Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಸಿಯಾಚಿನ್ನಲ್ಲಿ ಸದಾ ಯೋಧರ ರಕ್ಷಣೆಗೆ ನಿಲ್ಲುವ "ಒಪಿ ಬಾಬಾ''ನ ಆತ್ಮ!
ಸಿಯಾಚಿನ್ ಅತಿ ಹೆಚ್ಚು ಚಳಿಯನ್ನು ಹೊಂದಿರುವ ಭಾರತದ ಗಡಿ ಪ್ರದೇಶ. ದೇಶದ ರಕ್ಷಣೆಗಾಗಿ ನಿಲ್ಲುವ ಅದೆಷ್ಟೋ ಯೋಧರು ಇಲ್ಲಿ ಪ್ರಾಣ ಬಿಟ್ಟಿದ್ದಾರೆ. ಹಿಮ ಮಳೆ, ಹಿಮದ ಕುಸಿತ, ತಡೆಯಲಾರದಷ್ಟು ಚಳಿಯ ಕೊರೆತ ಹಾಗೂ ಪಾಕಿಸ್ತಾನದ ನಡುವೆ ಇರುವ ವೈಷಮ್ಯದ ಹೋರಾಟದಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಂತಹವರಲ್ಲಿ ಸೈನಿಕ ಓಂ ಪ್ರಕಾಶವರು ಒಬ್ಬರು.
ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಮುಡಿಪಾಗಿಟ್ಟ ಓಂ ಪ್ರಕಾಶ್ ಅವರು ಗಡಿಯಲ್ಲಿರುವ ಯೋಧರನ್ನು ರಕ್ಷಿಸುತ್ತಿದ್ದಾರೆ. ಭಾರತದ ಸೈನಿಕರು ಸಹ ಇವರನ್ನು 'ಒಪಿ ಬಾಬಾ' ಎಂದು ಆರಾಧಿಸುತ್ತಾರೆ. ಅರೇ! ಇದೆಂತಹ ಕಥೆ ಎನ್ನುವ ಕುತೂಹಲ ಮನಸ್ಸಿಗೆ ಬಂದರೆ, ಲೇಖನವನ್ನು ಮುಂದೆ ಓದಿ....

ಕಥೆ
ಓಂ ಪ್ರಕಾಶ್ ಎಂಬ ಯೋಧನು 1980ರಲ್ಲಿ ಸಿಯಾಚಿನ್ ಮಾಲುನ್ಅಲ್ಲಿ ಗಡಿ ರಕ್ಷಣೆಯ ಕಾರ್ಯವನ್ನು ನಿರ್ವಹಿಸುತ್ತಿದ್ದನು. ಒಮ್ಮೆ ಇತರ ಸೈನಿಕರು ತಾತ್ಕಾಲಿಕವಾಗಿ ಕೇಂದ್ರಕಾರ್ಯಾಲಯಕ್ಕೆ ಬಂದಿದ್ದ. ನಂತರ ಯೋಧ ಏನಾದ ಎನ್ನುವ ಸಮಾಚಾರ ಯಾರಿಗೂ ತಿಳಿದಿಲ್ಲ. ಹಿಮದ ಕೊರೆತದಿಂದ ಹಿಮದಲ್ಲಿ ಹುದುಗಿ ಹೋಗಿರಬಹುದು ಎನ್ನುವುದು ಕೆಲವರ ಊಹೆ.
ದೇಶದ ರಕ್ಷಣೆಗಾಗಿ ಪ್ರೇತವಾಗಿ ಕಾಯುತ್ತಿರುವ ಹುತಾತ್ಮ ಯೋಧನ ಕಥೆ!

ಆಶ್ಚರ್ಯ!
ಅಂದಿನಿಂದ ಇಂದಿನ ವರೆಗೂ ಸಿಯಾಚಿನ್ನಲ್ಲಿ ಗಡಿ ರಕ್ಷಣೆಗೆ ನಿಲ್ಲುವ ಯೋಧರು ಅನೇಕ ತೊಂದರೆಗಳಿಗೆ ಈಡಾಗುತ್ತಿದ್ದಾರೆ. ಇವರುಗಳ ರಕ್ಷಣೆಗೆ ಓಂ ಪ್ರಕಾಶರ ಆತ್ಮವು ನಿಲ್ಲುತ್ತದೆ ಎಂದು ನಂಬುತ್ತಿದ್ದಾರೆ.

