Latest Updates
-
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ
ಕನ್ನಡಿಯನ್ನು ಒಡೆದರೆ ಏಳು ವರ್ಷಗಳ ದುರಾದೃಷ್ಟವಂತೆ ಹೌದೇ?
ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ?
ಅಪಶಕುನಗಳ ಬಗ್ಗೆ ಭಾರತದಲ್ಲಿದ್ದಷ್ಟು ನಂಬಿಕೆಗೆಳು ಪ್ರಾಯಶಃ ಬೇರೆಲ್ಲೂ ಇರಲಾರದು. ಉದಾಹರಣೆಗೆ ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ? ಇದಕ್ಕೆ ಕಾರಣಗಳನ್ನು ಇಂದಿನ ಲೇಖನದಲ್ಲಿ ನೋಡೋಣ. ಮೂಢನಂಬಿಕೆಗಳನ್ನೆಲ್ಲಾ ನಂಬಬೇಡಿ ಪ್ಲೀಸ್, ಅದೆಲ್ಲಾ ಭ್ರಮೆ ಅಷ್ಟೇ!
ಪುರಾತನ ಹೇಳಿಕೆಗಳ ಪ್ರಕಾರ ದುರ್ವಿಧಿ ಏಳು ವರ್ಷ ಕಾಡುತ್ತದೆ ಹಾಗೂ ಇದಕ್ಕೆ ಸೂಕ್ತ ಪ್ರತಿರೋಧವನ್ನು ಒಡ್ಡದೇ ಇದ್ದರೆ ಇದು ಏಳು ವರ್ಷಗಳವರೆಗೆ ದುರ್ವಿಧಿಯನ್ನು ಅನುಭವಿಸಬೇಕಾಗಿ ಬರಬಹುದು. ಅಷ್ಟಕ್ಕೂ ಕನ್ನಡಿ ಒಡೆಯುವುದರಿಂದ ದುರ್ವಿಧಿ ಎದುರಾಗುವ ಕಾರಣಗಳೇನು? ನೋಡೋಣ...

ಈ ನಂಬಿಕೆಯನ್ನು ಪ್ರಾರಂಭಿಸಿದವರು ರೋಮನ್ನರು
ಈ ಬಗ್ಗೆ ವಿವರಗಳನ್ನು ಕೆದಕುತ್ತಾ ಹೋದರೆ ಕನ್ನಡಿಯ ಆವಿಷ್ಕಾರ ಮಾಡಿದ ರೋಮನ್ನರೇ ಈ ನಂಬಿಕೆಯನ್ನು ಹುಟ್ಟುಹಾಕಿದರು ಎಂದು ತಿಳಿದುಬರುತ್ತದೆ.

ಇತರ ನಂಬಿಕೆಗಳ ಪ್ರಕಾರ....
ರೋಮನ್ನರು, ಗ್ರೀಕರು, ಚೀನೀಯರು, ಆಫ್ರಿಕನ್ನರು ಮತ್ತು ಭಾರತೀಯರು ತಮ್ಮ ತಮ್ಮ ಸಂಪ್ರದಾಯದಲ್ಲಿ ಒಡೆದ ಕನ್ನಡಿ ಉಪಯೋಗಿಸುವಾತನ ಆತ್ಮವನ್ನು ಸ್ವಾಧೀನಗೊಳಿಸುವ ಶಕ್ತಿ ಹೊಂದಿರುತ್ತದೆ ಎಂದು ನಂಬಿಕೊಂಡು ಬಂದಿದ್ದಾರೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಒಂದು ವೇಳೆ ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬ ಯಾವುದೇ ರೀತಿಯಲ್ಲಿ ವಿರೂಪಗೊಂಡಿದ್ದರೆ ಇದರ ಅರ್ಥ ಆ ವ್ಯಕ್ತಿಯ ಆತ್ಮ ಭ್ರಷ್ಟವಾಗಿದೆ ಎಂದು ತಿಳಿಯಲಾಗುತ್ತದೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಈ ವ್ಯಕ್ತಿ ಕನ್ನಡಿಯನ್ನು ಒಡೆದರೆ ಈತನ ಭ್ರಷ್ಟ ಆತ್ಮದ ಒಂದು ಭಾಗ ಈ ಕನ್ನಡಿಯಲ್ಲಿ ಬಂಧಿತವಾಗುತ್ತದೆ ಎಂದು ನಂಬಲಾಗಿದೆ.

ಈ ತೊಂದರೆಯ ನಿವಾರಣೆಗೆ ಏನು ಮಾಡಬೇಕು?
ಒಡೆದ ಕನ್ನಡಿ ಒಡೆದ ಆತ್ಮದ ಪ್ರತೀಕವಾಗಿರುವ ಕಾರಣ ಒಡೆದ ಕನ್ನಡಿಯ ತುಣುಕುಗಳನ್ನು ಯಾರಿಗೂ ಹಾನಿಯಾಗದ ಸ್ಥಳದಲ್ಲಿ ವಿಸರ್ಜಿಸುವುದೇ ಉತ್ತಮ. ವಿದೇಶದಲ್ಲೂ ಸದ್ದುಮಾಡುತ್ತಿದೆ, ಮೂಢನಂಬಿಕೆಗಳೆಂಬ ಪೆಡಂಭೂತ!



Click it and Unblock the Notifications