Just In
Don't Miss
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13-12-2018: ಗುರುವಾರದ ದಿನ ಭವಿಷ್ಯ
ಗುರುವಾರದ ದಿನ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಅನೇಕ ವಿದ್ದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಅವರಲ್ಲೊಬ್ಬ ಬಡ ವಿದ್ದ್ಯಾರ್ಥಿ ತನ್ನ ವಿದ್ಯಾಭ್ಯಾಸ ಮುಗಿಸಿ ಹೊರಡುವಾಗ ರಾಯರಲ್ಲಿ ಬಂದು, ತನ್ನ ಬಡತನದ ಕಷ್ಟವನ್ನು ಅವರ ಬಳಿ ತೋಡಿಕೊಂಡು ತನ್ನನ್ನು ಅನುಗ್ರಹಿಸಬೇಕೆಂದು ಕೇಳಿಕೊಂಡನು. ಸ್ನಾನದ ಸಮಯದಲ್ಲಿದ್ದ ರಾಯರು ತಮ್ಮ ಬಳಿ ಕೊಡಲು ಏನೂ ಇಲ್ಲವೆಂದರು. ಆಗ ತಾವು ಏನು ಕೊಟ್ಟರು ನನಗೆ ಮಹಾ ಪ್ರಸಾದವೆಂದು ಒಂದು ಹಿಡಿ ಮಂತ್ರಾಕ್ಷತೆಯನ್ನದರು ತಮ್ಮ ಕೈಯಿಂದ ದಯಪಾಲಿಸಬೇಕೆಂದು ಭಕ್ತಿಯಿಂದ ಬೇಡಿದನು.
ಅದಕ್ಕವರು ಅವನಿಗೆ ಮಂತ್ರಾಕ್ಷತೆ ಕೊಟ್ಟರು. ಮಂತ್ರಾಕ್ಷತೆಯನ್ನೆ ವಿದ್ದ್ಯಾರ್ಥಿಯು ಮಹಾ ಪ್ರಸಾದ ವೆಂದು ಸ್ವೀಕರಿಸಿ ತನ್ನ ಊರಿನ ಕಡೆಗೆ ಹೊರಟನು. ದಾರಿಯಲ್ಲಿ ಕತ್ತಲಾಗಿದ್ದರಿಂದ ಒಂದು ಮನೆಯ ಜಗಲಿಯ ಮೇಲೆ ಮನೆಮಾಲಿಕರಲ್ಲಿ ಅಪ್ಪಣೆ ಪಡೆದು ಮಲಗಿದನು. ಆ ಸಮಯದಲ್ಲಿ ಮನೆಯ ಮಾಲಿಕನ ಹೆಂಡತಿ ಗರ್ಭಿಣಿಯಾಗಿದ್ದಳು. ಮಧ್ಯರಾತ್ರಿಯಲ್ಲಿ ಒಂದು ಪಿಶಾಚಿಯು ಆ ಮನೆಯೊಳಗೆ ಹೋಗಿ, ಹುಟ್ಟಲಿರುವ ಮಗುವನ್ನು ಕೊಲ್ಲಬೇಕೆಂದು ಅಲ್ಲಿಗೆ ಬಂದಿತು. ಆದರೆ ಜಗಲಿಯಲ್ಲಿ ಮಲಗಿದ ಭಕ್ತನ ಬಳಿಯಿರುವ ಮಂತ್ರಾಕ್ಷತೆ ದಾಟಲು ಪ್ರಯತ್ನಿಸಿದಾಗ ಮಂತ್ರಾಕ್ಷತೆ ಬೆಂಕಿಯಂತೆ ಕಂಡು ಬಂದಿತು.
ಇದರಿಂದ ಗಾಬರಿಗೊಂಡ ಪಿಶಾಚಿಯು ಭಕ್ತನನ್ನು ನೋಡಿ ಮಂತ್ರಾಕ್ಷತೆ ದೂರ ಎಸೆಯಲು ಹೇಳಿತು. ಪಿಶಾಚಿಯನ್ನು ನೋಡಿ ಹೆದರಿದ ಭಕ್ತನು ಮಂತ್ರಾಕ್ಷತೆಯನ್ನು ಅದರ ಮೇಲೆ ಎಸೆದನು. ಮಂತ್ರಾಕ್ಷತೆಯ ಪ್ರಭಾವದಿಂದ ಪಿಶಾಚಿಯು ಚೀರುತ್ತಾ ಅಲ್ಲೆ ಸುಟ್ಟು ಬೂದಿಯಾಯಿತು. ಅದರ ಚೀತ್ಕಾರವನ್ನು ಕೇಳಿದ ಮನೆ ಮಂದಿಯಲ್ಲ ಹೊರಗೆ ಬಂದು ಅವಕ್ಕಾದರು. ಅಷ್ಟರಲ್ಲೆ ಮನೆಯೊಡತಿಗೆ ಮಗುವಾದ ಸಂತಸದ ಸುದ್ದಿ ತಿಳಿಯಿತು. ರಾಯರು ಕೊಟ್ಟ ಮಂತ್ರಾಕ್ಷತೆಯ ಶಕ್ತಿಯಿಂದ ದುಷ್ಟ ಶಕ್ತಿಯ ನಾಶವಾಯಿತು.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807 ಬೆಂಗಳೂರು
ಮೇಷ
ನಿಮ್ಮದೇ ಆದ ವಾಹನ ಖರೀದಿಗೂ ಮುನ್ನ ಉತ್ತಮ ತಿಳುವಳಿಕೆ ಇರುವವರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಿ. ಮಾತನಾಡುವಾಗ ಆದಷ್ಟು ಎಚ್ಚರ ವಹಿಸಿ, ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಹಿಂದಿನಿಂದಲೂ ಬಂದ ಕುಟುಂಬದ ಸಂಪ್ರದಾಯ ವಿಧಾನಗಳನ್ನು ನಾಜೂಕಾಗಿ ನಿರ್ವಹಿಸಿ. ಒತ್ತಡಗಳಿಗೆ ಅಲ್ಪ ವಿರಾಮ ದೊರೆಯಲಿದೆ. ನಿಮಗೆ ಬರಬೇಕಾಗಿದ್ದ ಹಣವು ನಿಮ್ಮ ಕೈ ಸೇರುವುದು.ಅನೇಕ ದಿನಗಳ ಸ್ನೇಹವನ್ನು ಒಂದೇ ಒಂದು ಮಾತು ಹಾಳು ಮಾಡುವ ಸಾಧ್ಯತೆ ಉಂಟಾಗುವುದು. ಹಾಗಾಗಿ ಮಾತನಾಡುವಾಗ ಆದಷ್ಟು ಎಚ್ಚರವಹಿಸಿ. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು.9845743807 ಅದೃಷ್ಟ ಸಂಖ್ಯೆ:2
ವೃಷಭ
ಆಹಾರದ ಕುರಿತಾಗಿ ಅಸಡ್ಡೆ ನಿರ್ಲಕ್ಷ ್ಯವನ್ನು ತೋರದಿರಿ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರು-ಪೇರು ಆಗುವ ಸಾಧ್ಯತೆ ಇದೆ. ಮನೆ ವೈದ್ಯರ ಸಲಹೆಪಡೆಯಿರಿ. ಆದಷ್ಟು ವಿಶ್ರಾಂತಿ ಪಡೆಯುವುದು ಒಳ್ಳೆಯದು.ನಿಮಗೆ ನಿಮ್ಮ ಸ್ನೇಹಿತರು ಸಹಾಯ ಹಸ್ತ ನೀಡುವರು. ಹಾಗಾಗಿ ಗೆಳೆಯರೆ ನಿಜವಾದ ಆಸ್ತಿ ಎನಿಸಿಕೊಳ್ಳುವರು. ಉದಾಸೀನ ಪ್ರವೃತ್ತಿಯನ್ನು ಬಿಟ್ಟರೆ ಒಳ್ಳೆಯದು.ಲಲಿತಕಲೆ, ಸಂಗೀತ ನೃತ್ಯಗಳಲ್ಲಿ ಆಸಕ್ತಿ ಹೊಂದಿರುವಂಥವರು ಹೆಚ್ಚಿನ ಹೆಸರನ್ನು ಕೀರ್ತಿಯನ್ನು ಪಡೆಯುವರು. ಮಗನು ಮಾಡಲ್ಪಟ್ಟ ಸಾಲದ ಬಾಧೆಯು ಕಡಿಮೆ ಆಗುತ್ತಾ ಹೋಗುತ್ತಿರುವುದು ಸಂತಸ ನೀಡಿದೆ.9845743807
ಅದೃಷ್ಟ ಸಂಖ್ಯೆ:1
ಮಿಥುನ
ಧನ ಸಂಪಾದನೆಗಾಗಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವಿರಿ ಮತ್ತು ಆ ನಿಟ್ಟಿನಲ್ಲಿ ಯಶಸ್ಸನ್ನು ಹೊಂದುವಿರಿ. ಗುರುಹಿರಿಯರ ಸಂಗಡ ಉತ್ತಮ ಸೌಹಾರ್ದತೆಯನ್ನು ಇಟ್ಟುಕೊಳ್ಳಿ.ಜಾಗತಿಕ ವ್ಯವಹಾರ ತಜ್ಞರು, ಪತ್ರಿಕೋದ್ಯಮಿಗಳು ಹೆಚ್ಚಿನ ಚಾತುರ್ಯವನ್ನು ತೋರುವರು. ಹಾಗಾಗಿ ಇವರುಗಳಿಗೆ ಹೆಚ್ಚಿನ ಸೌಲಭ್ಯ ದೊರಕುವುದು. ಆಂಜನೇಯ ಸ್ತೋತ್ರವನ್ನು ಪಠಿಸಿ.
ಆಡಳಿತ ವಿಚಾರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಬಗ್ಗೆ ಚಿಂತನೆ ನಡೆಸುವಿರಿ. ಇದಕ್ಕೆ ಕೆಲವರ ವಿರೋಧವಿದ್ದರೂ ಅಂತಿಮ ತೀರ್ಮಾನ ನಿಮ್ಮದಾಗಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807
ಅದೃಷ್ಟ ಸಂಖ್ಯೆ:2
ಕಟಕ
ಆಸ್ತಿ ಖರೀದಿಯ ಬಗ್ಗೆ ಮರು ಪರೀಶಿಲನೆ ನಡೆಸುವುದರಿಂದ ಅನುಕೂಲವಾಗುವುದು. ನಿಮ್ಮ ಮನದ ಇಷ್ಟದಂತೆ ಕಾರ್ಯಗಳು ಕೈಗೂಡುವುದರಿಂದ ಮಾನಸಿಕ ನೆಮ್ಮದಿಯನ್ನು ಹೊಂದುವಿರಿ.ನಿಮ್ಮ ಕೈಕೆಳಗಿನ ಕೆಲಸಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ನೀವು ಸ್ವೀಕರಿಸಿದ ಸಿವಿಲ್ ಪ್ರಾಜೆಕ್ಟ್ಗಳನ್ನು ಸಕಾಲದಲ್ಲಿ ಮುಗಿಸಿಕೊಡಲು ಅನುಕೂಲವಾಗುವುದು. ಗ್ರಾಹಕರೊಂದಿಗೆ ಸೌಹಾರ್ದಯುತವಾಗಿ ಮಾತನಾಡುವುದು ಕ್ಷೇಮ. ನಿಮ್ಮ ಸೇವೆಯ ರೀತಿನೀತಿಗಳಿಂದ ಸಂತೋಷಗೊಂಡ ಹಿರಿಯರಿಂದ ವಿಶೇಷವಾದ ಲಾಭವೊಂದು ಬರಲಿದೆ. ಸಾಧ್ಯವಾದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಬನ್ನಿ, ಬಡವರಿಗೆ ಸಹಾಯ ಮಾಡಿ.9845743807
ಅದೃಷ್ಟ ಸಂಖ್ಯೆ:4
ಸಿಂಹ
ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು.ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.9845743807
ಅದೃಷ್ಟ ಸಂಖ್ಯೆ:5
ಕನ್ಯಾ
ದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ.ಆರೋಗ್ಯ ಸದೃಢವಾಗಿರುತ್ತದೆ.ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು.9845743807
ಅದೃಷ್ಟ ಸಂಖ್ಯೆ:4
ತುಲಾ
ಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು.ಪ್ರತಿದಿನದ ನಿರೀಕ್ಷೆಗಳು ಸೋಲುತ್ತವೆ ಎಂದು ನೊಂದುಕೊಳ್ಳದಿರಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.9845743807
ಅದೃಷ್ಟ ಸಂಖ್ಯೆ:6
ವೃಶ್ಚಿಕ
ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.
ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.9845743807
ಅದೃಷ್ಟ ಸಂಖ್ಯೆ:9
ಧನುಸ್ಸು
ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು.ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.9845743807
ಅದೃಷ್ಟ ಸಂಖ್ಯೆ:6
ಮಕರ
ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.9845743807
ಅದೃಷ್ಟ ಸಂಖ್ಯೆ:4
ಕುಂಭ
ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.9845743807
ಅದೃಷ್ಟ ಸಂಖ್ಯೆ:2
ಮೀನ
ಆದಾಯಕ್ಕೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಬಾಬ್ತಿಗೆ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಗಂಟು ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಕುಟುಂಬದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ.
ಸತತ ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.9845743807
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp