Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಭಾರತದ ಈ ಪಟ್ಟಣ, ಏಕಮಾತ್ರ - ’ಕಾನೂನುಬದ್ಧ ಭೂತದ ನಗರ!
ನಮ್ಮ ಭಾರತದ ಪ್ರತಿ ಊರಿನಲ್ಲಿಯೂ ಕನಿಷ್ಠ ಒಂದಾದರೂ ಭೂತಪ್ರೇತಕ್ಕೆ ಸಂಬಂಧಿಸಿದ ಕಥೆ ಇದ್ದೇ ಇರುತ್ತದೆ. ಭೂತದ ಕಾಟಕ್ಕೆ ಊರು ಖಾಲಿ ಮಾಡಿ ಹೋದ ಉದಾಹರಣೆಗಳೂ ಇವೆ. ಆದರೆ ಇವೆಲ್ಲವೂ ಅಂತೆಕಂತೆಗಳೇ ಆಗಿದ್ದು ಕಾನೂನು ಇದನ್ನೆಲ್ಲ ನಂಬುವುದಿಲ್ಲ. ಆದರೆ ಈ ನಂಬಿಕೆಗೂ ವ್ಯತಿರಿಕ್ತವಾಗಿ ಭಾರತದಲ್ಲಿರುವ ಭಾನಗಢ ಎಂಬ ಪಟ್ಟಣಕ್ಕೆ ಭಾರತದ ಏಕಮಾತ್ರ ಕಾನೂನುಬದ್ದ ಭೂತನಗರ ಎಂಬ ಅನ್ವರ್ಥನಾಮ ದಕ್ಕಿದೆ. ಭಾರತದಲ್ಲಿಯೇ ಅತಿ ಹೆಚ್ಚು ಭೂತಗ್ರಸ್ತ ನಗರ ಎಂಬ ಕಾರಣಕ್ಕಾಗಿಯೇ ಈ ಪಟ್ಟ ದೊರಕಿದೆ.
ಎಷ್ಟೋ ಪ್ರಕರಣಗಳಲ್ಲಿ ಭೂತಪ್ರೇತಗಳ ಬಗ್ಗೆ ಇರುವ ನಮ್ಮ ಕಲ್ಪನೆಗಳೇ ಯಾವುದೋ ಇತರ ಕಾರಣಕ್ಕೆ ತಾಳೆಹೊಂದಿ ಇದು ಒಂದು ಹೊಸ ಭೂತದ ಕಥೆ ಪಡೆಯುವ ಸಾಧ್ಯತೆಗಳೇ ಹೆಚ್ಚು. ತೇಜಸ್ವಿಯವರ ಪರಿಸರದ ಕತೆಗಳು ಗ್ರಂಥದ ಒಂದು ಕಥೆಯಲ್ಲಿ ತೇಜಸ್ವಿಯರ ಮನೆಯಲ್ಲಿಯೇ ಹಕ್ಕಿಯೊಂದು ಕೊಕ್ಕಿನಿಂದ ಕಿಟಕಿಯ ಗಾಜನ್ನು ಬಡಿದು ಹೊರಹೋಗಲು ಯತ್ನಿಸಿದ ಸದ್ದು ಭೂತದ ಕಥೆಗೆ ಗ್ರಾಸವಾದ ಪ್ರಸಂಗವನ್ನು ಸೊಗಸಾಗಿ ವರ್ಣಿಸಿದ್ದಾರೆ.

ಎಲ್ಲಿಯವರೆಗೆ ಇದರ ನಿಜಕಾರಣಗಳು ಹೊರಬರುವುದಿಲ್ಲವೋ ಅಲ್ಲಿಯವರೆಗೆ ಈ ಭೂತದ ಕತೆಗಳು ರೋಚಕವೂ, ಭಯಮೂಡಿಸುವಂತಹವೂ ಆಗಿರುತ್ತವೆ. ಆದರೆ ಭಾನಗಢ ನಗರದಲ್ಲಿ ಭೂತದ ಬಗ್ಗೆ ಇರುವ ಕಲ್ಪನೆಗಳಿಗಿಂತಲೂ ಜನರು ಅನುಭವಿಸಿದ ಪ್ರಕರಣಗಳೇ ಹೆಚ್ಚು ಮಹತ್ವ ಪಡೆದಿದ್ದು ಈ ವೈಚಿತ್ರ್ಯವನ್ನು ಸುಲಭವಾಗಿ ವಿವರಿಸಲು ಅಸಾಧ್ಯವಾದುದು ಈ ಪಟ್ಟಣಕ್ಕೆ ಪಡೆದ ಖ್ಯಾತಿಗೆ ಕಾರಣವಾಗಿದೆ. ಈ ಬಗ್ಗೆ ಕುತೂಹಲ ಹೊಂದಿದ ಯಾರಿಗಾದರೂ ಜೀವಮಾನದಲ್ಲೊಮ್ಮೆಯಾದರೂ ಈ ಪಟ್ಟಣವನ್ನು ನೋಡಲೇಬೇಕು ಅನ್ನಿಸದಿರದು.....



Click it and Unblock the Notifications