Just In
- 1 hr ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 13 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13-11-2018: ಮಂಗಳವಾರದ ದಿನ ಭವಿಷ್ಯ
ಮಂಗಳವಾರದ ದಿನ ಪಾರ್ವತಿಯ ರೂಪಾಂತರ. ಪೂಜಿಸುವುದರಿಂದ ಸಂತುಷ್ಟಳಾಗಿ ಸರ್ವಾಭೀಷ್ಟಗಳನ್ನು ಕೊಡುತ್ತಾಳೆಂದು ಪುರಾಣಗಳು ಹೇಳುತ್ತವೆ. ಚೈತ್ರ ಮೊದಲಾದ ಹನ್ನೆರಡು ಚಾಂದ್ರಮಾಸಗಳಲ್ಲೂ ಬರುವ ಶುಕ್ಲ ತೃತೀಯಾ ಮತ್ತು ಕೃಷ್ಣತೃತೀಯಾ ತಿಥಿಗಳಲ್ಲಿ ಗೌರಿಯನ್ನು ಬೇರೆ ಬೇರೆ ಹೆಸರುಗಳಿಂದ ಪೂಜಿಸುವ ವಿಧಾನ ಪುರಾಣಗಳಲ್ಲಿಉಕ್ತವಾಗಿದೆ. ತೃತೀಯಾತಿಥಿ ಮಾತ್ರವಲ್ಲದೆ ವೈಶಾಖ ಶುಕ್ಲಪಂಚಮಿ, ಜೇಷ್ಠ ಶುಕ್ಲ ಪ್ರಥಮಾ ಶ್ರಾವಣಮಾಸದ ಎಲ್ಲ ಮಂಗಳವಾರಗಳು, ಸೂರ್ಯ ಹಸ್ತ ನಕ್ಷತ್ರವನ್ನುಪ್ರವೇಶಿಸುವ ದಿನ-ಕಾಲಗಳಲ್ಲೂ ಗೌರೀ ಪೂಜೆಯನ್ನುಮಾಡಬೇಕೆಂದಿದೆ.
ಗೌರ(ಹಳದಿ-ಬಿಳುಪು ಮಿಶ್ರ) ವರ್ಣದ ಶರೀರದಿಂದ ಕೂಡಿ ಪಾರ್ವತಿ ರೂಪಾಂತರವನ್ನು ತಳೆದುದರಿಂದ ಆಕೆಗೆ ಗೌರೀ ಎಂದು ಹೆಸರು ಬಂದಿದೆ.ಪಾರ್ವತಿಯನ್ನು ನೆನೆಯುತ್ತಾ ಈದಿನದ ರಾಶಿ ಭವಿಷ್ಯವನ್ನು ತಿಳಿಯೋಣ. ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು. 9845743807
ಮೇಷ
ನಿಮ್ಮಲ್ಲಿನ ಆತ್ಮವಿಶ್ವಾಸ ಮತ್ತು ನಿಮ್ಮ ಬಗೆಗಿನ ನಂಬಿಕೆ ಸ್ಥೈರ್ಯ ಧೈರ್ಯಗಳು ನಿಮಗೆ ಅನುಕೂಲವಾಗುವವು. ನೀವು ನಡೆಯುವ ದಾರಿಯಲ್ಲಿ ಯಾವುದೇ ಅಡೆತಡೆಗಳು ಕಂಡುಬರುವುದಿಲ್ಲ. ನಿಮ್ಮ ಸಹಾಯಕ್ಕೆ ನಿಮ್ಮೊಂದಿಗೆ ಸ್ನೇಹಿತರು ಹೆಜ್ಜೆ ಹಾಕುವರು.
ಮನುಜ ಎಡವಿ ಬಿದ್ದಾಗ ನೋಡಿ ನಗುವವರು ಬಹಳ ಮಂದಿ. ನಡೆಯುವವರು ಎಡುವರೇ ಹೊರತು ಸುಮ್ಮನೆ ಕೂತವರು ಎಡವುದಿಲ್ಲ. ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ನೀವು ತಲ್ಲೀನರಾಗಿ, ಒಳಿತಾಗುವುದು. ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವವು. ಬರುವ ಅವಕಾಶಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಿ ಒಳಿತಾಗುವುದು.
ಅದೃಷ್ಟ ಸಂಖ್ಯೆ:2
ವೃಷಭ
ನಿಮ್ಮ ಮನಸ್ಸಿಗೆ ಸಂತೋಷ ಎನಿಸುವ ಕಾರ್ಯವು ಪೂರ್ಣಗೊಳ್ಳುವುದು. ಮಕ್ಕಳು ವಿದ್ಯೆಯಲ್ಲಿ ಪ್ರಗತಿ ತೋರಿ ನಿಮಗೆ ಹರ್ಷವನ್ನುಂಟು ಮಾಡುವರು. ಹಿರಿಯರ ಆಶೀರ್ವಾದ ದೊರೆಯುವುದು.ಆಫೀಸಿನ ತೊಂದರೆಗಳನ್ನು ಮನೆಯಲ್ಲಿಯೂ ತಂದು ದುಃಖಪಡದಿರಿ. ವಾರದ ಕೊನೆಯ ದಿನದಲ್ಲಿ ಹಾಯಾಗಿ ಮಡದಿ ಮಕ್ಕಳೊಡನೆ ಕಾಲ ಕಳೆಯಿರಿ. ಇದರಿಂದ ನವಚೈತನ್ಯ ನವ ಉತ್ಸಾಹ ಮನದಲ್ಲಿ ಮೂಡುವುದು.ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುದು. ಬಂಧುಗಳು ನಿಮ್ಮಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.
ಅದೃಷ್ಟ ಸಂಖ್ಯೆ:1
ಮಿಥುನ
ಬಹು ನಿರೀಕ್ಷಿತವಾದ ದೂರ ಪ್ರವಾಸ ಕುರಿತು ಮಾಹಿತಿ ಲಭ್ಯವಾಗುವುದು. ಆ ಮೂಲಕ ನಿಮ್ಮ ಬಹುದಿನದ ಕನಸು ನನಸಾಗುವುದು. ಹಣಕಾಸು ಅದಕ್ಕೆ ಪೂರಕವಾಗಿ ಲಭ್ಯವಾಗುವುದರಿಂದ ಹೆಚ್ಚು ಚಿಂತೆ ಪಡಬೇಕಾಗಿಲ್ಲ.ಆಪತ್ ಕಾಲದಲ್ಲಿ ಆದವನೇ ನೆಂಟ ಎನ್ನುವಂತೆ ಪರಿಸ್ಥಿತಿಯನ್ನು ನಿಭಾಯಿಸಲು ನಿಮ್ಮ ಹಳೆಯ ಗೆಳೆಯನ ಸಹಕಾರ ಸಿಗಲಿದೆ. ಹಾಗಾಗಿ ಚಿಂತೆ ಬೇಡ. ಅಗತ್ಯವಿದ್ದಲ್ಲಿ ಮಾತ್ರ ಹಣ ಖರ್ಚು ಮಾಡಿ.ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪಾಟ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು.
ಅದೃಷ್ಟ ಸಂಖ್ಯೆ:2
ಕಟಕ
ಪರೋಪಕಾರಾರ್ಥಂ ಇದಂ ಶರೀರಂ ಎಂದು ಭಾವಿಸಿರುವ ನೀವು ಅನೇಕ ಜನರಿಗೆ ಸಹಾಯ ಹಸ್ತ ನೀಡುವಿರಿ. ಈ ನಿಮ್ಮ ಮನೋಭಾವನೆಯು ಸರ್ವ ಜನರಿಂದ ಮೆಚ್ಚುಗೆಗೆ ಪಾತ್ರರಾಗುವುದು. ಆದರೆ ಮಾತಿನಲ್ಲಿ ನಯ ವಿನಯ ಇರಲಿ.ಪೂರ್ವಪುಣ್ಯದ ಬಲದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯುವುದು. ಮಡದಿ ಮಕ್ಕಳು ನಿಮ್ಮ ಕಾರ್ಯ ಯಶಸ್ಸಿಗೆ ಸಹಕಾರ ನೀಡುವರು. ಅದಕ್ಕೆ ಪೂರಕವಾಗಿ ಹಣಕಾಸು ಬರುವುದು.
ಗುರುವಿನ ಒಲುಮೆ ಇರುವಾಗ ಯಾವ ಭಯವೂ ಇಲ್ಲ. ಧೈರ್ಯವಾಗಿ ಮುನ್ನುಗ್ಗಿ ಕಾರ್ಯ ಪ್ರವೃತ್ತರಾಗಿ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ:4
ಸಿಂಹ
ದೈಹಿಕ ಬಲದ ಜತೆಗೆ ಬುದ್ಧಿಯ ತೇಜಸ್ಸು ಹರಿತವಾದ್ದರಿಂದ ನಿಮ್ಮ ಊಹೆ ತರ್ಕಗಳು ಸರಿ ಎನಿಸುವುದು. ಇದರಿಂದ ನಿಮ್ಮ ಆಪ್ತರಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಕುಟುಂಬದ ಸದಸ್ಯರಿಂದ ಮೂದಲಿಕೆಗೆ ಗುರಿ ಆಗುವಿರಿ.
ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಸಾಗುವುದು ಕ್ಷೇಮ. ತಮಗೆ ಜೀವನದಲ್ಲಿ ಕಷ್ಟಗಳು ಬರಲಾರದು ಎಂದು ಚಿಂತಿಸಿ ಸಾಕಷ್ಟು ಆಸ್ತಿ ಪಾಸ್ತಿ ಮಾಡಿದ್ದಾರೆ. ಅದನ್ನು ವಿವೇಚನೆಯಿಂದ ಬಳಸಿ ಉಳಿಸಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿರುತ್ತದೆ.ನೇರವಾಗಿ ಬರುವ ಅನಿಷ್ಟಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು.
ಅದೃಷ್ಟ ಸಂಖ್ಯೆ:6
ಕನ್ಯಾ
ಎಷ್ಟೇ ಬುದ್ಧಿಶಾಲಿಯಾದರೂ ಎಲ್ಲಾ ವಿಷಯಗಳಲ್ಲೂ ಅಥವಾ ಎಲ್ಲಾ ರಂಗದಲ್ಲೂ ನೀವು ಸರ್ವಜ್ಞರಲ್ಲ. ಹಾಗಾಗಿ ಅನ್ಯರ ಅನುಭವ ಮತ್ತು ಹಿತವಚನಗಳನ್ನು ಆಲಿಸಿದಲ್ಲಿ ನಿಮಗೆ ಒಳಿತಾಗುವುದು. ಜನರಲ್ಲಿ ನಿಮ್ಮ ಬಗ್ಗೆ ಗೌರವವಿರುತ್ತದೆ.ಎಲ್ಲಾ ಭಾನುವಾರವೂ ರಜೆಯ ದಿನವಾಗಿದ್ದರೂ, ರಜೆಯ ದಿನಗಳೆಲ್ಲಾ ಭಾನುವಾರವಲ್ಲ. ಹಾಗಾಗಿ ನಿಮ್ಮ ಕೆಲಸ ಕಾರ್ಯ ಆಗಲು ಹೆಚ್ಚು ಶ್ರಮವಹಿಸಬೇಕಾಗುತ್ತದೆ. ವಿಷ್ಣುಸಹಸ್ರನಾಮವನ್ನು ತಪ್ಪದೆ ಪಠಿಸಿ.
ಬರುತ್ತಿರುವ ನಿರಂತರ ಆದಾಯಕ್ಕೆ ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದದಿಂದ ನಿಮ್ಮ ಜೀವನದ ಮೇಲೆ ದುಷ್ಟ ಪ್ರಭಾವ ಬೀರುವುದಿಲ್ಲ.
ಅದೃಷ್ಟ ಸಂಖ್ಯೆ:4
ತುಲಾ
ಹೊಸ ಜನರ ಪರಿಚಯದೊಂದಿಗೆ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ರಾಜಕೀಯ ಇಲ್ಲವೆ ಸಮಾಜದಲ್ಲಿನ ಪ್ರಭಾವಿ ವ್ಯಕ್ತಿಗಳ ಸಂಪರ್ಕ ದೊರೆತು ಅದರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಅನುಕೂಲವಾಗುವುದು.ಸ್ವಲ್ಪ ಮುಂಗೋಪಿಗಳಾದ ನೀವು ಹೆಚ್ಚು ಶಾಂತಿಯನ್ನು ಕಾಯ್ದುಕೊಳ್ಳಬೇಕಿದೆ. ಏಕೆಂದರೆ ಹೋಗುವ ದಾರಿಯಲ್ಲಿ ಅಪರಿಚಿತರು ಒರಟುತನದಿಂದ ವರ್ತಿಸಿ ನಿಮಗೆ ಕೋಪ ತರಿಸುವ ಸಾಧ್ಯತೆ ಇದೆ.
ವಿಶೇಷವಾದ ಕಾರ್ಯ ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳಲ್ಲಿ ಕಷ್ಟಪಡಬೇಕಾಗುವುದು.
ಅದೃಷ್ಟ ಸಂಖ್ಯೆ:9
ವೃಶ್ಚಿಕ
ನಿಮ್ಮ ಸಮಸ್ಯೆಗಳು ಸಾಕಷ್ಟು ಇರುವಾಗ ಪರರ ಸಂಕಷ್ಟಗಳಿಗೆ ಮರುಗಿ ಸಹಾಯ ಮಾಡಲು ಹೋಗಿ ನೀವೇ ಸಿಕ್ಕಿಹಾಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ.ಉನ್ನತ ವ್ಯಾಸಂಗದ ವಿಚಾರದಲ್ಲಿ ಮಕ್ಕಳಿಗೆ ಅನುಕೂಲಕರವಾದ ವಾತಾವರಣ ಮೂಡಿಬರಲಿದೆ. ಅವರ ಕಾಮನೆಗಳು ಪೂರ್ಣಗೊಳ್ಳುವ ಲಕ್ಷ ಣಗಳು ಗೋಚರಿಸುತ್ತವೆ. ಕುಲದೇವತಾ ಆರಾಧನೆಯಿಂದ ಹೆಚ್ಚು ಅನುಕೂಲವಾಗುವುದು.ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮಗಿಂದು ಅರಿವಿಗೆ ಬರುವುದು. ನಿಮ್ಮ ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇವೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು.
ಅದೃಷ್ಟ ಸಂಖ್ಯೆ:8
ಧನುಸ್ಸು
ನಿಮ್ಮ ಮಕ್ಕಳು ನಿಮಗೆ ಇಷ್ಟವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಅದರ ಹಿಂದೆ ಯಾವುದೋ ಮಹತ್ತರ ಬಯಕೆ ಈಡೇರಿಸಿಕೊಳ್ಳುವ ಇರಾದೆ ಇರುತ್ತದೆ. ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಅವರಿಗೆ ಸಹಾಯ ಮಾಡಿ. ಅವರೂ ಖುಷಿ ಪಡುವರು.
ಆಕಾಶಕ್ಕೆ ಏಣಿ ಹಾಕುವ ದುಃಸಾಹಸಕ್ಕೆ ಇಳಿಯಬೇಡಿ. ಮನೆಗೆದ್ದು ಮಾರುಗೆಲ್ಲು ಎನ್ನುವಂತೆ ಮನೆಯ ಸದಸ್ಯರ ವಿಚಾರಧಾರೆಗಳನ್ನು ಗೌರವಿಸಿ. ಅವರು ಸಂತಸದಿಂದ ಇರುವಂತೆ ನೋಡಿಕೊಳ್ಳಿ.
ಸದಾಕಾಲವೂ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ ಸಂತೋಷ ದೊರೆಯುವುದು.
ಅದೃಷ್ಟ ಸಂಖ್ಯೆ:9
ಮಕರ
ಸರಿದಾರಿಯಲ್ಲಿದ್ದರೂ ಆಪ್ತರಿಂದ ಸಲಹೆ ಸೂಚನೆ ಪಡೆಯಿರಿ. ನಿಮ್ಮ ಆಂತರಿಕ ತುಮುಲಗಳ ನಿವಾರಣೆಗಾಗಿ ಮನೋನಿಯಾಮಕ ರುದ್ರದೇವರನ್ನು ಪ್ರಾರ್ಥಿಸಿ. ನಿರುದ್ಯೋಗಿಗಳಿಗೆ ಸಣ್ಣಪುಟ್ಟ ನೌಕರಿ ದೊರೆಯುವ ಸಂಭವವಿರುತ್ತದೆ.ಮನಸ್ಸಿಗೆ ಹಿಂಸೆಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಲಕ್ಷ್ಮೀನಾರಸಿಂಹ ದೇವರನ್ನು ಅನನ್ಯ ಜಪಿಸಿ. ಸಂಜೆ ಈಶ್ವರ ದೇವಾಲಯದಲ್ಲಿ ತುಪ್ಪದ ದೀಪವನ್ನು ಹಚ್ಚಿಡಿ.ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ನಿಮಗೆ ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ.
ಅದೃಷ್ಟ ಸಂಖ್ಯೆ:9
ಕುಂಭ
ಕ್ಷುಲ್ಲಕರನ್ನು ನೀವು ದೂರ ಇಡುವುದೇ ಒಳ್ಳೆಯದು. ನಿಮ್ಮ ಪ್ರಗತಿಯನ್ನು ಕಂಡು ಕರಬುವ ವ್ಯಕ್ತಿಗಳು ನಿಮ್ಮ ಸುತ್ತಮುತ್ತಲಿನಲ್ಲಿಯೇ ಇರುತ್ತಾರೆ. ಅವರನ್ನು ಉದಾಸೀನ ಮಾಡುವುದೇ ಲೇಸು. ಈ ಹಿಂದೆ ಬರೆದ ಪರೀಕ್ಷೆ ಫಲಿತಾಂಶವು ಶೀಘ್ರದಲ್ಲಿ ಬರುವುದು.ನಿಮ್ಮ ಪ್ರಗತಿಯನ್ನು ಕಂಡು ಕರಬುವ ಮತ್ತು ಅಸೂಯೆ ಪಡುವ ಜನರು ನಿಮ್ಮ ವಿರುದ್ಧ ಇಲ್ಲಸಲ್ಲದ ದೂರನ್ನು ನಮ್ಮ ಮೇಲಧಿಕಾರಿಗೆ ನೀಡುವರು. ಮೇಲಧಿಕಾರಿಗಳಿಗೆ ನಿಮ್ಮ ಸ್ವಭಾವ ಗೊತ್ತಿರುವುದರಿಂದ ಹೆಚ್ಚಿನ ತೊಂದರೆ ಇಲ್ಲ.ನಿಮ್ಮ ಕುಟುಂಬದವರ ಜತೆ ಸಂತೋಷದಿಂದ ಇರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂ0ರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ.
ಅದೃಷ್ಟ ಸಂಖ್ಯೆ:2
ಮೀನ
ನಿಮಗೆ ನೀವೇ ಗುರುವಾಗಿ ನಿಮ್ಮ ಇತಿಮಿತಿ ಬಗ್ಗೆ ತಿಳಿಯಿರಿ. ಇದರಿಂದ ಸಮಾಜದಲ್ಲಿ ನಿಮಗೆ ಗೌರವ ದೊರೆಯುವುದು. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ. ಹಾಗಾಗಿ ಖರ್ಚಿನ ಬಗ್ಗೆ ಹಿಡಿತವಿರಲಿ.ಗುರು ಕಾರುಣ್ಯದಿಂದ ಕೊರಡು ಕೂಡಾ ಚಿಗುರುವುದು. ಅಂತೆಯೇ ನಿಮ್ಮ ಅಲ್ಪ ಶ್ರಮಕ್ಕೆ ಗುರುವು ಬೃಹತ್ತಾದ ಫಲವನ್ನೇ ನೀಡುವನು. ಇದರಿಂದ ಆತ್ಮಸ್ಥೈರ್ಯ ಹೆಚ್ಚಾಗುವುದು.ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೆ ಸಂಕಟವೊಂದು ಎದುರಾಗುವುದು. ಧೈರ್ಯಗೆಡದಿರಿ.
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp