Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಭಕ್ತರ ತಲೆಗೆ ತೆಂಗಿನಕಾಯಿ ಒಡೆಯುವ ಅರ್ಚಕ! ವಿಡಿಯೋ ನೋಡಿ
ಭಾರತದಲ್ಲಿರುವ ಧರ್ಮ, ಜಾತಿ, ಸಂಪ್ರದಾಯ ಮತ್ತು ಆಚರಣೆಗಳು ಬೇರೆ ಯಾವುದೇ ದೇಶದಲ್ಲೂ ಸಿಗಲಿಕ್ಕಿಲ್ಲ. ಇಲ್ಲಿರುವ ಕೆಲವು ಸಂಪ್ರದಾಯ ಮತ್ತು ನಂಬಿಕೆಗಳು ಬೆಚ್ಚಿಬೀಳಿಸುತ್ತದೆ. ಕೆಲವೊಂದು ಸಲ ದೈಹಿಕವಾಗಿ ನೋವುಂಟು ಮಾಡುವ ಮುಳ್ಳುಗಳಿಗೆ ಮಕ್ಕಳ ಎಸೆಯುವುದು, ಸೂಜಿ ಚುಚ್ಚಿಕೊಳ್ಳುವುದು, ಚರ್ಮಕ್ಕೆ ಕೊಕ್ಕೆ ಹಾಕಿ ಎಳೆಯುವುದು ಇತ್ಯಾದಿ ಆಚರಣೆಗಳು ಕೂಡ ಚಾಲ್ತಿಯಲ್ಲಿದೆ.
ದೇವರ ಶಾಪಕ್ಕೆ ಒಳಗಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಅನುಸರಿಸಿಕೊಂಡು ಹೋಗುವರು. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ತುಂಬಾ ವಿಚಿತ್ರ ಸಂಪ್ರದಾಯವಿದ್ದು, ಇಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುವುದು!
ಜಾತ್ರೆಯ ಸಮಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುತ್ತದೆ ಮತ್ತು ತಮ್ಮ ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳಲು ಇಲ್ಲಿ ಭಕ್ತರು ಸಾಲುಗಟ್ಟಿ ನಿಲ್ಲುವರು.

ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿ
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿರುವ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಇದನ್ನು ಆಚರಿಸಲಾಗುವುದು. `ಆದಿ ಪೆರುಕ್ಕು' ಜಾತ್ರೆಯಲ್ಲಿ ನಡೆಯುವ ದೈಹಿಕವಾಗಿ ನೋವುಂಟು ಮಾಡುವ ಈ ಆಚರಣೆಯಲ್ಲಿ ಹಿಂದೂ-ತಮಿಳು ಭಕ್ತರು ಭಾಗಹಿಸುವರು.

ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ
ಜೀವನೀಡುವ ಗುಣ ಹೊಂದಿರುವ ನೀರನ್ನು ಪೂಜಿಸುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ವರದಿಗಳು ಹೇಳಿವೆ.

ಗಾಯವಾದರೆ ವಿಭೂತಿ ಮತ್ತು ಅರಿಶಿನ ಹಚ್ಚುತ್ತಾರೆ
ತೆಂಗಿನಕಾಯಿ ಒಡೆಯುವ ವೇಳೆ ಭಕ್ತರಿಗೆ ಗಾಯವಾದರೆ ಆಗ ವಿಭೂತಿ(ಭಸ್ಮ) ಮತ್ತು ಅರಿಶಿನ ಮಿಶ್ರಣವನ್ನು ಗಾಯಕ್ಕೆ ಹಚ್ಚಲಾಗುವುದು.

ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸುತ್ತಾರೆ
ಗಾಯಾಳುಗಳಾಗುವ ಭಕ್ತರ ಸಂಖ್ಯೆಯು ಮಿತಿಮೀರುತ್ತಿರುವ ಕಾರಣದಿಂದಾಗಿ ರಾಜ್ಯ ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸಿದೆ. ಆದರೆ ಜನರು ಮಾತ್ರ ಈ ಆಚರಣೆ ಪಾಲಿಸಿಕೊಂಡು ಹೋಗುತ್ತಿದ್ದಾರೆ.



Click it and Unblock the Notifications