Latest Updates
-
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ!
ಬಂಗಾರದಿಂದ ತುಂಬಿದ್ದ ಬ್ಯಾಗ್ ಹಿಂತಿರುಗಿಸಿ, ಪ್ರಾಮಾಣಿಕ ಮೆರೆದ ವ್ಯಕ್ತಿಯ ರಿಯಲ್ ಸ್ಟೋರಿ
ಜೀವನದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಅವರನ್ನು ಗುರುತಿಸುವುದು ಪ್ರಾಮಾಣಿಕತೆಯಿಂದ. ಸಮಾಜದಲ್ಲಿ ಪ್ರಾಮಾಣಿಕವಾಗಿ ಇದ್ದರೆ ಆಗ ಪ್ರತಿಯೊಬ್ಬರು ನಿಮಗೆ ಗೌರವ ನೀಡುವರು. ಇಂತಹ ಪ್ರಾಮಾಣಿಕತೆಗೆ ಕೊಲ್ಕತ್ತಾ ಹೌರದಲ್ಲಿ ರಿಕ್ಷಾ ಎಳೆಯುವ ವ್ಯಕ್ತಿಯೊಬ್ಬ ಸಾಕ್ಷಿ.
ಹೌರದಲ್ಲಿ ರಿಕ್ಷಾ ಎಳೆಯು 54ರ ಹರೆಯದ ಮಂತು ಸಾಹಾ ಎನ್ನುವವರು 2.98 ಕೋಟಿ ರೂ. ಮೌಲ್ಯದ ಬಂಗಾರ ಮತ್ತು ವಜ್ರಾಭರಣ, 60 ಸಾವಿರ ರೂ. ನಗದು ತುಂಬಿದ್ದ ಸುಮಾರು ಬ್ಯಾಗ್ ನ್ನು ತನ್ನ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಪ್ರಯಾಣಿಕರಿಗೆ ಮರಳಿ ತಲುಪಿಸಿದ್ದಾರೆ...

ಆಭರಣ ಖರೀದಿಸಿ-ರಿಕ್ಷಾ ಏರಿದರು
ಹೌರಾದ ಬಾಲಿ ಮಾರ್ಕೆಟ್ ನಲ್ಲಿರುವ ಬಂಗಾರದ ಅಂಗಡಿಗೆ ಭೇಟಿ ನೀಡಿದ ರುಕ್ಮಿಣಿ ದೇವಿ ಎಂಬವರು ಅಲ್ಲಿ ಆಭರಣಗಳನ್ನು ಖರೀದಿಸಿದರು. ಇದರ ಬಳಿಕ ಅವರು ಲಿಲುಹದಲ್ಲಿರುವ ತನ್ನ ಮನೆಗೆ ಹೋಗಲು ಮಂತು ರಿಕ್ಷಾವನ್ನೇರಿದರು.

ತನ್ನ ಫ್ಲ್ಯಾಟ್ ಗೆ ತಲುಪಿದ ಬಳಿಕ ಆಕೆಗೆ ನೆನಪಿಗೆ ಬಂತು!
ತನ್ನ ಫ್ಲ್ಯಾಟ್ ಗೆ ತಲುಪಿದ ಬಳಿಕ ಆಕೆಗೆ ಬ್ಯಾಗ್ ನ್ನು ರಿಕ್ಷಾದಲ್ಲಿಯೇ ಬಿಟ್ಟಿರುವ ಬಗ್ಗೆ ತಿಳಿದುಬಂತು. ಆಕೆ ತಕ್ಷಣವೇ ಬೆಲೂರು ಪೊಲೀಸ್ ಠಾಣೆಗೆ ಹೋಗಿ ಅಲ್ಲಿ ಬ್ಯಾಗ್ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸುತ್ತಾಳೆ. ಬೆಲು ಸಿಮುಲ್ತಾಲ ಘಾಟ್ ನಲ್ಲಿರುವ ಮನೆಗೆ ತಲುಪಿದಾಗ ಮಂತುಗೆ ತನ್ನ ರಿಕ್ಷಾದಲ್ಲಿ ಬ್ಯಾಗ್ ಇರುವುದು ಕಂಡುಬರುತ್ತದೆ. ಬಂಗಾರ ಮತ್ತು ವಜ್ರದ ಆಭರಣಗಳಿಂದ ತುಂಬಿದ್ದ ಬ್ಯಾಗ್ ನ್ನು ಹಿಡಿದುಕೊಂಡ ಮಂತು ಮನೆಯ ಒಳಗಡೆ ಹೋಗಿ ಅದನ್ನು ತನ್ನ ಪತ್ನಿಗೆ ತೋರಿಸುತ್ತಾನೆ. ಆದರೆ ಈ ದಂಪತಿ ಮರುಯೋಚನೆ ಮಾಡದೆ ಈ ಬ್ಯಾಗ್ ನ್ನು ಅದರ ವಾರಿಸುದಾರರಿಗೆ ತಲುಪಿಸಲು ನಿರ್ಧರಿಸುತ್ತಾರೆ.

