Latest Updates
-
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ!
ಭಕ್ತರ ತಲೆಗೆ ತೆಂಗಿನಕಾಯಿ ಒಡೆಯುವ ಅರ್ಚಕ! ವಿಡಿಯೋ ನೋಡಿ
ಭಾರತದಲ್ಲಿರುವ ಧರ್ಮ, ಜಾತಿ, ಸಂಪ್ರದಾಯ ಮತ್ತು ಆಚರಣೆಗಳು ಬೇರೆ ಯಾವುದೇ ದೇಶದಲ್ಲೂ ಸಿಗಲಿಕ್ಕಿಲ್ಲ. ಇಲ್ಲಿರುವ ಕೆಲವು ಸಂಪ್ರದಾಯ ಮತ್ತು ನಂಬಿಕೆಗಳು ಬೆಚ್ಚಿಬೀಳಿಸುತ್ತದೆ. ಕೆಲವೊಂದು ಸಲ ದೈಹಿಕವಾಗಿ ನೋವುಂಟು ಮಾಡುವ ಮುಳ್ಳುಗಳಿಗೆ ಮಕ್ಕಳ ಎಸೆಯುವುದು, ಸೂಜಿ ಚುಚ್ಚಿಕೊಳ್ಳುವುದು, ಚರ್ಮಕ್ಕೆ ಕೊಕ್ಕೆ ಹಾಕಿ ಎಳೆಯುವುದು ಇತ್ಯಾದಿ ಆಚರಣೆಗಳು ಕೂಡ ಚಾಲ್ತಿಯಲ್ಲಿದೆ.
ದೇವರ ಶಾಪಕ್ಕೆ ಒಳಗಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಅನುಸರಿಸಿಕೊಂಡು ಹೋಗುವರು. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ತುಂಬಾ ವಿಚಿತ್ರ ಸಂಪ್ರದಾಯವಿದ್ದು, ಇಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುವುದು!
ಜಾತ್ರೆಯ ಸಮಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುತ್ತದೆ ಮತ್ತು ತಮ್ಮ ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳಲು ಇಲ್ಲಿ ಭಕ್ತರು ಸಾಲುಗಟ್ಟಿ ನಿಲ್ಲುವರು.

ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿ
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿರುವ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಇದನ್ನು ಆಚರಿಸಲಾಗುವುದು. `ಆದಿ ಪೆರುಕ್ಕು' ಜಾತ್ರೆಯಲ್ಲಿ ನಡೆಯುವ ದೈಹಿಕವಾಗಿ ನೋವುಂಟು ಮಾಡುವ ಈ ಆಚರಣೆಯಲ್ಲಿ ಹಿಂದೂ-ತಮಿಳು ಭಕ್ತರು ಭಾಗಹಿಸುವರು.

ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ
ಜೀವನೀಡುವ ಗುಣ ಹೊಂದಿರುವ ನೀರನ್ನು ಪೂಜಿಸುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ವರದಿಗಳು ಹೇಳಿವೆ.

ಗಾಯವಾದರೆ ವಿಭೂತಿ ಮತ್ತು ಅರಿಶಿನ ಹಚ್ಚುತ್ತಾರೆ
ತೆಂಗಿನಕಾಯಿ ಒಡೆಯುವ ವೇಳೆ ಭಕ್ತರಿಗೆ ಗಾಯವಾದರೆ ಆಗ ವಿಭೂತಿ(ಭಸ್ಮ) ಮತ್ತು ಅರಿಶಿನ ಮಿಶ್ರಣವನ್ನು ಗಾಯಕ್ಕೆ ಹಚ್ಚಲಾಗುವುದು.

ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸುತ್ತಾರೆ
ಗಾಯಾಳುಗಳಾಗುವ ಭಕ್ತರ ಸಂಖ್ಯೆಯು ಮಿತಿಮೀರುತ್ತಿರುವ ಕಾರಣದಿಂದಾಗಿ ರಾಜ್ಯ ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸಿದೆ. ಆದರೆ ಜನರು ಮಾತ್ರ ಈ ಆಚರಣೆ ಪಾಲಿಸಿಕೊಂಡು ಹೋಗುತ್ತಿದ್ದಾರೆ.



Click it and Unblock the Notifications