Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಭಕ್ತರ ತಲೆಗೆ ತೆಂಗಿನಕಾಯಿ ಒಡೆಯುವ ಅರ್ಚಕ! ವಿಡಿಯೋ ನೋಡಿ
ಭಾರತದಲ್ಲಿರುವ ಧರ್ಮ, ಜಾತಿ, ಸಂಪ್ರದಾಯ ಮತ್ತು ಆಚರಣೆಗಳು ಬೇರೆ ಯಾವುದೇ ದೇಶದಲ್ಲೂ ಸಿಗಲಿಕ್ಕಿಲ್ಲ. ಇಲ್ಲಿರುವ ಕೆಲವು ಸಂಪ್ರದಾಯ ಮತ್ತು ನಂಬಿಕೆಗಳು ಬೆಚ್ಚಿಬೀಳಿಸುತ್ತದೆ. ಕೆಲವೊಂದು ಸಲ ದೈಹಿಕವಾಗಿ ನೋವುಂಟು ಮಾಡುವ ಮುಳ್ಳುಗಳಿಗೆ ಮಕ್ಕಳ ಎಸೆಯುವುದು, ಸೂಜಿ ಚುಚ್ಚಿಕೊಳ್ಳುವುದು, ಚರ್ಮಕ್ಕೆ ಕೊಕ್ಕೆ ಹಾಕಿ ಎಳೆಯುವುದು ಇತ್ಯಾದಿ ಆಚರಣೆಗಳು ಕೂಡ ಚಾಲ್ತಿಯಲ್ಲಿದೆ.
ದೇವರ ಶಾಪಕ್ಕೆ ಒಳಗಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಅನುಸರಿಸಿಕೊಂಡು ಹೋಗುವರು. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ತುಂಬಾ ವಿಚಿತ್ರ ಸಂಪ್ರದಾಯವಿದ್ದು, ಇಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುವುದು!
ಜಾತ್ರೆಯ ಸಮಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುತ್ತದೆ ಮತ್ತು ತಮ್ಮ ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳಲು ಇಲ್ಲಿ ಭಕ್ತರು ಸಾಲುಗಟ್ಟಿ ನಿಲ್ಲುವರು.

ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿ
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿರುವ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಇದನ್ನು ಆಚರಿಸಲಾಗುವುದು. `ಆದಿ ಪೆರುಕ್ಕು' ಜಾತ್ರೆಯಲ್ಲಿ ನಡೆಯುವ ದೈಹಿಕವಾಗಿ ನೋವುಂಟು ಮಾಡುವ ಈ ಆಚರಣೆಯಲ್ಲಿ ಹಿಂದೂ-ತಮಿಳು ಭಕ್ತರು ಭಾಗಹಿಸುವರು.

ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ
ಜೀವನೀಡುವ ಗುಣ ಹೊಂದಿರುವ ನೀರನ್ನು ಪೂಜಿಸುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ವರದಿಗಳು ಹೇಳಿವೆ.

ಗಾಯವಾದರೆ ವಿಭೂತಿ ಮತ್ತು ಅರಿಶಿನ ಹಚ್ಚುತ್ತಾರೆ
ತೆಂಗಿನಕಾಯಿ ಒಡೆಯುವ ವೇಳೆ ಭಕ್ತರಿಗೆ ಗಾಯವಾದರೆ ಆಗ ವಿಭೂತಿ(ಭಸ್ಮ) ಮತ್ತು ಅರಿಶಿನ ಮಿಶ್ರಣವನ್ನು ಗಾಯಕ್ಕೆ ಹಚ್ಚಲಾಗುವುದು.

ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸುತ್ತಾರೆ
ಗಾಯಾಳುಗಳಾಗುವ ಭಕ್ತರ ಸಂಖ್ಯೆಯು ಮಿತಿಮೀರುತ್ತಿರುವ ಕಾರಣದಿಂದಾಗಿ ರಾಜ್ಯ ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸಿದೆ. ಆದರೆ ಜನರು ಮಾತ್ರ ಈ ಆಚರಣೆ ಪಾಲಿಸಿಕೊಂಡು ಹೋಗುತ್ತಿದ್ದಾರೆ.



Click it and Unblock the Notifications