ಹತ್ತು ಸಾವಿರ ರೂ. ನಗದು ಬಹುಮಾನ ಪಡೆದ ಮಂತು
ಅವರು ಬೆಲೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ಬ್ಯಾಗ್ ನ್ನು ತಲುಪಿಸುವರು. ಬ್ಯಾಗ್ ಅನ್ನು ಮಂತು ತಲುಪಿಸಿದ ಬಳಿಕ ಬೆಲೂರು ಒಸಿ ಸ್ವಪನ್ ಸಾಹಾ ಅವರು ರುಕ್ಮಿಣಿಗೆ ಕರೆ ಮಾಡಿ ಠಾಣೆಗೆ ಕರೆಸುತ್ತಾರೆ. ತನ್ನ ಆಭರಗಣಗಳೆಲ್ಲವೂ ಸರಿಯಾಗಿರುವುದನ್ನು ಕಂಡ ದುಬೈ ನಿವಾಸಿಯಾಗಿರುವ ರುಕ್ಮಿಣಿ ದೇವಿ ಅವರು ಮಂತು ಪ್ರಾಮಾಣಿಕತೆಯನ್ನು ಮೆಚ್ಚಿ ಅವರಿಗೆ ಹತ್ತು ಸಾವಿರ ರೂ. ನಗದು ಬಹುಮಾನ ನೀಡುತ್ತಾರೆ.

ರಿಕ್ಷಾ ಖರೀದಿಸಲು ಚೆಕ್ ಕಳುಹಿಸಿಕೊಡುವುದಾಗಿ ಮಂತುಗೆ ಭರವಸೆ
ಬಹಳಷ್ಟು ಬಾರಿ ಕೃತಜ್ಞತೆ ಸಲ್ಲಿಸಿದ ಬಳಿಕ ರುಕ್ಮಿಣಿ ದೇವಿ ಅವರು ಇನ್ನೇನಾದರೂ ಮಾಡಬೇಕಾ ಎಂದು ಪ್ರಶ್ನಿಸುತ್ತಾರೆ. ತಾನು ಬಡವನಾಗಿದ್ದ ರಿಕ್ಷಾ ಎಳೆಯುವ ಕೆಲಸ ಮಾಡುತ್ತಿದ್ದೇನೆ. ಅಟೋ ರಿಕ್ಷಾ ಅಥವಾ ಈ ರಿಕ್ಷಾ ಚಲಾಯಿಸಿದರೆ ತನ್ನ ಮನೆಯ ಆರ್ಥಿಕ ಪರಿಸ್ಥಿತಿ ಕೂಡ ಸುಧಾರಣೆಯಾಗುವುದು ಎಂದು ಹೇಳುತ್ತಾನೆ. ಮರುದಿನವೇ ದುಬೈಗೆ ಹೋಗಬೇಕಿದ್ದ ರುಕ್ಮಿಣಿ ದೇವಿ ಅವರು ರಿಕ್ಷಾ ಖರೀದಿಸಲು ಚೆಕ್ ಕಳುಹಿಸಿಕೊಡುವುದಾಗಿ ಮಂತುಗೆ ಭರವಸೆ ನೀಡುತ್ತಾರೆ. ಈ ಕಾಲದಲ್ಲಿ ಹಣವೆಂದರೆ ಬಾಯಿಬಿಡುವವರೆ ಇರುವಾಗ ಪ್ರಾಮಾಣಿಕವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಹಿಂತಿರುಗಿಸಿರುವ ಮಂತು ಪ್ರಾಮಾಣಿಕತೆಯು ಎಲ್ಲರಿಗೂ ಮಾದರಿ. ಅವರ ಪ್ರಾಮಾಣಿಕತೆಗೆ ನಮ್ಮದೊಂದು ಸಲಾಂ....



Click it and Unblock the Notifications