Latest Updates
-
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ -
ಜೀವನದಲ್ಲಿ ನೆಮ್ಮದಿ ಬೇಕಾ..? ಈ 5 ಕೆಲಸಗಳನ್ನು ಮಾಡುವಾಗ ಅತಿ ಹೆಚ್ಚು ತಾಳ್ಮೆ ಇರಲಿ! ಸಕ್ಸಸ್ ಮಂತ್ರ ಇಲ್ಲಿದೆ -
ಹೊರಗಿನ ಜ್ಯೂಸ್ ಬಿಡಿ..!! ಬಿಸಿಲಿಗೆ ಕಿಕ್ ಕೊಡೋ ಸ್ಪೆಷಲ್ ಶರಬತ್ತುಗಳಿವು! ಮನೆಯಲ್ಲಿ ಸಿಂಪಲ್ ಆಗಿ ಮಾಡಿ
ಭಕ್ತರ ತಲೆಗೆ ತೆಂಗಿನಕಾಯಿ ಒಡೆಯುವ ಅರ್ಚಕ! ವಿಡಿಯೋ ನೋಡಿ
ಭಾರತದಲ್ಲಿರುವ ಧರ್ಮ, ಜಾತಿ, ಸಂಪ್ರದಾಯ ಮತ್ತು ಆಚರಣೆಗಳು ಬೇರೆ ಯಾವುದೇ ದೇಶದಲ್ಲೂ ಸಿಗಲಿಕ್ಕಿಲ್ಲ. ಇಲ್ಲಿರುವ ಕೆಲವು ಸಂಪ್ರದಾಯ ಮತ್ತು ನಂಬಿಕೆಗಳು ಬೆಚ್ಚಿಬೀಳಿಸುತ್ತದೆ. ಕೆಲವೊಂದು ಸಲ ದೈಹಿಕವಾಗಿ ನೋವುಂಟು ಮಾಡುವ ಮುಳ್ಳುಗಳಿಗೆ ಮಕ್ಕಳ ಎಸೆಯುವುದು, ಸೂಜಿ ಚುಚ್ಚಿಕೊಳ್ಳುವುದು, ಚರ್ಮಕ್ಕೆ ಕೊಕ್ಕೆ ಹಾಕಿ ಎಳೆಯುವುದು ಇತ್ಯಾದಿ ಆಚರಣೆಗಳು ಕೂಡ ಚಾಲ್ತಿಯಲ್ಲಿದೆ.
ದೇವರ ಶಾಪಕ್ಕೆ ಒಳಗಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಅನುಸರಿಸಿಕೊಂಡು ಹೋಗುವರು. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ತುಂಬಾ ವಿಚಿತ್ರ ಸಂಪ್ರದಾಯವಿದ್ದು, ಇಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುವುದು!
ಜಾತ್ರೆಯ ಸಮಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುತ್ತದೆ ಮತ್ತು ತಮ್ಮ ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳಲು ಇಲ್ಲಿ ಭಕ್ತರು ಸಾಲುಗಟ್ಟಿ ನಿಲ್ಲುವರು.

ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿ
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿರುವ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಇದನ್ನು ಆಚರಿಸಲಾಗುವುದು. `ಆದಿ ಪೆರುಕ್ಕು' ಜಾತ್ರೆಯಲ್ಲಿ ನಡೆಯುವ ದೈಹಿಕವಾಗಿ ನೋವುಂಟು ಮಾಡುವ ಈ ಆಚರಣೆಯಲ್ಲಿ ಹಿಂದೂ-ತಮಿಳು ಭಕ್ತರು ಭಾಗಹಿಸುವರು.

ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ
ಜೀವನೀಡುವ ಗುಣ ಹೊಂದಿರುವ ನೀರನ್ನು ಪೂಜಿಸುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ವರದಿಗಳು ಹೇಳಿವೆ.

ಗಾಯವಾದರೆ ವಿಭೂತಿ ಮತ್ತು ಅರಿಶಿನ ಹಚ್ಚುತ್ತಾರೆ
ತೆಂಗಿನಕಾಯಿ ಒಡೆಯುವ ವೇಳೆ ಭಕ್ತರಿಗೆ ಗಾಯವಾದರೆ ಆಗ ವಿಭೂತಿ(ಭಸ್ಮ) ಮತ್ತು ಅರಿಶಿನ ಮಿಶ್ರಣವನ್ನು ಗಾಯಕ್ಕೆ ಹಚ್ಚಲಾಗುವುದು.

ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸುತ್ತಾರೆ
ಗಾಯಾಳುಗಳಾಗುವ ಭಕ್ತರ ಸಂಖ್ಯೆಯು ಮಿತಿಮೀರುತ್ತಿರುವ ಕಾರಣದಿಂದಾಗಿ ರಾಜ್ಯ ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸಿದೆ. ಆದರೆ ಜನರು ಮಾತ್ರ ಈ ಆಚರಣೆ ಪಾಲಿಸಿಕೊಂಡು ಹೋಗುತ್ತಿದ್ದಾರೆ.



Click it and Unblock the Notifications











