Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಬಲು ಅಪರೂಪದ ಕಾಯಿಲೆವಿದು, ಇದರಿಂದ ಆತ ಪಟ್ಟ ಕಷ್ಟ ಅಷ್ಟಿಷ್ಟಲ್ಲ...
ಕೋಟಿಗೊಬ್ಬರಲ್ಲಿ ಕಂಡುಬರುವಂತಹ ಈ ಅಪರೂಪದ ಕಾಯಿಲೆಯಿಂದಾಗಿ ಆತನನ್ನು ರಕ್ಷಿಸಲು ಬರೋಬ್ಬರಿ 16 ಶಸ್ತ್ರಚಿಕಿತ್ಸೆ ಮಾಡಬೇಕಾಯಿತು! ಹಾಗಾದರೆ ಆ ಕಾಯಿಲೆ ಯಾವುದು? ಏನಿದರ ಲಕ್ಷಣ ಮುಂದೆ ಓದಿ...
ಹಿಂದಿನ ಕಾಲದಲ್ಲಿ ವೃಕ್ಷ ದೇವತೆ ಇದ್ದಳು ಎನ್ನುವ ಕಥೆಗಳನ್ನು ನಾವು ಕೇಳಿದ್ದೇವೆ. ವೃಕ್ಷಕ್ಕೂ ಜೀವವಿರುತ್ತದೆ. ಅದು ಕೂಡ ಮಾನವರಂತೆ ಎಂದು ಭಾರತೀಯ ವಿಜ್ಞಾನಿಯೊಬ್ಬರು ಹೇಳಿದ್ದರು. ಆದರೆ ಆಧುನಿಕ ಯುಗದಲ್ಲಿ ಮನುಷ್ಯನೊಬ್ಬನು ವೃಕ್ಷದ ಆಕಾರವನ್ನು ಪಡೆದರೆ ಆಗ ಎಲ್ಲರೂ ನಿಬ್ಬೆರಗಾಗುವುದು ಖಚಿತ.
ಇಂತಹ ವೃಕ್ಷ ಮಾನವ ಕಂಡು ಬಂದಿರುವುದು ನಮ್ಮ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ. ಆದರೆ ಈತನ ದೇಹ ಸಂಪೂರ್ಣವಾಗಿ ವೃಕ್ಷವಾಗಿಲ್ಲ. ಕೈಗಳು ಮರದ ಆಕಾರದಂತೆ ಬೆಳೆಯುತ್ತಿದೆ. ಇದು ಅಪರೂಪದಲ್ಲಿ ಅಪರೂಪವೆನ್ನಲಾಗುತ್ತದೆ. ಈ ಗ್ರಾಮದಲ್ಲಿದೆ ವಿಚಿತ್ರ ಕಾಯಿಲೆ-ಇಲ್ಲಿನ ಜನ ವಾರಗಟ್ಟಲೇ ಮಲಗಿರುತ್ತಾರೆ!!
ಆದರೆ ಬೆಳೆಯುತ್ತಿರುವ ವೈದ್ಯಕೀಯ ಕ್ಷೇತ್ರ ಹಾಗೂ ತಂತ್ರಜ್ಞಾನದಿಂದಾಗಿ ಈ ವೃಕ್ಷ ಮಾನವ ಕೂಡ ಸಾಮಾನ್ಯ ಜೀವನ ಸಾಗಿಸುವಂತಾಗಿದೆ. ಕೋಟಿಗೊಬ್ಬರಲ್ಲಿ ಕಂಡುಬರುವಂತಹ ಈ ಅನುವಂಶೀಯತೆಯ ಲಕ್ಷಣವನ್ನು ಎಪಿಡೆರ್ಮೊಡ್ಯಸ್ಪ್ಲಸಿಯಾ ವೆರ್ರುಸಿಫೊರ್ಮಿಸ್ ಎಂದು ಕರೆಯಲಾಗುತ್ತದೆ. ಈ ಚರ್ಮದ ಕಾಯಿಲೆಯಿಂದಾಗಿ ವಿಶ್ವದೆಲ್ಲೆಡೆಯಲ್ಲಿ ಸುದ್ದಿ ಮಾಡಿದ್ದ ಬಾಂಗ್ಲಾದೇಶದ ಅಬ್ದುಲ್ ಬಜಾಂದಾರ್ ತನಗೆ ಸಾಮನ್ಯ ಜೀವನ ಕೊಟ್ಟ ವೈದ್ಯಕೀಯ ಲೋಕಕ್ಕೆ ಸಲಾಂ ಹೇಳಿದ್ದಾನೆ....

ಏನಿದು ಅಪರೂಪದ ಅನುವಂಶೀಯತೆಯ ಲಕ್ಷಣ?
ಎಪಿಡೆರ್ಮೊಡ್ಯಸ್ಪ್ಲಸಿಯಾ ವೆರ್ರುಸಿಫೊರ್ಮಿಸ್ ಎಂದು ಕರೆಯಲ್ಪಡುವ ಈ ಅಪರೂಪದ
ಅನುವಂಶೀಯತೆಯ ಲಕ್ಷಣದಲ್ಲಿ ಮಾನವನ ದೇಹದ ಮೇಲೆ ಮರದ ರೀತಿಯ ಗಂಟುಗಳು ಮೂಡಲು ಆರಂಭವಾಗುತ್ತದೆ. ಅಬ್ದುಲ್ ಬಜಾಂದರ್ ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ.

ಸರಕಾರವೇ ಚಿಕಿತ್ಸೆ ವೆಚ್ಚ ಭರಿಸಿತು
ಇದು ಅಪರೂಪದ ಕಾಯಿಲೆಯಾಗಿರುವ ಕಾರಣದಿಂದ ಸುದ್ದಿ ಕಾಡ್ಗಿಚ್ಚಿನಂತೆ ವಿಶ್ವದೆಲ್ಲೆಡೆ ಹಬ್ಬಿತ್ತು. ಇದನ್ನು ನೋಡಿದ ಬಾಂಗ್ಲಾದೇಶ ಸರಕಾರವು ಆತನಿಗೆ ಉಚಿತ ಚಿಕಿತ್ಸೆ ನೀಡಲು ಮುಂದೆ ಬಂದಿದೆ. ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿರುವ ಅಬ್ದುಲ್ ಜತೆಯಲ್ಲಿ ಆತನ ಪತ್ನಿ ಹಾಗೂ ಮಗು ಜತೆಗಿದೆ.

ಸರಿಸುಮಾರು 16 ಶಸ್ತ್ರಚಿಕಿತ್ಸೆ ಮಾಡಲಾಯಿತು
ಈ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಅಬ್ದುಲ್ಗೆ ಸುಮಾರು 16 ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಈ ಎಲ್ಲಾ ಶಸ್ತ್ರ ಚಿಕಿತ್ಸೆ ಬಳಿಕ ಆತ ತನ್ನ ಸಣ್ಣ ಮಗುವನ್ನು ಕೈಯಲ್ಲಿ ಹಿಡಿಯಲು ಸಮರ್ಥನಾಗಿದ್ದಾನೆ.

ಇನ್ನೆರಡು ಸಣ್ಣ ಶಸ್ತ್ರಚಿಕಿತ್ಸೆ ಬೇಕಾಗಿದೆ
ಇಂತಹ ಅಪರೂಪದ ಕಾಯಿಲೆಗೆ ತುತ್ತಾಗಿರುವ ವ್ಯಕ್ತಿಯನ್ನು ಗುಣಪಡಿಸಿರುವುದು ವೈದ್ಯಕೀಯ ಇತಿಹಾಸದಲ್ಲಿ ಒಂದು ಮೈಲುಗಲ್ಲಾಗಿದೆ ಎಂದು ಹೇಳಿರುವ ವೈದ್ಯರು ಅಬ್ದುಲ್ ಸಂಪೂರ್ಣವಾಗಿ ಗುಣಮುಖವಾಗಲು ಇನ್ನೂ ಎರಡು ಸಣ್ಣ ಶಸ್ತ್ರಚಿಕಿತ್ಸೆಗಳು ಬೇಕಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯ ಜೀವನ ಸಾಗಿಸುವ ಭರವಸೆ
ಅಬ್ದುಲ್ ಅಪರೂಪದ ಕಾಯಿಲೆ ಬಗ್ಗೆ ವಿಶ್ವದೆಲ್ಲೆಡೆ ಸುದ್ದಿ ಹಬ್ಬಿದಾಗ ಆತನಿಗೆ ವಿಶ್ವದೆಲ್ಲೆಡೆಯಿಂದ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ. ಸಾಮಾನ್ಯ ಜೀವನ ಸಾಗಿಸುವ ವಿಶ್ವಾಸ ಹೊಂದಿರುವ ಅಬ್ದುಲ್ ಚಿಕಿತ್ಸೆ ಬಳಿಕ ಉಳಿದಿರುವ ಹಣದಲ್ಲಿ ಯಾವುದಾದರೂ ವ್ಯಾಪಾರ ಮಾಡುತ್ತೇನೆಂದು ಹೇಳಿದ್ದಾನೆ.
Image courtesy



Click it and Unblock the Notifications











