Just In
Don't Miss
- News Namma Metro: ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೋ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13-10-2018: ಶನಿವಾರದ ದಿನ ಭವಿಷ್ಯ
ಶನಿ ಎಂದರೆ ಕೇವಲ ಕಷ್ಟ ದುಃಖಗಳಿಗೆ ಮೀಸಲಾಗಿರುವುದು ಎಂದು ಅರ್ಥವಲ್ಲ. ಶನಿ ಎಂದರೆ ಸತ್ಯ ಹಾಗೂ ನಿಷ್ಟೆಯ ಜೀವನವನ್ನು ಹೇಗೆ ನಡೆಸಬೇಕು ಎನ್ನುವುದನ್ನು ತಿಳಿಸಿಕೊಡುವ ಗುರು ಶನಿ. ಕುಂಡಲಿಯಲ್ಲಿ ಶನಿ ಪ್ರವೇಶಿಸುವಾಗ ಕಷ್ಟವನ್ನು ತಂದುಕೊಟ್ಟರೆ ಹೋಗುವಾಗ ಸುಖವನ್ನು ನೀಡಿ ಹೋಗುತ್ತಾನೆ. ಬರುವಾಗ ಸುಖವನ್ನು ನೀಡಿದರೆ ಹೋಗುವಾಗ ಕಷ್ಟವನ್ನು ನೀಡುತ್ತಾನೆ ಎನ್ನಲಾಗುತ್ತದೆ.
ಇದರ ಅರ್ಥ ಜೀವನದ ಸುಖ-ದುಃಖಗಳ ಅರಿವನ್ನು ಮೂಡಿಸಿ ಸಾರ್ಥಕ ಬದುಕಿನ ತಿಳಿವಳಿಕೆ ಮೂಡಿಸುವವನೆ ಶನಿ. ಶನಿವಾರ ಎನ್ನುವ ಭಯಕ್ಕೆ ಒಳಗಾಗದೆ ನಿಮ್ಮ ಭವಿಷ್ಯದಲ್ಲಿ ಉಂಟಾಗುವ ಏರು ಪೇರುಗಳನ್ನು ಇಂದಿನ ಭವಿಷ್ಯ ನೋಡಿ ತಿಳಿದುಕೊಳ್ಳಿ. ಹಾಗೊಮ್ಮೆ ದೋಷಗಳು ಹಾಗೂ ಕಷ್ಟಗಳ ಸೂಚನೆಯಿದ್ದರೆ ಪರಿಹಾರಗಳನ್ನು ಕೈಗೊಳ್ಳುವ ಮೂಲಕ ಭವಿಷ್ಯದಲ್ಲಿ ಯಶಸ್ಸನ್ನು ಪಡೆಯಿರಿ.
ಮೇಷ
ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಸಂಜೆ ಸ್ನೇಹಿತರೊಡನೆ ಹೋಗಿ - ಇದು ತುಂಬ ಒಳ್ಳೆಯದನ್ನು ಮಾಡುತ್ತದೆ. ನಿಮ್ಮ ಪ್ರೇಮಿಯ ಜೊತೆಗಿನ ನಿಮ್ಮ ಸಂಬಂಧ ಯಾವುದಾದರೂ ತಪ್ಪು ತಿಳುವಳಿಕೆಯ ಕಾರಣ ಘಾಸಿಗೊಳ್ಳಬಹುದು. ಮುಖ್ಯವಾದ ರಾಜಕೀಯ ವ್ಯವಹಾರಗಳುವೇಗವಾಗಿ ಮುನ್ನಡೆಯುತ್ತದೆ. ಅನಿರೀಕ್ಷಿತವಾಗಿ ಹಣಕಾಸು ಪಡೆದುಕೊಳ್ಳುವ ಅವಕಾಶಗಳೂ ಸಹ ಇದೆ. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ವೈವಾಹಿಕ ಜೀವನ ಕೆಲವೊಮ್ಮೆ ಬಹಳ ಬೇಡಿಕೆಗಳನ್ನಿಡುತ್ತದೆ.
ಅದೃಷ್ಟ ಸಂಖ್ಯೆ: 6
ವೃಷಭ
ಪ್ರೀತಿ ಗಂಭೀರ ವ್ಯವಹಾರವೆಂದು ನೀವು ನೆನಪಿಡಬೇಕು, ಆದ್ದರಿಂದ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ ವಿಶೇಷವಾದದ್ದನ್ನು ಹೇಳುತ್ತವೆ.
ನೀವು ಬೇಡಿಕೆಗಳನ್ನು ಪೂರೈಸದಿದ್ದಲ್ಲಿ, ನೀವು ಪರಿಣಾಮಗಳನ್ನು ಅನುಭವಿಸುತ್ತೀರಿ. ಆದ್ದರಿಂದ, ಎಚ್ಚರದಿಂದಿರಿ.ಉದ್ಯೋಗಸ್ಥರಿಗೆ ಬಡ್ತಿ ದೊರೆತು ಉತ್ತಮ ಫಲ ದೊರೆಯಲಿದೆ
ಅದೃಷ್ಟ ಸಂಖ್ಯೆ: 5
ಮಿಥುನ
ನಿಮ್ಮ ಉಪಸ್ಥಿತಿ ನಿಮ್ಮ ಪ್ರೀತಿಪಾತ್ರರಿಗೆ ಈ ವಿಶ್ವವನ್ನು ಒಂದು ಯೋಗ್ಯ ಸ್ಥಾನವನ್ನಾಗಿ ಮಾಡುತ್ತದೆ.ಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ.
ಅದೃಷ್ಟ ಸಂಖ್ಯೆ: 4
ಕಟಕ
ಆಂತರಿಕ ಯೋಚನೆಗಳ ಕುರಿತು ಯೋಚನೆ ಮಾಡಲು ಈ ದಿನವನ್ನು ಬಳಸಿಕೊಳ್ಳಿ.ಆಸ್ತಿ-ಸ್ಥಿರಾಸ್ಥಿ ಸಂಪಾದನೆಗೆ ಚಿಂತನೆ.ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ. ನೀವು ಪ್ರೀತಿಯ ನಿಜವಾದ ಭಾವಪರವಶತೆಯನ್ನು ಅನುಭವಿಸುತ್ತೀರಿ.
ಅದೃಷ್ಟ ಸಂಖ್ಯೆ: 7
ಸಿಂಹ
ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು ನಿಕಟವಿದ್ಯಾರ್ಥಿಗಳು ಸಹಕಾರದೊಂದಿಗೆ ಕೆಲಸ ಮಾಡಬೇಕು.ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಸದಾ ಮುಂದೆ ಉಳಿಯಲು ಸಹಾಯ ಮಾಡುತ್ತದೆ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಇಂದು ನಿಮ್ಮ ವಿಶ್ವಾಸ ಬೆಳೆಯುತ್ತದೆ ಮತ್ತು ಪ್ರಗತಿ ನಿಶ್ಚಿತವಾಗಿದೆ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ.
ಅದೃಷ್ಟ ಸಂಖ್ಯೆ: 5
ಕನ್ಯಾ
ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವುದು ಆನಂದಮಯವಾಗಿರುತ್ತದೆ. ಏಕಪಕ್ಷೀಯ ಪ್ರೇಮದಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ.
ಅದೃಷ್ಟ ಸಂಖ್ಯೆ: 4
ತುಲಾ
ಹೊಸ ವಹಿವಾಟೊಂದರ ವಿಚಾರಗಳ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸುವಿರಿ. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು.ಮುನ್ನುಗ್ಗುವ ವ್ಯಕ್ತಿಯನ್ನು ಕೀಟಲೆ ಮಾಡಿ ಅವನಿಗೆ ಅಡೆತಡೆ ಉಂಟು ಮಾಡಲು ಕಿತಾಪತಿ ಜನರು ನಿಮ್ಮ ಸುತ್ತಮುತ್ತಲಿನಲ್ಲಿರುವರು.
ನೀವು ಪಾರ್ಟಿಯಲ್ಲಿ ಕೀಳರಿಮೆಯಿಂದ ಬಳಲಬಹುದು. ಸಕಾರಾತ್ಮಕ ಚಿಂತನೆಯ ಮೂಲಕ ಇದನ್ನು ಹತ್ತಿಕ್ಕಲು ನಿಮ್ಮನ್ನು ನೀವೇ ಪ್ರೋತ್ಸಾಹಿಸಿಕೊಳ್ಳಿ - ಇದಿಲ್ಲದೇ ನೀವು ಆತ್ಮ ವಿಶ್ವಾಸವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.ಅವರ ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು.
ಅದೃಷ್ಟ ಸಂಖ್ಯೆ: 6
ವೃಶ್ಚಿಕ
ನೀವು ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಹೊಸ ಸಮಸ್ಯೆಯೊಂದು ಸೃಷ್ಟಿ ಆಗುವುದು. ಸಹೋದ್ಯೋಗಿಗಳ ಜೊತೆಯಲ್ಲಿ ಕುಳಿತು ಸಮಸ್ಯೆಯ ಗಂಭೀರತೆಯನ್ನು ಚರ್ಚಿಸಿ.ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮ ಕಾರ್ಯವನ್ನು ವೀಕ್ಷಿಸಿ ಬೆನ್ನು ಚಪ್ಪರಿಸುವವರು ಕಡಿಮೆ. ಆದಾಗ್ಯೂ ದೈವದ ಮೊರೆ ಹೋಗಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮಕ್ಕಳ ವಿಚಾರದಲ್ಲಿ ಹರ್ಷದಾಯಕವಾದ ಮತ್ತು ಹೆಮ್ಮೆ ಪಡುವಂತಹ ವಿಚಾರಗಳು ನಿಮ್ಮನ್ನು ತಲುಪಿ ಸಂತೋಷ ಸಾಗರದಲ್ಲಿ ತೇಲುವಿರಿ.
ಅದೃಷ್ಟ ಸಂಖ್ಯೆ: 8
ಧನಸ್ಸು
ವಿರೋಧಿಗಳನ್ನು ಮಟ್ಟಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗುವುದು. ಬಹಳಷ್ಟು ಉತ್ತಮ ಕಾರ್ಯಗಳನ್ನು ಮಾಡುವಿರಿ.ಪರಿಹಾರ ದೊರೆಯುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.ಉದಾಸೀನತೆಯೇ ಅಧೋಗತಿಗೆ ಮೂಲ ಎಂದರು ಹಿರಿಯರು. ಹಾಗಾಗಿ ಹಿರಿಯರ ಮಾತನ್ನು ಉಡಾಫೆತನದಿಂದ ತಿರಸ್ಕರಿಸಿದಲ್ಲಿ ಸೋಲನ್ನು ಕಾಣುವಿರಿ. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.
ಅದೃಷ್ಟ ಸಂಖ್ಯೆ: 6
ಮಕರ
ನಿಮ್ಮನ್ನು ಭಾವಿ ನಾಯಕನೆಂದು ಗುರುತಿಸಿ ಗೌರವಿಸುವ ಸಂದರ್ಭ ಎದುರಾಗುವುದು. ಬಂದ ಅವಕಾಶಗಳನ್ನು ಬಿಡಬೇಡಿ.ಈ ದಿನ ಮತ್ತೊಮ್ಮೆ ನಿಮ್ಮ ಬುದ್ಧಿಚಾತುರ್ಯದ ಪ್ರದರ್ಶನವಾಗುವುದು. ಇದರಿಂದ ನಿಮ್ಮ ಮೇಲಧಿಕಾರಿಗಳು ಸಂತುಷ್ಟರಾಗುವರು. ನಿಮಗೆ ಸರ್ಕಾರದಿಂದ ಬರಬೇಕಾಗಿದ್ದ ಸೌಲಭ್ಯಗಳು ಬೇಗನೆ ಬರುವಂತೆ ಒತ್ತಡ ತರುವರು.ಮನಸ್ಸಿನ ದುಗುಡಗಳು ಕಾಣೆ ಆಗುವುದು. ಕುಲದೇವರನ್ನು ಭಜಿಸಿ. ಹಿರಿಯರು ಮತ್ತು ಬಂಧುಗಳಿಂದ ಉತ್ತಮವಾದ ಬೆಂಬಲ ಲಭ್ಯವಾಗಲಿದೆ. ಇಡೀ ದಿನ ಉಲ್ಲಾಸದಿಂದ ಇರುವಿರಿ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು.
ಅದೃಷ್ಟ ಸಂಖ್ಯೆ: 5
ಕುಂಭ
ಕೌಟುಂಬಿಕ ವಲಯದಲ್ಲಿ ಕಿರಿಕಿರಿಯಾಗುವ ವಾದವಿವಾದಗಳನ್ನು ತಪ್ಪಿಸಿಕೊಳ್ಳಲು ತಾಳ್ಮೆ ರೂಢಿಸಿಕೊಂಡರೆ ಒಳ್ಳೆಯದು. ಕ್ರಮಭರಿತ ಅಥವಾ ಶಿಸ್ತುಬದ್ಧ ನಿಮ್ಮ ಜೀವನವು ಇತರರಿಗೆ ಮಾದರಿಯಾಗಿ ನಿಲ್ಲುವುದು.ಆದಷ್ಟು ಪ್ರಾಮಾಣಿಕ ಜೀವನ ನಡೆಸಿ.ನೀವು ಹಮ್ಮಿಕೊಂಡಿರುವ ಕಾರ್ಯಗಳು ಜನಮನ್ನಣೆ ಗಳಿಸುವುದು. ಇದರಿಂದ ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಗುರುತಿಸಿಕೊಳ್ಳುವಿರಿ.
ಮನೆಗೆದ್ದು ಮಾರುಗೆಲ್ಲು' ಎನ್ನುವರು ಹಿರಿಯರು. ಅಂತೆಯೇ ಮನೆಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ಅತ್ಯಂತ ಹರ್ಷದಿಂದ ಬಾಳುವಿರಿ.
ಅದೃಷ್ಟ ಸಂಖ್ಯೆ: 3
ಮೀನ
ಖರ್ಚುವೆಚ್ಚಗಳನ್ನು ನಿಯಂತ್ರಿಸಲು ಕಾರ್ಯೋನ್ಮುಖರಾಗಿ. ಕೂಡಿಟ್ಟ ಹೊನ್ನು ಕರಗಿ ಹೋಗುವ ಸಾಧ್ಯತೆ ಇರುತ್ತದೆ. ಸಾಲಮಾಡಿ ಜೀವನ ನಡೆಸುವ ಹಂತಕ್ಕೆ ಬರುವುದನ್ನು ತಪ್ಪಿಸಿಕೊಳ್ಳಿ.ತಾಳ್ಮೆ ಹಾಗೂ ನಿಮ್ಮ ಸೂಕ್ಷ ಮತಿಯು ಹೊಸದೇ ಆದ ಅನುಪಮ ಅವಕಾಶವೊಂದನ್ನು ತಂದು ಕೊಡುವುದು. ಇದರಿಂದ ಮನೆಯಲ್ಲಿಯೂ ಮತ್ತು ಹೊರಗಿನ ಸಮಾಜದಲ್ಲಿಯೂ ಹೆಸರನ್ನು ತಂದುಕೊಡುವುದು.
ಅದೃಷ್ಟ ಸಂಖ್ಯೆ: 9
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp