Just In
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 3 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 7 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
26-11-2018: ಸೋಮವಾರದ ದಿನ ಭವಿಷ್ಯ
ಸೋಮವಾರ ಯಾರು ವಿಧಿ-ವಿಧಾನದಿಂದ ಶಿವನ ಪೂಜೆ ಮಾಡುತ್ತಾರೋ ಅವರಿಗೆ ವಿಶೇಷ ಫಲ ಲಭಿಸುತ್ತದೆ. ವೃತದಿಂದಾಗಿ ಪ್ರತಿಯೊಂದು ದುಃಖ, ಕಷ್ಟ, ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಸುಖಿ, ನಿರೋಗಿ ಹಾಗೂ ಸಮೃದ್ಧಿಯ ಜೀವನ ಸಾಗಿಸ್ತಾನೆ. ಈ ದಿನ ಶಿವನ ಆರಾಧನೆ ಮಾಡುವುದರಿಂದ ಮಕ್ಕಳ ರೋಗ ಗುಣಮುಖವಾಗುತ್ತದೆ. ದುರ್ಘಟನೆ ಹಾಗೂ ಅಕಾಲ ಮೃತ್ಯವಿನಿಂದ ಮುಕ್ತಿ ಸಿಗುತ್ತದೆ . ವೈವಾಹಿಕ ಜೀವನದಲ್ಲಿ ಕಂಡು ಬರುವ ಭಿನ್ನಾಭಿಪ್ರಾಯ ದೂರವಾಗುತ್ತದೆ. ಪರಮೇಶ್ವರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ....
ಮೇಷ
ನಿಮ್ಮ ಮನಸ್ಸಿಗೆ ಆನಂದವಾದ ಸಂಗತಿ ದೊರೆಯುವುದು. ನಿಮ್ಮ ವ್ಯವಹಾರಗಳಿಗೆ ಬೆಂಬಲ ನೀಡುವ ಪಕ್ಕಾ ವ್ಯವಹಾರಸ್ಥರೇ ನಿಮಗೆ ದೊರೆಯುವರು. ಹಾಗಾಗಿ ಸ್ವಲ್ಪ ನೆಮ್ಮದಿಯ ವಾತಾವರಣ ಮೂಡುವುದು. ನೆರೆಹೊರೆಯವರ ಪ್ರಶಂಸೆಗೆ ಪಾತ್ರರಾಗುವಿರಿ. ಜನಪ್ರಿಯತೆಯಿಂದ ಮನಸ್ಸು ಪ್ರಫುಲ್ಲವಾಗುವುದು. ಮಕ್ಕಳ ಮದುವೆ ವಿಚಾರದಲ್ಲಿ ಒಂದು ನಿರ್ಣಾಯಕ ಹಂತ ತಲುಪಲಿದ್ದೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಆರ್ಥಿಕ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ. ಹಾಗಾಗಿ ದೀರ್ಘಕಾಲಿನ ಹಣ ಹೂಡಿಕೆಗೆ ಸಕಾಲವಲ್ಲ. ವಿದೇಶಿ ಬಂಡವಾಳ ತೊಡಗಿಸಿ ಮಾಡುವ ವಹಿವಾಟಿಗೆ ಅವಸರ ಬೇಡ.ಅದೃಷ್ಟ ಸಂಖ್ಯೆ:2
ವೃಷಭ
ಹತ್ತಿರದವರಿಂದಲೇ ಮೋಸ ಹೋಗಿ ಮನಸ್ಸಿಗೆ ಆಘಾತವಾಗುವ ಸಂಭವವಿದೆ. ಈ ಬಗ್ಗೆ ಎಚ್ಚರದಿಂದ ಇರಿ. ಯಾರನ್ನೇ ಆಗಲಿ ದಿಢೀರನೇ ನಂಬದಿರಿ. ಗುರುವಿನ ಕೃಪೆಯಿಂದ ಹೆಚ್ಚಿನ ಹಾನಿ ಆಗುವುದಿಲ್ಲ. ವಂಶಪಾರಂಪರ್ಯದಿಂದ ಬಂದ ವೃತ್ತಿಯಲ್ಲಿ ಗೌರವ ಕೀರ್ತಿ ಪಡೆಯುವಿರಿ. ಸಾಮಾಜಿಕ ಮತ್ತು ರಾಜಕೀಯವಾಗಿ ಗುರುತಿಸಿಕೊಳ್ಳುವಿರಿ. ಗುರುವಿನ ಸ್ತೋತ್ರ ಪಠಿಸಿ. ಗುರು ಹಿರಿಯರ ಅಶೀರ್ವಾದ ಪಡೆಯಿರಿ.ನಿಮ್ಮನ್ನು ಬೆಸ್ತು ಬೀಳಿಸುವ ಸಾಧ್ಯತೆಗಳು ಹೇರಳವಾಗಿವೆ. ಹಾಗಾಗಿ ಅನಗತ್ಯ ವಿಷಯಗಳ ಬಗ್ಗೆ ಹೆಚ್ಚು ಕುತೂಹಲ ಬೆಳಸಿಕೊಳ್ಳದಿರಿ. ದಿನನಿತ್ಯದ ಕಾಯಕದಲ್ಲಿ ತಲ್ಲೀನರಾದಲ್ಲಿ ಹೆಚ್ಚಿನ ತೊಂದರೆ ಇಲ್ಲ.ಅದೃಷ್ಟ ಸಂಖ್ಯೆ:1
ಮಿಥುನ
ಬಂಧುಗಳ ಜತೆ ಈ ಹಿಂದೆ ಮಾಡಿದ ಹಣಕಾಸಿನ ವ್ಯವಹಾರದಿಂದಾಗಿ ಮನಸ್ತಾಪ ಬರುವ ಸಾಧ್ಯತೆ ಇದೆ. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಕುಳಿತು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಿ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ಎಲ್ಲಾ ಕೆಲಸಗಳು ಕೊನೆಯ ಹಂತದವರೆಗೂ ಬಂದು ಕೊನೆ ಹಂತದಲ್ಲಿ ನಿರಾಶೆಯನ್ನುಂಟು ಮಾಡುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ನಿಮ್ಮ ಪರವಾಗಿಲ್ಲ ಎನ್ನುವುದನ್ನು ಸೂಚಿಸುತ್ತದೆ.ಜಾಣತನದಿಂದ ವರ್ತಿಸಿ, ಮೋಸ ಹೋಗುವ ಜನರು ಇರುವಾಗ ಮೋಸ ಮಾಡುವ ಜನರು ಬಹಳಷ್ಟು ಮಂದಿ ಇರುತ್ತಾರೆ. ಹಾಗಾಗಿ ನೇರಾನೇರ ವ್ಯವಹಾರದಲ್ಲಿ ಪಾಲ್ಗೊಳ್ಳಿ. ದಿಢೀರನೆ ಶ್ರೀಮಂತರಾಗಬೇಕೆಂಬ ಬಯಕೆಯಿಂದ ಅನ್ಯರ ಬಳಿ ಹಣ ಹೂಡದಿರಿ.ಅದೃಷ್ಟ ಸಂಖ್ಯೆ:2
ಕಟಕ
ಶಿಸ್ತುಳ್ಳ ಮನುಜಂಗೆ ಶಿವನೂ ತಲೆಬಾಗುತ್ತಾನೆ. ಅಂತೆಯೇ ಈಗಿನ ಗ್ರಹಗತಿಗಳು ನಿಮ್ಮ ಜೀವನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳುವಂತೆ ಪ್ರೇರೇಪಿಸುತ್ತವೆ. ಹಾಗಾಗಿ ನವಗ್ರಹಗಳಿಗೆ ಶರಣಾಗಿ ಕಾರ್ಯ ಪ್ರವೃತ್ತರಾಗಿ.ಯಾಕೋ ನಾನು ಬಯಸಿದ್ದು ಒಂದೂ ಆಗುತ್ತಿಲ್ಲ ಎನ್ನುವ ಭಾವ ಮನೆ ಮಾಡಿದಂತಿದೆ. ಸದ್ಯದ ಪರಿಸ್ಥಿತಿಯಲ್ಲಿ ಗುರುವು ತನ್ನ ಬೆಂಬಲ ಹಿಂಪಡೆದಿರುವುದರಿಂದ ಹೀಗಾಗುವುದು ಸಹಜ. ಶರಣಾಗತವತ್ಸಲ ಭಗವಂತನ ಮೊರೆಹೋಗಿ.ಸುತ್ತಿ ಬಳಸಿ ಹೋಗುವ ದಾರಿಯನ್ನು ಕೈಬಿಡಿ. ತಾಳ್ಮೆಯಿಂದ ಇದ್ದರೆ ನೇರ ದಾರಿ ಸಿಗಲಿದೆ. ಇದರಿಂದ ಮನಸ್ಸಿಗೂ ಮುದ ನೀಡುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.ಅದೃಷ್ಟ ಸಂಖ್ಯೆ:9
ಸಿಂಹ
ಪದೇ ಪದೆ ಸೋಲುಗಳು ಎಂಬ ನಿರಾಶಾವಾದದಿಂದ ದಿನ ಆರಂಭಿಸದಿರಿ. ಎಲ್ಲದಕ್ಕೂ ಕಾಲನಾಮಕ ಪರಮಾತ್ಮ ಕಾರಣನಾದ್ದರಿಂದ ಆತನನ್ನು ಅನನ್ಯ ಭಕ್ತಿಯಿಂದ ಭಜಿಸಿ. ಒಳಿತಾಗುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಯಶಸ್ಸಿಗೆ ಅಡ್ಡಮಾರ್ಗ ಎಂಬುದಿಲ್ಲ. ನೇರವಾದ ಮಾರ್ಗದಿಂದ ಯಶಸ್ಸು ಹೊಂದುವಿರಿ. ಇದರಿಂದ ನಿಮ್ಮ ಪ್ರತಿಭೆಗೆ ಹೆಚ್ಚಿನ ಪ್ರಶಂಸೆಗಳು ಕೇಳಿ ಬರುವವು. ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎಂಬುದು ಜನಜನಿತವಾಗಿದೆ. ಹಾಗಾಗಿ ನೀವು ನಿಮ್ಮ ವಿಚಾರಗಳನ್ನು ಪರರ ಮುಂದೆ ಹೇಳುವಾಗ ಎರಡು ಬಾರಿ ಚಿಂತಿಸಿ ವಿಚಾರಗಳನ್ನು ಮಂಡಿಸಿ. ಇಲ್ಲದೆ ಇದ್ದಲ್ಲಿ ವೃಥಾ ಅಪವಾದಗಳನ್ನು ಮೈಮೇಲೆ ಎಳೆದು ಕೊಳ್ಳಬೇಕಾಗುತ್ತದೆ. ಅದೃಷ್ಟ ಸಂಖ್ಯೆ:8
ಕನ್ಯಾ
ಐಷಾರಾಮಿ ಜೀವನ ಸಾಗಿಸುವ ಕನಸಿರಲಿ. ಆದರೆ ಅದಕ್ಕೆ ಶ್ರಮದ ಬೆವರಿನ ಹನಿ ಹರಿಸಿದಾಗ ಮಾತ್ರ ಸುಖ ದೊರೆಯುವುದು. ಒಂದು ದೃಢ ನಿರ್ಧಾರದಿಂದ ಕಾರ್ಯ ಪ್ರವೃತ್ತರಾಗಿ. ಒಳಿತಾಗುವುದು.ನೀವು ಜೀವನದ ಮಧುರವಾದ ಕ್ಷ ಣಗಳನ್ನು ಕಾಣುವಿರಿ. ವೈಯಕ್ತಿಕ ಹಾಗೂ ಕೌಟುಂಬಿಕವಾಗಿ ಉನ್ನತ ಸ್ಥಾನಕ್ಕೆ ಏರಲು ನಿಮಗೆ ವಿಫುಲ ಅವಕಾಶಗಳು ದೊರೆಯುತ್ತವೆ. ತಾಯಿ ವರ್ಗದವರ ಆರೋಗ್ಯದ ಕಡೆ ಗಮನ ನೀಡಿ.ಹೊಸ ಉತ್ಸಾಹದೊಂದಿಗೆ ಕೆಲಸ ಆರಂಭ ಮಾಡುವಿರಿ. ಆದರೆ ಹಿಂದಿನ ಅನುಭವಗಳ ಸಾಧಕ ಬಾಧಕಗಳನ್ನು ಅರಿತು ಮುಂದುವರೆಯುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ:9
ತುಲಾ
ಸಾಫಲ್ಯತೆಗಳು ಒಂದೇ ಏಟಿಗೆ ಸಿಗಬೇಕೆಂಬ ನಿಮ್ಮ ಯೋಜನೆ ಸಾಧುವಾದರೂ ಅದಕ್ಕೆ ಪೂರಕವಾದ ಕ್ರಿಯಾಶೀಲತೆ ರೂಢಿಸಿಕೊಳ್ಳಿ. ಮಕ್ಕಳು ಮತ್ತು ಮಡದಿ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.ಕಷ್ಟದಲ್ಲಿರುವವರಿಗೆ ಪುಕ್ಕಟೆ ಸಲಹೆ ಕೊಡುವವರು ಅನೇಕ ಮಂದಿ. ಆದರೆ ನಿಮ್ಮ ಕಷ್ಟಕ್ಕೆ ಮರುಗಿ ಸಹಕಾರ ನೀಡುವ ಜನ ವಿರಳ. ಆದರೆ ದೈವದ ಅನುಗ್ರಹದಿಂದ ನಿಮಗೆ ಒಳಿತಾಗುವುದು. ಕಷ್ಟ ಬಂದಾಗ ವೆಂಕಟರಮಣನನ್ನು ಧ್ಯಾನಿಸುವುದು ಸಹಜ. ಅಂತೆಯೆ ಭಗವಂತನು ಸಹ ತನ್ನ ಭಕ್ತರನ್ನು ಕೈಬಿಡುವುದಿಲ್ಲ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. ವಿಷ್ಣು ಮಂದಿರಕ್ಕೆ ತುಳಸಿ ಮಾಲೆ ಅರ್ಪಿಸಿ.ಅದೃಷ್ಟ ಸಂಖ್ಯೆ:4
ವೃಶ್ಚಿಕ
ಹೋರಾಟದಲ್ಲಿ ಗುರುತಿಸಿಕೊಳ್ಳುವ ಜವಾಬ್ದಾರಿ ಬರಬಹುದು. ಸಾಧಕ ಬಾಧಕಗಳನ್ನು ಚಿಂತಿಸಿ ಜವಾಬ್ದಾರಿಯನ್ನು ವಹಿಸಿಕೊಳ್ಳಿ ಮತ್ತು ವಹಿಸಿಕೊಂಡ ಕೆಲಸದಲ್ಲಿ ಯಶಸ್ಸು ಹೊಂದುವಿರಿ. ಅತಿಥಿಗಳ ಆದರಾತಿಥ್ಯದಲ್ಲಿ ದಿನದ ಬಹುಪಾಲು ಕಳೆಯುವ ಸಾಧ್ಯತೆಗಳು ಇರುತ್ತದೆ. ಅದರ ಸಂಗಡ ನಿಮ್ಮ ವೈಯಕ್ತಿಕ ಆಗುಹೋಗುಗಳ ಕಡೆಯೂ ಲಕ್ಷ್ಯ ಕೊಡುವುದು ಒಳ್ಳೆಯದು. ಖರ್ಚು ಹೆಚ್ಚಾಗುವ ಸಂಭವವಿದೆ.ಹೊಸ ಹೊಸ ಸಾಹಸಗಳಿಗೆ ಕೈಹಾಕುವುದರಿಂದ ಅದರಲ್ಲಿ ಯಶಸ್ಸನ್ನು ಕಾಣುವಿರಿ. ಬಂಧು ಬಾಂಧವರು ನಿಮ್ಮ ಸಹಕಾರಕ್ಕೆ ನಿಲ್ಲುವರು. ವಿವಿಧ ಮೂಲಗಳಿಂದ ಹಣಕಾಸು ಬರುವುದರಿಂದ ಒಳಿತಾಗುವುದು.
ಅದೃಷ್ಟ ಸಂಖ್ಯೆ:6
ಧನುಸ್ಸು
ಮನಸ್ಸಿನಲ್ಲಿ ಭಯಗೊಂಡು ಜ್ವರಗೊಂಡು ಸತ್ತ ಎಂಬ ವ್ಯಾಕರಣ ಸೂತ್ರ ನೆನಪಿರಲಿ. ಜೀವನದಲ್ಲಿ ಭಯಪಟ್ಟರೆ ಹೆದರಿಸುವವರು ಜಾಸ್ತಿ ಜನ ಸಿಗುತ್ತಾರೆ. ನೀವು ಘರ್ಜಿಸಿದರೆ ಅವರು ಸುಮ್ಮನಾಗುವರು.ಉಪಾಯದಿಂದ ಅಪಾಯ ತಪ್ಪಿಸಿಕೊಳ್ಳಿ ಎಂಬ ಮಾತು ಚಾಲ್ತಿಯಲ್ಲಿದೆ. ಅಂತೆಯೇ ಭಗವಂತ ನೀಡಿದ ಬುದ್ಧಿ ಚಾತುರ್ಯದಿಂದ ಅಪಾಯ ಸನ್ನಿವೇಶವನ್ನು ಲೀಲಾಜಾಲವಾಗಿ ಎದುರಿಸುವಿರಿ. ಆಹಾರ ವಿಹಾರದ ವಿಚಾರದಲ್ಲಿ ಕ್ರಮತೆ ರೂಢಿಸಿಕೊಳ್ಳಿ. ಉದರಶೂಲೆಗೆ ಸಂಬಂಧಪಟ್ಟಂತೆ ತೊಂದರೆ ಎದುರಿಸಬೇಕಾಗುವುದು. ಮಾತಾ ದುರ್ಗಾದೇವಿ ಮಂತ್ರ ಪಠಿಸಿ.
ಅದೃಷ್ಟ ಸಂಖ್ಯೆ:2
ಮಕರ
ನಿಮ್ಮ ಪರಿಸರದ ಜನರು ನಿಮ್ಮ ಬುದ್ಧಿ ಶಕ್ತಿಯನ್ನು ಕೊಂಡಾಡುವರು. ಮಕ್ಕಳು ನಿಮಗೆ ಸಂತಸ ನೀಡುವ ಸಾಧ್ಯತೆ ಇದ್ದು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಸ್ಥಿತಿ ದಿನದಿನಕ್ಕೆ ಬಿಗಡಾಯಿಸುತ್ತಿರುವುದರಿಂದ ಕೆಲವು ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಮನೆಯಲ್ಲಿ ಸಂಗಾತಿಯ ಮಾತುಗಳಿಗೂ ಬೆಲೆ ಕೊಟ್ಟರೆ ಒಳ್ಳೆಯದು.ಪರಮಾಪ್ತರೊಬ್ಬರಿಂದ ಆಶ್ಚರ್ಯಕರವಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಇದರಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ
ಅದೃಷ್ಟ ಸಂಖ್ಯೆ:4
ಕುಂಭ
ಬದುಕಿನ ಎಲ್ಲಾ ಹಾದಿಗಳು ಮುಚ್ಚಿಹೋಗಿವೆ ಎಂಬ ತಲ್ಲಣ ಬೇಡ. ಅದಷ್ಟು ಒಂಟಿಯಾಗಿ ಇರದೆ ನಿಮ್ಮನ್ನು ಇಷ್ಟಪಡುವ ಸ್ನೇಹಿತರೊಂದಿಗೆ ಮಾತನಾಡಿ. ಇದರಿಂದ ನಿಮ್ಮಲ್ಲಿ ನವ ಚೈತನ್ಯ ಮೂಡುತ್ತದೆ.ಕೆಲಸದ ಒತ್ತಡದ ನಡುವೆ ಊಟದ ಕಡೆಗೂ ಗಮನ ಹರಿಸುವುದು ಒಳ್ಳೆಯದು. ಎಲ್ಲರೂ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ. ಹಾಗಂತ ದೇಹಕ್ಕೆ ಶ್ರಮ ಮಾಡಿಕೊಂಡು ದುಡಿಯುವುದು ಒಳ್ಳೆಯದಲ್ಲ.ಎಲ್ಲಾ ಸಂದರ್ಭದಲ್ಲೂ ಕೇವಲ ಮಾತಿನಿಂದ ಕೆಲಸವಾಗಲಾರದು. ಶ್ರಮ ವಹಿಸಿ ದುಡಿದಾಗಲಷ್ಟೆ ಪ್ರತಿಫಲ ಸಿಗುತ್ತದೆ. ನಿಮ್ಮ ಪರವಾಗಿ ಇತರರು ಕೆಲಸ ಮಾಡುತ್ತಾರೆಂಬ ಆಶಾವಾದ ಹುಸಿಯಾಗಲಿದೆ.ಅದೃಷ್ಟ ಸಂಖ್ಯೆ:2
ಮೀನ
ಕಠಿಣ ಪರಿಶ್ರಮ ಬಿಟ್ಟರೆ ಅನ್ಯ ಮಾರ್ಗವಿಲ್ಲ. ಎಲ್ಲವೂ ನೀವು ಕೂತಲ್ಲಿಯೇ ದೊರೆಯಬೇಕೆಂದರೆ ಸಿಗಲಾರದು. ಹಾಗಾಗಿ ಹೊರಗೆ ತಿರುಗಾಡಿ ಜ್ಞಾನಾರ್ಜನೆ ಮಾಡಿಕೊಳ್ಳಿ. ಅಂತೆಯೇ ಧನಾರ್ಜನೆಯನ್ನೂ ಮಾಡಿಕೊಳ್ಳಿ.ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎಂಬಂತೆ ಈಗ ನಿಮಗೆ ಒಳ್ಳೆಯ ಕಾಲವಿದೆ. ಉದಾಸೀನ ಮಾಡದೆ ಬಂದ ಉತ್ತಮ ಅವಕಾಶವನ್ನು ಉಪಯೋಗಿಸಿಕೊಂಡು ಮುಂದುವರೆಯಿರಿ. ನಿಮ್ಮ ಸಲಹೆ ಸೂಚನೆಗಳು ನಿಮ್ಮ ಬಾಸ್ಗೆ ಇಷ್ಟವಾಗುವ ಕಾರಣ ನಿಮಗೆ ಹೆಚ್ಚು ಸಂತೋಷವಾಗುವುದು. ಇದರಿಂದ ನಿಮ್ಮ ಹೆಸರು ವಿದೇಶದಲ್ಲಿ ಪ್ರಕಟವಾಗುವ ಪುಸ್ತಕದಲ್ಲಿ ಪ್ರಕಟಗೊಳ್ಳುವುದು.
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp