Just In
Don't Miss
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಶಿ ಭವಿಷ್ಯ: ಈ 7 ರಾಶಿಯವರು ತುಂಬಾನೇ ಸುಳ್ಳು ಹೇಳುತ್ತಾರಂತೆ!
ಸುಳ್ಳು ಹೇಳುವುದರಿಂದ ವ್ಯಕ್ತಿ ತನ್ನ ಘನತೆಯನ್ನು ಕಳೆದುಕೊಳ್ಳುತ್ತಾನೆ. ಒಂದೆರಡು ಬಾರಿ ಸುಳ್ಳು ಹೇಳುತ್ತಾನೆ ಎನ್ನುವುದು ತಿಳಿದರೆ ಸಾಕು. ಅವನನ್ನು ಶಾಶ್ವತವಾಗಿ ಸುಳ್ಳುಗಾರ ಎಂದೇ ಕರೆಯಲಾಗುತ್ತದೆ. ವ್ಯಕ್ತಿ ತನ್ನ ಅನಿವಾರ್ಯತೆಗಳನ್ನು ಮುಚ್ಚಿಕೊಳ್ಳಲು ಅಥವಾ ಕೆಲವು ಸನ್ನಿವೇಶಗಳಿಂದ ಪಾರಾಗಲು ಸುಳ್ಳನ್ನು ಹೇಳುವುದು ಸಹಜ. ಆದರೆ ಆ ಸುಳ್ಳು ಪದೇ ಪದೇ ಹೇಳುವಂತಾಗಬಾರದು. ಒಬ್ಬ ವ್ಯಕ್ತಿಯನ್ನು ಉಳಿಸುವ ಸಲುವಾಗಿ ಅಥವಾ ಇನ್ಯಾವುದೋ ಒಂದು ಒಳ್ಳೆ ಕೆಲಸಕ್ಕಾಗಿ ಸುಳ್ಳು ಹೇಳಿದರೆ ಅದು ತಪ್ಪಾಗಲಾರದು. ಅದೇ ಒಂದು ಕೆಟ್ಟ ಕೆಲಸಕ್ಕೆ ಅಥವಾ ಉದ್ದೇಶಕ್ಕೆ ಹೇಳುವ ಸುಳ್ಳು ಅಪರಾಧ ಎನಿಸಿಕೊಳ್ಳುತ್ತದೆ. ಕೆಲವು ಸುಳ್ಳನ್ನು ನೀರುಕುಡಿದಂತೆ ಹೇಳುತ್ತಾರೆ.
ಅವರು ಸುಳ್ಳು ಹೇಳುತ್ತಿದ್ದರೆ ಅದು ಸುಳ್ಳು ಎಂದೇ ಎನಿಸುವುದಿಲ್ಲ. ಇನ್ನು ಕೆಲವರು ನಿಜ ಹೇಳಿದರೂ ಅದು ಸುಳ್ಳಾಗಿರಬಹುದೆಂದು ಭಾವಿಸುತ್ತೇವೆ. ಅಂದರೆ ವ್ಯಕ್ತಿ ಆಡುವ ಮಾತಿನ ಜೊತೆ ಅವನ ದೇಹದ ಚಲನವಲನಗಳನ್ನು ಪರಿಗಣಿಸಲಾಗುತ್ತದೆ. ವ್ಯಕ್ತಿ ಹೇಳುವ ಸುಳ್ಳುಗಳು ಅವರ ರಾಶಿ ಚಕ್ರಕ್ಕೆ ಅನುಗುಣವಾಗಿ ಇರುತ್ತದೆ ಎನ್ನಲಾಗುತ್ತದೆ. ಹಾಗಾಗಿಯೇ ಕೆಲವರು ಹೇಳುವ ಸುಳ್ಳನ್ನು ನಾವು ಸತ್ಯ ಎಂದೇ ನಂಬಿರುತ್ತೇವೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಆಶ್ಚರ್ಯ ಹಾಗೂ ಕುತೂಹಲಕರವಾದ ವಿಚಾರದಲ್ಲಿ ಇದೂ ಒಂದು.
ದಯವಿಟ್ಟು ಗಮನಿಸಿ: ಈ ಲೇಖನವನ್ನು ಯಾರ ಕುರಿತಾಗಿಯೂ, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಬರೆಯಲಾಗಿಲ್ಲ. ಜ್ಯೋತಿಷ್ಯಾಸ್ತ್ರ ಅಪ್ರಾಮಾಣಿಕತೆ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ಮಾತ್ರ ಇದ್ದುದನ್ನು ಇದ್ದ ಹಾಗೇ ಹೇಳುವ ಪ್ರಯತ್ನ ಅಷ್ಟೇ ಮುಂದೆ ಓದಿ...
ಮೇಷ
ಇವರು ಸಾಮಾನ್ಯವಾಗಿ ಸುಳ್ಳು ಹೇಳುವುದಿಲ್ಲ. ಪ್ರತಿಯೊಬ್ಬರನ್ನು ಮುಖಾಮುಖಿಯಾಗಿ ಎದುರಿಸುವ ವಿಶ್ವಾಸ ಅವರಿಗಿರುತ್ತದೆ. ಜೊತೆಗೆ ಅವರು ಯಾರಿಗೂ ಭಯ ಪಡುವುದಿಲ್ಲ. ಹಾಗೊಮ್ಮೆ ಅವರು ಸುಳ್ಳು ಹೇಳುತ್ತಾರೆ ಎಂದಾದರೆ ಅದು ಯಾರನ್ನೋ ಉಳಿಸುವ ಉದ್ದೇಶವಾಗಿರುತ್ತದೆ. ಈ ರಾಶಿಯ ಜನರು ಕೊಂಚ ಸೋಮಾರಿಗಳಾಗಿದ್ದು ತಮ್ಮ ಕಾರ್ಯಗಳಿಗೆ ಎಲ್ಲಿಯವರೆಗೆ ಅಂತಿಮ ಕರೆ ಬರುವುದಿಲ್ಲವೋ ಅಲ್ಲಿಯವರೆಗೆ ಮುಂದೂಡುವ ಅಭ್ಯಾಸದವರಾಗಿರುತ್ತಾರೆ. ಒಂದು ವೇಳೆ ಸುಳ್ಳು ಹೇಳುವ ಸಂದರ್ಭ ಬಂದರೆ ಸಮಯಕ್ಕೊಂದು ಸುಳ್ಳು ಹೇಳಲು ಸಾಧ್ಯವಾದರೂ ಇದರ ಪರಿಣಾಮಗಳನ್ನು ಸಮರ್ಥಿಸಿಕೊಳ್ಳುವ ಚಾಕಚಕ್ಯತೆ ಇವರಿಗಿರುವುದಿಲ್ಲ. ಆದ್ದರಿಂದ ಇನ್ನೊಂದು ಸುಳ್ಳು ಹೇಳಿ ಗೋಜಲಾಗಿಸಿ ಒಟ್ಟಾರೆ ತಮ್ಮ ಕೆಲಸವಾಗುವಂತೆ ನೋಡಿಕೊಳ್ಳುತ್ತಾರೆ. ಆದರೆ ತಮ್ಮ ಕೆಲವನ್ನು ಮಾತ್ರ ಅರ್ಧಂಬರ್ಧ ಮಾಡದೇ ಪೂರ್ಣಗೊಳಿಸುವ ಜಾಯಾಮಾನ ಇವರದ್ದು. ಪ್ರಾಮಾಣಿಕತೆಯ ವಿಷಯ ಬಂದರೆ ಇವರು ಅತ್ಯಂತ ಪ್ರಾಮಾಣಿಕರಾಗಿದ್ದು ಸದಾ ಸಹಾಯ ಮಾಡುವವರೂ ಆಗಿರುತ್ತಾರೆ.
ಮಿಥುನ
ಇವರು ಒಬ್ಬ ಉತ್ತಮ ಸುಳ್ಳುಗಾರರು ಎಂದು ಹೇಳಬಹುದು. ಇವರು ಎಲ್ಲವನ್ನು ನಿಜ ಹೇಳುವುದಿಲ್ಲ. ಕೆಲವು ಸಂದರ್ಭದಲ್ಲಿ ಇವರು ಸತ್ಯವನ್ನು ಹೇಳುತ್ತಾರೆ. ಸಾಮಾನ್ಯವಾಗಿ ಈ ವರ್ಗದ ಜನರು ದ್ವಂದ್ವ ಪ್ರವೃತ್ತಿಯುಳ್ಳವರಾಗಿರುತ್ತಾರೆ. ಇದೇ ಇವರನ್ನು ಅತಿ ದೊಡ್ಡ ಸುಳ್ಳುಗಾರನಾಗಿಸಿದೆ. ಈ ಅಭ್ಯಾಸದಿಂದ ಇವರು ಸಂದರ್ಭಕ್ಕನುಸಾರವಾಗಿ ಸುಳ್ಳು ಹೇಳುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಇತರ ರಾಶಿಗಳಿಗೆ ಹೋಲಿಸಿದರೆ ಸುಳ್ಳು ಹೇಳುವ ಪ್ರಮಾಣ ಇವರಲ್ಲಿ ಹೆಚ್ಚು.
ಕಟಕ
ಇವರು ಎಲ್ಲಾ ಸಂದರ್ಭದಲ್ಲೂ ಸುಳ್ಳನ್ನು ಹೇಳುವುದಿಲ್ಲ. ಕೆಲವು ಸೂಕ್ತ ಸಮಯ ಅಥವಾ ಅಂದರ್ಭಗಳು ಒದಗಿ ಬಂದರೆ ಸುಳ್ಳನ್ನು ಹೇಳುವುರು. ಅನಿವಾರ್ಯತೆ ಇದೆ ಎನ್ನುವ ಸಂದರ್ಭದಲ್ಲಿ ಇವರು ಸುಳ್ಳನ್ನು ಹೇಳುವರು. ಏಡಿಯ ಶರೀರ ಹೇಗೆ ಹೊರಗೆ ದೃಢವಾಗಿದ್ದು ಒಳಗಡೆಯಿಂದ ಮೆತ್ತರಿಗುತ್ತದೆಯೋ, ಅಂತೆಯೇ ಈ ರಾಶಿಯ ಜನರು ಇತರರು ತಿಳಿದಿರುವುದಕ್ಕಿಂತಲೂ ಹೆಚ್ಚು ಮೃದುವಾಗಿರುತ್ತಾರೆ. ಸ್ವಭಾವತಃ ಇವರು ಒಳ್ಳೆಯವರಾಗಿದ್ದು ಇತರರ ಏಳ್ಗೆಯಲ್ಲಿಯೇ ತಮ್ಮ ಏಳ್ಗೆಯನ್ನು ಕಾಣುತ್ತಾರೆ. ಆದ್ದರಿಂದ ಕೇವಲ ಇತರರಿಗೆ ಒಳ್ಳೆಯದಾಗುವುದಿದ್ದರೆ ಮಾತ್ರ ಇವರು ಸುಳ್ಳು ಹೇಳುತ್ತಾರೆ. ಸಮಯ ಮತ್ತು ಸಂದರ್ಭ ನೋಡಿ ಇವರು ಸುಳ್ಳುಗಳನ್ನು ಹೇಳುತ್ತಾರಾದರೂ ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲದೇ ಕೇವಲ ಪರಿಸ್ಥಿತಿ ನಿಭಾಯಿಸುವುದಾಗಿರುತ್ತದೆ.
