Just In
Don't Miss
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಕ್ತರ ತಲೆಗೆ ತೆಂಗಿನಕಾಯಿ ಒಡೆಯುವ ಅರ್ಚಕ! ವಿಡಿಯೋ ನೋಡಿ
ಭಾರತದಲ್ಲಿರುವ ಧರ್ಮ, ಜಾತಿ, ಸಂಪ್ರದಾಯ ಮತ್ತು ಆಚರಣೆಗಳು ಬೇರೆ ಯಾವುದೇ ದೇಶದಲ್ಲೂ ಸಿಗಲಿಕ್ಕಿಲ್ಲ. ಇಲ್ಲಿರುವ ಕೆಲವು ಸಂಪ್ರದಾಯ ಮತ್ತು ನಂಬಿಕೆಗಳು ಬೆಚ್ಚಿಬೀಳಿಸುತ್ತದೆ. ಕೆಲವೊಂದು ಸಲ ದೈಹಿಕವಾಗಿ ನೋವುಂಟು ಮಾಡುವ ಮುಳ್ಳುಗಳಿಗೆ ಮಕ್ಕಳ ಎಸೆಯುವುದು, ಸೂಜಿ ಚುಚ್ಚಿಕೊಳ್ಳುವುದು, ಚರ್ಮಕ್ಕೆ ಕೊಕ್ಕೆ ಹಾಕಿ ಎಳೆಯುವುದು ಇತ್ಯಾದಿ ಆಚರಣೆಗಳು ಕೂಡ ಚಾಲ್ತಿಯಲ್ಲಿದೆ.
ದೇವರ ಶಾಪಕ್ಕೆ ಒಳಗಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಅನುಸರಿಸಿಕೊಂಡು ಹೋಗುವರು. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ತುಂಬಾ ವಿಚಿತ್ರ ಸಂಪ್ರದಾಯವಿದ್ದು, ಇಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುವುದು!
ಜಾತ್ರೆಯ ಸಮಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಒಡೆಯಲಾಗುತ್ತದೆ ಮತ್ತು ತಮ್ಮ ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳಲು ಇಲ್ಲಿ ಭಕ್ತರು ಸಾಲುಗಟ್ಟಿ ನಿಲ್ಲುವರು.
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿ
ತಮಿಳುನಾಡಿನ ಮೆಟ್ಟು ಮಹಾದನಪುರಂನಲ್ಲಿರುವ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಇದನ್ನು ಆಚರಿಸಲಾಗುವುದು. `ಆದಿ ಪೆರುಕ್ಕು' ಜಾತ್ರೆಯಲ್ಲಿ ನಡೆಯುವ ದೈಹಿಕವಾಗಿ ನೋವುಂಟು ಮಾಡುವ ಈ ಆಚರಣೆಯಲ್ಲಿ ಹಿಂದೂ-ತಮಿಳು ಭಕ್ತರು ಭಾಗಹಿಸುವರು.
ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ
ಜೀವನೀಡುವ ಗುಣ ಹೊಂದಿರುವ ನೀರನ್ನು ಪೂಜಿಸುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ವರದಿಗಳು ಹೇಳಿವೆ.
ಗಾಯವಾದರೆ ವಿಭೂತಿ ಮತ್ತು ಅರಿಶಿನ ಹಚ್ಚುತ್ತಾರೆ
ತೆಂಗಿನಕಾಯಿ ಒಡೆಯುವ ವೇಳೆ ಭಕ್ತರಿಗೆ ಗಾಯವಾದರೆ ಆಗ ವಿಭೂತಿ(ಭಸ್ಮ) ಮತ್ತು ಅರಿಶಿನ ಮಿಶ್ರಣವನ್ನು ಗಾಯಕ್ಕೆ ಹಚ್ಚಲಾಗುವುದು.
ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸುತ್ತಾರೆ
ಗಾಯಾಳುಗಳಾಗುವ ಭಕ್ತರ ಸಂಖ್ಯೆಯು ಮಿತಿಮೀರುತ್ತಿರುವ ಕಾರಣದಿಂದಾಗಿ ರಾಜ್ಯ ಮಾನವ ಹಕ್ಕು ಸಂಘಟನೆಗಳು ಇದಕ್ಕೆ ತುಂಬಾ ವಿರೋಧ ವ್ಯಕ್ತಪಡಿಸಿದೆ. ಆದರೆ ಜನರು ಮಾತ್ರ ಈ ಆಚರಣೆ ಪಾಲಿಸಿಕೊಂಡು ಹೋಗುತ್ತಿದ್ದಾರೆ.