Latest Updates
-
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ
ತರಬೇತುದಾರನ ಅಚಾತುರ್ಯದಿಂದ ಪ್ರಾಣ ಕಳೆದುಕೊಂಡ ಹುಡುಗಿ!
ಕಾಲೇಜು ದಿನಗಳಲ್ಲಿ ನಾವು ಡ್ರಿಲ್ ಮೊದಲಾದ ಕೌಶಲ್ಯ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಪತ್ತಿನಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಶಿಕ್ಷಣವನ್ನು ಪಡೆದುಕೊಂಡಿರುತ್ತೇವೆ. ಈ ಸಮಯದಲ್ಲಿ ನಾವು ಈ ತರಬೇತಿ ಕಾರ್ಯಕ್ರಮಗಳಲ್ಲಿ ಇರುವಂತಹ ಸರಿ ತಪ್ಪು, ಅಪಾಯಗಳ ಕಡೆಗೆ ಗಮನ ಹರಿಸುವುದಿಲ್ಲ. ಏನೋ ಒಂದು ಹುರುಪಿನಿಂದ ಇದಕ್ಕೆ ಮುಂದಡಿ ಇಡುತ್ತೇವೆ. ಹೀಗೆಯೇ ತರಬೇತಿ ನಡೆಯುತ್ತಿದ್ದ ಸಮಯದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸೂಕ್ತ ಮುನ್ನೆಚ್ಚರಿಕೆಗಳು ಇಲ್ಲದೇ ಇದ್ದುದರಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹಾರುವ ಸಮಯದಲ್ಲಿ ಈಕೆ ಕಂಗೆಟ್ಟಿದ್ದರು ಮತ್ತು ಕಾಲುಗಳು ತಣ್ಣಗಾಗಿದ್ದವು ಅಂತೆಯೇ ನಿರ್ದೇಶಕರ ಸೂಚನೆಗಳನ್ನು ಪಾಲಿಸುವ ಸಮಯದಲ್ಲಿ ಆಕೆ ಹೆದರಿದರು. ಆದ್ದರಿಂದಲೇ ಈ ಘಟನೆ ಸಂಭವಿಸಿದೆ. ಎರಡನೆಯ ಮಹಡಿಯಿಂದ ಜಿಗಿಯುವ ಸಮಯದಲ್ಲಿ ಆಕೆ ಹೆದರಿದ್ದೇ ಆಕೆಯ ಪ್ರಾಣಕಳೆದುಕೊಳ್ಳಲು ಕಾರಣವಾಯಿತು. ಆಕೆ ಧೈರ್ಯವಾಗಿದ್ದಾಳೆ ಎಂದು ತಿಳಿದ ತರಬೇತುದಾರ ಆಕೆಯನ್ನು ಕೆಳಕ್ಕೆ ನೂಕಿದ್ದರು, ಆದರೆ ಆದದ್ದೇ ಬೇರೆ. ಕೆಳಕ್ಕೆ ಬೀಳುವ ಸಮಯದಲ್ಲಿ ತಲೆ ನೆಲಕ್ಕೆ ಬಡಿದು ಆಕೆಯ ಪ್ರಾಣ ಪಕ್ಷಿ ಹಾರಿ ಹೋಯಿತು.
19 ರ ಹರೆಯದ ಲೋಕೇಶ್ವರಿ ಹೆಸರಿನ ಹೆಣ್ಣು ಮಗಳೇ ಮೃತಳಾದ ದುರ್ದೈವಿಯಾಗಿದ್ದಾರೆ. ಕೊಯಂಬತ್ತೂರು ಕಾಲೇಜಿನಲ್ಲಿ ರಕ್ಷಣಾ ತರಬೇತಿಯನ್ನು ನಡೆಸುವ ಸಮಯದಲ್ಲಿ ಈ ಅನಾಹುತ ನಡೆದಿದ್ದು ಯುವತಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ತರಬೇತಿ ಸಮಯದಲ್ಲಿ ತರಬೇತುದಾರ ಆಕೆಯನ್ನು ಎರಡನೇ ಮಹಡಿಯಿಂದ ತಳ್ಳಿದ್ದಾರೆ ಮತ್ತು ಭಯಭೀತಗೊಂಡ ಆಕೆ ಹೆದರಿ ಕೆಳಕ್ಕೆ ಜಿಗಿದಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಆದಷ್ಟು ಜಾಲತಾಣಗಳಲ್ಲಿ ಹಂಚಿಕೊಳ್ಳಿ ಇದರಿಂದ ಆ ತರಬೇತುದಾರನನ್ನು ಹಿಡಿಯುವಂತಾಗಲಿ.
ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಕೆ ಮೆದುಳು ಸಾವಿನಿಂದ ಮರಣವನ್ನು ಹೊಂದಿದ್ದಾರೆ. ಇನ್ನು ಮುಂದೆ ಇಂತಹ ಚಟುವಟಿಕೆಗಳಲ್ಲಿ ನೀವು ಸ್ವಯಂಸೇವಕರಾಗಿ ಪಾಲ್ಗೊಳ್ಳುತ್ತಿದ್ದೀರಿ ಎಂದಾದಲ್ಲಿ ಭದ್ರತಾ ವ್ಯವಸ್ಥೆಯನ್ನು ಚೆನ್ನಾಗಿ ಪರಿಶೀಲಿಸಿಕೊಳ್ಳಿ.



Click it and Unblock the Notifications











