Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
30-12-2017 ಶನಿವಾರದ ದಿನ ಭವಿಷ್ಯ
ಪ್ರತಿಯೊಬ್ಬರು ನಮ್ಮ ನಿರೀಕ್ಷೆಗೆ ತಕ್ಕಂತೆ ನಮ್ಮವರು ವರ್ತಿಸಬೇಕು ಎಂದು ಬಯಸುತ್ತಾರೆ. ಅಂತಹ ನಿರೀಕ್ಷೆಗಳು ಎಲ್ಲಾ ಸಮಯದಲ್ಲೂ ಸರಿಹೊಂದುವುದಿಲ್ಲ. ಅನೇಕ ಬಾರಿ ನಮ್ಮ ನಿರೀಕ್ಷೆಗೆ ವಿರುದ್ಧವಾಗಿಯೇ ಇರುತ್ತದೆ. ಆಗ ನಮ್ಮವರು ತಮ್ಮವರು ಎನ್ನುವ ಬೇಧವಿಲ್ಲದೆ ಮನಸ್ಸಿಗೆ ಬೇಸರ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಅದಕ್ಕಾಗಿ ನಾವು ನಮ್ಮಂತೆಯೇ ಇತರರು. ಅವರಿಗೂ ಅನೇಕ ಸಮಸ್ಯೆಗಳು ಹಾಗೂ ಅವರದ್ದೇ ಆದ ಕೆಲಸಗಳಿರುತ್ತವೆ ಎನ್ನುವುದನ್ನು ಅರಿಯಬೇಕು.
ಆಗಲೇ ನಾವು ಎಲ್ಲರೊಂದಿಗೂ ಸುಲಭವಾಗಿ ಬೆರೆತು ಆನಂದಿಸಲು ಸಾಧ್ಯ. ಶನಿವಾರವಾದ ಇಂದು ನಿಮ್ಮ ಭವಿಷ್ಯದಲ್ಲಿ ಯಾವೆಲ್ಲಾ ಬದಲಾವಣೆಗಳು ಉಂಟಾಗಬಹುದು ಎನ್ನುವುದನ್ನು ತಿಳಿಯಲು ಬೋಲ್ಡ್ ಸ್ಕೈ ನೀಡಿರುವ ದಿನ ಭವಿಷ್ಯವನ್ನು ಅರಿಯಿರಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಏನೆಂಬುದನ್ನು ತಿಳಿಯಿರಿ....

ಮೇಷ (Mar 29 - Apr 19)
ಮನೆಯಲ್ಲಿ ನೆಮ್ಮದಿಯ ವಾತಾವರಣ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವುದು. ವಿದ್ಯಾರ್ಥಿಗಳಿಗೆ ಮುನ್ನಡೆ ಉಂಟಾಗುವುದು. ಆರೋಗ್ಯ ಸುಧಾರಣೆಯನ್ನು ಕಾಣುವಿರಿ. ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ಆಂಜನೇಯನ ಆರಾಧನೆ ಮಾಡಿ.

ವೃಷಭ: ಏಪ್ರಿಲ್ 29-ಮೇ 20
ಇಂದು ನಿಮಗೆ ಸಮಾಧಾನಕರವಾದ ದಿನ. ಮನೆಯಲ್ಲಿ ನೆಮ್ಮದಿಯನ್ನು ಕಾಣಲು ಕೆಲವರಿಂದ ಅಡೆತಡೆಗಳು ಉಂಟಾಗುವ ಲಕ್ಷಣಗಳಿವೆ. ಬಂಧು ಮಿತ್ರರ ನಡುವೆ ಕಿರಿಕಿರಿಯ ಭಾವನೆ ಉಂಟಾಗುವುದು. ಮನೋಲ್ಲಾಸಕ್ಕೆ ಅಡೆತಡೆಗಳು ಉಂಟಾಗುವುದು. ಸ್ಥಿರ ಆಸ್ತಿಯಿಂದ ಸಂಪೂರ್ಣ ಲಾಭ ದೊರೆಯದು. ಅಷ್ಟಮ ಶನಿಯ ಪ್ರಭಾವ ಇರುವುದರಿಂದ ವ್ಯಾಪಾರ ವಹಿವಾಟುಗಳಲ್ಲಿ ಹಿನ್ನಡೆ ಉಂಟಾಗುವುದು. ಆರ್ಥಿಕ ವಲಯದಲ್ಲಿ ಉಂಟಾಗುವ ಏರು ಪೇರು ನಿಮ್ಮನ್ನು ಹೈರಾಣ ಗೊಳಿಸುವುದು. ನಿರ್ದಿಷ್ಟವಾದ ಗುರಿಯನ್ನು ತಲುಪಲು ಅಸಾಧ್ಯವಾಗುವುದು. ವಿದ್ಯಾರ್ಥಿಗಳು ಓದಿನಲ್ಲಿ ಶ್ರದ್ಧೆಯನ್ನು ತೋರಿ. ಸಮಸ್ಯೆಗಳ ನಿವಾರಣೆ ಹಾಗೂ ಸಮೃದ್ಧ ಬದುಕಿಗೆ ಶಿವನ ಆರಾಧನೆ ಮಾಡಿ.

ಮಿಥುನ: ಮೇ 29 ಜೂನ್ 20
ಇಂದು ನಿಮಗೆ ನೆಮ್ಮದಿಯ ದಿನ. ಸ್ತ್ರೀಯರು ಮಾಡುತ್ತಿರುವ ಉದ್ಯೋಗದಲ್ಲಿ ಪ್ರಶಂಸೆ ಹಾಗೂ ನೆಮ್ಮದಿಯನ್ನು ಪಡೆದುಕೊಳ್ಳುವರು. ಬಂಧುಮಿತ್ರರ ಆಗಮನ. ಸಿಹಿ ಭೋಜನ ಸವಿಯುವ ಲಕ್ಷಣ. ಹಿರಿಯರು ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡುವ ಸಾಧ್ಯತೆಗಳಿವೆ. ರಾಜಕಾರಣಿಗಳ ನಡೆ ಉತ್ತಮವಾಗಿರುತ್ತದೆ. ಪ್ರಶಂಸಾತ್ಮಕ ಬೆಂಬಲ ನಿಮಗೆ ಸಿಗುವುದು. ಸಮಾಜ ಸುಧಾರಕರಿಗೆ ನೆಮ್ಮದಿ ಉಂಟಾಗುವುದು. ಸಮಸ್ಯೆಗಳ ನಿವಾರಣೆ ಹಾಗೂ ಸಮೃದ್ಧ ಬದುಕಿಗೆ ಶಿವನ ಆರಾಧನೆ ಮಾಡಿ.

ಕರ್ಕ: ಜೂನ್ 29-ಜುಲೈ 22
ಇಂದು ನಿಮಗೆ ನೆಮ್ಮದಿಯ ದಿನ, ಪಠ್ಯ ಪುಸ್ತಕ ಹಾಗೂ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಗಾರರಿಗೆ ಉತ್ತಮ ಲಾಭ ಉಂಟಾಗುವುದು. ಮನೆಯಲ್ಲಿ ನೆಮ್ಮದಿ ಕಾಣುವಿರಿ. ಮಿತ್ರರಿಂದ ಸಹಕಾರ ದೊರೆಯುವುದು. ಅನಿರೀಕ್ಷಿತ ಸೋಲು ದೂರಾಗುವುದು. ಷೇರು ಮಾರುಕಟ್ಟೆಯಲ್ಲಿ ಹೋಡಿರುವ ಹಣಕ್ಕೆ ಅಧಿಕ ಲಾಭ. ಬ್ಯಾಂಕ್ ಕ್ಷೇತ್ರದಲ್ಲಿ ದುಡಿಯುತ್ತಿರುವವರು ಹಾಗೂ ಸರ್ಕಾರಿ ನೌಕರರು ಉತ್ತಮ ಪ್ರಗತಿಯನ್ನು ಕಾಣುವರು. ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ಶಿವನ ಆರಾಧನೆ ಮಾಡಿ.

ಸಿಂಹ: ಜುಲೈ 29-ಆಗಸ್ಟ್ 23
ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆಗಳಿವೆ. ದೂರದ ಪ್ರದೇಶಗಳಿಗೆ ಪ್ರಯಾಣ ಮಾಡಬೇಕಾಗುವುದು. ಅಧಿಕ ಪ್ರಮಾಣದ ಹಣ ವ್ಯಯ ಹಾಗೂ ಆರೋಗ್ಯದಲ್ಲಿ ಏರು ಪೇರು ಉಂಟಾಗುವುದು. ಇಲ್ಲ ಸಲ್ಲದ ಆರೋಪಗಳನ್ನು ನೀವು ಕೇಳಬೇಕಾದ ಪರಿಸ್ಥಿತಿ ಎದುರಾಗುವುದು. ರಾಜಕೀಯ ನಾಯಕರಿಗೆ ಹಿನ್ನಡೆ ಉಂಟಾಗುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳನ್ನು ಒಳಗೊಂಡಂತೆ ಅನೇಕ ಸಮಸ್ಯೆಗಳು ನಿಮ್ಮನ್ನು ಕಾಡಲಿದೆ. ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ಶಿವನ ಆರಾಧನೆ ಹಾಗೂ ಆಂಜನೇಯನ ಉಪಾಸನೆ ಮಾಡಿ.

ಕನ್ಯಾ: ಆಗಸ್ಟ್ 29-ಸೆಪ್ಟಂಬರ್ 23
ಸಮಾಧಾನಕರ ಬದುಕನ್ನು ಕಾಣುವಿರಿ. ಯಾವುದೇ ಒತ್ತಡಕ್ಕೆ ಮಣಿಯದಿರಿ. ಚಾಲಕ ವೃತ್ತಿಯಲ್ಲಿರುವವರು ಅನುಕೂಲಕರ ವಾತಾವರಣವನ್ನು ಅನುಭವಿಸಲಿದ್ದಾರೆ. ಕೃಷಿಕರಿಗೆ ಉತ್ತಮ ಪ್ರಗತಿ. ಮನೆಯಲ್ಲಿ ಸಂತೋಷ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವುದು. ನಿಮ್ಮ ಮನಸ್ಸಿನಲ್ಲಿರುವ ಶುಭ ಕಾಮನೆಗಳ ಈಡೇರಿಕೆಗೆ ಗಣೇಶನ ಆರಾಧನೆ ಮಾಡಿ.

ತುಲಾ: ಸೆಪ್ಟಂಬರ್ 29-ಅಕ್ಟೋಬರ್ 23
ಸಮಾಧಾನ ಲಭ್ಯವಾಗುವುದು. ಮನೆಯಲ್ಲಿ ನೆಮ್ಮದಿಯನ್ನು ಕಂಡುಕೊಳ್ಳುವಿರಿ. ಉತ್ತಮ ಪ್ರಗತಿಯನ್ನು ಕಾಣುವಿರಿ. ಯಾವುದೇ ಕೆಲಸಕ್ಕೆ ಹಿಂಜರಿಕೆ ತೋರದಿರಿ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಲಾಭಾಂಶ ದೊರೆಯುವುದು. ಅನೇಕ ದಿನಗಳ ಹಿಂದೆ ಹೂಡಿಕೆ ಮಾಡಿರುವ ಹಣ ಇಂದು ಕೈಸೇರುವ ಸಾಧ್ಯತೆಗಳಿವೆ. ನಿಮ್ಮ ಸುಂದರ ಕನಸು ನನಸಾಗಲು ಗಣೇಶನ ಆರಾಧನೆ ಹಾಗೂ ಶಿವ ಉಪಾಸನೆ ಮಾಡಿ.

ವೃಶ್ಚಿಕ:ಅಕ್ಟೋಬರ್ 29- 22 ನವೆಂಬರ್
ನಿಮಗೆ ಶನಿಯ ಪ್ರಭಾವ ಇರುವುದರಿಂದ ಕಿರಿಕಿರಿಯ ವಾತಾವರಣ. ಮಾನಸಿಕವಾಗಿ ಗೊಂದಲ ಮತ್ತು ಸೂಲು ಉಂಟಾಗುವುದು. ಆರೋಗ್ಯದಲ್ಲಿ ಏರು ಪೇರು ಉಂಟಾಗುವುದು. ಮಕ್ಕಳಿಂದ ಅಶುಭ ವಾರ್ತೆ ಕೇಳುವಿರಿ. ರತ್ನಾಭರಣ ಖರೀದಿ ಮಾಡುವ ಸಾಧ್ಯತೆಗಳಿವೆ. ಕೆಲವರ ಮೋಸದ ಜಾಲಕ್ಕೆ ತುತ್ತಾಗುವ ಸಾಧ್ಯತೆಗಳೂ ಇವೆ. ಸಮಸ್ಯೆಗಳ ನಿವಾರಣೆಗೆ ಶಿವ ಮತ್ತು ಆಂಜನೇಯನ ಆರಾಧನೆ ಮಾಡಿ.

ಧನು: ನವೆಂಬರ್ 29 -22 ಡಿಸೆಂಬರ್
ಮಾನಸಿಕ ನೋವು ನಿಮ್ಮನ್ನು ಕಾಡುವುದು. ಬಂಧು ಮಿತ್ರರಿಂದ ಇಲ್ಲ ಸಲ್ಲದ ಆರೋಪಗಳಿಗೆ ತುತ್ತಾಗುವ ಸಾಧ್ಯತೆಗಳಿವೆ. ಅನಿರೀಕ್ಷಿತವಾದ ಸೋಲು ನಿಮ್ಮನ್ನು ಬಾಧಿಸುವುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಒಂದಿಷ್ಟು ಅವಮಾನ ಉಂಟಾಗುವ ಸಾಧ್ಯತೆಗಳಿವೆ. ಇಲ್ಲಸಲ್ಲದ ಕಾರಣಗಳಿಗೆ ಹಣ ವ್ಯಯಮಾಡಬೇಕಾಗುವುದು. ಕೈಗಾರಿಕಾ ಕ್ಷೇತ್ರದಲ್ಲಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ಪೂರ್ಣ ಪ್ರಮಾಣದ ನೆಮ್ಮದಿ ಕಂಡುಕೊಳ್ಳಲು ಅಸಾಧ್ಯವಾಗುವುದು. ವಿದ್ಯಾರ್ಥಿಗಳಿಗೂ ಮಾನಸಿಕ ನೆಮ್ಮದಿ ದೊರೆಯದು. ಸಮಸ್ಯೆಗಳ ನಿವಾರಣೆಗೆ ಹಾಗೂ ಉತ್ತಮ ಬದುಕಿಗಾಗಿ ಶಿವನ ಆರಾಧನೆ ಮಾಡಿ.

ಮಕರ: 23 ಡಿಸೆಂಬರ್ -20 ಜನವರ
ಸಮಾಧಾನಕರ ಬದುಕನ್ನು ಕಾಣುವಿರಿ. ಆದರೆ ನಿರ್ದಿಷ್ಟ ಗುರಿಯನ್ನು ತಲುಪಲು ಅಸಾಧ್ಯವಾಗುವುದು. ಇಲ್ಲ ಸಲ್ಲದ ಆರೋಪ ನಿಮ್ಮ ಬೆನ್ನೇರುವುದು. ಸ್ತ್ರೀಯರಿಂದ ಅವಮಾನ ಉಂಟಾಗುವುದು. ಸರ್ಕಾರಿ ನೌಕರಿಯಲ್ಲಿರುವವರಿಗೆ ಒಂದಿಷ್ಟು ಅಡೆತಡೆ ಉಂಟಾಗುವುದು. ನೀವು ಮಾಡದಿರುವ ತಪ್ಪಿಗೆ ಶಿಕ್ಷೆಯನ್ನು ಅನುಭವಿಸಬೇಕಾಗುವುದು. ಸಮಸ್ಯೆಗಳ ನಿವಾರಣೆ ಹಾಗೂ ಸುಂದರ ಬದುಕಿಗಾಗಿ ಶಿವನ ಆರಾಧನೆ ಹಾಗೂ ಆಂಜನೇಯನ ಪ್ರಾರ್ಥನೆ ಮಾಡಿ.

ಕುಂಬ: 29 ಜನವರಿ -19 ಫೆಬ್ರುವರಿ
ಸ್ತ್ರೀಯರು ಮಾಡುತ್ತಿರುವ ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುವರು. ಮನೆಯಲ್ಲಿ ನೆಮ್ಮದಿ ದೊರೆಯುವುದು. ನಿರ್ದಿಷ್ಟ ಗುರಿಯನ್ನು ತಲುಪುವಿರಿ. ಕಲಾವಿದರಿಗೆ ನೆಮ್ಮದಿ ದೊರೆಯುವುದು. ಅನೇಕ ದಿನಗಳಿಂದ ತೀರ್ಮಾನಿಸಿದ ಕಾರ್ಯಗಳನ್ನು ಇಂದು ಪ್ರಾಮಾಣಿಕವಾಗಿ ನಿರ್ವಹಿಸಿದರೆ ಉತ್ತಮ ಲಾಭ ಕಾಣುವುದು. ಸಮಸ್ಯೆಗಳ ನಿವಾರಣೆ ಹಾಗೂ ಸುಂದರ ಬದುಕಿಗಾಗಿ ಶಿವನ ಆರಾಧನೆ ಮಾಡಿ.

ಮೀನ: 29 ಫೆಬ್ರವರಿ -20 ಮಾರ್ಚ್
ಇಂದು ನಿಮಗೆ ಅನುಕೂಲಕರವಾದ ವಾತಾವರಣ ಲಭಿಸುವುದು. ಅನಿರೀಕ್ಷಿತ ಸೋಲು ದೂರಾಗುವುದು. ಸಮಾಧಾನಕರವಾದ ಬದುಕನ್ನು ನೀವು ಕಾಣುವಿರಿ. ವಿದೇಶ ಯಾನದ ಕನಸು ನನಸಾಗುವುದು. ನಿರ್ದಿಷ್ಟ ಗುರಿಯನ್ನು ತಲುಪಲು ಶೀವನ ಆರಾಧನೆ ಮಾಡಿ.



Click it and Unblock the Notifications