Latest Updates
-
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ!
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications