Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications