Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಕನ್ನಡಿಯನ್ನು ಒಡೆದರೆ ಏಳು ವರ್ಷಗಳ ದುರಾದೃಷ್ಟವಂತೆ ಹೌದೇ?
ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ?
ಅಪಶಕುನಗಳ ಬಗ್ಗೆ ಭಾರತದಲ್ಲಿದ್ದಷ್ಟು ನಂಬಿಕೆಗೆಳು ಪ್ರಾಯಶಃ ಬೇರೆಲ್ಲೂ ಇರಲಾರದು. ಉದಾಹರಣೆಗೆ ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ? ಇದಕ್ಕೆ ಕಾರಣಗಳನ್ನು ಇಂದಿನ ಲೇಖನದಲ್ಲಿ ನೋಡೋಣ. ಮೂಢನಂಬಿಕೆಗಳನ್ನೆಲ್ಲಾ ನಂಬಬೇಡಿ ಪ್ಲೀಸ್, ಅದೆಲ್ಲಾ ಭ್ರಮೆ ಅಷ್ಟೇ!
ಪುರಾತನ ಹೇಳಿಕೆಗಳ ಪ್ರಕಾರ ದುರ್ವಿಧಿ ಏಳು ವರ್ಷ ಕಾಡುತ್ತದೆ ಹಾಗೂ ಇದಕ್ಕೆ ಸೂಕ್ತ ಪ್ರತಿರೋಧವನ್ನು ಒಡ್ಡದೇ ಇದ್ದರೆ ಇದು ಏಳು ವರ್ಷಗಳವರೆಗೆ ದುರ್ವಿಧಿಯನ್ನು ಅನುಭವಿಸಬೇಕಾಗಿ ಬರಬಹುದು. ಅಷ್ಟಕ್ಕೂ ಕನ್ನಡಿ ಒಡೆಯುವುದರಿಂದ ದುರ್ವಿಧಿ ಎದುರಾಗುವ ಕಾರಣಗಳೇನು? ನೋಡೋಣ...

ಈ ನಂಬಿಕೆಯನ್ನು ಪ್ರಾರಂಭಿಸಿದವರು ರೋಮನ್ನರು
ಈ ಬಗ್ಗೆ ವಿವರಗಳನ್ನು ಕೆದಕುತ್ತಾ ಹೋದರೆ ಕನ್ನಡಿಯ ಆವಿಷ್ಕಾರ ಮಾಡಿದ ರೋಮನ್ನರೇ ಈ ನಂಬಿಕೆಯನ್ನು ಹುಟ್ಟುಹಾಕಿದರು ಎಂದು ತಿಳಿದುಬರುತ್ತದೆ.

ಇತರ ನಂಬಿಕೆಗಳ ಪ್ರಕಾರ....
ರೋಮನ್ನರು, ಗ್ರೀಕರು, ಚೀನೀಯರು, ಆಫ್ರಿಕನ್ನರು ಮತ್ತು ಭಾರತೀಯರು ತಮ್ಮ ತಮ್ಮ ಸಂಪ್ರದಾಯದಲ್ಲಿ ಒಡೆದ ಕನ್ನಡಿ ಉಪಯೋಗಿಸುವಾತನ ಆತ್ಮವನ್ನು ಸ್ವಾಧೀನಗೊಳಿಸುವ ಶಕ್ತಿ ಹೊಂದಿರುತ್ತದೆ ಎಂದು ನಂಬಿಕೊಂಡು ಬಂದಿದ್ದಾರೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಒಂದು ವೇಳೆ ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬ ಯಾವುದೇ ರೀತಿಯಲ್ಲಿ ವಿರೂಪಗೊಂಡಿದ್ದರೆ ಇದರ ಅರ್ಥ ಆ ವ್ಯಕ್ತಿಯ ಆತ್ಮ ಭ್ರಷ್ಟವಾಗಿದೆ ಎಂದು ತಿಳಿಯಲಾಗುತ್ತದೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಈ ವ್ಯಕ್ತಿ ಕನ್ನಡಿಯನ್ನು ಒಡೆದರೆ ಈತನ ಭ್ರಷ್ಟ ಆತ್ಮದ ಒಂದು ಭಾಗ ಈ ಕನ್ನಡಿಯಲ್ಲಿ ಬಂಧಿತವಾಗುತ್ತದೆ ಎಂದು ನಂಬಲಾಗಿದೆ.

ಈ ತೊಂದರೆಯ ನಿವಾರಣೆಗೆ ಏನು ಮಾಡಬೇಕು?
ಒಡೆದ ಕನ್ನಡಿ ಒಡೆದ ಆತ್ಮದ ಪ್ರತೀಕವಾಗಿರುವ ಕಾರಣ ಒಡೆದ ಕನ್ನಡಿಯ ತುಣುಕುಗಳನ್ನು ಯಾರಿಗೂ ಹಾನಿಯಾಗದ ಸ್ಥಳದಲ್ಲಿ ವಿಸರ್ಜಿಸುವುದೇ ಉತ್ತಮ. ವಿದೇಶದಲ್ಲೂ ಸದ್ದುಮಾಡುತ್ತಿದೆ, ಮೂಢನಂಬಿಕೆಗಳೆಂಬ ಪೆಡಂಭೂತ!



Click it and Unblock the Notifications