Latest Updates
-
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ
ಸಾಕ್ಷಾತ್ ಬಾಲಾಜಿ ಮಹಿಮೆ: ವೀಸಾ ಕೊಡಿಸುವ 'ವೀಸಾ ಬಾಲಾಜಿ ಮಂದಿರ'
ವಿದೇಶಕ್ಕೆ ಹೋಗಬೇಕು, ಅಲ್ಲಿ ಸುತ್ತಾಡಿಕೊಂಡು ಬರಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಹೆಚ್ಚಿನವರು ಸಣ್ಣ ಸಣ್ಣ ದೇಶಗಳಿಗೆ ಸುತ್ತಾಡಲು ಹೋಗುವುದನ್ನು ಇಷ್ಟಪಡುತ್ತಾರೆ. ಇಲ್ಲಿ ಖರ್ಚು ಕೂಡ ಕಡಿಮೆ ಇರುವುದು ಮತ್ತು ವೀಸಾ ಕೂಡ ಬೇಗನೆ ಲಭ್ಯವಾಗುವುದು. ಆದರೆ ಕೆಲವರಿಗೆ ಒಳ್ಳೆಯ ಪ್ರವಾಸಿ ತಾಣಗಳು ಇರುವ ದೇಶಗಳಿಗೆ ಸುತ್ತಾಡಲು ಹೋಗಬೇಕೆಂಬ ಆಸೆ ಇರುವುದು. ಆದರೆ ಇಂತಹ ದೇಶಗಳಿಗೆ ಹೋಗಲು ಅಷ್ಟು ಸುಲಭವಾಗಿ ವೀಸಾ ಸಿಗುವುದಿಲ್ಲ. ಕೆಲಸಕ್ಕಾಗಿಯೂ ಇಂತಹ ದೇಶಗಳಿಗೆ ಹೋಗುವುದು ತುಂಬಾ ಕಠಿಣ.
ವೀಸಾ ಪಡೆಯಲು ತುಂಬ ಕಷ್ಟಪಡಬೇಕಾಗುತ್ತದೆ. ಆದರೆ ಕೆಲವು ಭಾರತೀಯ ಮಂದಿರಗಳಲ್ಲಿ ವೀಸಾ ಪಡೆಯಲೆಂದು ಪ್ರಾರ್ಥನೆ ಮಾಡಲಾಗುತ್ತದೆ. ಇಂತಹ ಮಂದಿರಗಳಲ್ಲಿ ಪ್ರಾರ್ಥನೆ ಮಾಡಿದರೆ ವೀಸಾ ಬೇಗನೆ ಸಿಗುವುದು ಎನ್ನುವ ನಂಬಿಕೆಯಿದೆ. ಹೈದ್ರಾಬಾದ್ನ ಹೊರವಲಯದಲ್ಲಿರುವ ಚಿಲ್ಕೂರಿನ ಉಸ್ಮಾನ್ ಸಾಗರದ ತೀರದಲ್ಲಿ ನೆಲೆಸಿರುವ 'ವೀಸಾ ಬಾಲಾಜಿ ಮಂದಿರ'ವು ಇದರಲ್ಲಿ ಒಂದಾಗಿದೆ. ಇದರ ಬಗ್ಗೆ ಬೋಲ್ಡ್ ಸ್ಕೈ ನಿಮಗೆ ಮತ್ತಷ್ಟು ಮಾಹಿತಿಯನ್ನು ನೀಡಲಿದೆ....

ದೇವಸ್ಥಾನದ ಬಗ್ಗೆ
ಈ ಪ್ರಸಿದ್ಧ ಮಂದಿರದಲ್ಲಿ ವೆಂಕಟೇಶ್ವರ ದೇವರು ಪ್ರಮುಖವಾಗಿ ಪೂಜಿಸಲ್ಪಡುತ್ತಾರೆ. ಇವರನ್ನು ವೀಸಾ ಒದಗಿಸುವ ಬಾಲಾಜಿ ಎಂದು ಕರೆಯಲಾಗುತ್ತದೆ. ಈ ಮಂದಿರವು ಒಸ್ಮಾನ್ ಸಾಗರ ಸರೋವರದ ಸಮೀಪದಲ್ಲಿದೆ.

ಮಂದಿರದ ಇತಿಹಾಸ
1980ರಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಚೆನ್ನೈಯಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿಯಲ್ಲಿ ವೀಸಾ ಸಿಗುತ್ತಾ ಇರಲಿಲ್ಲ. ಇವರೆಲ್ಲರೂ ಜತೆಯಾಗಿ ಬಂದು ಬಾಲಾಜಿಯಲ್ಲಿ ವೀಸಾಕ್ಕಾಗಿ ಪ್ರಾರ್ಥಿಸಿದರು.

ವೀಸಾ ಸಿಕ್ಕೇ ಬಿಟ್ಟಿತು!
ಅವರ ಅದೃಷ್ಟದಂತೆ ಪ್ರಾರ್ಥನೆಯು ಫಲಿಸಿತು. ಅಂದಿನಿಂದ ಅಮೆರಿಕಾ ವೀಸಾ ಪಡೆಯಲು ಈ ಮಂದಿರದಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ. ಇಲ್ಲಿ ಪ್ರಾರ್ಥನೆ ಮಾಡಿದರೆ ವೀಸಾ ಕಾರ್ಯಗಳು ಸರಾಗವಾಗಿ ಆಗುತ್ತದೆ ಎಂದು ನಂಬಲಾಗಿದೆ.

ಇದು ಹೇಗೆ ಕೆಲಸ ಮಾಡುತ್ತದೆ?
ವೀಸಾ ಬಯಸುವವರಿಗೆ ಇಲ್ಲಿ ಬಾಲಾಜಿಯ ಆಶೀರ್ವಾದವಿದೆ. ವೀಸಾಕ್ಕಾಗಿ ಸಂದರ್ಶನ ನೀಡಲು ಹೋಗುವಂತಹ ಪ್ರತಿಯೊಬ್ಬರು ಚಿಲ್ಕೂರು ವೀಸಾ ಬಾಲಾಜಿ ಮಂದಿರಕ್ಕೆ ಭೇಟಿ ನೀಡಿಯೇ ಮುಂದೆ ಹೋಗುವುದು.

ಇದು ಹೇಗೆ ಕೆಲಸ ಮಾಡುತ್ತದೆ?
ವೀಸಾ ಪ್ರಾರ್ಥನೆಯೊಂದಿಗೆ ಮಂದಿರಕ್ಕೆ ಬರುವ ಭಕ್ತರು ಮೂರು ಸುತ್ತು ಪ್ರದಕ್ಷಿಣೆ ಹಾಕಬೇಕು. ವೀಸಾ ಪಡೆದ ಬಳಿಕ 108 ಸುತ್ತು ಪ್ರದಕ್ಷಿಣೆ ಹಾಕುವುದಾಗಿ ಪ್ರಾರ್ಥಿಸಿಕೊಳ್ಳಬೇಕು. ಇದು ವೀಸಾ ದೇವರಲ್ಲಿ ಪ್ರಾರ್ಥಿಸುವ ವಿಧಾನ.

ಹಣ ಬೇಕಿಲ್ಲ
ಈ ಮಂದಿರಕ್ಕೆ ಭೇಟಿ ನೀಡಲು ಹೆಚ್ಚು ಸಮಸ್ಯೆಯಿಲ್ಲ. ಇಲ್ಲಿ ಪ್ರತಿಯೊಂದು ಉಚಿತವಾಗಿದೆ ಮತ್ತು ಯಾವುದೇ ರೂಪದಲ್ಲಿ ಹಣ ಸ್ವೀಕರಿಸದೆ ಇರಲು ಮಂದಿರವು ಕಟು ನಿಯಮ ಪಾಲಿಸಿದೆ. ಈ ಮಂದಿರವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಾ ಬೆಳೆಯುತ್ತಾ ಇದೆ.



Click it and Unblock the Notifications











