Latest Updates
-
ಬೆಂಗಳೂರು ಮೆಟ್ರೋ ವ್ಯತ್ಯಯ: ಆಫೀಸ್ ತಲುಪಲು ತಡವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದ ತೇವಾಂಶದಿಂದ ನಿಮ್ಮ ಮನೆ ಮತ್ತು ವಸ್ತುಗಳನ್ನು ರಕ್ಷಿಸಲು ಇಲ್ಲಿವೆ ಸರಳ ಟಿಪ್ಸ್! -
ಮುಂಬೈ ಮಳೆಗಾಲದಲ್ಲಿ ಆರೋಗ್ಯವಾಗಿರಬೇಕೆ? ರಸ್ತೆ ಬದಿಯ ತಿಂಡಿ ತಿನ್ನುವ ಮುನ್ನ ಈ ಎಚ್ಚರಿಕೆ ವಹಿಸಿ! -
ಭಾರತ-ಐರ್ಲೆಂಡ್ ಮೊದಲ ಟಿ20: ಬೆಲ್ಫಾಸ್ಟ್ನಲ್ಲಿ ಮಳೆ ಕಾಟ, ಪಂದ್ಯ ನಡೆಯುತ್ತಾ? ಇಲ್ಲಿದೆ ಪಿಚ್ ಮತ್ತು ಹವಾಮಾನ ವರದಿ -
ವಿಶ್ವ ವಿಟಲಿಗೋ ದಿನ 2026: ಚರ್ಮದ ಆರೋಗ್ಯಕ್ಕಾಗಿ ನೀವು ಪಾಲಿಸಬೇಕಾದ 'ಯುವಿ-ಸೇಫ್' ದಿನಚರಿ ಇಲ್ಲಿದೆ! -
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್!
ಬಾವಿ ಭೂಮಿಯೊಳಕ್ಕೆ ಕುಸಿಯುತ್ತಿರುವ ಮೈನವಿರೇಳಿಸುವ ದೃಶ್ಯ
ನಮ್ಮ ಭೂಮಿಯು ಬಹಳ ಸಹನೆಯುಳ್ಳದ್ದು. ನಾವು ಎಷ್ಟೇ ಅಪಕಾರಗಳನ್ನು ಭೂಮಿ ತಾಯಿಗೆ ಮಾಡಿದ್ದರೂ ಆಕೆ ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದಿಲ್ಲ ಮತ್ತು ಮಾನವರನ್ನು ಕ್ಷಮಿಸಿಬಿಡುತ್ತಾಳೆ. ಅದಕ್ಕಾಗಿಯೇ ತಾಳ್ಮೆ ಭೂತಾಯಿಯಷ್ಟಿರಬೇಕು ಎಂದು ಹೇಳುವುದು. ಆದರೆ ಇಂದಿನ ದಿನಗಳಲ್ಲಿ ಮಾನವ ತನ್ನ ಅತಿಯಾಸೆಗೆ ಭೂತಾಯಿಯನ್ನು ಹಿಂಸಿಸುತ್ತಿದ್ದಾನೆ. ಅಲ್ಲಲ್ಲಿ ಅಗೆಯುವುದು, ಕಟ್ಟಗಳ ಸ್ಥಾಪನೆಯಿಂದ ಆಕೆಗೆ ಹೊರಲೂ ಕಷ್ಟವಾಗುತ್ತಿದೆ. ಮಾನವ ಕುಲಕ್ಕೆ ಅತ್ಯಗತ್ಯವಾಗಿರುವ ಮರಗಳ ನಾಶ, ವಾತಾವರಣವನ್ನು ಕಲುಷಿತ ಗೊಳಿಸುತ್ತಿರುವುದು, ಪ್ರಾಣಿಗಳ ನಾಶ ಹೀಗೆ ಮಾನಸ ಸುಖ ಲೋಪುಪತೆಯ ಆಸೆಗೆ ಬಿದ್ದು ಭೂತಾಯಿಯ ಪ್ರಕೃತಿಯ ಮನಸ್ಸಿಗೆ ಬರೆಯನ್ನು ಎಳೆಯುತ್ತಿದ್ದಾನೆ.
ಆಕೆಯ ತಾಳ್ಮೆಯನ್ನು ಪರೀಕ್ಷಿಸಲು ಹೋಗಿಯೇ ಅನೇಕ ವಿನಾಶಗಳು ಭೂಮಿಯಲ್ಲಿ ನಡೆಯುತ್ತಿವೆ. ಅತಿವೃಷ್ಟಿ, ಅನಾವೃಷ್ಟಿ, ಭೂಕಂಪ, ಸುನಾಮಿ ಹೀಗೆ ಪ್ರಕೃತಿಯ ರುದ್ರ ನರ್ತನಕ್ಕೆ ಮಾನವ ಬಲಿಯಾಗುತ್ತಿದ್ದಾನೆ. ಆದರೂ ಮಾನವರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂಬಂತಹ ಪರಿಸ್ಥಿತಿ ಉಂಟಾಗಿದೆ. ಇಂದಿನ ಲೇಖನದಲ್ಲಿ ಇಂತಹುದೇ ಪ್ರಾಕೃತಿಕ ವಿಕೋಪಕ್ಕೆ ಕಾರಣವಾಗಿರುವ ಒಂದು ದೃಶ್ಯವನ್ನು ತೋರಿಸುತ್ತಿದ್ದು ನಿಜಕ್ಕೂ ಇದು ಮೈರೋಮಾಂಚನವನ್ನುಂಟು ಮಾಡುತ್ತಿದೆ.

ಕೆಲವೇ ನಿಮಿಷದಲ್ಲಿ ಬಾವಿಯು ಭೂಕುಸಿತಕ್ಕೆ ಉಂಟಾಗುತ್ತಿರುವ ದೃಶ್ಯಾವಳಿಯನ್ನು ಈ ವೀಡಿಯೊ ಒಳಗೊಂಡಿದೆ. ಕೆಲವೇ ನಿಮಿಷಗಳಲ್ಲಿ ಬಾವಿಯು ಭೂಮಿಯ ಆಳಕ್ಕೆ ಹೋಗುತ್ತಿರುವುದನ್ನು ಜನರು ತಮ್ಮ ವೀಡಿಯೊದಲ್ಲಿ ಸೆರೆಯಾಗಿಸಿಕೊಂಡಿದ್ದರೂ ಪ್ರಕೃತಿಯ ಭೂಮಿತಾಯಿಯ ಸಾಮರ್ಥ್ಯವನ್ನು ನಾವು ಅರಿತುಕೊಳ್ಳಬಹುದಾಗಿದೆ. ದಕ್ಷಿಣ ಭಾರತದ ವಯನಾಡ್ನ ಅಂಬುಕುಟಿ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಾವಿಯು ತುಂಬಾ ಹಳೆಯದಾಗಿದ್ದು ಇದನ್ನು ಅಜ್ಜಿಯ ಕಾಲದ ಬಾವಿ ಎಂದು ಕರೆಯುತ್ತಾರೆ. ಭಾರೀ ವರ್ಷಧಾರೆಯಿಂದಾಗಿ ಈ ಬಾವಿ ಭೂಕುಸಿತಕ್ಕೆ ಒಳಗಾಗಿದೆ. ಬಾವಿಯಿಂದ ವಿಚಿತ್ರ ಶಬ್ಧ ಬಂದ ಹಿನ್ನೆಲೆಯಲ್ಲಿ ಜನರು ಬಾವಿ ಇರುವ ಸ್ಥಳಕ್ಕೆ ಧಾವಿಸಿದಾಗ ಬಾವಿ ಕುಸಿಯುತ್ತಿರುವುದು ಕಂಡು ಬೆಚ್ಚಿ ಬಿದ್ದಿದ್ದಾರೆ.
ಅಂತೂ ನಮ್ಮ ತಂಡಕ್ಕೆ ಈ ರೋಚಕ ವೀಡಿಯೊ ದೊರೆತಿದ್ದು ಪ್ರಕೃತಿ ಮುನಿದರೆ ಏನು ಸಂಭವಿಸುತ್ತದೆ ಎಂಬುದನ್ನು ಈ ವೀಡಿಯೊ ಸ್ಪಷ್ಟವಾಗಿ ನಮಗೆ ತಿಳಿಸಿದೆ. ಮಾಡಿದ್ದುಣ್ಣೋ ಮಹರಾಯ ಎಂಬಂತೆ ನಾವು ಹಾಗೂ ನಮ್ಮ ಮಕ್ಕಳು ಪ್ರಕೃತಿ ವಿಕೋಪಕ್ಕೆ ಬಲಿಯಾಗಬೇಕಾದ ನತದೃಷ್ಟ ಬಂದೊದಗಿದೆ. ಇಂತಹುದೇ ದೃಶ್ಯಗಳು ದೇಶದ ಹಲವೆಡೆ ನಡೆಯುತ್ತಿದ್ದರೂ ನಮ್ಮ ಭೂಮಿ ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.



Click it and Unblock the Notifications