ರಕ್ಷಣೆ
ಶತ್ರುಗಳ ದಾಳಿ ಮತ್ತು ಅಪಾಯಕಾರಿ ಹಿಮದ ಕೊರೆತವಿದ್ದರೆ, ಈ ಆತ್ಮವು ಸಿಯಾಚಿನ್ನಲ್ಲಿ ಕೆಲಸ ನಿರ್ವಹಿಸುವ ಯೋಧರ ಕನಸಿನಲ್ಲಿ ಬಂದು ಎಚ್ಚರಿಕೆ ನೀಡುತ್ತದೆ. ಜೊತೆಗೆ ಅವರ ರಕ್ಷಣೆಗೆ ಮುಂದಾಗುತ್ತದೆ ಎನ್ನುವ ನಂಬಿಕೆ ಇದೆ.

ನಂಬಿಕೆ...
ಈ ಆತ್ಮಕ್ಕೆ ಒಪಿ ಬಾಬಾ ಎಂದು ಹೆಸರಿಸಿ, ಒಂದು ಮಂದಿರವನ್ನು ನಿರ್ಮಿಸಲಾಗಿದೆ. ಇಲ್ಲಿ ಸೈನ್ಯದ ಕಮಾಂಡಿಂಗ್ ಆಫೀಸರ್ ದೇವಾಲಯಕ್ಕೆ ವರದಿಯನ್ನು ಸಲ್ಲಿಸುತ್ತಾರೆ. ಅಲ್ಲದೆ ಸೈನಿಕರ ಮೇಲೆ ಉಂಟಾಗುವ ದಾಳಿಯ ಬಗ್ಗೆ ಮಾಹಿತಿಯನ್ನು ಬಾಬಾ ಸೂಚಿಸುತ್ತಾರೆ ಎನ್ನುವ ಪ್ರತೀತಿ ಇದೆ.
Image Courtesy

ದೇವರಂತೆ ಪೂಜಿಸುತ್ತಾರೆ...
ಎಲ್ಲಾ ಸೈನಿಕರು ಕರ್ತವ್ಯ ನಿರ್ವಹಿಸಲು ಹೋಗುವ ಮುನ್ನ ಬಾಬಾ ಮಂದಿರಕ್ಕೆ ಬರುತ್ತಾರೆ. ಬಾಬನಿಗೆ ನಮಸ್ಕರಿಸಿ ಕೆಲಸಕ್ಕೆ ಯಶಸ್ಸು ಸಿಗಲಿ ಎಂದು ಕೇಳಿಕೊಳ್ಳುತ್ತಾರೆ.
Image courtesy

ಪೂಜ್ಯ ಭಾವ
2003ರಲ್ಲಿ ಬಾಬಾ ಮಂದಿರವು ಬಹಳ ಶಕ್ತಿಯನ್ನು ಹೊಂದಿರುವ ದೇವಾಲಯ ಎಂದು ಪರಿಗಣಿಸಲಾಯಿತು. ಅಲ್ಲದೆ ಇಂದಿಗೂ ಸೈನಿಕರು ಮೊದಲು ಬಾಬನಿಗೆ ಔಪಚಾರಿಕ ವರದಿಯನ್ನು ಇಟ್ಟು, ಎಲ್ಲಾ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಇಂದಿಗೂ ನಮ್ಮ ಯೋಧರ ರಕ್ಷಣೆಗೆ ನಿಲ್ಲುವ ಬಾಬಾ...
1984ರ ಬೇಸಿಗೆಯಿಂದ ಇಂದಿಗೂ ಸಿಯಾಚಿನ್ನಲ್ಲಿ ಕಾರ್ಯ ನಿರ್ವಹಿಸುವ ಯೋಧರ ಪಾಲನೆಯನ್ನು ಈ ಆತ್ಮ ಮಾಡುತ್ತದೆ ಎನ್ನುವ ನಂಬಿಕೆ ಇದೆ.

ತರಬೇತಿ
ಸಿಯಾಚಿನ್ ಬೇಸ್ ಕ್ಯಾಂಪ್ಗಳಲ್ಲಿ ಸೈನಿಕರಿಗೆ ಮೂರುತಿಂಗಳ ಕಾಲ ತರಬೇತಿ ನೀಡಲಾಗುತ್ತದೆ.



Click it and Unblock the Notifications