ಸಿಂಹ
ಇವರು ಹೆಚ್ಚಾಗಿ ಸುಳ್ಳು ಹೇಳುವುದಿಲ್ಲ. ಆದರೆ ಸತ್ಯವನ್ನು ಉತ್ಪ್ರೇಕ್ಷೆ ಮಾಡುತ್ತಾರೆ. ಹೇಳಿದಂತೆ ಮಾಡುವ ಪ್ರವೃತ್ತಿ ಇವರದ್ದಾಗಿರುತ್ತದೆ. ಇವರು ಸತ್ಯವಂತರು ಹಾಗೂ ವಿಶಿಷ್ಟ ವ್ಯಕ್ತಿಗಳು ಎಂದು ಪರಿಗಣಿಸಬಹುದು. ಇವರು ತಮ್ಮನ್ನು ತಾವು ಜಟಿಲ ಸ್ಥಿತಿಯಿಂದ ಹೊರತರುವ ಪ್ರಯತ್ನವನ್ನು ಮಾಡುತ್ತಾರೆ. ತಮ್ಮ ಗುರಿಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿರುವ ಇವರು ಧೈರ್ಯವಂತರೂ ನೇರ ನಡವಳಿಕೆಯ ಸ್ವಭಾವದವರೂ ಆಗಿರುತ್ತಾರೆ. ಸ್ಪರ್ಧೆಗೆ ಸದಾ ಸಿದ್ಧರಿರುವ ಇವರು ಸ್ಪರ್ಧೆಯಲ್ಲಿ ಗೆಲ್ಲಲು ಸತ್ಯದ ಭಂಡಾರ ಖಾಲಿಯಾದರೆ ಸುಳ್ಳುಗಳನ್ನು ಬಳಸಲು ಹಿಂಜರಿಯುವುದಿಲ್ಲ. ಇತರರು ತಮ್ಮ ಜೀವನದಲ್ಲಿ ನಾಟಕವಾಡುವುದನ್ನು, ಸುಳ್ಳು ಹೇಳುವುದನ್ನು ಸಹಿಸದ ಇವರು ಆ ವ್ಯಕ್ತಿಗಳ ಸಂಗವನ್ನೇ ಬಿಟ್ಟುಬಿಡುತ್ತಾರೆ. ವ್ಯಂಗ್ಯವೆಂದರೆ ಇದೇ ಸುಳ್ಳುಗಳನ್ನು ಇವರೇ ಹೇಳಿ ಎದುರಿನವರು ತಮ್ಮೊಂದಿಗೆ ಸ್ನೇಹದಿಂದಿರಬೇಕೆಂದು ಬಯಸುತ್ತಾರೆ.
ವೃಶ್ಚಿಕ
ಇವರು ಅತ್ಯಂತ ಸುಳ್ಳುಗಾರರು. ನಿಜವನ್ನು ಹೇಳಿದರೆ ನೈಜ ಜೀವನಕ್ಕೆ ಚ್ಯುತಿ ಉಂಟಾಗುವುದು ಎಂದು ಇವರು ಭಾವಿಸುತ್ತಾರೆ. ಇವರು ಹೇಳುವ ಸುಳ್ಳುಗಳು ಕೇಳುಗರಿಗೆ ಸುಳ್ಳೆಂದು ಅನಿಸದು. ಅಷ್ಟು ನಿಜ ಸಂಗತಿ ಎನ್ನುವ ಹಾಗೆ ಸುಳ್ಳನ್ನು ಹೇಳುತ್ತಾರೆ. ಈ ರಾಶಿಯ ಜನರು ಅತಿ ತೀಕ್ಷ್ಣಮತಿಗಳಾಗಿದ್ದಾರೆ. ಇವರನ್ನು ಬೇರೆಯವರು ನಿಯಂತ್ರಿಸುವುದು ಇವರಿಗೆ ಇಷ್ಟವಿಲ್ಲ. ಬಲ ಮತ್ತು ಪ್ರಾಬಲ್ಯತೆಯನ್ನು ಹೊಂದಲು ಇಷ್ಟಪಡುವ ಇವರು ಇದಕ್ಕಾಗಿ ಯಾವ ಬಗೆಯಲ್ಲಿ ತಮ್ಮ ಮಾತುಗಳಲ್ಲಿ ಸುಳ್ಳುಗಳನ್ನು ಪೋಣಿಸುತ್ತಾರೆ ಎಂಬುದನ್ನು ಹೇಳಲು ಸಾಧ್ಯವೇ ಇಲ್ಲ. ಈ ಸುಳ್ಳುಗಳ ಸರಮಾಲೆಯಲ್ಲಿ ಸಿಲುಕಿದವರು ಈ ಗೋಜಲನ್ನು ಅರ್ಥ ಮಾಡುವಷ್ಟರಲ್ಲಿ ಆಗಲೇ ಬಲೆಗೆ ಬಿದ್ದಾಗಿರುತ್ತದೆ. ಸುಳ್ಳು ಎಂದು ಗೊತ್ತಿರುವ ಜಾಹೀರಾತುಗಳನ್ನು ನೋಡಿ ನಾವು ಉತ್ಪನ್ನಗಳನ್ನು ಕೊಳ್ಳುವುದಿಲ್ಲವೇ ಹಾಗೇ. ಅಂತೆಯ ಇವರ ನಿರ್ಯಣಗಳು ಚಂಚಲವಾಗಿದ್ದು ಕ್ಷಣಕ್ಷಣಕ್ಕೆ ಬದಲಾಗುತ್ತಿರುತ್ತವೆ.
ಧನು
ಇವರು ಸುಳ್ಳನ್ನು ಸುಂದರವಾಗಿ ಹೇಳುತ್ತಾರೆ. ಸತ್ಯ ಹೇಳಿದರೆ ಕೆಟ್ಟದ್ದಾಗುತ್ತದೆ ಎನ್ನುವ ಉದ್ದೇಶ ಇವರದ್ದಾಗಿರುವುದು. ಇವರು ಹಲವಾರು ಸಂದರ್ಭದಲ್ಲಿ ಸುಲಭವಾಗಿ ಸುಳ್ಳನ್ನು ಹೇಳುತ್ತಾರೆ. ಎಂತಹ ಸಂದರ್ಭದಲ್ಲಾದರೂ ಸುಳ್ಳನ್ನು ಸುಲಭವಾಗಿ ಹೇಳಿ ಹೊರ ಬರುತ್ತಾರೆ. ಈ ರಾಶಿಯ ಜನರು ಸಾಮಾನ್ಯವಾಗಿ ಸಂತೋಷ ಸ್ವಭಾವದವರಾಗಿದ್ದು ಈ ಕ್ಷಣವನ್ನು ಈಗಲೇ ಅನುಭವಿಸುವ ಆತುರದಲ್ಲಿರುತ್ತಾರೆ. ಇವರಿಗೆ ಸಾಹಸವೆಂದರೆ ಅಚ್ಚುಮೆಚ್ಚಾಗಿದೆ. ತಮ್ಮ ಬೇಳೆ ಬೇಯಿಸಿಕೊಳ್ಳಲು ಸುಳ್ಳು ಹೇಳಬೇಕಾಗಿ ಬಂದಲ್ಲಿ ಯಾವ ಹಿಂಜರಿಕೆಯನ್ನೂ ತೋರದೇ ಸತ್ಯದ ತಲೆಯ ಮೇಲೆ ಹೊಡೆದಂತೆ ಹೇಳುವ ಮೂಲಕ ತಮ್ಮ ದಾರಿಯನ್ನು ಸುಗಮವಾಗಿಸಿಕೊಳ್ಳುತ್ತಾರೆ.
ಮೀನ
ಇವರು ಸುಳ್ಳು ಹೇಳುವುದು ಕಡಿಮೆ. ಹಾಗೊಮ್ಮೆ ಸುಳ್ಳು ನುಡಿದರೆ ಸುಳ್ಳು ಮತ್ತು ಸತ್ಯಗಳ ನಡುವೆ ಯಾವುದು ನಿಜ? ಎಂದು ಅರಿಯುವುದು ಕಷ್ಟ. ಇವರಿಗೆ ಕೆಲವು ಸಂದರ್ಭದಲ್ಲಿ ಸುಳ್ಳು ಹೇಳಬೇಕು ಎಂದು ಎನಿಸಿದರೆ ಸರಾಗವಾಗಿ ಸುಳ್ಳು ಹೇಳುತ್ತಾರೆ. ಅದು ವ್ಯಂಗ್ಯತೆಯನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಅಲದೆ ಕೆಲವೊಮ್ಮೆ ಈ ವರ್ಗದ ಜನರು ದ್ವಂದ್ವ ಪ್ರವೃತ್ತಿಯುಳ್ಳವರಾಗಿರುತ್ತಾರೆ. ಇದೇ ಇವರನ್ನು ಅತಿ ದೊಡ್ಡ ಸುಳ್ಳುಗಾರನಾಗಿಸಿದೆ. ಈ ಅಭ್ಯಾಸದಿಂದ ಇವರು ಸಂದರ್ಭಕ್ಕನುಸಾರವಾಗಿ ಸುಳ್ಳು ಹೇಳುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಇತರ ರಾಶಿಗಳಿಗೆ ಹೋಲಿಸಿದರೆ ಸುಳ್ಳು ಹೇಳುವ ಪ್ರಮಾಣ ಇವರಲ್ಲಿ ಹೆಚ್ಚು.