Just In
- 23 min ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 33 min ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 12 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
- 13 hrs ago ಮೇ 1ರಿಂದ ಗುರು ಮಕರ ರಾಶಿಯಲ್ಲಿ ಪಂಚಮ ಸ್ಥಾನದಲ್ಲಿ ಇರುವುದರಿಂದ ಈ ರೀತಿಯೆಲ್ಲಾ ಪ್ರಯೋಜನಗಳಿವೆ
Don't Miss
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- News Bride Kidnap Video: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣಕ್ಕೆ ಯತ್ನ: ವಿಡಿಯೋ
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
26-12-2018: ಬುಧವಾರದ ದಿನ ಭವಿಷ್ಯ
ಮಹಾವಿಷ್ಣು ವಿಷ್ಣುವಿನ ಒಂದು ಅಂಶ, ಮಾನವ ಗ್ರಹಿಕೆಗೆ ಮೀರಿದ ಮತ್ತು ಎಲ್ಲ ಗುಣಲಕ್ಷಣಗಳನ್ನು ಮೀರಿದ ಪರಮ ರೂಪ. ವೈಷ್ಣವ ಪಂಥದ ಒಂದು ಪರಂಪರೆಯಾದ ಗೌಡೀಯ ವೈಷ್ಣವ ಪಂಥದಲ್ಲಿ, ಸಾತ್ವತ ತಂತ್ರವು ವಿಷ್ಣುವಿನ ಮೂರು ಭಿನ್ನ ರೂಪಗಳನ್ನು ವಿವರಿಸುತ್ತದೆ: ಮಹಾವಿಷ್ಣು, ಗರ್ಭೋದಕಷಾಯಿ ವಿಷ್ಣು ಮತ್ತು ಕ್ಷೀರೋದಕಷಾಯಿ ವಿಷ್ಣು.
ಮಹಾವಿಷ್ಣು ಪದವು ಬ್ರಹ್ಮನ್ಪದವನ್ನು ಹೋಲುತ್ತದೆ, ಮತ್ತು ದೇವರ ಪರಮೋಚ್ಚ ವ್ಯಕ್ತಿತ್ವವಾಗಿದೆ. ಇದರರ್ಥ ಪರಮ ಸತ್ಯವನ್ನು ಮೊದಲು ಬ್ರಹ್ಮನ್ ಆಗಿ (ನಿರಾಕಾರ ಅಂಶ), ನಂತರ ಪರಮಾತ್ಮವಾಗಿ (ವ್ಯಕ್ತಿಗತ ಅಂಶ) ಮತ್ತು ಅಂತಿಮವಾಗಿ ಭಗವಾನ್ (ಮೈದಾಳಿದ ಪರಿಪೂರ್ಣತೆ) ಆಗಿ ಸಿದ್ಧಿ ಮಾಡಿಕೊಳ್ಳಲಾಗುತ್ತದೆ. ಹಾಗಾಗಿ ಭಕ್ತಿ ಭಗವಾನ್ ಕೃಷ್ಣನಿಗೆ (ವಿಷ್ಣುವಿನ ಅವತಾರ) ಹೋಗುತ್ತದೆ. ಈ ರೀತಿಯಲ್ಲಿ, ಭಕ್ತಿಯು ಯೋಗವನ್ನೂ ಮೀರಿಸುತ್ತದೆ ಮತ್ತು ಇದರ ಗುರಿ ಪರಮಾತ್ಮವಾಗಿದೆ. ಮಹಾವಿಷ್ಣುವು ಎಲ್ಲ ಭೌತಿಕ ಬ್ರಹ್ಮಾಂಡಗಳಲ್ಲಿ ಎಲ್ಲ ಜೀವಾತ್ಮಗಳ ಪರಮಾತ್ಮವಾಗಿದೆ. ಹಾಗಾಗಿ ಶಿವ, ಪರಾಶಕ್ತಿ, ಬ್ರಹ್ಮಸೇರಿದಂತೆ ಎಲ್ಲ ದೇವತೆಗಳು ಮಹಾವಿಷ್ಣು ವಿಸ್ತರಣೆಯ ಭಾಗವೆಂದು ಪರಿಗಣಿಸಲಾಗಿದೆ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ( 26 ಡಿಸೆಂಬರ್ 2018)
ಭವಿಷ್ಯದ ಬಗೆಗಿನ ಅತಂತ್ರಗಳಿಗೆ ವಿರಾಮ ಸಿಗುವ ಸಾಧ್ಯತೆ ಇದೆ. ಮನೆಯ ಹಿರಿಯರೊಬ್ಬರ ಸಹಾಯ, ಸಹಕಾರ ದೊರೆಯಲಿದ್ದು ಸರ್ಕಾರದ ವತಿಯಿಂದ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವಂತೆ ಆದೇಶ ಕೈ ಸೇರುವುದು.ಮುಂದಿನ ದಿನಗಳ ಬಗ್ಗೆ ಮುಂದಾ ಲೋಚನೆ ಮಾಡಬಾರದು ಎಂಬುದೇನಿಲ್ಲ. ಆದರೆ ನಾಳೆಯ ಊಟವನ್ನು ಇಂದೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಹಾಗಾಗಿ ಇಂದಿನ ಕಾರ್ಯಕ್ರಮವನ್ನು ಹೇಗೆ ಶಿಸ್ತುಬದ್ಧವಾಗಿ ಪೂರ್ಣಗೊಳಿಸಬಹುದು ಎಂಬುದರ ಬಗ್ಗೆ ಚಿಂತಿಸಿ. ಹಣದ ಮುಗ್ಗಟ್ಟು ಉಂಟಾಗುವುದಿಲ್ಲ. ಆದರೆ ಅನವಶ್ಯಕ ಸಂಗತಿಗಳಿಗೆ ಹಣ ವ್ಯಯಿಸುವುದನ್ನು ನಿಲ್ಲಿಸುವುದು ಪ್ರಮುಖ ಕರ್ತವ್ಯವಾಗಿರುತ್ತದೆ. ಈ ಬಗ್ಗೆ ಮನೆಯ ಸದಸ್ಯರು ಕೂಡ ಸಹಕರಿಸುವರು. 9845743807 ಅದೃಷ್ಟ ಸಂಖ್ಯೆ:2
ವೃಷಭ
ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಹೋಗದು ಎಂಬ ಗಾದೆ ಮಾತಿನಂತೆ ನಿಮ್ಮ ವ್ಯವಹಾರದಲ್ಲಿನ ಕಿಂಚಿತ್ ಲೋಪವು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಸಾಧ್ಯತೆ ಇರುತ್ತದೆ. ಕುಲದೇವರ ಮೊರೆ ಹೋಗುವುದು ಒಳ್ಳೆಯದು.ಸ್ವಾಭಿಮಾನ ಮತ್ತು ದುರಾಭಿಮಾನಗಳಿಗೆ ಕೂದಲೆಳೆ ಅಂತರ ಮಾತ್ರ. ನೀವು ಅತಿ ಚಾಣಾಕ್ಷ ಮತಿ ಎಂದು ಎಲ್ಲರೂ ಬಲ್ಲರು. ಆದರೆ ಅದೇ ನಿಮಗೆ ಅಹಂಕಾರವಾಗಬಾರದು. ಹಾಗಾಗಿ ಸಾರ್ವತ್ರಿಕವಾಗಿ ತಲೆಬಾಗಿ ನಡೆಯುವುದು ಕ್ಷೇಮ.ಜನರು ನಿಮ್ಮನ್ನು ಹಿಂದಿನಿಂದ ಟೀಕಿಸುತ್ತಾರೆ ಎಂಬ ಪೂರ್ವಗ್ರಹಿಕೆ ಇಟ್ಟುಕೊಳ್ಳದೆ ಕಾರ್ಯ ಪ್ರವೃತ್ತರಾಗಿ. ಟೀಕಿಸುವ ಜನ ಯಾವಾಗಲೂ ಇರುತ್ತಾರೆ. ಅವರ ಟೀಕೆಯಲ್ಲಿನ ಧನಾತ್ಮಕ ಗುಣಗಳನ್ನು ಅಳವಡಿಸಿಕೊಂಡು ಅವರ ಬಾಯಿಗೆ ಬೀಗ ಹಾಕಿ.9845743807
ಅದೃಷ್ಟ ಸಂಖ್ಯೆ:1
ಮಿಥುನ
ನಿಮ್ಮನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಸಹೋದರ, ಸಹೋದರಿಯರು ಸಹಾಯ ಮಾಡುವರು. ಆದಾಗ್ಯೂ ಮನಸ್ಸಿನ ಅವ್ಯಕ್ತ ಭಯ ನಿವಾರಣೆಗಾಗಿ ಮನೋನಿಯಾಮಕ ರುದ್ರದೇವರನ್ನು ಭಜಿಸಿ. ವಿರೋಧಿಗಳು ಕಣ್ಣಾಮುಚ್ಚಾಲೆ ಆಟ ಆಡುವುದು ಇದ್ದಿದ್ದೆ. ಗ್ರಹಗಳು ಕೆಟ್ಟಾಗ ಮಡದಿ ಮಕ್ಕಳೇ ಮಾತು ಕೇಳದ ಪರಿಸ್ಥಿತಿಯಿರುತ್ತದೆ. ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂದು ನೀವು ನಂಬಿದ ದೈವವನ್ನು ಮನಸಾರೆ ಸ್ಮರಿಸಿ.ಸರ್ರನೆ ಮನಸ್ಸಿಗೆ ಬಂದಿದ್ದನ್ನು ಕಾರ್ಯಗತಗೊಳಿಸಬೇಡಿ. ಸದ್ಯದ ಪರಿಸ್ಥಿತಿಯಲ್ಲಿ ನೀವು ಅಂದುಕೊಂಡಂತೆ ಯಾವುದೂ ನಡೆಯುವುದಿಲ್ಲ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಮಾತಿನಲ್ಲಿ ಹಿಡಿತವಿರಲಿ.9845743807
ಅದೃಷ್ಟ ಸಂಖ್ಯೆ:2
ಕಟಕ
ಮಾತಿಗೆ ಮಾತು ಬೆಳೆದು ತೀವ್ರವಾದ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇರುವುದು. ಹಾಗಾಗಿ ಮಾತಿನಲ್ಲಿ ಸೋತು ಎದುರಾಳಿಯ ಹೃದಯವನ್ನು ಗೆಲ್ಲುವ ಚಾಕಚಕ್ಯತೆಯನ್ನು ತೋರಿ. ಶಾಂತಿಯಿಂದ ಕಾರ್ಯ ನಿರ್ವಹಿಸಿ.ನೀವು ಅಂದುಕೊಂಡಿದ್ದಕ್ಕಿಂತ ಬೇಗನೆ ನಿಮ್ಮ ಕಾರ್ಯ ಯೋಜನೆಗಳು ಮುಗಿಯುವ ಸಾಧ್ಯತೆ ಇದೆ. ಈ ಬಗ್ಗೆ ನಿಮ್ಮ ಸುತ್ತಮುತ್ತಲೂ ಪ್ರಭಾವಿ ಜನರ ಹಸ್ತಕ್ಷೇಪ ಇರುತ್ತದೆ. ಇದರಿಂದ ನಿಮಗೆ ಒಳಿತೇ ಅಗುವುದು.ಅಗತ್ಯಕ್ಕಿಂತ ಹೆಚ್ಚು ಹಣ ಖರ್ಚಾಗುವ ಸಂದರ್ಭ ಇದೆ. ದೂರದಿಂದ ನೆಂಟರು ದಿಢೀರನೆ ಮನೆಗೆ ಆಗಮಿಸುವ ಸಾಧ್ಯತೆ ಇದೆ. ಬಹುದಿನಗಳ ನಂತರ ಮನಸ್ಸಿನ ದುಃಖವನ್ನು ಪರರ ಮುಂದೆ ತೋಡಿಕೊಳ್ಳುವಿರಿ. ಇದರಿಂದ ಮನಸ್ಸು ಹಗುರ ಆಗುವುದು.9845743807
ಅದೃಷ್ಟ ಸಂಖ್ಯೆ:4
ಸಿಂಹ
ಸದ್ಯದ ಪರಿಸ್ಥಿತಿಯಲ್ಲಿ ತಣ್ಣೀರನ್ನು ಆರಿಸಿ ಕುಡಿಯುವ ಕಾಲವಾಗಿದೆ. ನೀವು ನಂಬಿದ ಜನರೇ ನಿಮ್ಮನ್ನು ತಿರಸ್ಕರಿಸುವುದರಿಂದ ನಿಮ್ಮ ಮನೋವೇಗದ ಕಾಮನೆಗಳು ಮಂದ ಪ್ರಗತಿಯಲ್ಲಿ ಸಾಗುವವು. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ನಿಮ್ಮ ಆಲೋಚನಾ ಶಕ್ತಿ, ತರ್ಕಗಳು ಅದ್ಭುತವಾಗಿವೆ. ಆದರೆ ಪ್ರತಿ ಕ್ಷ ಣಕ್ಕೊಮ್ಮೆ ಬದಲಾಗುವ ನಿಮ್ಮ ಮನಸ್ಥಿತಿಯ ಬಗ್ಗೆ ನಿಮ್ಮ ಸಂಗಾತಿಯೇ ಸರಿಯಾಗಿ ಅರ್ಥ ಮಾಡಿಕೊಳ್ಳಲಾರರು. ಆದಾಗ್ಯೂ ನಿಮ್ಮ ಯೋಜನೆಗಳು ಸ್ವೀಕಾರ್ಹವಾಗಿರುತ್ತದೆ.ಒಣ ವಾದ ವಿವಾದದಿಂದ ಜನರನ್ನು ಗೆಲ್ಲಲು ಆಗುವುದಿಲ್ಲ. ನಿಮ್ಮ ಬುದ್ಧಿಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ವ್ಯಯಿಸಿದರೆ ನೀವೊಬ್ಬ ಅದ್ಭುತ ವ್ಯಕ್ತಿ ಎನಿಸಿಕೊಳ್ಳುವಿರಿ ಮತ್ತು ಸಮಾಜದಲ್ಲಿ ಹೆಚ್ಚಿನ ಗೌರವಾದರಗಳು ಕಂಡುಬರುವವು.9845743807
ಅದೃಷ್ಟ ಸಂಖ್ಯೆ:5
ಕನ್ಯಾ
ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನಿಮ್ಮಲ್ಲಿರುವುದನ್ನು ಮತ್ತೊಬ್ಬರಿಗೆ ಹಂಚಿ ಸಂತಸ ಪಡುವಿರಿ. ಇದರಿಂದ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ಅನನ್ಯ ಭಾವದಿಂದ ನಿಮ್ಮ ಕುಲಸ್ವಾಮಿಯನ್ನು ಆರಾಧಿಸಿ. ನಿಮಗೆ ಎದುರಾಗಿರುವ ಅಪವಾದಗಳಿಂದ ದೂರ ಬರುವಿರಿ. ಸಂಕಲ್ಪಿತ ಕಾರ್ಯಗಳಿಂದ ಯಶಸ್ಸು ದೊರೆಯುವುದು. ಬಂಧುಬಾಂಧವರು ನಿಮ್ಮ ನಡೆ ನುಡಿಯನ್ನು ಕೊಂಡಾಡುವರು.ನಿಮ್ಮ ಪ್ರಗತಿಯನ್ನು ಸಹಿಸದ ಕೆಲವರು ನಿಮ್ಮ ವಿರುದ್ಧ ಪಿತೂರಿ ನಡೆಸುವ ಸಂದರ್ಭವಿರುತ್ತದೆ. ಆದರೆ ದೈವಬಲ ಇರುವುದರಿಂದ ನೀವು ಯಾವುದಕ್ಕೂ ಅಂಜುವ ಕಾರಣವಿಲ್ಲ. ಜಯವಿರುವವರೆಗೂ ಭಯದ ಸುಳಿವಿಲ್ಲ. ನಿಶ್ಚಿಂತರಾಗಿರಿ.9845743807
ಅದೃಷ್ಟ ಸಂಖ್ಯೆ:6
ತುಲಾ
ಬೆಲೆಬಾಳುವ ವಸ್ತುಗಳನ್ನು ಕೊಳ್ಳುವ ಒತ್ತಡ ನಿಮ್ಮೆದುರಿಗೆ ಬರುವ ಸಾಧ್ಯತೆ ಇದೆ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಗಮನಿಸಿ ವ್ಯವಹಾರ ಮಾಡುವುದು ಒಳ್ಳೆಯದು. ಆಕಾಶಕ್ಕೆ ಏಣಿ ಹಾಕುವ ಸಾಹಸಕ್ಕೆ ಕೈಹಾಕದಿರಿ.ನಂಬಿಕೆಗೆ ದ್ರೋಹ ಎದುರಾಗುವ ಸಂದರ್ಭವಿದ್ದು ಆತ್ಮೀಯರೊಡನೆ ವ್ಯವಹಾರಲ್ಲಿ ಎಚ್ಚರದಿಂದ ಇರಿ. ಪ್ರಯಾಣ ಕಾಲದಲ್ಲಿ ಸಹ ಜಾಗ್ರತೆ ವಹಿಸಿ. ಪ್ರಮುಖವಾದ ಹಣಕಾಸಿನ ವ್ಯವಹಾರವನ್ನು ಮುಂದೂಡುವುದು ಒಳಿತು.ಮುಂದೆ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಇಡುವುದು ಶ್ರೇಯಸ್ಸಲ್ಲ. ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಒಂದಿರಲಿ ಎಂದು ದೃಢ ಮನಸ್ಸಿನಿಂದ ಕಾರ್ಯ ಪ್ರವೃತ್ತರಾಗಿ. ಎಲ್ಲವೂ ಒಳಿತಾಗುವುದು.9845743807
ಅದೃಷ್ಟ ಸಂಖ್ಯೆ:4
ವೃಶ್ಚಿಕ
ಒಂದು ವಿಷಯದ ಬಗ್ಗೆ ಪೂರ್ಣವಾಗಿ ತಿಳಿದುಕೊಳ್ಳದೆ ಕಾರ್ಯ ಪ್ರವೃತ್ತರಾದರೆ ಕೇವಲ ಗುಡ್ಡಕ್ಕೆ ಮಣ್ಣು ಹೊತ್ತಂತೆ ವ್ಯರ್ಥವಾಗುವುದು. ಹಾಗಾಗಿ ಒಂದು ಕೆಲಸದ ಪೂರ್ವಾಪರ ವಿಚಾರಗಳನ್ನು ತಿಳಿದು ಕಾರ್ಯಪ್ರವೃತ್ತರಾಗಿ.ಮೇಲೆ ನಯವಾದ ಮಾತು. ಒಳಗೆ ಅಸೂಯೆ ಪಡುವ ಜನ ಸಿಗುತ್ತಾರೆ. ಸಮಾಜದಲ್ಲಿ ಎರಡು ತರಹದ ಜನ ಇದ್ದೇ ಇರುತ್ತಾರೆ. ನಾವು ಅವರನ್ನು ಬದಲಿಸಲು ಸಾಧ್ಯವಿಲ್ಲ. ನಾವೇ ಬದಲಾಗಬೇಕು. ಹಾಗಾಗಿ ಈ ನಿಟ್ಟಿನ ಲ್ಲಿ ಚಿಂತಿಸಿ.
ಹಲ್ಲಿದ್ದಾಗ ಕಡಲೆಯಿಲ್ಲ. ಕಡಲೆ ಇದ್ದಾಗ ಹಲ್ಲು ಇಲ್ಲ ಎಂಬ ಮಾತಿನಂತೆ ಭಗವಂತ ಸಕಲ ಸವಲತ್ತನ್ನು ನೀಡಿದರೂ ಅನುಭವಿಸುವ ಯೋಗವಿಲ್ಲದಂತೆ ಆಗುವುದು. ಅದಕ್ಕಾಗಿ ಭಗವಂತನನ್ನೇ ಮೊರೆ ಹೋಗಿ. ಒಳಿತಾಗುವುದು.9845743807
ಅದೃಷ್ಟ ಸಂಖ್ಯೆ:6
ಧನುಸ್ಸು
ಬೇರೆಯವರ ಒತ್ತಡಕ್ಕೆ ಮಣಿದು ಕಾರ್ಯಕ್ರಮವನ್ನು ಒಪ್ಪಿಕೊಳ್ಳುವುದು ಸೂಕ್ತವಲ್ಲ. ಕೈಲಾಗದ ಕೆಲಸಗಳನ್ನು ಹಮ್ಮಿಕೊಳ್ಳುವುದು ಬೇಡ. ಆ ಕಾರ್ಯವನ್ನು ಜಾಣ್ಮೆಯಿಂದ ಮುಂದೆ ಹಾಕಿ. ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಮಂದ ಪ್ರಗತಿ ಕಂಡುಬರುವುದು. ಹಾಗಂತ ಈ ವಿಚಾರದಲ್ಲಿ ಅವಸರ ತೋರಿ ಬೇರೆ ದಾರಿಯನ್ನು ಹುಡುಕಲು ಹೊರಟರೆ ತೊಂದರೆ ಎದುರಾಗುವುದು. ಸಂಗಾತಿಯ ವಿಚಾರಧಾರೆಗಳಿಗೆ ಬೆಂಬಲ ಸೂಚಿಸಿ.ಪರಿವರ್ತನೆ ಜಗದ ನಿಯಮ. ಅಂತೆಯೇ ಸದ್ಯದ ಪರಿಸ್ಥಿತಿಯಲ್ಲಿ ಬದಲಾಗುತ್ತಿರುವ ಕಾಲಘಟ್ಟವನ್ನು ಸ್ವೀಕರಿಸುವುದರಿಂದ ಮುಂದೆ ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.9845743807
ಅದೃಷ್ಟ ಸಂಖ್ಯೆ:9
ಮಕರ
ನಿಮ್ಮ ಆಚಾರ ವಿಚಾರಗಳೇ ಭಿನ್ನತೆಯಿಂದ ಕೂಡಿರುವುದು. ಊರಿನವರದು ಒಂದು ದಾರಿಯಾದರೇ ನಿಮ್ಮದೇ ಒಂದು ದಾರಿ. ಹಾಗಾಗಿ ಕೆಲವು ವಿಚಾರಗಳಲ್ಲಿ ಸಾಮ್ಯತೆ ಸಾಧಿಸುವುದು ಕಷ್ಟವಾಗುತ್ತದೆ. ಈ ಬಗ್ಗೆ ಎರಡು ಬಾರಿ ಚಿಂತಿಸಿ. ಕಾರ್ಯ ಪ್ರವೃತ್ತರಾಗಿ.ಅಧಿಕ ತಿರುಗಾಟದಿಂದ ಆರೋಗ್ಯದ ಕಡೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಂಗಾತಿಯ ಸಕಾಲಿಕ ಆರೈಕೆಯಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಪ್ರಯಾಣದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.ಮನೆಗೆ ಸಂಬಂಧಪಟ್ಟ ಕಾಗದ ಪತ್ರಗಳು ದೊರೆಯುವ ಸಾಧ್ಯತೆ ಇದೆ. ಆಸ್ತಿ ವಿಷಯಕ್ಕೆ ಸಂಬಂಧಪಟ್ಟಂತೆ ಹೊಸ ಒಡಂಬಡಿಕೆ ಉಂಟಾಗುವುದು. ಇದರಿಂದ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು.9845743807
ಅದೃಷ್ಟ ಸಂಖ್ಯೆ:4
ಕುಂಭ
ಬಿಡುವಿಲ್ಲದ ಕೆಲಸಗಳ ಮಧ್ಯೆಯೂ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗುವುದು. ಮಗನ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಮಡದಿಯ ಸಲಹೆಗಳು ನಿಮ್ಮ ಯಶಸ್ಸಿಗೆ ಕಾರಣವಾಗುವುದು.ಮಕ್ಕಳ ವಿಚಾರವಾಗಿ ಚಿಂತಿತರಾಗಿರುವ ನಿಮಗೆ ದೈವಕೃಪೆಯಿಂದ ಅವರಿಗೆ ಉತ್ತಮ ಕಾಲೇಜಿನಲ್ಲಿ ಸೀಟು ದೊರೆಯುವ ಮೂಲಕ ಮನಸ್ಸಿಗೆ ನೆಮ್ಮದಿ ಉಂಟಾಗುವುದು. ಸ್ನೇಹಿತರಿಂದ ಹಣಕಾಸಿನ ನೆರವು ದೊರೆಯುವುದು.ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗಾಗಬಹುದು. ಈ ಬಗ್ಗೆ ಅನ್ಯಮಾರ್ಗವನ್ನು ಅನುಸರಿಸಬೇಕಾಗುವುದು. ಅನ್ಯರಿಗೆ ಸಲುಗೆ ಕೊಡಬೇಡಿ ಮತ್ತು ಅಂತರಂಗದ ವಿಷಯಗಳನ್ನು ಬಹಿರಂಗಗೊಳಿಸದಿರಿ.9845743807
ಅದೃಷ್ಟ ಸಂಖ್ಯೆ:2
ಮೀನ
ನಿಮ್ಮ ಕಾರ್ಯಯೋಜನೆಗಳನ್ನು ಸಾಧಿಸಿ ಸಫಲತೆಗೆ ಮುಂದಾಗಲಿದ್ದೀರಿ. ಆದರೆ ಆತುರ ಬೇಡ. ಕೆಲವರಿಗೆ ತಾವು ಇಚ್ಛಿಸಿದ ಸ್ಥಳಕ್ಕೆ ವರ್ಗಾವಣೆ ಆಗುವ ಸಂಭವವಿರುತ್ತದೆ. ಅರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ವಿವಾಹ ಅಪೇಕ್ಷಿಗಳು ಮಂಗಳಮಯ ವಾರ್ತೆ ಕೇಳುವರು. ಮನೆಯಲ್ಲಿನ ಸಂಭ್ರಮದ ವಾತಾವರಣವು ಮನಸ್ಸಿಗೆ ಮುದ ನೀಡುವುದು. ಬಂಧುಗಳು ನಿಮ್ಮ ಗುಣಗಾನ ಮಾಡುವರು.ಇಂದು ಹೆಚ್ಚು ಲವಲವಿಕೆಯಿಂದ ಇರಬಹುದು. ಸದ್ಯದ ಗ್ರಹಸ್ಥಿತಿಗಳು ನಿಮ್ಮ ಬೆಂಗಾವಲಿಗೆ ಇರುವುದರಿಂದ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು.9845743807
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp