Latest Updates
-
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು?
ಶ್ರೀಲಂಕಾದ ಗುಹೆಯೊಂದರಲ್ಲಿ ರಾವಣನ ದೇಹವು ಇಂದಿಗೂ ಇದೆ ಎನ್ನುವ ವದಂತಿ ಇದೆ!
ಹಿಂದೂ ಕಥೆ ಪುರಾಣಗಳಲ್ಲಿ ವಿಶೇಷವಾದ ಜೀವನ ಸಂಗತಿಗಳಿರುವುದನ್ನು ನಾವು ಕಾಣಬಹುದು. ಹಾಗೆಯೇ ಪುರಾಣದ ಕಥೆಗಳು ವಿಶೇಷ ಹಿನ್ನೆಲೆಗಳನ್ನು ಹೊಂದಿವೆ. ಅವುಗಳ ಕೆಲವು ಪುರಾವೆಗಳು ಇಂದಿಗೂ ಇವೆ ಎನ್ನುವುದು ಆಶ್ಚರ್ಯದ ಸಂಗತಿ. ಹಿಂದೂ ಧರ್ಮದ ಪವಿತ್ರ ಗ್ರಂಥಗಳಲ್ಲಿ ರಾಮಾಯಣವೂ ಒಂದು. ರಾಮಾಯಣದಲ್ಲಿ ಅನೇಕ ಕಥೆಗಳು ಸೇರಿಕೊಂಡಿವೆ. ರಾಮಾಯಣದ ದುಷ್ಟ ರಾಜನಾದ ರಾವಣನೇ ರಾಮಾಯಣದ ಕಥೆಗೆ ಮೂಲ ಕಾರಣ ಎಂದು ಹೇಳಬಹುದು. ಇಂತಹ ಒಂದು ದುಷ್ಟ ರಾವಣನ ಸಾವಿನ ಸಂಗತಿಯು ಇಂದಿಗೂ ಪ್ರಚಲಿತದಲ್ಲಿದೆ... ಮುಂದೆ ಓದಿ..

ರಾಮಾಯಣದಲ್ಲಿ ರಾಮ ಮತ್ತು ಲಕ್ಷ್ಮಣ
ಕೆಲವು ಸಂಗತಿಗಳು ರಹಸ್ಯಗಳಿಂದ ಕೂಡಿಕೊಂಡಿವೆ. ನಮಗೆ ತಿಳಿದಿರುವಂತೆ ರಾಮಾಯಣದಲ್ಲಿ ರಾಮ ಮತ್ತು ಲಕ್ಷ್ಮಣ ಅತ್ಯಂತ ಪ್ರೀತಿಪಾತ್ರರಾದ ಸಹೋದರರು. ಅಣ್ಣನ ಜೊತೆಯಲ್ಲಿಯೇ ಲಕ್ಷ್ಮಣ ಸದಾ ಇರಲು ಬಯಸುತ್ತಿದ್ದನು. ರಾಮನ ಪತ್ನಿ ಸೀತೆಯನ್ನು ರಾವಣ ಅಪಹರಣ ಮಾಡಿದನು. ನಂತರ ಸೀತೆಯನ್ನು ಹುಡುಕಿ, ರಾವಣನೊಂದಿಗೆ ಹೋರಾಡಿದರು. ಯುದ್ಧದಲ್ಲಿ ರಾವಣ ಸೋತನು. ಸೀತೆಯನ್ನು ಬಿಡಿಸಿಕೊಂಡು ಬಂದರು ಎನ್ನುವುದು ಎಲ್ಲರು ತಿಳಿದಿರುವ ವಿಚಾರ. ಆದರೆ ನಂತರ ರಾವಣನು ಏನಾದ ಎನ್ನುವುದು ರಹಸ್ಯವಾಗಿಯೇ ಉಳಿದ ಸಂಗತಿ!

ರಾವಣನ ದೇಹವು ಶ್ರೀಲಂಕಾದ ಗುಹೆಯೊಂದರಲ್ಲಿ ಇದೆಯಂತೆ
ಈ ವಿಚಾರವಾಗಿಯೇ ನಡೆಸಿದ ಸಂಶೋಧನೆಯ ಪ್ರಕಾರ ರಾವಣನ ದೇಹವು ಶ್ರೀಲಂಕಾದ ಗುಹೆಯೊಂದರಲ್ಲಿ ಇದೆ ಎನ್ನುವುದು ತಿಳಿದು ಬಂದಿದೆ. ಈ ಕುತೂಹಲಕಾರಿ ಸಂಶೋಧನೆಯ ಪ್ರಕಾರ ರಾಮಾಯಣಕ್ಕೆ ಸಂಬಂಧಿಸಿದ 50 ಪ್ರದೇಶಗಳನ್ನು ತನಿಖೆ ಮಾಡಲಾಗಿತ್ತು. ಅದರಲ್ಲಿರುವ ಒಂದು ಗುಹೆಯಲ್ಲಿ ರಾವಣನ ದೇಹ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಶ್ರೀಲಂಕಾದ ರಾಗ್ಲಾ ಕಾಡಿನ ನಡುವೆ ಇರುವ ಒಂದು ಗುಹೆಯಲ್ಲಿ ರಾವಣನ ದೇಹ ಇದೆಯಂತೆ!
ಹಿಂದೂ ಪುರಾಣಗಳ ಪ್ರಕಾರ, ರಾಮನು ನವರಾತ್ರಿಯ 10ನೇ ದಿನ ಭಗವಾನ್ ರಾಮನು ರಾವಣನನ್ನು ಕೊಂದ. ಹಾಗಾಗಿಯೇ 10ನೇ ದಿನವನ್ನು ವಿಜಯ ದಶಮಿ ಎಂದು ಆಚರಿಸಲಾಯಿತು ಎನ್ನುವ ಕಥೆಯಿದೆ. ರಾಮ ಅಯೋಧ್ಯೆಗೆ ಮರಳಿದ 20 ದಿನಗಳ ಬಳಿಕ ದೀಪಾವಳಿಯನ್ನು ಆಚರಿಸಲಾಯಿತು. ಸಂಶೋಧನೆಯ ಪ್ರಕಾರ ರಾವಣನ ದೇಹವನ್ನು ಶ್ರೀಲಂಕಾದ ರಾಗ್ಲಾ ಕಾಡಿನ ನಡುವೆ ಇರುವ ಒಂದು ಗುಹೆಯಲ್ಲಿ ಇರಿಸಲಾಗಿದೆ ಎಂದು ಜನರು ಹೇಳುತ್ತಾರೆ. ಗುಹೆಯಲ್ಲಿ ರಾವಣನ ದೇಹವಿದೆ ಎಂದು "ಶ್ರೀಲಂಕಾದ ರಾಷ್ಟ್ರೀಯ ರಾಮಾಯಣ ಸಂಶೋಧನಾ ಕೇಂದ್ರ ಮತ್ತು ಪ್ರವಾಸೋದ್ಯಮ ಸಚಿವಾಲಯ" ಇದನ್ನು ಪತ್ತೆ ಹಚ್ಚಿದೆಯಂತೆ.

ಕಥೆಯ ಪ್ರಕಾರ ಏನಿದೆ?
ಕಥೆಯ ಪ್ರಕಾರ ರಾಮನು ರಾವಣನನ್ನು ಕೊಂದರೂ, ರಾಮನು ರಾವಣನ ದೇಹವನ್ನು ರಾವಣನ ಸಹೋದರನ ಕೈಗೆ ಹಸ್ತಾಂತರಿಸಿದ್ದನು ಎಂದು ಹೇಳಲಾಗುವುದು. ರಾವಣನ ಸಹೋದರನಿಗೆ ಮೃತ ದೇಹವನ್ನು ಹಸ್ತಾಂತರಿಸಿದ ನಂತರ ಏನಾಯಿತು ಎನ್ನುವುದರ ಕುರಿತು ಯಾವುದೇ ಕಥೆ-ಪುರಾಣಗಳು ಇಲ್ಲ. ಹಾಗಾಗಿ ರಾವಣನ ಅಂತ್ಯ ಕ್ರಿಯೆಯ ಬಗ್ಗೆ ಸಾಕಷ್ಟು ಸಂದಿಗ್ಧತೆ ಹಾಗೂ ರಹಸ್ಯಗಳು ಅಡಗಿವೆ ಎಂದು ಊಹಿಸಲಾಗುತ್ತದೆ.

ರಾವಣನ ದೇಹವನ್ನು ಹೊಂದಿರುವ ಗುಹೆ 8 ಸಾವಿರ ಅಡಿ ಎತ್ತರದಲ್ಲಿದೆ
ನಂತರ ರಾವಣನ ದೇಹವನ್ನು ಗುಹೆಯಲ್ಲಿ ಇಡಲಾಯಿತು. ಅದು ಅಂದಿನಿಂದ ಇಂದಿಗೂ ಅಲ್ಲಿಯೇ ಇದೆ. ರಾವಣನ ದೇಹವನ್ನು ಹೊಂದಿರುವ ಗುಹೆ 8 ಸಾವಿರ ಅಡಿ ಎತ್ತರದಲ್ಲಿದೆ ಎನ್ನುವುದು ಆಶ್ಚರ್ಯದ ಸಂಗತಿ.



Click it and Unblock the Notifications











