗೆ? -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ನಿಮ್ಮ ಬಾಲ್ಕನಿಯಲ್ಲಿಯೇ ಸೃಷ್ಟಿಸಿ ಹಸಿರು ಸ್ವರ್ಗ! -
ಕೇರಳದ ಉಚಿತ ಓಣಂ ಕಿಟ್: ದಿನಸಿ ಪದಾರ್ಥಗಳು ಹಾಳಾಗದಂತೆ ಇಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಆಗಸ್ಟ್ ಕ್ರಾಂತಿ ದಿನ: ಸೋಶಿಯಲ್ ಮೀಡಿಯಾದಲ್ಲಿ ದೇಶಭಕ್ತಿ ಮೆರೆಯಲು ಇಲ್ಲಿದೆ ಬೆಸ್ಟ್ ಐಡಿಯಾಸ್! -
ಮಳೆಗಾಲದ ಓಟದ ನಂತರ ಕಾಲು ನೋವೇ? ಕೀಲುಗಳ ರಕ್ಷಣೆಗೆ ಈ 12 ನಿಮಿಷದ ಸರಳ ವ್ಯಾಯಾಮಗಳು -
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ?
ಈ ಸ್ಮಶಾನದ ನೆಲದಲ್ಲಿ ವೇಶ್ಯೆಯರು ನರ್ತಿಸುತ್ತಾರಂತೆ! ಯಾಕೆ ಗೊತ್ತೇ?
ಭಾರತ ವೈವಿಧ್ಯತೆಗಳ ನೆಲ. ಇಲ್ಲಿ ಸಾವಿರಾರು ಸಂಸ್ಕೃತಿಗಳಿದ್ದು ಲಕ್ಷಾಂತರ ಸಂಪ್ರದಾಯಗಳನ್ನು ಇಂದಿಗೂ ಪಾಲಿಸಲಾಗುತ್ತಿದೆ. ಈ ಸಂಪ್ರದಾಯಗಳ ವೈವಿಧ್ಯತೆ ಎಷ್ಟು ಹೆಚ್ಚಿವೆ ಎಂದರೆ ಇದನ್ನು ಒಂದು ಊರಿನಲ್ಲಿ ಅನುಸರಿಸುತ್ತಿದ್ದರೆ ಪಕ್ಕದ ಊರಿನವರಿಗೇ ಈ ಬಗ್ಗೆ ತಿಳಿದಿರುವುದಿಲ್ಲ. ಅದರಲ್ಲಿ ಕೆಲವು ಸಂಪ್ರದಾಯಗಳು ವಿಚಿತ್ರವೆನಿಸುತ್ತದೆ.
ಇಂತಹ ಒಂದು ಸಂಪ್ರದಾಯದಲ್ಲಿ ಸ್ಮಶಾನದಲ್ಲಿ ಉರಿಯುತ್ತಿರುವ ಚಿತೆಗಳ ಸುತ್ತ ವೇಶ್ಯೆಯರು ನರ್ತಿಸುತ್ತಾರೆ. ಈ ಕ್ರಮ ಅಸಹ್ಯ ಎಂದು ಹೆಚ್ಚಿನವರಿಗೆ ಅನ್ನಿಸಿದರೂ ಈ ಸಂಪ್ರದಾಯವನ್ನು ಅನುಸರಿಸುವವರು ಇದಕ್ಕೆ ನೀಡುವ ಕಾರಣ ನಿಮ್ಮನ್ನು ಬೆಚ್ಚಿ ಬೀಳಿಸಬಹುದು. ಇದು ಎಲ್ಲಿ ನಡೆಯುತ್ತದೆ ಎಂಬ ಕುತೂಹಲ ಮೂಡಿತೇ? ಮುಂದೆ ಓದಿ....

ಈ ಸಂಪ್ರದಾಯ ತುಂಬಾ ಹಳೆಯದು
ಈ ವಿಚಿತ್ರ ಸಂಪ್ರದಾಯಕ್ಕೆ ಸುಮಾರು 450 ವರ್ಷಗಳ ಇತಿಹಾಸವಿದೆ. ಆ ಸಮಯದಲ್ಲಿ ರಾಜಾ ಮಾನ್ ಸಿಂಗ್ ರವರ ಆಳ್ವಿಕೆ ಇತ್ತು. ಬಳಿಕ ಆಳ್ವಿಕೆಯನ್ನು ಸ್ಮಶಾನದ ದೇವರು ಎಂದೇ ಪ್ರಖ್ಯಾತರಾಗಿದ್ದ ಬಾಬಾ ಶಂಶಾನ್ ನಾಥ್ ರವರು ಪುನ:ಸ್ಥಾಪಿಸಿದರು. ಅಂದಿನಿಂದ ಪ್ರತಿ ವರ್ಷದ ನವರಾತ್ರಿಯ ಸಮಯದಲ್ಲಿ ಈ ಸಂಪ್ರದಾಯವನ್ನು ಆಚರಿಸಲಾಗುತ್ತಿದೆ.

ಈ ಸಂಪ್ರದಾಯಕ್ಕೆ ಕಾರಣ
ಈ ಸಂಪ್ರದಾಯಕ್ಕೆ ಪ್ರಮುಖ ಕಾರಣವೆಂದರೆ "ಸಂಶಾನೇಶ್ವರ ಮಹಾದೇವನ ಶೃಂಗಾರ" ಅಥವಾ ಈ ದೇವನನ್ನು ಒಲಿಸಿಕೊಳ್ಳುವ ಮೂಲಕ ಮುಂದಿನ ಜನ್ಮದಲ್ಲಿಯಾದರೂ ಒಳ್ಳೆಯ ಜೀವನ ದೊರಕಲಿ ಎಂದು ಶಿವದಾಸಪುರ, ಮಂದುವಾಯಿಧ್, ಚುನಾರ್ ಮಾತು ದಾಲ್ ಮಂಡಿ ಮೊದಲಾದ ಸ್ಥಳಗಳಲ್ಲಿರುವ ಕೆಂಪುದೇಪದ ಪ್ರದೇಶದ ವೇಶ್ಯೆಯರು ಇಲ್ಲಿ ಪೂಜೆಯ ರೂಪದಲ್ಲಿ ನರ್ತಿಸುತ್ತಾರೆ.

ಈ ನರ್ತನ ಎಲ್ಲಿ ನಡೆಯುತ್ತದೆ?
ವಾರಣಾಸಿಯ ಪ್ರಮುಖ ಸ್ಮಶಾನದಲ್ಲಿ ಈ ಸಂಪ್ರದಾಯ ನಡೆಯುತ್ತದೆ. ಈ ಸ್ಮಶಾನಕ್ಕೆ 'ಮಹಾಸ್ಮಶಾನಂ' ಎಂದೂ ಕರೆಯಲಾಗುತ್ತದೆ. ಬೇರೆ ಸ್ಮಶಾನಗಳಿಗೆ ಇವರು ಹೋಗದಿರಲು ಕಾರಣವೇನೆಂದರೆ ಇಲ್ಲಿ ಸದಾ ಒಂದಲ್ಲಾ ಒಂದು ಚಿತೆ ಉರಿಯುತ್ತಲೇ ಇರುತ್ತದೆ ಹಾಗೂ ಪ್ರತಿದಿನ ಮುಸ್ಸಂಜೆಯ ಹೊತ್ತಿನಲ್ಲಿ ಈ ನರ್ತನ ಸರಿಸುಮಾರು ಪ್ರತಿದಿನ ನಡೆಯುತ್ತದೆ.

ಈ ನರ್ತನ ಎಲ್ಲಿ ನಡೆಯುತ್ತದೆ?
ಈ ನರ್ತನವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕುತೂಹಲಿಗರು ಆಗಮಿಸುತ್ತಾರೆ. ಈ ನರ್ತನದ ಬಳಿಕ ನಡೆಯುವ ಪೂಜೆಯಲ್ಲಿ ಪ್ರಸಾದದ ರೂಪದಲ್ಲಿ ಮಾಂಸ, ಭಾಂಗ್, ಗಾಂಜಾ, ಹಣ ಮತ್ತು ಮದ್ಯದ ಬಾಟಲಿಗಳನ್ನೂ ದೇವರಿಗೆ ಅರ್ಪಿಸಲಾಗುತ್ತದೆ.

ಈ ಬಗ್ಗೆ ವೇಶ್ಯೆಯರೇನು ಹೇಳುತ್ತಾರೆ?
ವೇಶ್ಯೆಯರು ತಿಳಿಸುವ ಪ್ರಕಾರ ಈ ಪೂಜೆ ಮತ್ತು ನರ್ತನದ ಮೂಲಕ ಬಾಬಾರವರ ಅನುಗ್ರಹವನ್ನು ಪಡೆದು ಮುಂದಿನ ಜನ್ಮದಲ್ಲಿ ಒಳ್ಳೆಯ ಜೀವನವನ್ನು ಪಡೆಯಲು ಸಾಧ್ಯವಾಗುತ್ತದೆ.

ಈ ಬಗ್ಗೆ ವೇಶ್ಯೆಯರೇನು ಹೇಳುತ್ತಾರೆ?
ಮುಂದಿನ ಜನ್ಮದ ಜೀವನ ಒಳ್ಳೆಯದಾಗಲಿ ಎಂದೇ ಈ ಜನ್ಮದಲ್ಲಿ ಚಿತೆಗಳ ಸುತ್ತ ನರ್ತಿಸುವುದು ವಿಚಿತ್ರವಾದರೂ ನಿಜವಾಗಿರುವ ಸಂಪ್ರದಾಯವಾಗಿದೆ. ಈ ಮಾಹಿತಿ ನಿಮ್ಮಲ್ಲಿ ಕುತೂಹಲ ಮೂಡಿಸಿದರೆ ನಿಮ್ಮ ಪರಿಚಿತರು ಸ್ನೇಹಿತರಲ್ಲಿಯೂ ಹಂಚಿಕೊಳ್ಳಿ.



Click it and Unblock the Notifications