Just In
Don't Miss
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಲಂಕಾದ ಗುಹೆಯೊಂದರಲ್ಲಿ ರಾವಣನ ದೇಹವು ಇಂದಿಗೂ ಇದೆ ಎನ್ನುವ ವದಂತಿ ಇದೆ!
ಹಿಂದೂ ಕಥೆ ಪುರಾಣಗಳಲ್ಲಿ ವಿಶೇಷವಾದ ಜೀವನ ಸಂಗತಿಗಳಿರುವುದನ್ನು ನಾವು ಕಾಣಬಹುದು. ಹಾಗೆಯೇ ಪುರಾಣದ ಕಥೆಗಳು ವಿಶೇಷ ಹಿನ್ನೆಲೆಗಳನ್ನು ಹೊಂದಿವೆ. ಅವುಗಳ ಕೆಲವು ಪುರಾವೆಗಳು ಇಂದಿಗೂ ಇವೆ ಎನ್ನುವುದು ಆಶ್ಚರ್ಯದ ಸಂಗತಿ. ಹಿಂದೂ ಧರ್ಮದ ಪವಿತ್ರ ಗ್ರಂಥಗಳಲ್ಲಿ ರಾಮಾಯಣವೂ ಒಂದು. ರಾಮಾಯಣದಲ್ಲಿ ಅನೇಕ ಕಥೆಗಳು ಸೇರಿಕೊಂಡಿವೆ. ರಾಮಾಯಣದ ದುಷ್ಟ ರಾಜನಾದ ರಾವಣನೇ ರಾಮಾಯಣದ ಕಥೆಗೆ ಮೂಲ ಕಾರಣ ಎಂದು ಹೇಳಬಹುದು. ಇಂತಹ ಒಂದು ದುಷ್ಟ ರಾವಣನ ಸಾವಿನ ಸಂಗತಿಯು ಇಂದಿಗೂ ಪ್ರಚಲಿತದಲ್ಲಿದೆ... ಮುಂದೆ ಓದಿ..
ರಾಮಾಯಣದಲ್ಲಿ ರಾಮ ಮತ್ತು ಲಕ್ಷ್ಮಣ
ಕೆಲವು ಸಂಗತಿಗಳು ರಹಸ್ಯಗಳಿಂದ ಕೂಡಿಕೊಂಡಿವೆ. ನಮಗೆ ತಿಳಿದಿರುವಂತೆ ರಾಮಾಯಣದಲ್ಲಿ ರಾಮ ಮತ್ತು ಲಕ್ಷ್ಮಣ ಅತ್ಯಂತ ಪ್ರೀತಿಪಾತ್ರರಾದ ಸಹೋದರರು. ಅಣ್ಣನ ಜೊತೆಯಲ್ಲಿಯೇ ಲಕ್ಷ್ಮಣ ಸದಾ ಇರಲು ಬಯಸುತ್ತಿದ್ದನು. ರಾಮನ ಪತ್ನಿ ಸೀತೆಯನ್ನು ರಾವಣ ಅಪಹರಣ ಮಾಡಿದನು. ನಂತರ ಸೀತೆಯನ್ನು ಹುಡುಕಿ, ರಾವಣನೊಂದಿಗೆ ಹೋರಾಡಿದರು. ಯುದ್ಧದಲ್ಲಿ ರಾವಣ ಸೋತನು. ಸೀತೆಯನ್ನು ಬಿಡಿಸಿಕೊಂಡು ಬಂದರು ಎನ್ನುವುದು ಎಲ್ಲರು ತಿಳಿದಿರುವ ವಿಚಾರ. ಆದರೆ ನಂತರ ರಾವಣನು ಏನಾದ ಎನ್ನುವುದು ರಹಸ್ಯವಾಗಿಯೇ ಉಳಿದ ಸಂಗತಿ!
ರಾವಣನ ದೇಹವು ಶ್ರೀಲಂಕಾದ ಗುಹೆಯೊಂದರಲ್ಲಿ ಇದೆಯಂತೆ
ಈ ವಿಚಾರವಾಗಿಯೇ ನಡೆಸಿದ ಸಂಶೋಧನೆಯ ಪ್ರಕಾರ ರಾವಣನ ದೇಹವು ಶ್ರೀಲಂಕಾದ ಗುಹೆಯೊಂದರಲ್ಲಿ ಇದೆ ಎನ್ನುವುದು ತಿಳಿದು ಬಂದಿದೆ. ಈ ಕುತೂಹಲಕಾರಿ ಸಂಶೋಧನೆಯ ಪ್ರಕಾರ ರಾಮಾಯಣಕ್ಕೆ ಸಂಬಂಧಿಸಿದ 50 ಪ್ರದೇಶಗಳನ್ನು ತನಿಖೆ ಮಾಡಲಾಗಿತ್ತು. ಅದರಲ್ಲಿರುವ ಒಂದು ಗುಹೆಯಲ್ಲಿ ರಾವಣನ ದೇಹ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
Most Read:ವಿಶ್ವದೆಲ್ಲೆಡೆಯಿಂದ ಮಹಿಳೆಯರು ಗರ್ಭಿಣಿಯಾಗಲು ಈ ಸ್ಥಳಕ್ಕೆ ಬರುತ್ತಾರಂತೆ!
ಶ್ರೀಲಂಕಾದ ರಾಗ್ಲಾ ಕಾಡಿನ ನಡುವೆ ಇರುವ ಒಂದು ಗುಹೆಯಲ್ಲಿ ರಾವಣನ ದೇಹ ಇದೆಯಂತೆ!
ಹಿಂದೂ ಪುರಾಣಗಳ ಪ್ರಕಾರ, ರಾಮನು ನವರಾತ್ರಿಯ 10ನೇ ದಿನ ಭಗವಾನ್ ರಾಮನು ರಾವಣನನ್ನು ಕೊಂದ. ಹಾಗಾಗಿಯೇ 10ನೇ ದಿನವನ್ನು ವಿಜಯ ದಶಮಿ ಎಂದು ಆಚರಿಸಲಾಯಿತು ಎನ್ನುವ ಕಥೆಯಿದೆ. ರಾಮ ಅಯೋಧ್ಯೆಗೆ ಮರಳಿದ 20 ದಿನಗಳ ಬಳಿಕ ದೀಪಾವಳಿಯನ್ನು ಆಚರಿಸಲಾಯಿತು. ಸಂಶೋಧನೆಯ ಪ್ರಕಾರ ರಾವಣನ ದೇಹವನ್ನು ಶ್ರೀಲಂಕಾದ ರಾಗ್ಲಾ ಕಾಡಿನ ನಡುವೆ ಇರುವ ಒಂದು ಗುಹೆಯಲ್ಲಿ ಇರಿಸಲಾಗಿದೆ ಎಂದು ಜನರು ಹೇಳುತ್ತಾರೆ. ಗುಹೆಯಲ್ಲಿ ರಾವಣನ ದೇಹವಿದೆ ಎಂದು "ಶ್ರೀಲಂಕಾದ ರಾಷ್ಟ್ರೀಯ ರಾಮಾಯಣ ಸಂಶೋಧನಾ ಕೇಂದ್ರ ಮತ್ತು ಪ್ರವಾಸೋದ್ಯಮ ಸಚಿವಾಲಯ" ಇದನ್ನು ಪತ್ತೆ ಹಚ್ಚಿದೆಯಂತೆ.
ಕಥೆಯ ಪ್ರಕಾರ ಏನಿದೆ?
ಕಥೆಯ ಪ್ರಕಾರ ರಾಮನು ರಾವಣನನ್ನು ಕೊಂದರೂ, ರಾಮನು ರಾವಣನ ದೇಹವನ್ನು ರಾವಣನ ಸಹೋದರನ ಕೈಗೆ ಹಸ್ತಾಂತರಿಸಿದ್ದನು ಎಂದು ಹೇಳಲಾಗುವುದು. ರಾವಣನ ಸಹೋದರನಿಗೆ ಮೃತ ದೇಹವನ್ನು ಹಸ್ತಾಂತರಿಸಿದ ನಂತರ ಏನಾಯಿತು ಎನ್ನುವುದರ ಕುರಿತು ಯಾವುದೇ ಕಥೆ-ಪುರಾಣಗಳು ಇಲ್ಲ. ಹಾಗಾಗಿ ರಾವಣನ ಅಂತ್ಯ ಕ್ರಿಯೆಯ ಬಗ್ಗೆ ಸಾಕಷ್ಟು ಸಂದಿಗ್ಧತೆ ಹಾಗೂ ರಹಸ್ಯಗಳು ಅಡಗಿವೆ ಎಂದು ಊಹಿಸಲಾಗುತ್ತದೆ.
Most Read:ಭಾರತದ ಈ ಎಂಟು ದೇವಸ್ಥಾನಕ್ಕೆ ಪುರುಷರಿಗೆ ಪ್ರವೇಶ ನಿಷೇಧ ಮಾಡಲಾಗಿದೆಯಂತೆ!
ರಾವಣನ ದೇಹವನ್ನು ಹೊಂದಿರುವ ಗುಹೆ 8 ಸಾವಿರ ಅಡಿ ಎತ್ತರದಲ್ಲಿದೆ
ನಂತರ ರಾವಣನ ದೇಹವನ್ನು ಗುಹೆಯಲ್ಲಿ ಇಡಲಾಯಿತು. ಅದು ಅಂದಿನಿಂದ ಇಂದಿಗೂ ಅಲ್ಲಿಯೇ ಇದೆ. ರಾವಣನ ದೇಹವನ್ನು ಹೊಂದಿರುವ ಗುಹೆ 8 ಸಾವಿರ ಅಡಿ ಎತ್ತರದಲ್ಲಿದೆ ಎನ್ನುವುದು ಆಶ್ಚರ್ಯದ ಸಂಗತಿ.