Latest Updates
-
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ!
ಸಿಯಾಚಿನ್ನಲ್ಲಿ ಸದಾ ಯೋಧರ ರಕ್ಷಣೆಗೆ ನಿಲ್ಲುವ "ಒಪಿ ಬಾಬಾ''ನ ಆತ್ಮ!
ಸಿಯಾಚಿನ್ ಅತಿ ಹೆಚ್ಚು ಚಳಿಯನ್ನು ಹೊಂದಿರುವ ಭಾರತದ ಗಡಿ ಪ್ರದೇಶ. ದೇಶದ ರಕ್ಷಣೆಗಾಗಿ ನಿಲ್ಲುವ ಅದೆಷ್ಟೋ ಯೋಧರು ಇಲ್ಲಿ ಪ್ರಾಣ ಬಿಟ್ಟಿದ್ದಾರೆ. ಹಿಮ ಮಳೆ, ಹಿಮದ ಕುಸಿತ, ತಡೆಯಲಾರದಷ್ಟು ಚಳಿಯ ಕೊರೆತ ಹಾಗೂ ಪಾಕಿಸ್ತಾನದ ನಡುವೆ ಇರುವ ವೈಷಮ್ಯದ ಹೋರಾಟದಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಂತಹವರಲ್ಲಿ ಸೈನಿಕ ಓಂ ಪ್ರಕಾಶವರು ಒಬ್ಬರು.
ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಮುಡಿಪಾಗಿಟ್ಟ ಓಂ ಪ್ರಕಾಶ್ ಅವರು ಗಡಿಯಲ್ಲಿರುವ ಯೋಧರನ್ನು ರಕ್ಷಿಸುತ್ತಿದ್ದಾರೆ. ಭಾರತದ ಸೈನಿಕರು ಸಹ ಇವರನ್ನು 'ಒಪಿ ಬಾಬಾ' ಎಂದು ಆರಾಧಿಸುತ್ತಾರೆ. ಅರೇ! ಇದೆಂತಹ ಕಥೆ ಎನ್ನುವ ಕುತೂಹಲ ಮನಸ್ಸಿಗೆ ಬಂದರೆ, ಲೇಖನವನ್ನು ಮುಂದೆ ಓದಿ....

ಕಥೆ
ಓಂ ಪ್ರಕಾಶ್ ಎಂಬ ಯೋಧನು 1980ರಲ್ಲಿ ಸಿಯಾಚಿನ್ ಮಾಲುನ್ಅಲ್ಲಿ ಗಡಿ ರಕ್ಷಣೆಯ ಕಾರ್ಯವನ್ನು ನಿರ್ವಹಿಸುತ್ತಿದ್ದನು. ಒಮ್ಮೆ ಇತರ ಸೈನಿಕರು ತಾತ್ಕಾಲಿಕವಾಗಿ ಕೇಂದ್ರಕಾರ್ಯಾಲಯಕ್ಕೆ ಬಂದಿದ್ದ. ನಂತರ ಯೋಧ ಏನಾದ ಎನ್ನುವ ಸಮಾಚಾರ ಯಾರಿಗೂ ತಿಳಿದಿಲ್ಲ. ಹಿಮದ ಕೊರೆತದಿಂದ ಹಿಮದಲ್ಲಿ ಹುದುಗಿ ಹೋಗಿರಬಹುದು ಎನ್ನುವುದು ಕೆಲವರ ಊಹೆ.
ದೇಶದ ರಕ್ಷಣೆಗಾಗಿ ಪ್ರೇತವಾಗಿ ಕಾಯುತ್ತಿರುವ ಹುತಾತ್ಮ ಯೋಧನ ಕಥೆ!

ಆಶ್ಚರ್ಯ!
ಅಂದಿನಿಂದ ಇಂದಿನ ವರೆಗೂ ಸಿಯಾಚಿನ್ನಲ್ಲಿ ಗಡಿ ರಕ್ಷಣೆಗೆ ನಿಲ್ಲುವ ಯೋಧರು ಅನೇಕ ತೊಂದರೆಗಳಿಗೆ ಈಡಾಗುತ್ತಿದ್ದಾರೆ. ಇವರುಗಳ ರಕ್ಷಣೆಗೆ ಓಂ ಪ್ರಕಾಶರ ಆತ್ಮವು ನಿಲ್ಲುತ್ತದೆ ಎಂದು ನಂಬುತ್ತಿದ್ದಾರೆ.

ರಕ್ಷಣೆ
ಶತ್ರುಗಳ ದಾಳಿ ಮತ್ತು ಅಪಾಯಕಾರಿ ಹಿಮದ ಕೊರೆತವಿದ್ದರೆ, ಈ ಆತ್ಮವು ಸಿಯಾಚಿನ್ನಲ್ಲಿ ಕೆಲಸ ನಿರ್ವಹಿಸುವ ಯೋಧರ ಕನಸಿನಲ್ಲಿ ಬಂದು ಎಚ್ಚರಿಕೆ ನೀಡುತ್ತದೆ. ಜೊತೆಗೆ ಅವರ ರಕ್ಷಣೆಗೆ ಮುಂದಾಗುತ್ತದೆ ಎನ್ನುವ ನಂಬಿಕೆ ಇದೆ.

ನಂಬಿಕೆ...
ಈ ಆತ್ಮಕ್ಕೆ ಒಪಿ ಬಾಬಾ ಎಂದು ಹೆಸರಿಸಿ, ಒಂದು ಮಂದಿರವನ್ನು ನಿರ್ಮಿಸಲಾಗಿದೆ. ಇಲ್ಲಿ ಸೈನ್ಯದ ಕಮಾಂಡಿಂಗ್ ಆಫೀಸರ್ ದೇವಾಲಯಕ್ಕೆ ವರದಿಯನ್ನು ಸಲ್ಲಿಸುತ್ತಾರೆ. ಅಲ್ಲದೆ ಸೈನಿಕರ ಮೇಲೆ ಉಂಟಾಗುವ ದಾಳಿಯ ಬಗ್ಗೆ ಮಾಹಿತಿಯನ್ನು ಬಾಬಾ ಸೂಚಿಸುತ್ತಾರೆ ಎನ್ನುವ ಪ್ರತೀತಿ ಇದೆ.
Image Courtesy

ದೇವರಂತೆ ಪೂಜಿಸುತ್ತಾರೆ...
ಎಲ್ಲಾ ಸೈನಿಕರು ಕರ್ತವ್ಯ ನಿರ್ವಹಿಸಲು ಹೋಗುವ ಮುನ್ನ ಬಾಬಾ ಮಂದಿರಕ್ಕೆ ಬರುತ್ತಾರೆ. ಬಾಬನಿಗೆ ನಮಸ್ಕರಿಸಿ ಕೆಲಸಕ್ಕೆ ಯಶಸ್ಸು ಸಿಗಲಿ ಎಂದು ಕೇಳಿಕೊಳ್ಳುತ್ತಾರೆ.
Image courtesy

ಪೂಜ್ಯ ಭಾವ
2003ರಲ್ಲಿ ಬಾಬಾ ಮಂದಿರವು ಬಹಳ ಶಕ್ತಿಯನ್ನು ಹೊಂದಿರುವ ದೇವಾಲಯ ಎಂದು ಪರಿಗಣಿಸಲಾಯಿತು. ಅಲ್ಲದೆ ಇಂದಿಗೂ ಸೈನಿಕರು ಮೊದಲು ಬಾಬನಿಗೆ ಔಪಚಾರಿಕ ವರದಿಯನ್ನು ಇಟ್ಟು, ಎಲ್ಲಾ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಇಂದಿಗೂ ನಮ್ಮ ಯೋಧರ ರಕ್ಷಣೆಗೆ ನಿಲ್ಲುವ ಬಾಬಾ...
1984ರ ಬೇಸಿಗೆಯಿಂದ ಇಂದಿಗೂ ಸಿಯಾಚಿನ್ನಲ್ಲಿ ಕಾರ್ಯ ನಿರ್ವಹಿಸುವ ಯೋಧರ ಪಾಲನೆಯನ್ನು ಈ ಆತ್ಮ ಮಾಡುತ್ತದೆ ಎನ್ನುವ ನಂಬಿಕೆ ಇದೆ.

ತರಬೇತಿ
ಸಿಯಾಚಿನ್ ಬೇಸ್ ಕ್ಯಾಂಪ್ಗಳಲ್ಲಿ ಸೈನಿಕರಿಗೆ ಮೂರುತಿಂಗಳ ಕಾಲ ತರಬೇತಿ ನೀಡಲಾಗುತ್ತದೆ.



Click it and Unblock the Notifications