Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications
