Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications