Just In
- 1 hr ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 13 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
29-11-2018: ಗುರುವಾರದ ದಿನ ಭವಿಷ್ಯ
ಗುರುವಾರದ ದಿನ ಶಿರ್ಡಿ ಸಾಯಿ ಬಾಬಾ ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ,ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ್ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು.ಸಾಯಿ ಬಾಬಾ ಅನುಯಾಯಿಗಳು ಹಾಗು ಭಕ್ತರು ಬಾಬಾರ ಹಲವು ಪವಾಡಗಳನ್ನು ನೋಡಿದ್ದಾಗಿ ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.
ಒಂದೇ ಸಮಯದಲ್ಲಿ ಎರಡು ಸ್ಥಳದಲ್ಲಿರುವುದು, ನಿರಾಧಾರವಾಗಿ ಗಾಳಿಯಲ್ಲಿ ತೇಲುವುದು, ಮುಖ ನೋಡಿದ ತಕ್ಷಣ ಮನಸ್ಸಿನಲ್ಲಿರುವುದನ್ನು ಹೇಳುವುದು, ದೇಹದಿಂದ ಆತ್ಮದ ಬೇರ್ಪಡಿಸುವಿಕೆ, ಯಮುನಾ ನದಿಯ ಸೃಷ್ಟಿ, ಸಮಾಧಿ ಸ್ಥಿತಿಗೆ ತಲುಪುವುದು, ರೋಗಿಗಳನ್ನು ಕ್ಷಣಾರ್ಧದಲ್ಲಿ ಗುಣಮುಕ್ತರನ್ನಾಗಿ ಮಾಡುವುದು, ಕರುಳು ಮತ್ತಿತರ ಹೊಟ್ಟೆಯ ಭಾಗಗಳನ್ನು ಹೊಟ್ಟೆಯಿಂದ ತೆಗೆದು ಮತ್ತೆ ಹಾಗೆ ಕೂಡಿಸುವುದು,ಬೀಳುತ್ತಿದ್ದ ಮಸೀದಿಯನ್ನು ನೋಟದಿಂದಲೇ ತಡೆದಿದ್ದು, ತಮ್ಮ ಭಕ್ತರಿಗೆ ಪವಾಡ ಸದೃಶವಾಗಿ ಸಹಾಯ ಮಾಡುತ್ತಿದ್ದ ಎಷ್ಟೋ ಉದಾಹರಣೆಗಳು ಇವೆ.ಸಾಯಿ ಬಾಬಾನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807.
ಮೇಷ
ಎಲ್ಲಾ ರೀತಿ ಸವಾಲುಗಳನ್ನು ಎದುರಿಸುತ್ತಲೇ ಬಂದಿರುವ ನಿಮಗೆ ಶುಭ ದಿನ. ನಿಮಗೆ ಮುದ ನೀಡುವ ಒಂದು ವಾರ್ತೆ ನಿಮ್ಮನ್ನು ಉತ್ಸಾಹಿತರನ್ನಾಗಿ ಮಾಡುವುದು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು.
ಆಫೀಸಿನಲ್ಲಿ ಒತ್ತಡ ತುಂಬಿರುತ್ತದೆ. ನಿಮ್ಮ ಮುಂಗೋಪವನ್ನು ನಿಯಂತ್ರಿಸಲೇಬೇಕು. ಇದರಿಂದ ಒಳ್ಳೆದಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದ್ದು ಬೆಲೆಬಾಳುವ ವಸ್ತು ಖರೀದಿ ಮಾಡುವಿರಿ.ಗಳಿಕೆಯಲ್ಲಿ ಆಧಾರವಾಗುವಂತಹ ಹೊಸ ಯೋಜನೆಗಳಿಗೆ ಸಿದ್ಧತೆ ನಡೆಸುವಿರಿ. ಇದರಿಂದ ನಿಮ್ಮ ಕ್ರಿಯಾಶೀಲತೆಗೊಂದು ಬೆಲೆ ಬರಲಿದೆ. ಬಂಧು ಬಾಂಧವರು ನಿಮಗೆ ನೆರವು ನೀಡುವರು. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟ ಸಂಖ್ಯೆ:2
ವೃಷಭ
ನಿಮ್ಮದೇ ಆದ ವಿಧಾನವನ್ನು ಗುರುತಿಸಿಕೊಳ್ಳಿ. ಈಡೇರಬೇಕಾದ ಹಲವಾರು ವಿಚಾರಗಳು ಬಗೆಹರಿಯುವವು. ಆರೋಗ್ಯದ ಕಡೆ ತುಸು ಗಮನ ಕೊಡುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಲ್ಪ ಹಿನ್ನಡೆ ಉಂಟಾಗುವುದು.ಜೀವನದಲ್ಲಿ ಯಾರೂ ಕೆಲಸಕ್ಕೆ ಬಾರದವರಲ್ಲ. ಭಗವಂತ ಒಬ್ಬೊಬ್ಬರಲ್ಲಿ ಒಂದು ವಿಶಿಷ್ಟ ಶಕ್ತಿ ಕೊಟ್ಟಿರುತ್ತಾನೆ. ಪರರ ವೈಫಲ್ಯವನ್ನು ಎತ್ತಿ ಆಡುವುದು ಅಷ್ಟು ಸಮಂಜಸವಲ್ಲ. ನಿಮ್ಮನ್ನು ನೀವು ಆತ್ಯೈಸಿಕೊಳ್ಳಿ.ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಆಹಾರ ವಿಹಾರದಲ್ಲಿ ಎಚ್ಚರದಿಂದ ಇರಿ. ಸೇವಿಸಿದ ಆಹಾರದಿಂದಲೇ ಅನಾರೋಗ್ಯ ಕಾಡುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ:1
ಮಿಥುನ
ಬದಲಾದ ಕಾಲಧರ್ಮಕ್ಕೆ ಹೊಂದಿಕೊಳ್ಳುವ ವಿಚಾರದಲ್ಲಿ ನೀವು ಅನೇಕ ರೀತಿಯ ಪ್ರಗತಿಯನ್ನು ಸಾಧಿಸಲಿದ್ದೀರಿ. ಪೂರ್ವಪುಣ್ಯದ ಬಲದಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಿರಿಯರ ಆಶೀರ್ವಾದವೂ ದೊರೆಯುವುದು.
ಮೆದುಳಿನಲ್ಲಿ ಅನೇಕ ವಿಚಾರಗಳು ತಾಕಲಾಟ ನಡೆಸಿವೆ. ಅವುಗಳಲ್ಲಿ ಯಾವುದನ್ನು ಮೊದಲು ಆರಂಭಿಸಬೇಕು ಎಂದು ಗೊಂದಲ ಮೂಡುವುದು. ಮಹತ್ತರ ಕೆಲಸಗಳನ್ನು ಆದ್ಯತೆಯ ಮೇಲೆ ಆರಂಭಿಸಿ ಒಳಿತಾಗುವುದು.
ಕೆಲವು ಸಂದರ್ಭದಲ್ಲಿ ಮಾತನಾಡಲೇ ಬೇಕಾಗುತ್ತದೆ. ಅಂತಹ ಸಮಯದಲ್ಲೂ ಮೌನ ವಹಿಸಿದಲ್ಲಿ ಅದರಿಂದ ವೈಯಕ್ತಿಕ ತೊಂದರೆ ಎದುರಾಗುವುದು. ಆದ್ದರಿಂದ ಸಮಯಕ್ಕೆ ಸೂಕ್ತ ಮಾತಿನ ವರಸೆ ಬಳಸುವುದು ಒಳ್ಳೆಯದು.
ಅದೃಷ್ಟ ಸಂಖ್ಯೆ:2
ಕಟಕ
ಮನೆ, ಆಫೀಸ್, ಮಿತ್ರರು, ವ್ಯಾವಹಾರಿಕ ಪ್ರಪಂಚ ಇತ್ಯಾದಿಗಳಲ್ಲಿ ಚುರುಕುತನ ತೋರುವುದರಿಂದ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಮುಗಿಯುವವು. ಇದರಿಂದ ಮನಸ್ಸಿನಲ್ಲಿ ಪ್ರಶಾಂತತೆ ಇರುವುದು.
ಮನೆಗೆದ್ದು ಮಾರುಗೆಲ್ಲು ಎಂದರು ಅನುಭಾವಿಗಳು. ಆದರೆ ಮನೆಯ ಸದಸ್ಯರುಗಳಿಗೆ ಉತ್ತರಿಸುವಷ್ಟು ಬುದ್ಧಿ ಚಾತುರ್ಯವಿಲ್ಲದಂತೆ ಆಗುವುದು. ಇದು ಕೇವಲ ತಾತ್ಕಾಲಿಕವಾಗಿದ್ದು, ಇದರಿಂದ ಬಿಡುಗಡೆ ಹೊಂದುವಿರಿ.ನಿಮ್ಮಲ್ಲಿ ಎಲ್ಲಾ ಬುದ್ಧಿವಂತಿಕೆ ಇದ್ದರೂ ಅದು ಉಪಯೋಗಕ್ಕೆ ಬರುತ್ತಿಲ್ಲ ಎಂಬುದೇ ನಿಮ್ಮ ಸಮಸ್ಯೆ. ಕತ್ತಲು ಕಳೆದು ಬೆಳಕಾಗಲೇಬೇಕು. ಸ್ವಲ್ಪ ತಾಳ್ಮೆಯಿಂದಿರಿ. ಕುಲದೇವತಾ ಸ್ಮರಣೆ ಮಾಡಿ.
ಅದೃಷ್ಟ ಸಂಖ್ಯೆ:9
ಸಿಂಹ
ಆತ್ಮವಿಶ್ವಾಸ ಬಹಳ ಉತ್ತಮವಾದುದು. ನಿಮ್ಮ ಧೈರ್ಯ ಸ್ಥೈರ್ಯಗಳು ಅಸಾಧ್ಯ ಎನಿಸಿದ್ದನ್ನು ಸಾಧಿಸಿಕೊಡಲಿವೆ. ಮಕ್ಕಳ ವಿವಾಹದ ವಿಚಾರದಲ್ಲಿ ಒಂದು ದೃಢ ನಿರ್ಧಾರ ತಳೆಯುವುದು ಒಳ್ಳೆಯದು.ಸರ್ಕಾರಿ ಸಂಬಂಧಿತ ಕೆಲಸ ಕಾರ್ಯಕ್ಕಾಗಿ ಹಲವು ಬಾರಿ ಪ್ರಯತ್ನಪಟ್ಟರೂ ಆಗದೇ ಇದ್ದ ಕೆಲಸಕ್ಕೆ ನೀವು ಉಪಯೋಗಿಸುವ ಬ್ರಹ್ಮಾಸ್ತ್ರ ಮೇಲಧಿಕಾರಿಗಳನ್ನು ಬೆಚ್ಚಿ ಬೀಳಿಸುವುದು. ಅಲ್ಲದೆ ನಿಮ್ಮ ಕಾರ್ಯಕ್ಕೆ ತುರ್ತಾಗಿ ಸ್ಪಂದಿಸುವರು.ಮನೆಯಲ್ಲಿ ಸಂಗಾತಿ ಮತ್ತು ಮಕ್ಕಳ ಜತೆಯಲ್ಲಿ ಹೊಂದಾಣಿಕೆ ಮನೋಭಾವ ಇರಲಿ. ಇಲ್ಲದೆ ಇದ್ದಲ್ಲಿ ಎತ್ತು ಏರಿಗೆ ಎಮ್ಮೆ ನೀರಿಗೆ ಎಂದು ಹಗ್ಗ ಜಗ್ಗಾಟವಾಗುವುದು. ಕೆಲವು ವಿಚಾರಗಳಲ್ಲಿ ಸೋತು ಗೆಲ್ಲುವುದು ಒಳ್ಳೆಯದು.
ಅದೃಷ್ಟ ಸಂಖ್ಯೆ:8
ಕನ್ಯಾ
ಎಲ್ಲಾ ವಿಚಾರಗಳಿಗೂ ಗೆಳೆಯರನ್ನು ಆಶ್ರಯಿಸುವುದು ಸೂಕ್ತವಲ್ಲ. ಕೆಲವು ವಿಚಾರಗಳಲ್ಲಿ ಸ್ವತಂತ್ರ ನಿರ್ಧಾರ ತಳೆಯುವುದು ಒಳ್ಳೆಯದು. ಅಂತೆಯೇ ಕುಟುಂಬ ಸದಸ್ಯರ ಸಲಹೆಗಳು ಅಷ್ಟೇ ಮಹತ್ವಪೂರ್ಣವಾಗಿರುತ್ತವೆ.
ಯಾವ ಕೆಲಸವೂ ನಿರಾಯಾಸವಾಗಿ ಆಗುವುದಿಲ್ಲ ಎಂಬ ಖಾತ್ರಿಯೂ ನಿಮಗೆ ಗೊತ್ತಾಗುವುದು. ಭಗವಂತನ ಕೃಪೆ ಹೊಂದಿದಲ್ಲಿ ಸೂಕ್ತ ವ್ಯವಸ್ಥೆ ಆಗುವುದು.ನಿಮ್ಮ ದಾರಿಯಲ್ಲಿ ನೀವು ಬಯಸಿದ ರೀತಿಯಲ್ಲಿ ನೇರವಾದ ಮಾರ್ಗ ದೊರೆಯದೆ ಹೋಗುವ ಸಾಧ್ಯತೆ ಇದೆ. ಕೂತು ಮಲಗುವವನಿಗೆ ಹೆಚ್ಚು ಪೆಟ್ಟಾಗುವುದಿಲ್ಲ. ಸಾವಧಾನದಿಂದ ಇರಿ.
ಅದೃಷ್ಟ ಸಂಖ್ಯೆ:9
ತುಲಾ
ಸರಳತನ ಇರಬೇಕು. ಆದರೆ ಬೇರೆಯವರು ನಮ್ಮ ಮೇಲೆ ಸವಾರಿ ಮಾಡುವಷ್ಟು ಇರಬಾರದು. ಕೆಲವು ವಿಷಯಗಳಲ್ಲಿ ನೀವು ಹುಂಬುತನದಿಂದ ವರ್ತಿಸುವುದನ್ನು ಬಿಟ್ಟಲ್ಲಿ ಆರ್ಥಿಕ ಸಂಕಷ್ಟದಿಂದ ಪಾರಾಗುವಿರಿ.ಮನೆಯಲ್ಲಿ ನೀವೇ ಒಂದು ಉಳಿದವರು ಒಂದು ಎಂಬ ಭಾವನೆ ಬರಬಹುದು. ಆದರೂ ಮುಖದಲ್ಲಿ ನಗುವಿನ ಮುಖವಾಡವನ್ನು ಅನಿವಾರ್ಯವಾಗಿ ಧರಿಸಿಕೊಳ್ಳಬೇಕಾಗುವುದು. ನಗುವ ವ್ಯಕ್ತಿಯನ್ನು ಆದರಿಸುವವರೇ ಹೊರತು ಅಳುವವರನ್ನು ಅಲ್ಲ.ತಿಳಿಯದೆ ತಪ್ಪು ಮಾಡಿದರೆ ಕ್ಷ ಮೆ ಮಾಡಬಹುದು. ಆದರೆ ತಿಳಿದೂ ತಿಳಿದು ತಪ್ಪು ಮಾಡಿದಲ್ಲಿ ಯಾರೂ ಕ್ಷ ಮಿಸುವುದಿಲ್ಲ. ಹಿಂದೆ ಮಾಡಿದ ತಪ್ಪನ್ನೇ ಮಾಡಿದರೆ ಜನರ ವಿಶ್ವಾಸವನ್ನು ಕಳೆದುಕೊಳ್ಳಬೇಕಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ.
ಅದೃಷ್ಟ ಸಂಖ್ಯೆ:6
ವೃಶ್ಚಿಕ
ವಾಸಕ್ಕೊಂದು ಮನೆ ಬಯಸುತ್ತಿರುವ ನೀವು ನಿಮ್ಮ ಯೋಜನೆಗೆ ಒಂದು ನಿಶ್ಚಿತವಾದ ರೂಪ ಕೊಡುವುದು ಒಳ್ಳೆಯದು. ಸಾಡೇಸಾತ್ ಶನಿಯ ಪ್ರಭಾವದಲ್ಲಿಯೇ ಮನೆ ಕಟ್ಟುವ ಅಥವಾ ಖರೀದಿಸುವ ಯೋಗ ಬರುವುದು.
ವೃಥಾ ಒಂದು ಗಂಭೀರ ಆರೋಪವು ಬಿರುಗಾಳಿಯಂತೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಅನಗತ್ಯ ಭಯ ಬೇಡ. ಆಂಜನೇಯ ಸ್ವಾಮಿಯನ್ನು ಭಕ್ತಿಯಿಂದ ಆರಾಧಿಸಿ.
ನಿಮ್ಮ ಮಾತಿನಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ಇಲ್ಲದಿದ್ದರೆ ನಿಮಗೆ ಬರಬೇಕಾದ ಹಣಕಾಸಿನ ವಿಷಯದಲ್ಲಿ ತೊಂದರೆ ಎದುರಾಗುವುದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಅದೃಷ್ಟ ಸಂಖ್ಯೆ:4
ಧನುಸ್ಸು
ನಿರಾಯಾಸ ಮಾತುಗಳಿಂದ ಹತ್ತು ಹಲವು ಕೆಲಸಗಳನ್ನು ಸಾಧಿಸುವಿರಿ. ಆದರೆ ಅದೇ ಅಹಂ ಆಗದಿರಲಿ. ಅತಿಯಾದ ಆತ್ಮವಿಶ್ವಾಸ ಮತ್ತು ಅಹಂಕಾರ ಮನುಷ್ಯನ ಅಧಃಪತನಕ್ಕೆ ಕಾರಣವಾಗುವುದು.ಪವಿತ್ರವಾದುದನ್ನು ನೀವು ಬಯಸಿದಷ್ಟು ನಿರಾಶರಾಗುತ್ತೀರಿ. ಹಮ್ಮಿಕೊಂಡ ಕಾರ್ಯಗಳು ಅರ್ಧಕ್ಕೆ ನಿಲ್ಲುವವು. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ.ಯಾವಾಗಲು ಕೆಟ್ಟದೇ ಅಗುವುದಿಲ್ಲ. ಹಾಗಾಗಿ ಸದಾ ಋುಣಾತ್ಮಕ ಚಿಂತನೆ ಬಿಟ್ಟು ಧನಾತ್ಮಕ ಚಿಂತನೆ ರೂಢಿಸಿಕೊಳ್ಳಿ. ಇಂದಿನ ಕಾರ್ಯವು ದೈವದ ಸಹಾಯದಿಂದ ಪೂರ್ಣಗೊಳ್ಳುವುದು.
ಅದೃಷ್ಟ ಸಂಖ್ಯೆ:4
ಮಕರ
ತಪ್ಪು ಹೆಜ್ಜೆಗಳನ್ನು ಇಡುತ್ತಿದ್ದೇನೆ ಎಂಬ ಹಿಂಜರಿಕೆಯನ್ನು ನಿಯಂತ್ರಿಸಿ ಬುದ್ಧಿ ಚಾತುರ್ಯದಿಂದಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಿರಿ ಮತ್ತು ನಿಮ್ಮ ಹೋರಾಟದಲ್ಲಿ ಜಯ ಸಾಧಿಸುವಿರಿ.ವೃತ್ತಿಯಲ್ಲಿ ಪದೇ ಪದೆ ಹಿನ್ನಡೆ ಅನುಭವಿಸುತ್ತಿರುವುದರಿಂದ ಜೀವನದಲ್ಲಿ ನಿರಾಶೆ ಮೂಡಿರುವುದು. ಕತ್ತಲು ಕಳೆದು ಬೆಳಕು ಹರಿಯುವಂತೆ ಕಾಲವನ್ನು ನಿರೀಕ್ಷಿಸುವುದೇ ಒಳ್ಳೆಯದು. ಮುಂದಿನ ದಿನಗಳು ಉತ್ತಮವಾಗಿರುತ್ತವೆ.ನೀವು ನಿರೀಕ್ಷೆ ಮಾಡುತ್ತಿರುವುದು ಒಂದು. ಆದರೆ ಕಾರ್ಯ ಸಾಧುವಾಗುವುದು ಮತ್ತೊಂದು. ಆದಾಗ್ಯೂ ಈ ಬಗ್ಗೆ ಚಿಂತಿಸದಿರುವುದೇ ಒಳ್ಳೆಯದು. ಯಾವ ಕಾಲಕ್ಕೆ ಏನು ಕೊಡಬೇಕು ಎಂಬುದು ಭಗವಂತನಿಗೆ ಚೆನ್ನಾಗಿ ಅರಿವಿದೆ.
ಅದೃಷ್ಟ ಸಂಖ್ಯೆ:8
ಕುಂಭ
ಊರಿಗೆ ಪ್ರಯಾಣ ಬೆಳೆಸುವಂತಹ ಜರೂರು ಉಂಟಾಗುವುದು. ಆದರೆ ಅದಕ್ಕೆ ಸೂಕ್ತ ತಯಾರಿ ನಡೆಸುವುದು ಮುಖ್ಯ. ಸಹೋದರ ಸಹಾಯ ಅಗತ್ಯವಿದ್ದಲ್ಲಿ ಬಳಸಿಕೊಳ್ಳಿ.ನೀವು ಬಯಸಿದ್ದು ನಿಮಗೆ ದಕ್ಕುವ ಸಂಭವವಿದೆ. ಇದಕ್ಕೆ ಗುರು ಹಿರಿಯರ ಆಶೀರ್ವಾದ ಕಾರಣ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹಾರ ಸಲ್ಲದು. ಆದಷ್ಟು ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ನೆರೆಹೊರೆಯವರು ಹೊರೆಯಾಗುವಂತಹ ಸನ್ನಿವೇಶದ ಸಾಧ್ಯತೆಗಳು ಅಧಿಕವಾಗಿದೆ. ಆದರೆ ನೀವು ನಿಮ್ಮತನ ಕಾಪಾಡಿಕೊಳ್ಳುವುದು ಒಳಿತು. ಮನೋಬಯಕೆಗಳು ಪೂರ್ಣಗೊಳ್ಳುವವು.
ಅದೃಷ್ಟ ಸಂಖ್ಯೆ:2
ಮೀನ
ನಿರಂತರವಾದ ವಾದವಿವಾದಗಳು ಪ್ರಯೋಜನ ನೀಡಲಾರವು. ಮೌನದಿಂದ ಕೆಲಸ ಸಾಧಿಸಿ ನಿರಾಳತೆಯಿಂದ ಬದುಕಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡುವುದು ಒಳ್ಳೆಯದು. ಕುಲದೇವತಾ ಸ್ಮರಣೆ ಮಾಡಿ.ಕೆಲ ವಿಚಾರಗಳನ್ನು ಮಕ್ಕಳ ಮುಂದೆ ಪ್ರಸ್ತಾಪ ಮಾಡಿದರೆ ಅವರು ಒಪ್ಪದೆ ಇರುವುದು ನಿಮಗೆ ಇರುಸು ಮುರುಸು ಉಂಟಾಗುವುದು. ಆದಷ್ಟು ತಾಳ್ಮೆಯಿಂದ ಮಕ್ಕಳ ಜತೆ ವ್ಯವಹರಿಸಿ.ಮಹತ್ತರ ಕಾರ್ಯ ಮುಂದೂಡುವುದು ಒಳಿತು. ಆರ್ಥಿಕ ಸ್ಥಿತಿಯಲ್ಲಿ ಏರು ಪೇರು ಸಹಜ. ಖಾಸಗಿ ಉದ್ಯೋಗಿಗಳಿಗೆ ಹೊಸ ಯೋಜನೆಗಳು ಎದುರಾಗುತ್ತವೆ. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ.
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp